ಬದಲಾಗದ ಜನರ ವರ್ತನೆ ಅಪಾಯವಿನ್ನೂ ದೂರವಾಗಿಲ್ಲ


Team Udayavani, May 26, 2020, 1:42 PM IST

ಬದಲಾಗದ ಜನರ ವರ್ತನೆ ಅಪಾಯವಿನ್ನೂ ದೂರವಾಗಿಲ್ಲ

ಲಾಕ್‌ಡೌನ್‌ ಸಡಿಲಿಕೆಯು ಭಾರತದಂಥ ಬೃಹತ್‌ ಜನಸಂಖ್ಯೆಯುಳ್ಳ ರಾಷ್ಟ್ರಕ್ಕೆ ಎಷ್ಟು ಅನಿವಾರ್ಯವೋ ಅಷ್ಟೇ ಅಪಾಯಕಾರಿಯೂ ಹೌದು ಎನ್ನುವುದೇ ದುರಂತ. ಆದರೆ, ಆರ್ಥಿಕತೆಯ ಯಂತ್ರ ಚಲನಶೀಲವಾಗಿರುವುದು ಅಗತ್ಯ ಎಂದಾಕ್ಷಣ ಜನರೆಲ್ಲ ರಸ್ತೆಗಿಳಿದು ಹೇಗೆ ಬೇಕಾದರೂ ವರ್ತಿಸಬಹುದು ಎಂದರ್ಥವಲ್ಲ.

ಭಾರತವೀಗ ಕೋವಿಡ್ ದಿಂದ ಅತಿಹೆಚ್ಚು ಪೀಡಿತವಾಗಿರುವ ಟಾಪ್‌ಟೆನ್‌ ರಾಷ್ಟ್ರಗಳಲ್ಲಿ ಒಂದಾಗಿದೆ. ಲಾಕ್‌ಡೌನ್‌ ನಿರ್ಬಂಧಗಳು ಸಡಿಲಿಕೆಯಾಗಿ, ಆರ್ಥಿಕ ಚಟುವಟಿಕೆಗಳು ಮತ್ತೆ ಹಳಿ ಏರುತ್ತಿರುವಂತೆಯೇ ನಿತ್ಯ ಪ್ರಕರಣಗಳ ಸಂಖ್ಯೆಯಲ್ಲೂ ವಿಪರೀತ ಏರಿಕೆ ಕಾಣುತ್ತಿದೆ. ಕಳೆದ ಶುಕ್ರವಾರದಿಂದ ದೇಶದಲ್ಲಿ ನಿತ್ಯ 6 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಸೋಂಕು ಪ್ರಸರಣ ಪ್ರಮಾಣ ಭಾರತದಲ್ಲಿ  ಕಡಿಮೆಯಾಗುತ್ತಲೇ ಇಲ್ಲ. ಆದರೆ, ಇದಿನ್ನೂ ಆರಂಭಿಕ ಹಂತವಷ್ಟೇ, ಜುಲೈ ತಿಂಗಳ ವೇಳೆಗೆ ಸೋಂಕಿತರ ಸಂಖ್ಯೆ ಮಿತಿ ಮೀರಲಿದೆ ಎಂಬ ವೈಜ್ಞಾನಿಕ ವಲಯದ ಎಚ್ಚರಿಕೆಯು ನಿಜಕ್ಕೂ ಆತಂಕಕಾರಿಯಾದದ್ದು.

ಆದಾಗ್ಯೂ, ಭಾರತವೆಂದಷ್ಟೇ ಅಲ್ಲ, ಲಾಕ್‌ಡೌನ್‌ ನಿರ್ಬಂಧಗಳಲ್ಲಿ ಸಡಿಲಿಕೆ ತಂದ ತಕ್ಷಣವೇ ಅನೇಕ ದೇಶಗಳಲ್ಲಿ ಸೋಂಕಿತರ ಪ್ರಕರಣಗಳು ಏರಿಕೆಯಾಗಿರುವುದನ್ನು-ಆಗುತ್ತಿರುವುದನ್ನು ನೋಡಬಹುದು. ಉದಾಹರಣೆಗೆ, ದಕ್ಷಿಣ ಕೊರಿಯಾದಲ್ಲಿ ಬಾರ್‌ ಹಾಗೂ ಕ್ಲಬ್‌ಗಳ ಮೇಲಿನ ನಿರ್ಬಂಧಗಳನ್ನು ತಗ್ಗಿಸುತ್ತಿದ್ದಂತೆಯೇ ಆ ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಇನ್ನು ಚೀನದ ವುಹಾನ್‌ನಲ್ಲೂ ಲಾಕ್‌ಡೌನ್‌ ಸಡಿಲಿಕೆಯಾದ ಮೇಲೆ ಮತ್ತೆ ಸೋಂಕು ಕಾಣಿಸಿಕೊಂಡಿದೆ.

ಲಾಕ್‌ಡೌನ್‌ ಸಡಿಲಿಕೆಯು ಭಾರತದಂಥ ಬೃಹತ್‌ ಜನಸಂಖ್ಯೆಯುಳ್ಳ ರಾಷ್ಟ್ರಕ್ಕೆ ಎಷ್ಟು ಅನಿವಾರ್ಯವೋ ಅಷ್ಟೇ ಅಪಾಯಕಾರಿಯೂ ಹೌದು ಎನ್ನುವುದೇ ದುರಂತ. ಆದರೆ, ಆರ್ಥಿಕತೆಯ ಯಂತ್ರ ಚಲನಶೀಲವಾಗಿರುವುದು ಅಗತ್ಯ ಎಂದಾಕ್ಷಣ ಜನರೆಲ್ಲ ರಸ್ತೆಗಿಳಿದು ಹೇಗೆ ಬೇಕಾದರೂ ವರ್ತಿಸಬಹುದು ಎಂದರ್ಥವಲ್ಲ. ಮನುಷ್ಯನ ಮನಸ್ಸು ಹೇಗಿರುತ್ತದೆ ಎಂದರೆ, ಎಲ್ಲರೂ ಏನು ಮಾಡುತ್ತಾರೋ ಅದೇ ಸರಿಯಾದ ಮಾರ್ಗ ಎಂದೇ ಭಾವಿಸುತ್ತದೆ. ರಸ್ತೆಗಳು ಖಾಲಿ ಇದ್ದಾಗ, ಹೊರಗೆ ಅಡಿಯಿಡಲು ಹೆದರುವ ವ್ಯಕ್ತಿ, ರಸ್ತೆಗಳು ತುಂಬಿದಾಗ, ತಾನೂ ಅದರಲ್ಲಿ ನಿರ್ಭಯವಾಗಿ ತೂರಿಕೊಳ್ಳುತ್ತಾನೆ. ಕೊರೊನಾಕ್ಕೆ ಲಸಿಕೆ ಸಿಗುತ್ತದೋ ಇಲ್ಲವೋ ಎನ್ನುವುದೇ ಅನುಮಾನವಾಗಿರುವಾಗ, ಎಲ್ಲವೂ ಸರಿಹೋಯಿತು ಎಂಬಂತೆ ಜನರು ವರ್ತಿಸುತ್ತಿರುವುದು ಸರಿಯಲ್ಲ. ಕೊರೊನಾದ ಜತೆಗೇ ಬದುಕಬಹುದಾದ ಅನಿವಾರ್ಯತೆ ನಮಗೆ ಎದುರಾಗಬಹುದು ಎಂದರೆ, ಕೊರೊನಾದ ಅಪಾಯ ಕಡಿಮೆ ಇರುತ್ತದೆ ಎಂದರ್ಥವಲ್ಲ. ಸುರಕ್ಷತಾ ಕ್ರಮಗಳನ್ನು ಪಾಲಿಸುತ್ತಲೇ ಬದುಕಬೇಕಾದ, ಹೊಸ ಜೀವನಶೈಲಿಯನ್ನು ಚಾಚೂ ತಪ್ಪಿಸದೇ ಅನುಸರಿಸಬೇಕಾದ ಅಗತ್ಯವಿರುತ್ತದೆ ಎಂದರ್ಥ. ನೆನಪಿರಲಿ, ಅಪಾಯ ಇನ್ನೂ ದೂರವಾಗಿಯೇ ಇಲ್ಲ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.