Supreme Court ಸರಕಾರಗಳ ಹೊಣೆಗಾರಿಕೆ ನೆನಪಿಸಿದ ಸುಪ್ರೀಂ ತೀರ್ಪು


Team Udayavani, Aug 3, 2024, 6:00 AM IST

ಸರಕಾರಗಳ ಹೊಣೆಗಾರಿಕೆ ನೆನಪಿಸಿದ ಸುಪ್ರೀಂ ತೀರ್ಪು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರಕಾರಗಳಿಗೆ ಅಧಿಕಾರವಿದೆ ಎನ್ನುವ ಮಹತ್ತರ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ, ಈ ವಿಷಯವಾಗಿ ಕಳೆದ ಹಲವು ವರ್ಷಗಳಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಣ ಹಗ್ಗಜಗ್ಗಾಟಕ್ಕೆ ತೆರೆ ಎಳೆದಿದೆ. ಇದೇ ವೇಳೆ ಈ ಐತಿಹಾಸಿಕ ತೀರ್ಪಿನ ಸಂದರ್ಭದಲ್ಲಿ ನ್ಯಾಯಪೀಠ ಕೆಲವು ಮಹತ್ವದ ವಿಷಯಗಳನ್ನು ಪ್ರಸ್ತಾವಿಸಿದ್ದು, ಮೀಸಲಾತಿಯ ಸೌಲಭ್ಯ ನೈಜ ಮತ್ತು ಆರ್ಹ ಫ‌ಲಾನುಭವಿಗಳಿಗಷ್ಟೇ ಲಭ್ಯವಾಗುವುದನ್ನು ಖಾತರಿಪಡಿಸುವ ಹೊಣೆಗಾರಿಕೆ ರಾಜ್ಯ ಸರಕಾರಗಳದ್ದಾಗಿದೆ ಎಂದೂ ಸ್ಪಷ್ಟ ಮಾತುಗಳಲ್ಲಿ ಹೇಳಿದೆ.

ಎಸ್‌ಸಿ, ಎಸ್‌ಟಿ ಮೀಸಲಾತಿಯಲ್ಲಿ ಒಳ ಮೀಸಲಾತಿ ನೀಡುವ ಸಂಬಂಧ ಪರ-ವಿರೋಧ ಚರ್ಚೆಗಳು, ಕಾನೂನು ಹೋರಾಟಗಳು ಕಳೆದ ಹಲವು ವರ್ಷಗಳಿಂದ ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುತ್ತಲೇ ಬಂದಿವೆ. ಈ ವಿಷಯ­ವಾಗಿ ಸುಪ್ರೀಂ ಕೋರ್ಟ್‌ನ ಏಳು ಸದಸ್ಯರ ಸಾಂವಿಧಾನಿಕ ಪೀಠ ಸುದೀರ್ಘ‌ ವಿಚಾರಣೆ ನಡೆಸಿ ಹಾಲಿ ಜಾರಿಯಲ್ಲಿರುವ ಎಸ್‌ಸಿ, ಎಸ್‌ಟಿ ಮೀಸಲಾತಿ­ಯಲ್ಲಿ ಒಳ ಮೀಸಲಾತಿ ನೀಡಲು ರಾಜ್ಯ ಸರಕಾರಗಳಿಗೆ ಅಧಿಕಾರವಿದೆ ಎಂದು ಗುರುವಾರ 6:1ರ ಬಹುಮತದ ತೀರ್ಪು ನೀಡಿತ್ತು. ಈ ತೀರ್ಪಿನ ಕುರಿತಂತೆ ವಿವಿಧ ರಾಜಕೀಯ ಪಕ್ಷಗಳಿಂದ ಸಾರ್ವತ್ರಿಕ ಶ್ಲಾಘನೆ ವ್ಯಕ್ತವಾಗಿದೆ. ಆದರೆ ಇಲ್ಲಿ ಗಮನಾರ್ಹ ಅಂಶವೆಂ­ದರೆ ಈ ತೀರ್ಪು ನೀಡುವ ವೇಳೆ ಮೀಸಲಾತಿ ವಿಷಯದಲ್ಲಿ ರಾಜ್ಯ ಸರಕಾರ­ಗಳ ಹೊಣೆಗಾರಿಕೆ, ಕಾರ್ಯವ್ಯಾಪ್ತಿ, ಮೀಸಲಾತಿ ನೀತಿ ನಿರೂಪಣೆಯ ಸಂದರ್ಭದಲ್ಲಿ ಅನುಸರಿಸಬೇಕಾದ ಕಾರ್ಯವಿಧಾನಗಳ ಕುರಿತಂತೆ ನ್ಯಾಯಪೀಠ­ದಲ್ಲಿನ ನ್ಯಾಯಾಧೀಶರು ಸ್ಪಷ್ಟವಾಗಿ ತಮ್ಮ ಅಭಿಪ್ರಾಯಗಳನ್ನು ದಾಖಲಿಸಿರುವುದು.

ಎಸ್‌ಸಿ, ಎಸ್‌ಟಿ ಮೀಸಲಾತಿ ದಶಕಗಳಿಂದ ಜಾರಿಯಲ್ಲಿದ್ದರೂ ಈ ಜಾತಿ, ಪಂಗಡದೊಳಗಿನ ಹಲವು ಜಾತಿಗಳು ಇನ್ನೂ ತುಳಿತಕ್ಕೊಳಗಾಗಿರುವುದು ಮಾತ್ರವಲ್ಲದೆ ಮೀಸಲಾತಿಯ ಕನಿಷ್ಠ ಸೌಲಭ್ಯವೂ ಈ ಜಾತಿ, ಸಮುದಾಯಗಳಿಗೆ ಲಭಿಸದಿರುವ ಬಗೆಗೆ ಮತ್ತು ಎಸ್‌ಸಿ, ಎಸ್‌ಟಿ ಯವರಾಗಿದ್ದರೂ ಸಾಮಾಜಿಕ ಮತ್ತು ಆರ್ಥಿಕವಾಗಿ ಮುಂದುವರಿದಿರುವವರು ಇಂದಿಗೂ ಈ ಮೀಸಲಾತಿಯ ಸೌಲಭ್ಯದ ಪ್ರಯೋಜನ ಪಡೆಯುತ್ತಿರುವುದರ ಬಗೆಗೆ ನ್ಯಾಯಾಧೀಶರು ರಾಜ್ಯ ಸರಕಾರಗಳ ಗಮನ ಸೆಳೆದಿದ್ದಾರೆ. ಒಳ ಮೀಸಲಾತಿ ಕಲ್ಪಿಸುವ ವೇಳೆ ಈ ವಿಷಯಗಳ ಕುರಿತಂತೆ ಸಮರ್ಪಕ ಅಧ್ಯಯನ ಅಥವಾ ಸಮೀಕ್ಷೆ ಕೈಗೊಂಡು ಸಂಬಂಧಿತ ಜಾತಿ, ಸಮುದಾಯಗಳ ಅರ್ಹರು ಮೀಸಲಾತಿಯಿಂದ ಹೊರಗುಳಿಯದಂತೆ ಮತ್ತು ಜಾತಿ, ಸಮುದಾಯದ ಹೆಸರಿನಲ್ಲಿ ಮುಂದುವರಿದವರೂ ಸೌಲಭ್ಯ ಪಡೆದುಕೊಳ್ಳದಂತೆ ನೋಡಿಕೊಳ್ಳುವುದು ರಾಜ್ಯ ಸರಕಾರಗಳ ಜವಾಬ್ದಾರಿಯಾಗಿದೆ ಎಂದು ಹೇಳಿರುವುದು ಎಸ್‌ಸಿ, ಎಸ್‌ಟಿ ಮೀಸಲಾತಿ ವಿಷಯದಲ್ಲಿ ರಾದ್ಧಾಂತ ಸೃಷ್ಟಿಸುತ್ತಿರುವ ಎಲ್ಲ ಸಮುದಾಯ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳನ್ನು ಮುಟ್ಟಿ ನೋಡಿಕೊಳ್ಳುವಂತೆ ಮಾಡಿದೆ.

ಇದಕ್ಕಿಂತಲೂ ಮುಖ್ಯವಾಗಿ ಮೀಸಲಾತಿ ಒಂದೇ ಪೀಳಿಗೆಗೆ ಸೀಮಿತಗೊಳ್ಳಬೇಕು. ಮೀಸಲಾತಿಯ ಸೌಲಭ್ಯದಿಂದ ಉನ್ನತ ಸ್ಥಾನಮಾನ ಪಡೆದು ಅಧಿಕಾರ, ಸಂಪತ್ತು ಗಳಿಸಿದ ಕುಟುಂಬದವರು ಮತ್ತೆಮತ್ತೆ ಮೀಸಲಾತಿಯ ಪ್ರಯೋಜನ ಪಡೆಯದಂತೆ ನೋಡಿಕೊಳ್ಳಬೇಕು. ಇದನ್ನು ಖಚಿತಪಡಿಸಿಕೊಳ್ಳಲು ನಿರ್ದಿಷ್ಟ ಅವಧಿಗೊಮ್ಮೆ ಪರಿಶೀಲನೆ ನಡೆಸಿ ಅರ್ಹರಿಗೆ ಮಾತ್ರವೇ ಮೀಸಲಾತಿ ಸೌಲಭ್ಯ ಲಭಿಸುವಂತೆ ಮಾಡಬೇಕು ಎಂದು ರಾಜ್ಯ ಸರಕಾರಗಳಿಗೆ ನ್ಯಾಯಾಧೀಶರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನ್ಯಾಯಾಧೀಶರ ಈ ಅಭಿಪ್ರಾಯ, ಸೂಚನೆಗಳು ದೇಶದ ನೈಜ ಪರಿಸ್ಥಿತಿಗೆ ಹಿಡಿದ ಕನ್ನಡಿಯಂತಿವೆ. ಸದ್ಯ ದೇಶದಲ್ಲಿ ಜಾರಿಯಲ್ಲಿರುವ ಇಡೀ ಮೀಸಲಾತಿ ವ್ಯವಸ್ಥೆಯ ಮರು ರೂಪಣೆಗೆ ಕಾಲ ಪಕ್ವವಾಗಿದೆ ಎಂಬ ಪರೋಕ್ಷ ಸಂದೇಶವನ್ನು ಸುಪ್ರೀಂ ಕೋರ್ಟ್‌ ನ್ಯಾಯಪೀಠ ತನ್ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ರವಾನಿಸಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.