Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ


Team Udayavani, May 22, 2024, 6:06 AM IST

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

ದಶಕದ ಹಿಂದೆ ಕರ್ನಾಟಕ ಶೈಕ್ಷಣಿಕವಾಗಿ ದೇಶದಲ್ಲಿಯೇ ಮುಂಚೂಣಿಯಲ್ಲಿದ್ದು, ಉಳಿದ ರಾಜ್ಯಗಳಿಗೆ ಮಾದರಿ ಎಂಬಂತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ರಾಜ್ಯದ ಶೈಕ್ಷಣಿಕ ವ್ಯವಸ್ಥೆ ಸಂಪೂರ್ಣ ಗೊಂದಲಮಯವಾಗಿದ್ದು, ಪ್ರತೀ ಶೈಕ್ಷಣಿಕ ವರ್ಷದುದ್ದಕ್ಕೂ ನಿತ್ಯ ನಿರಂತರ ಎಂಬಂತೆ ಪ್ರಯೋಗಗಳು ನಡೆಯುತ್ತಲೇ ಬಂದಿವೆ. ಇದರ ಪರಿಣಾಮ ವಿದ್ಯಾರ್ಥಿಗಳು ಗುಣಮಟ್ಟದಿಂದ ಕೂಡಿದ ಕೌಶಲಭರಿತ ಶಿಕ್ಷಣದಿಂದ ವಂಚಿತರಾಗುತ್ತಿದ್ದರೆ, ಈ ಗೋಜಲುಮಯ ವ್ಯವಸ್ಥೆಗೆ ಹೊಂದಿಕೊಳ್ಳಲು ಕೇವಲ ವಿದ್ಯಾರ್ಥಿಗಳು ಮಾತ್ರವಲ್ಲದೆ ಶಿಕ್ಷಕರು, ಮಕ್ಕಳ ಹೆತ್ತವರು ಕೂಡ ಹರಸಾಹಸ ಪಡುವಂತಾಗಿದೆ.

ರಾಜ್ಯದಲ್ಲಿ ಅಧಿಕಾರ ಸೂತ್ರ ಹಿಡಿಯುವ ಪಕ್ಷಗಳು ತಮ್ಮ ಸಿದ್ಧಾಂತಗಳನ್ನು ಶಿಕ್ಷಣ ಕ್ಷೇತ್ರದ ಮೇಲೆ ಹೇರತೊಡಗಿದಾಗಿನಿಂದ ರಾಜ್ಯದ ಶಿಕ್ಷಣ ವ್ಯವಸ್ಥೆ ಸದಾ ಒಂದಲ್ಲ ಒಂದು ಚರ್ಚೆಗೆ ಗ್ರಾಸವಾಗುತ್ತಲೇ ಬಂದಿದೆ. ಪ್ರತಿಯೊಂದು ಸರಕಾರ ಕೂಡ ವಿದ್ಯಾರ್ಥಿಗಳ ಹಿತಕ್ಕಿಂತ ತನ್ನ ಸೈದ್ಧಾಂತಿಕ ನಿಲುವುಗಳಿಗೇ ಜೋತು ಬಿದ್ದ ಪರಿಣಾಮವೋ ಏನೋ ಪೂರ್ವ ಪ್ರಾಥಮಿಕ ತರಗತಿಯಿಂದ ಹಿಡಿದು ಪದವಿ ತರಗತಿಯ ವರೆಗೂ ಶಿಕ್ಷಣ ಎನ್ನುವುದು ಸಂಪೂರ್ಣ ಕಲಸುಮೇಲೋಗರವಾಗಿದೆ. ಬದಲಾದ ಕಾಲ, ತಂತ್ರಜ್ಞಾನ, ಔದ್ಯೋಗಿಕ ಕ್ಷೇತ್ರಕ್ಕನುಗುಣವಾಗಿ ಶಿಕ್ಷಣದಲ್ಲಿ ಮಾರ್ಪಾಡುಗಳಾಗಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ತಂತ್ರಜ್ಞಾನ, ಕೌಶಲ, ವೃತ್ತಿ ಪೂರಕ ಮತ್ತು ಗುಣಮಟ್ಟದ ಶಿಕ್ಷಣ ಕೊಡುವ ನೆಪದಲ್ಲಿ ವಿದ್ಯಾರ್ಥಿಗಳನ್ನು ಪ್ರಯೋಗದ ಕೂಸುಗಳನ್ನಾಗಿಸಿರುವುದು ವಿಪರ್ಯಾಸವೇ ಸರಿ. ರಾಜ್ಯದಲ್ಲಿ ಎಲ್‌ಕೆಜಿಗೆ ಮಕ್ಕಳ ದಾಖಲಾತಿಯಿಂದ ಹಿಡಿದು ಎಷ್ಟು ವರ್ಷಗಳ ಪದವಿ ಕೋರ್ಸ್‌ ಇರಬೇಕು ಎಂಬಲ್ಲಿಯವರೆಗೆ ಪ್ರತೀ ಹಂತದಲ್ಲಿ ಗೊಂದಲಗಳೇ ತುಂಬಿವೆ. ಎಲ್‌ಕೆಜಿ ಸೇರ್ಪಡೆಗೊಳಿಸಲು ಮಗುವಿಗೆ ಕಡ್ಡಾಯವಾಗಿ 4 ವರ್ಷ ತುಂಬಿರಬೇಕು, ಶಾಲಾ ಪಠ್ಯಕ್ರಮ, 5, 8, 9ನೇ ತರಗತಿ ವಾರ್ಷಿಕ ಪರೀಕ್ಷೆ, ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ, ಮೂರು ವಾರ್ಷಿಕ ಪರೀಕ್ಷೆ, ಗ್ರೇಸ್‌ ಮಾರ್ಕ್ಸ್, ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮುಂದುವರಿಸುವುದೋ ರಾಜ್ಯ ಶಿಕ್ಷಣ ನೀತಿಯನ್ನು ಆರಂಭಿಸುವುದೋ?, ಸರಕಾರ ಅಥವಾ ಮಂಡಳಿಯ ನಿರ್ಧಾರವನ್ನು ಪ್ರಶ್ನಿಸಿ ಶಾಲಾಡಳಿತ ಮಂಡಳಿಗಳು ನ್ಯಾಯಾಲಯದ ಮೆಟ್ಟಿಲೇರಿರುವುದು… ಹೀಗೆ ರಾಜ್ಯದ ಶೈಕ್ಷಣಿಕ ಸಮಸ್ಯೆಗಳ ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಹೋಗುತ್ತದೆ. ಇವೆಲ್ಲದರಿಂದಾಗಿ ವಿದ್ಯಾರ್ಥಿಗಳು, ಹೆತ್ತವರು ಮತ್ತು ಶಿಕ್ಷಕರು ಹೈರಾಣಾಗಿದ್ದಾರೆ. ಈ ಮೂರು ವರ್ಗಗಳನ್ನು ನಾಳೆ ಏನು ಎಂಬ ಪ್ರಶ್ನೆ ಕಾಡುತ್ತಲೇ ಇದೆ.

ಪ್ರತಿಯೊಂದಕ್ಕೂ ತಜ್ಞರ ಸಮಿತಿಯನ್ನು ನೇಮಿಸಿ ಅದು ನೀಡುವ ಶಿಫಾರಸುಗಳನ್ನು ತಮಗೆ ಬೇಕಾದಂತೆ ಅನುಷ್ಠಾನಗೊಳಿಸುವ ಸರಕಾರದ ಧೋರಣೆ, ಶಿಕ್ಷಣಕ್ಕೆ ಸಂಬಂಧಿಸಿದವರ ನಡುವೆ ಸಮನ್ವಯದ ಕೊರತೆ, ಮಿತಿಮೀರಿದ ರಾಜಕೀಯ ಹಸ್ತಕ್ಷೇಪ, ತಮ್ಮ ಸೈದ್ಧಾಂತಿಕ ನಿಲುವುಗಳನ್ನು ಮಕ್ಕಳ ಮೇಲೆ ಹೇರುವ ಮನಃಸ್ಥಿತಿ… ಇವೆಲ್ಲ ಕಾರಣಗಳಿಂದಾಗಿಯೇ ಈ ಎಲ್ಲ ಅವಾಂತರ, ಗೊಂದಲಗಳು ಸೃಷ್ಟಿಯಾಗಿವೆ. ಶಿಕ್ಷಣಕ್ಕೆ ಸಂಬಂಧಿಸಿದ ಪ್ರತಿಯೊಂದು ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನ ವಿದ್ಯಾರ್ಥಿ, ಶಿಕ್ಷಕ ಸಂಘಟನೆಗಳು, ಮಕ್ಕಳ ಪೋಷಕರ ಪ್ರತಿನಿಧಿಗಳು, ಶಿಕ್ಷಣ ತಜ್ಞರು, ಇಲಾಖೆಯ ಉನ್ನತ ಅಧಿಕಾರಿಗಳು, ಶಾಲಾಡಳಿತ ಮಂಡಳಿಗಳ ಪ್ರತಿನಿಧಿಗಳು… ಹೀಗೆ ಸಂಬಂಧಿತರೆಲ್ಲರೂ ಒಂದೆಡೆ ಕುಳಿತು ಸಮಗ್ರ ವಿಚಾರ ವಿಮರ್ಶೆ ನಡೆಸಿ ದೃಢ ತೀರ್ಮಾನ ಕೈಗೊಂಡಲ್ಲಿ ಇಂತಹ ವಿರೋಧಾಭಾಸಗಳು, ರಾದ್ಧಾಂತಗಳು ಸೃಷ್ಟಿಯಾಗಲಾರವು. ಈ ದಿಸೆಯಲ್ಲಿ ರಾಜ್ಯ ಸರಕಾರ ತತ್‌ಕ್ಷಣ ಕಾರ್ಯಪ್ರವೃತ್ತವಾಗಿ ರಾಜ್ಯದ ಶಿಕ್ಷಣ ವ್ಯವಸ್ಥೆಗೆ ಅಂಟಿರುವ ಕಳಂಕವನ್ನು ತೊಡೆದು ಹಾಕಬೇಕು. ಮಕ್ಕಳ ಶಿಕ್ಷಣದ ಬುನಾದಿಯೇ ಭದ್ರವಾಗಿರದಿದ್ದರೆ ಅವರ ಭವಿಷ್ಯ ಮಂಕಾಗಲಿದೆ ಎಂಬ ಪ್ರಾಥಮಿಕ ಅರಿವು ನಮ್ಮೆಲ್ಲರಲ್ಲಿರಲಿ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WHO

Permanent Member: ಭದ್ರತಾ ಮಂಡಳಿ ಖಾಯಂ ಸದಸ್ಯತ್ವ: ಭಾರತಕ್ಕೆ ಆನೆಬಲ

Fake-Medicine

Quality Poor Medicine: ಮಾರುಕಟ್ಟೆಗೆ ನಕಲಿ ಔಷಧ ಪ್ರವೇಶ ತಪ್ಪಿಸಿ

railaw

Indian Railway: ರೈಲು ಹಳಿ ತಪ್ಪಿಸುವ ಯತ್ನ ಆಮೂಲಾಗ್ರ ತನಿಖೆ ಅಗತ್ಯ

traffic

Traffic Rules: ಸಂಚಾರ ನಿಯಮಾವಳಿಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಲಿ

supreme-Court

Supreme Court: ಪೋಕ್ಸೋ ವ್ಯಾಪ್ತಿ ವಿಸ್ತರಣೆ: ಸುಪ್ರೀಂ ತೀರ್ಪು ಐತಿಹಾಸಿಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.