ಸರ್ವಾಧಿಕಾರಿ ಕಿಮ್‌ ಜಾಂಗ್‌ ಹುಚ್ಚಾಟಕ್ಕೆ ಬೀಳಲಿ ತಡೆ


Team Udayavani, Mar 25, 2022, 6:00 AM IST

ಸರ್ವಾಧಿಕಾರಿ ಕಿಮ್‌ ಜಾಂಗ್‌ ಹುಚ್ಚಾಟಕ್ಕೆ ಬೀಳಲಿ ತಡೆ

ರಷ್ಯಾ ಮತ್ತು ಉಕ್ರೇನ್‌ ನಡುವೆ ಯುದ್ಧ ಗುರುವಾರ 29ನೇ ದಿನಕ್ಕೆ ಕಾಲಿಡುತ್ತಿರುವಂತೆಯೇ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಸರ್ಕಾರ ಖಂಡಾಂತರ ಕ್ಷಿಪಣಿ  ಪರೀಕ್ಷೆ ನಡೆಸಿದೆ. ಇದು ನಿಜಕ್ಕೂ ಆತಂಕಕಾರಿಯಾಗಿರುವ ವಿಚಾರವೇ ಹೌದು. ಏಕೆಂದರೆ ಲಭ್ಯವಾಗಿರುವ ಮಾಹಿತಿಗಳ ಪ್ರಕಾರ 2017ರಲ್ಲಿ ಆ ದೇಶ ಮೊದಲ ಬಾರಿಗೆ ಖಂಡಾಂತರ ಕ್ಷಿಪಣಿಯ ಪರೀಕ್ಷೆ ನಡೆಸಿದ ಸಂದರ್ಭಕ್ಕಿಂತ ಅತ್ಯಧಿಕವಾಗಿರುವ ಶಕ್ತಿ ಮತ್ತು ಪ್ರಭಾವ ಹೊಂದಿರುವ ಹೊಸ ಮಾದರಿಯ ಖಂಡಾಂತರ ಕ್ಷಿಪಣಿಯನ್ನು ಕಿಮ್‌ ಜಾಂಗ್‌ ಉನ್‌ ಆಡಳಿತ ಪ್ರಯೋಗ ಮಾಡಿದೆ.

ಆ ದೇಶದ ಜತೆಗೆ ಚೀನ ಹೊರತುಪಡಿಸಿ ಬೇರೆ ಯಾವುದೇ ರಾಷ್ಟ್ರ ಉತ್ತಮ ಬಾಂಧವ್ಯ ಹೊಂದಿಲ್ಲ. ಹೀಗಾಗಿ ಮೇಲ್ನೋಟಕ್ಕೆ ಅದು ಉತ್ತರ ಕೊರಿಯಾಕ್ಕೆ ಸಂಬಂಧಿಸಿದ ಪ್ರಲಾಪ ಎಂದು ತೀರ್ಮಾನಿಸುವುದು ಸರಿಯಲ್ಲ. ಸದ್ಯ ಜಪಾನ್‌ನ ಹೊಕ್ಕೆ„ಡೋ ದ್ವೀಪ ವ್ಯಾಪ್ತಿಯ ಜಲಪ್ರದೇಶಕ್ಕೆ ಬಿದ್ದ ಕ್ಷಿಪಣಿ ಮುಂದಿನ ದಿನಗಳಲ್ಲಿ ಬೇರೆ ದೇಶದ ಗಡಿ ಪ್ರದೇಶಕ್ಕೆ ಸಿಡಿಯಲೂ ಬಹುದು ಅಥವಾ ಉದ್ದೇಶ ಪೂರ್ವಕವಾಗಿಯೇ ಉಡಾಯಿಸಬಹುದು. ಏಕೆಂದರೆ, ಉತ್ತರ ಕೊರಿಯಾದಲ್ಲಿ ಚಿತ್ರ-ವಿಚಿತ್ರ ನಿಯಮಗಳನ್ನು ಜಾರಿಗೊಳಿಸುವ ಮೂಲಕ ಆಡಳಿತ ನಡೆಸುವ ಕುಖ್ಯಾತಿ ಕಿಮ್‌ ಸರಕಾರದ್ದು.

ಡೊನಾಲ್ಡ್‌ ಟ್ರಂಪ್‌ ಅಮೆರಿಕದ ಅಧ್ಯಕ್ಷರಾಗಿದ್ದ ವೇಳೆ 2018ರಲ್ಲಿ ಕಿಮ್‌ ಸರಕಾರದ ಜತೆಗೆ ಮಾತುಕತೆ ನಡೆಸಲಾಗಿತ್ತು. ಬಳಿಕ ಖಂಡಾಂತರ ಕ್ಷಿಪಣಿಗಳ ಪರೀಕ್ಷೆ ನಡೆಸುವುದನ್ನು ನಿಲ್ಲಿಸುವುದಾಗಿ ಸರಕಾರ ಹೇಳಿತ್ತು. 2020ರಲ್ಲಿ ಅದನ್ನು ಉಲ್ಲಂಘಿಸುವ ಬಗ್ಗೆ ಪ್ರಕಟಿಸಿತ್ತು. ಈ ಪರೀಕ್ಷೆಗಳಿಂದ ಉತ್ತರ ಕೊರಿಯಾ ಸಾಧಿಸುವು ದಾದರೂ ಏನು ಎಂಬುದೇ ಕುತೂಹಲಕಾರಿ ಅಂಶವಾಗಿದೆ. ಅಮೆರಿಕ ಮತ್ತು ಜಪಾನ್‌ ಹೊಂದಿರುವ ಅತ್ಯಾಧುನಿಕ ತಂತ್ರಜ್ಞಾನಗಳಿಂತಲೂ ಅಧಿಕ ಸಾಮರ್ಥ್ಯ ಹೊಂದಿರುವ ಹಾಗೂ ಆ ಸರಕಾರಗಳು ಹೊಂದಿರುವ ರಕ್ಷಣ ವ್ಯವಸ್ಥೆ ಅಂದಾಜು ಮಾಡಲೂ ಸಾಧ್ಯವಿಲ್ಲದ ಕ್ಷಿಪಣಿ ವ್ಯವಸ್ಥೆ ಹೊಂದುವುದರತ್ತ ಆ ದೇಶ ಆಸಕ್ತ ಹೊಂದಿದೆ. ಕೊರಿಯಾ ವ್ಯಾಪ್ತಿಯ ಪ್ರದೇಶದಲ್ಲಿ ಅಮೆರಿಕದ ಸೇನೆ ಇದೆ. ಈ ಮೂಲಕ ಅಮೆರಿಕ ಎಂದಾದರೂ ಒಂದು ದಿನ ತನ್ನ ಮೇಲೆ ದಾಳಿ ಮಾಡಬಹುದು ಎಂಬ ಆತಂಕ ಕಿಮ್‌ ಸರಕಾರಕ್ಕಿದೆ. ಜಪಾನ್‌ ಹೇಗಿದ್ದರೂ, ಅಮೆರಿಕದ ಜತೆಗೆ ಉತ್ತಮ ಬಾಂಧವ್ಯ ಹೊಂದಿದೆ. ಹೀಗಾಗಿ, ಜನರಿಗೆ ತುತ್ತು ಕೂಳಿಗೆ ಗತಿ ಇಲ್ಲದೇ ಇದ್ದರೂ, ಪ್ರಬಲ ರಕ್ಷಣ ವ್ಯವಸ್ಥೆ ಬೇಕು ಎನ್ನುವುದು ಕಿಮ್‌ ಸರಕಾರ ಹೊಂದಿರುವ ವ್ಯರ್ಥಾಲಾಪದ ವಾದ.

ಇದರ ಜತೆಗೆ ವಿಶ್ವಸಂಸ್ಥೆಯ ಗಮನ ಸೆಳೆದು, ಬೆದರಿಕೆಯ ತಂತ್ರದ ಮೂಲಕವಾದರೂ ಆರ್ಥಿಕ ದಿಗ್ಬಂಧನವನ್ನು ತೆಗೆದು ಹಾಕುವ ದೂರದ ಆಲೋಚನೆ. ದಕ್ಷಿಣ ಕೊರಿಯಾ ಮೂಲಕ ಜಗತ್ತಿಗೆ ಆಗಾಗ ಪ್ರಕಟವಾಗುತ್ತಿರುವ ವರದಿಗಳ ಪ್ರಕಾರ ಜನರು ಹಲವು ರೀತಿಯ ಸಂಕಷ್ಟಗಳನ್ನು ನಿವಾರಿಸುವುದು ಆದ್ಯತೆಯಾಗಿರಬಹುದು. ಅದೇನೇ ಇರಲಿ, ಕೊರೊನಾದ ಜತೆಗೆ ರಷ್ಯಾ-ಉಕ್ರೇನ್‌ ಕಾಳಗ ಜಗತ್ತನ್ನು ಕಾಡುತ್ತಿದೆ. ಅದರ ನಡುವೆ ಇಂಥ ಕಿಡಿಗೇಡಿತನ ಖಂಡನೀಯ. ಜಗತ್ತಿನ ಶಾಂತಿಗಾಗಿ ಸ್ಥಾಪನೆಯಾಗಿರುವ ವಿಶ್ವಸಂಸ್ಥೆ ಉತ್ತರ ಕೊರಿಯಾದ ವ್ಯರ್ಥಾಲಾಪಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲೇಬೇಕು.

ಟಾಪ್ ನ್ಯೂಸ್

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

krishna bhaire

FIR ದಾಖಲಾದ ಬಿಜೆಪಿಯವರು ರಾಜೀನಾಮೆ ನೀಡಲಿ: ಕೃಷ್ಣ ಭೈರೇಗೌಡ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

supreme-Court

Encroachment: ಅಕ್ರಮ ನಿರ್ಮಾಣಗಳ ತೆರವು: ಸುಪ್ರೀಂಕೋರ್ಟ್‌ ನಿಲುವು ಸ್ವಾಗತಾರ್ಹ

immifra

Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

Fake-Medicine

Medicines: ನಶೆಭರಿತ ಔಷಧಗಳಿಗೆ ಲಗಾಮು ಕಾಳಸಂತೆಯತ್ತಲೂ ಇರಲಿ ನಿಗಾ

UN-Assembly

UN General Assembly: ಕಾಶ್ಮೀರ ವಿಷಯ ಪ್ರಸ್ತಾವಿಸಿದ ಪಾಕಿಸ್ಥಾನಕ್ಕೆ ಭಾರತ ತಪರಾಕಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.