ಮಾಡಿದ್ದುಣ್ಣೋ ಮಹಾರಾಯ ಅಂದರೆ ಇದೇ ಏನು? ಲಾಲೂಗೆ ಮತ್ತೆ ಮೇವು


Team Udayavani, May 9, 2017, 3:45 AM IST

08-PTI-7.jpg

ಕಾನೂನಿನ ಕೈಗಳು ದೀರ್ಘ‌ವೂ ಪ್ರಬಲವೂ ಆಗಿದೆ ಎನ್ನುವುದನ್ನು ಮೇವು ಹಗರಣದಲ್ಲಿ ಸುಪ್ರೀಂ ಕೋರ್ಟ್‌ ಮತ್ತೂಮ್ಮೆ ತೋರಿಸಿಕೊಟ್ಟಿದೆ. ಮೇವು ಹಗರಣದ ಮರುವಿಚಾರಣೆಗೆ ಅದರ ಆದೇಶ ಬಿಹಾರ ಮಾತ್ರವಲ್ಲದೆ, ರಾಷ್ಟ್ರ ರಾಜಕೀಯದ ಮೇಲೂ ಪರಿಣಾಮ ಬೀರಲಿದೆ.

ಬಿಹಾರದ ಮಾಜಿ ಸಿಎಂ, ಹಾಲಿ ಮೈತ್ರಿ ಸರಕಾರದ ಸೂತ್ರಧಾರನಾಗಿರುವ ಲಾಲೂ ಪ್ರಸಾದ್‌ಗೆ ಈಗ ಸಂಕಷ್ಟದ ಕಾಲ. ಲಾಲೂ ಮತ್ತು ಅವರ ಮಕ್ಕಳು ಭೂಕಬಳಿಕೆ ಮಾಡಿ 200 ಕೋ. ರೂ.ಗಳ ಮಾಲ್‌ ನಿರ್ಮಿಸಿದ ಹಗರಣವನ್ನು ಇತ್ತೀಚೆಗೆ ಬಿಜೆಪಿ ಎಳೆಎಳೆಯಾಗಿ ಬಹಿರಂಗಪಡಿಸಿದೆ. ಇದರ ಬೆನ್ನಿಗೆ ಸುದ್ದಿ ವಾಹಿನಿಯೊಂದು ಜೈಲಿನಲ್ಲಿರುವ ಗೂಂಡಾ ರಾಜಕಾರಣಿ ಶಹಾಬುದ್ದೀನ್‌ ಜತೆಗೆ ಲಾಲೂ ಮಾತುಕತೆಯ ಆಡಿಯೋ ಟೇಪ್‌ ಬಹಿರಂಗಪಡಿಸಿದೆ. ಆರ್‌ಜೆಡಿಯ ಶಾಸಕರು, ಸಚಿವರು ತಮ್ಮ ವಾಸಕ್ಕೆ ಸರಕಾರ ನೀಡಿರುವ ಬಂಗಲೆಗಳನ್ನು ಬಾಡಿಗೆಗೆ ನೀಡಿ ಲಕ್ಷಾಂತರ ರೂಪಾಯಿ ಗಳಿಸುತ್ತಿರುವ ವಿಷಯ ಬಯಲಾಗಿದೆ. ಇದೀಗ ಲಾಲೂ ಅವರ ರಾಜಕೀಯ ಬದುಕಿನ ಅತಿದೊಡ್ಡ ಕಳಂಕವಾಗಿರುವ ಮೇವು ಹಗರಣಕ್ಕೆ ಸುಪ್ರೀಂ ಕೋರ್ಟ್‌ ಮರುಜೀವ ನೀಡಿ ಈ ರಾಜಕೀಯ ವಿದೂಷಕನ ಮಹತ್ವಾಕಾಂಕ್ಷೆಗೆ ತಣ್ಣೀರು ಸುರಿದಿದೆ.  

ಮೇವು ಹಗರಣದಲ್ಲಿ ಬಾಕಿ ಉಳಿದಿರುವ ಐದು ಕೇಸುಗಳನ್ನು ಪ್ರತ್ಯೇಕವಾಗಿ ವಿಚಾರಣೆಗೊಳಪಡಿಸಬೇಕು ಹಾಗೂ 9 ತಿಂಗಳ ಒಳಗಾಗಿ ವಿಚಾರಣೆ ಮುಗಿಯಬೇಕೆಂದು ಆದೇಶಿಸಿದೆ ಸುಪ್ರೀಂ ಕೋರ್ಟ್‌. ಲಾಲೂ  ಬಿಹಾರ ಮುಖ್ಯಮಂತ್ರಿಯಾಗಿದ್ದ ಕಾಲದ ಹಗರಣವಿದು. ಪಶು ಸಂಗೋಪನೆ ಇಲಾಖೆ ಜಾನುವಾರುಗಳಿಗೆ ಮೇವು ಮತ್ತು ಔಷಧಿ ಪೂರೈಸಲು ಮೀಸಲಿರಿಸಿದ್ದ ಹಣವನ್ನು ನಕಲಿ ಬಿಲ್‌ ಸೃಷ್ಟಿಸುವ ಮೂಲಕ ಲಪಟಾಯಿಸಿ ಬೊಕ್ಕಸಕ್ಕೆ ಸುಮಾರು 950 ಕೋ. ರೂ. ನಷ್ಟ ಉಂಟು ಮಾಡಿದ ಈ ಹಗರಣ “ಮೇವು ಹಗರಣ’ವೆಂದೇ ಜನಜನಿತ. ಲಾಲೂರ ರಾಜಕೀಯ ಬದುಕಿನುದ್ದಕ್ಕೂ ಇನ್ನಿಲ್ಲದಂತೆ ಕಾಡಿದ ಈ ಹಗರಣ 21 ವರ್ಷಗಳ ಬಳಿಕ ಮತ್ತೆ ಗೋರಿಯಿಂದ ಎದ್ದು ಕುಳಿತಿರುವುದು ರಾಷ್ಟ್ರ ರಾಜಕಾರಣದಲ್ಲೂ ವ್ಯಾಪಕ ಪರಿಣಾಮ ಉಂಟು ಮಾಡಲಿದೆ ಎಂದು ಭಾವಿಸಲಾಗಿದೆ. ಬಿಹಾರದ ಬಿಜೆಪಿ ನಾಯಕ ಸುಶೀಲ್‌ಕುಮಾರ್‌ ಮೋದಿ ಆರ್‌ಜೆಡಿ ಮುಖ್ಯಸ್ಥನ ರಾಜಕೀಯ ಬದುಕಿನ ಅಂತ್ಯ ಇದು ಎಂದು ಸಂಭ್ರಮಿಸುತ್ತಿದ್ದರೂ ಲಾಲೂ ಅಷ್ಟು ಸುಲಭವಾಗಿ ಸೋಲೊಪ್ಪಿಕೊಳ್ಳುವ ಆಸಾಮಿಯಲ್ಲ. ಮೇವು ಹಗರಣಕ್ಕೆ ಸಂಬಂಧಿಸಿ ಲಾಲೂ ಈಗಾಗಲೇ ಶಿಕ್ಷೆಗೆ ಗುರಿಯಾಗಿದ್ದಾರೆ. ಹಲವು ಜೈಲಿಗೆ ಹೋಗಿ ಬಂದ ಅನುಭವ ಅವರಿಗಿದೆ. ಆದರೆ ಅವರನ್ನು ದೀರ್ಘ‌ ಕಾಲ ಜೈಲಿನಲ್ಲಿ ಬಂಧಿಸಿಡುವಷ್ಟು ನಮ್ಮ ಕಾನೂನು ವ್ಯವಸ್ಥೆ ಸಮರ್ಥವಾಗಿಲ್ಲ. ಜೈಲಿನಲ್ಲಿರಲಿ ಅಥವಾ ಅಧಿಕಾರದಲ್ಲಿರಲಿ ರಾಜಕೀಯ ತಂತ್ರಗಾರಿಕೆಯಲ್ಲಿ ಲಾಲೂಗೆ ಸರಿಸಾಟಿಯಿಲ್ಲ. ಕೋರ್ಟು ಕಚೇರಿ ಅಲೆದಾಟ, ಜೈಲು, ಜಾಮೀನು ಇವೆಲ್ಲ ಲಾಲೂ ಬದುಕಿನ ಅವಿಭಾಜ್ಯ ಚಟುವಟಿಕೆಗಳು. 

ಹೀಗಾಗಿ ಸುಪ್ರೀಂ ಕೋರ್ಟು ಆದೇಶ ಸದ್ಯಕ್ಕೆ ಲಾಲೂ ಮೇಲೆ ಯಾವ ಪರಿಣಾಮವನ್ನು ಬೀರುವ ಸಾಧ್ಯತೆಯಿಲ್ಲ. ಏಕೆಂದರೆ ನೆಪಕ್ಕಾದರೂ ಅವರು ಸಕ್ರಿಯ ರಾಜಕಾರಣದಿಂದ ದೂರವಿದ್ದಾರೆ. ಆದಾಗ್ಯೂ ಬಿಹಾರ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಈ ಆದೇಶ ಬೀರಬಹುದಾದದ ಪರಿಣಾಮವನ್ನು ನಿರ್ಲಕ್ಷಿಸುವಂತಿಲ್ಲ. ಸದ್ಯದಲ್ಲೇ ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಮೇಲೆ ಪರಿಣಾಮವಾಗುವ ಸಾಧ್ಯತೆಯಿದೆ. ಚುನಾವಣಾ ರಾಜಕೀಯದಿಂದ ಅವರು ಇನ್ನೂ ಹಲವು ವರ್ಷ ದೂರವಿರಬೇಕಾಗುತ್ತದೆ. ಬಿಹಾರದ ರಾಜಕೀಯ ಸಮೀಕರಣವೂ ಬದಲಾಗುವ ಸಾಧ್ಯತೆಯಿದೆ. ಈ ಕುರಿತಾದ ಸುಳಿವು ಈಗಾಗಲೇ ಸಿಕ್ಕಿದೆ. ಆರ್‌ಜೆಡಿ ಮೈತ್ರಿಯಿಂದ ಕಳಚಿಕೊಂಡರೆ ನಾವು ಬೆಂಬಲ ನೀಡಲು ಸಿದ್ಧರಿದ್ದೇವೆ ಎಂಬ ಸಂದೇಶವನ್ನು ಬಿಜೆಪಿ, ಮುಖ್ಯಮಂತ್ರಿ ನಿತೀಶ್‌ ಕುಮಾರ್‌ಗೆ ರವಾನಿಸಿದೆ. ಅಲ್ಲದೆ ಭ್ರಷ್ಟಾಚಾರ ಆರೋಪ ಹೊತ್ತ ವ್ಯಕ್ತಿಯ ಜತೆಗೆ ಏಗುವುದು ಕೂಡ ನಿತೀಶ್‌ಗೆ ಕಷ್ಟವಾಗಬಹುದು. ಈಗಲೇ ಅವರಿಗೆ ಉಸಿರುಕಟ್ಟಿದ ಅನುಭವವಾಗುತ್ತಿದ್ದು 2020ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಅವರು ಮತ್ತೆ ಮಹಾಘಟಬಂಧನ್‌ ಜತೆ ಕೈಜೋಡಿಸುವ ಸಾಧ್ಯತೆ ಕಡಿಮೆ. ಹೀಗಾದರೆ ಅದು ನೇರವಾಗಿ ದಿಲ್ಲಿ ರಾಜಕಾರಣದ ಮೇಲೆ ಪರಿಣಾಮ ಬೀರುತ್ತದೆ. ಸುಪ್ರೀಂ ಕೋರ್ಟ್‌ ಆದೇಶಿಸಿದಂತೆ 9 ತಿಂಗಳಲ್ಲಿ ವಿಚಾರಣೆ ಮುಗಿದು ಲಾಲೂ ಮತ್ತೂಮ್ಮೆ ಜೈಲಿಗೆ ಹೋಗುವ ಪ್ರಸಂಗ ಎದುರಾದರೆ ಆರ್‌ಜೆಡಿ ಅರಾಜಕವಾಗುತ್ತದೆ. ಸಮಾಜವಾದಿ ಪಾರ್ಟಿಯಲ್ಲಾದಂತೆ ಆರ್‌ಜೆಡಿಯಲ್ಲೂ ಅಧಿಕಾರಕ್ಕಾಗಿ ಯಾದವೀ ಕಲಹ ನಡೆಯುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. 

ಕಾನೂನಿನ ಕೈಗಳು ದೀರ್ಘ‌ವೂ ಪ್ರಬಲವೂ ಆಗಿದೆ ಎಂಬುದನ್ನು ಸುಪ್ರೀಂ ಕೋರ್ಟ್‌ ಮತ್ತೂಮ್ಮೆ ತೋರಿಸಿಕೊಟ್ಟಿದೆ. ಆದರೆ ಲಾಲೂರಂತಹ ದಪ್ಪ ಚರ್ಮದ ರಾಜಕಾರಣಿಗಳಿಗೆ ಮಾತ್ರ ಇದು ಅರ್ಥವಾಗುತ್ತಿಲ್ಲ. ಜೀವನದುದ್ದಕ್ಕೂ ಜಾತಿ ರಾಜಕಾರಣ, ಸ್ವಜನ ಪಕ್ಷಪಾತ, ಅವಕಾಶವಾದಿ ರಾಜಕೀಯವನ್ನೇ ಮಾಡಿಕೊಂಡು ಬಂದಿರುವ ಲಾಲೂರಂಥ ರಾಜಕಾರಣಿಗಳನ್ನು ದೇಶ ಇನ್ನೆಷ್ಟು ಸಮಯ ಸಹಿಸಿಕೊಳ್ಳಬೇಕು?

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.