ಉಗ್ರ ಸಂಘಟನೆಗಳಿಗೆ ಸ್ಪಷ್ಟ ಸಂದೇಶ ರವಾನಿಸಿದ ಸರಕಾರ


Team Udayavani, Sep 29, 2022, 6:00 AM IST

ಉಗ್ರ ಸಂಘಟನೆಗಳಿಗೆ ಸ್ಪಷ್ಟ ಸಂದೇಶ ರವಾನಿಸಿದ ಸರಕಾರ

ದೇಶದ ಹಲವೆಡೆ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳುವ ಮೂಲಕ ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಹಾನಿ ಉಂಟು ಮಾಡುತ್ತಿದ್ದ ಆರೋಪಕ್ಕೆ ಗುರಿಯಾಗಿದ್ದ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ(ಪಿಎಫ್ಐ) ಸಂಘಟನೆಯನ್ನು ಕೇಂದ್ರ ಸರಕಾರ ನಿಷೇಧಿಸಿದೆ. ಇದರ ಜತೆಯಲ್ಲಿ ಇದರ ಅಂಗಗಳಂತೆ ಕಾರ್ಯನಿರ್ವಹಿಸುತ್ತಿದ್ದ ಇತರ 8 ಸಂಘಟನೆಗಳನ್ನೂ ಮುಂದಿನ ಐದು ವರ್ಷಗಳ ಕಾಲ ನಿಷೇಧಿಸಿ ಮಂಗಳವಾರ ತಡರಾತ್ರಿ ಕೇಂದ್ರ ಗೃಹ ಸಚಿವಾಲಯ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ.

ದೇಶದ ಹಲವೆಡೆ ಅದರಲ್ಲೂ ಮುಖ್ಯವಾಗಿ ಕೇರಳ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಪಿಎಫ್ಐ ಸಂಘಟನೆ ಹೆಚ್ಚು ಸಕ್ರಿಯವಾಗಿತ್ತು. ಸಿಮಿಗೆ ನಿಷೇಧ ಹೇರಿದ ಬಳಿಕ 2006ರಲ್ಲಿ ಪಿಐಫ್ಐ ಹೆಸರಿನಲ್ಲಿ ಕೇರಳದಲ್ಲಿ ರಚನೆಯಾಗಿತ್ತು. ಪಿಎಫ್ಐ ಕೇರಳ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಲವಾರು ಹಿಂದೂ ಮುಖಂಡರನ್ನು ಹತ್ಯೆಗೈದಿತ್ತು. ರಾಜ್ಯದಲ್ಲಿ ಈ ಹಿಂದೆ ನಡೆದಿದ್ದ ಹಿಂದೂ ಮುಖಂಡರಾದ ಶರತ್‌ ಮಡಿವಾಳ, ರುದ್ರೇಶ್‌, ಪ್ರವೀಣ್‌ ಪೂಜಾರಿ ಹತ್ಯೆ ಪ್ರಕರಣಗಳಲ್ಲೂ ಪಿಎಫ್ಐ ಮತ್ತದರ ಅಂಗ ಸಂಘಟನೆಗಳ ಕೈವಾಡವಿರುವ ಬಗೆಗೆ ಆರೋಪಗಳು ಕೇಳಿಬಂದಿದ್ದವು. ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಬಿಜೆಪಿ ಯುವ ನಾಯಕ, ಹಿಂದೂ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಪ್ರಕರಣದಲ್ಲಿ ಪಿಎಫ್ಐ ಕೈವಾಡ ಬೆಳ ಕಿಗೆ ಬಂದ ಬಳಿ ಕ ಪಿಎಫ್ಐ ನಿಷೇಧಕ್ಕೆ ಒಕ್ಕೊರಲ ಆಗ್ರಹ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಪಿಎಫ್ಐ ಸಂಘಟನೆಯನ್ನು ನಿಷೇಧಿಸುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿತ್ತು. ಇದಲ್ಲದೆ ಉತ್ತರ ಪ್ರದೇಶ ಮತ್ತು ಗುಜರಾತ್‌ ಸರಕಾರ ಕೂಡ ಇಂಥದ್ದೇ ನಿರ್ಣಯವನ್ನು ಕೈಗೊಂಡು ಕೇಂದ್ರಕ್ಕೆ ರವಾನಿಸಿತ್ತು.

ಇತ್ತೀಚಿನ ವರ್ಷಗಳಲ್ಲಿ ಪಿಎಫ್ಐ ಮತ್ತದರ ಅಂಗ ಸಂಘಟನೆಗಳು ದೇಶಾದ್ಯಂತ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿ ರುವುದು ತನಿಖೆಯ ವೇಳೆ ಬಹಿರಂಗಗೊಂಡಿತ್ತು. ಎನ್‌ಐಎ ದೇಶದ ವಿವಿಧೆಡೆಗಳಲ್ಲಿ ಕಾರ್ಯಾಚರಣೆ ನಡೆಸಿ ಪಿಎಫ್ಐ ಮತ್ತದರ ಅಂಗಸಂಘಟನೆಗಳ ಕಚೇರಿಗಳು, ಪದಾಧಿಕಾರಿಗಳು ಮತ್ತು ಸದಸ್ಯರ ನಿವಾಸ, ಕಟ್ಟಡಗಳ ಮೇಲೆ ದಾಳಿ ನಡೆಸಿ ಮಹತ್ತರ ದಾಖಲೆ ಪತ್ರಗಳು, ಶಸ್ತ್ರಾಸ್ತ್ರ, ವಿದೇಶಿ ನಂಟು, ಹಣಕಾಸು ನೆರವು, ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಕಲೆ ಹಾಕಿತ್ತು.

ಇವೆಲ್ಲವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರಕಾರ, ಪಿಎಫ್ಐ ಮತ್ತು ಇತರ 8 ಸಂಘಟನೆಗಳನ್ನು ನಿಷೇಧಿಸಿದೆ. ನ್ಯಾಯಾಲಯ ಪ್ರಕ್ರಿಯೆಯಲ್ಲಿ ಹಿನ್ನಡೆಯಾಗದಂತೆ ಎಚ್ಚರಿಕೆಯ ಹೆಜ್ಜೆ ಇಟ್ಟಿರುವ ಕೇಂದ್ರೀಯ ತನಿಖಾ ಸಂಸ್ಥೆ ಈ ಸಂಘಟನೆಗಳ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳನ್ನು ಕಲೆಹಾಕಿದೆ. ಅಷ್ಟು ಮಾತ್ರವಲ್ಲದೆ ಈ ಸಂಘಟನೆಗಳ ಕಾರ್ಯಕರ್ತರ ಮೇಲೆ ದೇಶಾದ್ಯಂತ ದಾಖಲಾಗಿರುವ ಎಲ್ಲ ಕ್ರಿಮಿನಲ್‌ ಪ್ರಕರಣಗಳ ದಾಖಲೆ ಸಂಗ್ರಹಿಸಿದೆ.

ಈ ಹಿಂದೆ ಸಿಮಿ ನಿಷೇಧಿಸಲ್ಪಟ್ಟಾಗ ಪಿಎಫ್ಐ ರೂಪದಲ್ಲಿ ಹೊಸ ಉಗ್ರಗಾಮಿ ಸಂಘಟನೆ ಚಿಗಿತುಕೊಂಡಂತೆ ಮತ್ತು ನಿಷೇಧಿತ ಸಂಘಟನೆಯ ಕಾರ್ಯಕರ್ತರು ಇನ್ಯಾವುದೋ ಸಂಘಟನೆಯಲ್ಲಿ ಗುರುತಿಸಿಕೊಳ್ಳುವ ಮೂಲಕ ತಮ್ಮ ದೇಶದ್ರೋಹಿ, ಕಾನೂನುಬಾಹಿರ ಮತ್ತು ಉಗ್ರ ಕೃತ್ಯಗಳನ್ನು ಮುಂದುವರಿಸಿದ್ದರು. ಈ ಬಾರಿ ಹಾಗಾಗದಂತೆ ಸರಕಾರ ಮತ್ತು ತನಿಖಾ ಸಂಸ್ಥೆಗಳು ಎಚ್ಚರ ವಹಿಸಬೇಕು. ದೇಶದಿಂದ ಭಯೋತ್ಪಾದನೆಯನ್ನು ಮೂಲೋತ್ಪಾಟನೆ ಮಾಡಲು ಸರಕಾರದ ಈ ದಿಟ್ಟ ನಡೆ ನಾಂದಿ ಹಾಡಲಿ ಎಂಬುದು ಶಾಂತಿಪ್ರಿಯ ದೇಶವಾಸಿಗಳ ಆಶಯ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.