ಪಾಕಿಸ್ಥಾನ‌ಕ್ಕೆ ಈ ಬುದ್ಧಿ ಮೊದಲೇ ಬರಬೇಕಿತ್ತು


Team Udayavani, Jan 18, 2023, 6:00 AM IST

ಪಾಕಿಸ್ಥಾನ‌ಕ್ಕೆ ಈ ಬುದ್ಧಿ ಮೊದಲೇ ಬರಬೇಕಿತ್ತು

ಸ್ವಾತಂತ್ರ್ಯಾಅನಂತರದಲ್ಲಿ ಭಾರತದೊಂದಿಗೆ ಮೂರು ಯುದ್ಧಗಳನ್ನು ಮಾಡಿದ್ದೇವೆ. ನಮ್ಮ ತಪ್ಪು ನಮಗೆ ಅರಿವಾಗಿದೆ. ಯುದ್ಧಗಳಿಂದ ನಾವು ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು. ಹೀಗಾಗಿ, ಭಾರತದೊಂದಿಗೆ ಶಾಂತಿಯುತ ಸಂಬಂಧಕ್ಕೆ ಪ್ರಯತ್ನಿಸುತ್ತೇನೆ ಎಂದು ಪಾಕಿಸ್ಥಾನ‌ದ ಪ್ರಧಾನಿ ಶಹಭಾಜ್‌ ಷರೀಫ್ ಅರಬಿಕ್‌ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಒಂದು ಲೆಕ್ಕಾಚಾರದಲ್ಲಿ ನೋಡಿದರೆ, ಪಾಕಿಸ್ಥಾನ‌ದ ಪ್ರಧಾನಿಯೊಬ್ಬರಿಂದ ಇಂಥ ಪಶ್ಚಾತ್ತಾಪದ ಮಾತುಗಳು ಕೇಳಿಬಂದದ್ದು ಕಡಿಮೆಯೇ. ಏಕೆಂದರೆ, ನಾವು ಈ ಹಿಂದೆ ಮಾಡಿದ್ದು ತಪ್ಪಾಯಿತು, ಸರಿ ಪಡಿಸಿ ಕೊಂಡು ಹೋಗುತ್ತೇವೆ ಎಂದು ಹೇಳುವುದು ಪಾಕಿಸ್ಥಾನ‌ದಲ್ಲಿ ಅಪರಾಧವೇ.

ಸದ್ಯ ಈ ಹೇಳಿಕೆಗಳನ್ನು ಅವಲೋಕಿಸುವುದಾದರೆ, ಪಾಕಿಸ್ಥಾನ‌ಕ್ಕೆ ಕೆಟ್ಟ ಮೇಲೆ ಬುದ್ಧಿ ಬಂದಂತೆ ತೋರುತ್ತಿದೆ. ಸದ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ಥಾನ ಹೆಚ್ಚು ಕಡಿಮೆ ಒಬ್ಬಂಟಿಯಾಗಿದೆ. ಚೀನಾ ಮತ್ತು ಟರ್ಕಿಯಂಥ ದೇಶಗಳು ಬಿಟ್ಟರೆ, ಪಾಕಿಸ್ಥಾನ‌ದ ಪರವಾಗಿ ನಿಲ್ಲುವ ದೇಶಗಳ ಸಂಖ್ಯೆ ಬಹುತೇಕ ಕಡಿಮೆ ಇದೆ. ಅಲ್ಲದೆ, ಈಗ ಚೀನಾ ಕೊರೊನಾ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದೆ. ಅಲ್ಲಿನ ಆರ್ಥಿಕತೆಯೂ ಕುಸಿಯುವ ಹಂತದಲ್ಲಿದೆ. ಚೀನಾದಿಂದ ಒಂದೊಂದೇ ಕಂಪೆನಿಗಳು ಹೊರಗೆ ಕಾಲಿಡುತ್ತಿವೆ. ಇಂಥ ಹೊತ್ತಿನಲ್ಲಿ ಚೀನಾಗೆ ತನ್ನ ಕ್ಷೇಮಕ್ಕಿಂತ ಹೊರಗಿನವರ ಕ್ಷೇಮದ ಬಗ್ಗೆ ತಲೆಕೆಡಿಸಿಕೊಳ್ಳುವುದು ದೂರದ ಮಾತು.

ಪಾಕಿಸ್ಥಾನ‌ದಲ್ಲಿ ಇಂದು ಆರ್ಥಿಕ ಸ್ಥಿತಿಯೂ ಚೆನ್ನಾಗಿಲ್ಲ. ಹಿಂದಿನಿಂದಲೂ ಪಾಕಿಸ್ಥಾನ‌ಕ್ಕೆ ಹಣದ ಕೊರತೆಯಾದಾಗೆಲ್ಲಾ ಅಮೆರಿಕದ ಬಳಿ ಹೋಗಿ ಹಣ ಪಡೆದುಕೊಂಡು ಬರುತ್ತಿತ್ತು. ಹೀಗಾಗಿ, ಕಷ್ಟನಷ್ಟಗಳು ಹೆಚ್ಚು ಗೊತ್ತಾಗುತ್ತಿರಲಿಲ್ಲ. ಈಗ ಅಮೆರಿಕದ ಸಹಾಯ ಹಸ್ತ ನಿಂತಿದೆ. ಜತೆಗೆ ವಿಶ್ವಬ್ಯಾಂಕ್‌, ಜಾಗತಿಕ ಹಣಕಾಸು ನಿಧಿಯಂಥ ಹಣಕಾಸು ಸಂಸ್ಥೆಗಳೂ ಪಾಕಿಸ್ಥಾನ‌ಕ್ಕೆ ಸಾಲ ನೀಡುತ್ತಿಲ್ಲ. ಅತ್ತ ಅರಬ್‌ ದೊರೆಗಳೂ ಪಾಕಿಸ್ಥಾನ‌ದ ವರ್ತನೆಯಿಂದ ಬೇಸತ್ತು ದಿನದಿಂದ ದಿನಕ್ಕೆ ದೂರವಾಗುತ್ತಿವೆ. ಚೀನಾ ಸಹಾಯ ಮಾಡಿದರೂ, ಅದು ಷರತ್ತಿಗೆ ಒಳಪಟ್ಟಿದೆ.

ಇದಕ್ಕಿಂತ ಹೆಚ್ಚಾಗಿ ಅತ್ತ ತಾಲಿಬಾನ್‌ ಕಾಟವೂ ಜೋರಾಗಿದೆ. ತೆಹ್ರಿಕ್‌ ಇ ತಾಲಿಬಾನ್‌ ಪಾಕಿಸ್ಥಾನ್‌(ಟಿಟಿಪಿ) ಸಂಘಟನೆ ಪಾಕಿಸ್ಥಾನ ಸೇನೆ ಜತೆಗಿನ ಕದನಾ ವಿರಾಮ ಒಪ್ಪಂದವನ್ನು ಮುರಿದುಕೊಂಡಿದ್ದು, ನೇರವಾಗಿ ಸಮರ ಸಾರಿದೆ. ಆಂತರಿಕವಾಗಿ ಈ ಬೆಳವಣಿಗೆ ಪಾಕ್‌ ಸೇನೆಗೂ ತಲೆನೋವು ತಂದಿದೆ. ಅಂದರೆ ತಾಲಿಬಾನ್‌ಗಳ ಕೈ ಮೇಲಾಗುವುದು. ಅಂದರೆ ಆಫ‌^ನ್‌ ತಾಲಿಬಾನಿಗಳು ಹೆಚ್ಚು ಶಕ್ತಿಯುತರಾಗುತ್ತಿದ್ದಾರೆ ಎಂದರ್ಥ.

ಇದರ ಮಧ್ಯೆಯೇ ಪಾಕಿಸ್ಥಾನ‌ದ ವಿದೇಶಿ ವಿನಿಮಯ ನಿಧಿ ಸಂಗ್ರಹ 10 ಬಿಲಿಯನ್‌ ಅಮೆರಿಕ್‌ ಡಾಲರ್‌ಗೆ ಇಳಿಕೆಯಾಗಿದೆ. ಆಮದು ಮತ್ತು ರಫ್ತು ಪ್ರಕ್ರಿಯೆಗಳು ಹೆಚ್ಚು ಕಡಿಮೆ ಸ್ಥಗಿತವಾಗಿವೆ. ಇಂಥ ಹೊತ್ತಿನಲ್ಲಿ ಅನಿವಾರ್ಯವಾಗಿ ಪಾಕಿಸ್ಥಾನ‌ ಭಾರತದೊಂದಿಗೆ ಶಾಂತಿಮಾತುಕತೆಗೆ ಕುಳಿತುಕೊಳ್ಳಬೇಕಾದ ಸಂದಿಗ್ಧ ಸ್ಥಿತಿಗೆ ಬಂದಿದೆ.

ಆದರೆ, ಪಾಕಿಸ್ಥಾನ‌ದ ಶಾಂತಿ ಮಾತುಕತೆ ಪ್ರಸ್ತಾಪವನ್ನು ನಂಬಬಹುದೇ? ಅಲ್ಲಿನ ರಾಜಕಾರಣಿಗಳಿಗೆ ನಿಜವಾಗಿಯೂ ಅಧಿಕಾರವಿದೆಯೇ ಎಂಬ ಪ್ರಶ್ನೆಗಳೂ ಉದ್ಭವವಾಗುತ್ತವೆ. ಈ ಹಿಂದಿನಿಂದಲೂ ಪಾಕ್‌ನ ಯಾವುದೇ ಪ್ರಧಾನಿ ಭಾರತದೊಂದಿಗೆ ಶಾಂತಿ ಮಾತುಕತೆಗೆ ಮುಂದಾಗಿದ್ದಾಗಲೂ, ಅವರನ್ನು ಸೇನೆ ಅಧಿಕಾರದಿಂದ ಕೆಳಗಿಳಿಸಿತ್ತು. ಈಗಲೂ ಸೇನೆಯ ಕೈಬೊಂಬೆಯಂತಿರುವ ಶಾಭಾಜ್‌ ಷರೀಫ್ರನ್ನು ನಂಬಲು ಸಾಧ್ಯವೇ ಎಂಬ ಪ್ರಶ್ನೆಯೂ ಉದ್ಭವವಾಗುತ್ತದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.