ದಿಗ್ಗಜರ ಅನುಪಸ್ಥಿತಿಯಲ್ಲೂ ದಿಟ್ಟತನ ತೋರಿದ ಟೀಂ ಇಂಡಿಯಾ!


Team Udayavani, Dec 30, 2020, 5:38 AM IST

ದಿಗ್ಗಜರ ಅನುಪಸ್ಥಿತಿಯಲ್ಲೂ ದಿಟ್ಟತನ ತೋರಿದ ಟೀಂ ಇಂಡಿಯಾ!

ನಾನು ಬದಲಾದ ದ ಪ್ರತಿನಿಧಿ ಮಾತ್ರ ಎಂದು ವಿರಾಟ್‌ ಕೊಹ್ಲಿ ಆಸ್ಟ್ರೇಲಿಯ ವಿರುದ್ಧ ಟೆಸ್ಟ್‌ ಸರಣಿ ಆರಂಭಕ್ಕೂ ಮುನ್ನ ಹೇಳಿದ್ದರು. ಆ ಮಾತನ್ನು ಆಗ ಯಾರೂ ಗಂಭೀರವಾಗಿ ಪರಿಗಣಿಸಿರಲಿಲ್ಲ. ಅದರ ಆಳಕ್ಕೂ ಹೋಗಿರಲಿಲ್ಲ. ಆದ್ದರಿಂದಲೇ ಅದರ ಅರ್ಥ ಆಗಿರಲಿಲ್ಲ. ಆ ಮಾತಿನ ಮರ್ಮ ಮಂಗಳವಾರ ಸರಿಯಾಗಿ ಅರ್ಥವಾಗಿದೆ. ಅದರಲ್ಲೂ ಆಸ್ಟ್ರೇಲಿಯ ಕ್ರಿಕೆಟ್‌ ತಂಡಕ್ಕೆ, ಅಲ್ಲಿನ ದುರಹಂಕಾರಿ ಮಾಜಿ ಕ್ರಿಕೆಟಿಗರಿಗೆ, ಮಾಧ್ಯಮಗಳಿಗೆ ಸ್ಪಷ್ಟವಾಗಿ ಗೊತ್ತಾಗಿದೆ. ವರ್ತಮಾನ ಕ್ರಿಕೆಟ್‌ನ ಸರ್ವಶ್ರೇಷ್ಠ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿ ಇಲ್ಲ, ಇನ್ನೊಬ್ಬ ವಿಶ್ವವಿಖ್ಯಾತ ಆಟಗಾರ ರೋಹಿತ್‌ ಶರ್ಮ ಇಲ್ಲ, ಅದ್ಭುತ ವೇಗಿಗಳಾದ ಮೊಹಮ್ಮದ್‌ ಶಮಿ, ಇಶಾಂತ್‌ ಶರ್ಮ ಕೂಡಾ ಇಲ್ಲ.

ಇಷ್ಟೆಲ್ಲ ಇಲ್ಲಗಳ ನಡುವೆ ಅಜಿಂಕ್ಯ ರಹಾನೆ ನೇತೃತ್ವದ ಭಾರತೀಯ ಕ್ರಿಕೆಟ್‌ ತಂಡ, ಎದುರಾಳಿ ಆಸ್ಟ್ರೇಲಿಯ ತಂಡ ವನ್ನು ಅದರ ತವರು ನೆಲದಲ್ಲೇ ಸೋಲಿಸಿದೆ. ಅದರಲ್ಲೂ ಮೆಲ್ಬರ್ನ್ ನಲ್ಲಿ ನಡೆದ ಬಾಕ್ಸಿಂಗ್‌ ಡೇ ಟೆಸ್ಟ್‌ನಲ್ಲಿ. ಇದರಲ್ಲಿ ಅದೃಷ್ಟದಾಟದ ಪಾತ್ರವೇನೂ ಇಲ್ಲ. ಇಡೀ ತಂಡ ಅತ್ಯಂತ ಯೋಜನಾ ಬದ್ಧವಾಗಿ, ಆಕ್ರಮಣಕಾರಿಯಾಗಿ, ಧೈರ್ಯವಾಗಿ ಆಡಿದ್ದರಿಂದ ಇಂತಹ ಜಯ ಸಾಧ್ಯವಾಯಿತು.

ಈ ಗೆಲುವು ಭಾರತಕ್ಕೆ ಒಲಿಯುವ ಮುಂಚೆ ಎಂಥ ಸ್ಥಿತಿಯಿತ್ತು ಗೊತ್ತೇ? ಮೊದಲ ಟೆಸ್ಟ್‌ನ ಎರಡನೇ ಇನಿಂಗ್ಸ್‌ನಲ್ಲಿ ಭಾರತ ಕೇವಲ 36 ರನ್‌ಗಳಿಗೆ ಆಲೌಟಾಗಿತ್ತು. ಭಾರತದಂತಹ ಕ್ರಿಕೆಟ್‌ ಜಗತ್ತಿನ ಅತ್ಯಂತ ಬಲಿಷ್ಠ ತಂಡಕ್ಕೆ ಇದು ಘೋರ ಅವಮಾನ. ಆಗ ಎದುರಾದ ಸೋಲಿನ ಅನಂತರ ಆಗಿನ ನಾಯಕ ಕೊಹ್ಲಿ, ದಯವಿಟ್ಟು ಹುತ್ತವನ್ನು ಪರ್ವತ ಮಾಡಬೇಡಿ. ನಾವು ಸೋತಿದ್ದೇವೆ ಅಂದರೆ ಎಲ್ಲವೂ ಮುಗಿದುಹೋಯಿತು ಎಂದರ್ಥವಲ್ಲ ಎಂದಿದ್ದರು. ಅದನ್ನು ಹೌದೆಂದು ಅಜಿಂಕ್ಯ ರಹಾನೆ ಪಡೆ ಸಾಬೀತುಪಡಿಸಿದೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದರಿಂದ ಕೊಹ್ಲಿ ಮೊದಲ
ಟೆಸ್ಟ್‌ ಮುಗಿದ ಅನಂತರ ಭಾರತಕ್ಕೆ ಮರಳಿದರು. ಆಗ ರಹಾನೆಗೆ ಸಾರಥ್ಯ ಒಲಿಯಿತು. ಸಾಮಾನ್ಯವಾಗಿ ನಾಯಕತ್ವವನ್ನು ಎಲ್ಲರೂ ಸಂಭ್ರಮಿಸುತ್ತಾರೆ. ರಹಾನೆ ಮಾತ್ರ ಅಂಥ ಸ್ಥಿತಿಯಲ್ಲಿರಲಿಲ್ಲ. ಹಲವು ದಿಗ್ಗಜರ ಅನುಪಸ್ಥಿತಿಯಲ್ಲಿ ಅವರು ಮುಳ್ಳಿನ ಕಿರೀಟ ಹೊತ್ತುಕೊಂಡಿದ್ದರು. ಅಂತಹ ಸ್ಥಿತಿಯನ್ನು ಅವರು ಎಷ್ಟು ಶಾಂತವಾಗಿ ನಿಭಾಯಿಸಿದರೆಂದರೆ ಖಾಯಂ ನಾಯಕ ಕೊಹ್ಲಿ ಸೇರಿದಂತೆ ಕ್ರಿಕೆಟ್‌ ಜಗತ್ತೇ ಅವರನ್ನು ಹೊಗಳಿತು. ಹಾವಭಾವದಲ್ಲಿ ತಣ್ಣಗಿದ್ದ ಅವರು, ತನ್ನ ನಿರ್ಧಾರ ಗಳಲ್ಲಿ, ಆಟದಲ್ಲಿ ಆಕ್ರಮಣಕಾರಿಯಾಗಿದ್ದರು. ಸ್ವತಃ ಬ್ಯಾಟಿಂಗ್‌ ಮಾಡುವಾಗ ಉಳಿದವರಿಗೆ ಮಾದರಿಯಾದರು. ಶತಕ ಬಾರಿಸಿ ತಂಡದ ಗೆಲುವಿಗೆ ಆಧಾರವಾದರು. ಪಂದ್ಯಶ್ರೇಷ್ಠ ಗೌರವ ಅವರಿಗೆ ಒಲಿದುಬಂತು.

ಟೆಸ್ಟ್‌ ಸರಣಿ 1-1ರಿಂದ ಸಮಬಲವಾಯಿತು. ಇನ್ನೂ ಎರಡು ಟೆಸ್ಟ್‌ ಬಾಕಿಯಿದೆ. ರಹಾನೆಯ ನಾಯಕತ್ವದ ಶೈಲಿ ನೋಡಿದರೆ ಇಲ್ಲೂ ಭಾರತ ಗೆದ್ದರೆ ಅಚ್ಚರಿಯಿಲ್ಲ. ಆದರೆ ಗಮನಿಸಲೇಬೇಕಾದ ಕೆಲವು ಸಂಗತಿಗಳಿವೆ. ಚೇತೇಶ್ವರ ಪೂಜಾರ, ಮಾಯಾಂಕ್‌ ಅಗರ್ವಾಲ್‌ ತಮ್ಮ ವೈಫ‌ಲ್ಯದಿಂದ ಹೊರಬರಬೇಕು, ಭಾರತೀಯ ಆಟಗಾರರು ತಮ್ಮ ದೈಹಿಕ ಕ್ಷಮತೆಯನ್ನು ಮೊದಲ ಆದ್ಯತೆಯಾಗಿಟ್ಟುಕೊಳ್ಳಬೇಕು. ಇಲ್ಲದೇ ಹೋದರೆ ಈಗ ಆಗಿರುವಂತೆ ಗಾಯಾಳುಗಳ ಸಂಖ್ಯೆ ಏರುತ್ತದೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.