ಬರ ಪರಿಹಾರ ಯಾವಾಗ?


Team Udayavani, May 10, 2019, 6:00 AM IST

37

ಕರ್ನಾಟಕ ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಬರಕ್ಕೆ ತುತ್ತಾಗುತ್ತಿದೆ. ಪ್ರತಿ ವರ್ಷ ಸರಕಾರ ಬರದ ಬೇಗೆ ತಟ್ಟದಿರಲು ಶಾಶ್ವತ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಭರವಸೆ ನೀಡುತ್ತದೆಯಾದರೂ ಯಾವುದೂ ಇನ್ನೂ ಕಾರ್ಯಗತಗೊಂಡಿಲ್ಲ. ಜನರಿಗೆ ಕುಡಿಯುವ ನೀರು ಒದಗಿಸುವುದು ಸರಕಾರದ ಮೊದಲ ಆದ್ಯತೆಯಾಗಬೇಕು.

ರಾಜ್ಯದ ಬಹುಭಾಗ ಬರದಿಂದ ತತ್ತರಿಸುತ್ತಿದೆ. 170ಕ್ಕೂ ತಾಲೂಕುಗಳು ಬರಪೀಡಿತವಾಗಿವೆ ಎಂದು ಸರಕಾರವೇ ಹೇಳಿಕೊಂಡಿದೆ. ಕುಡಿಯುವ ನೀರಿಗಾಗಿ ಎಲ್ಲೆಡೆ ಹಾಹಾಕಾರ ಉಂಟಾಗಿದ್ದರೂ ನಮ್ಮನ್ನಾಳುವವರ ಕಿವಿಗೆ ಅದು ಬಿದ್ದಿಲ್ಲ. ಒಂದು ಕಾಲದಲ್ಲಿ ಸಮೃದ್ಧ ನೀರು ಲಭ್ಯವಿದ್ದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಕೂಡಾ ಈ ವರ್ಷ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ. ಅದರಲ್ಲೂ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪರಿಸ್ಥಿತಿ ತೀರಾ ಶೋಚನೀಯವಾಗಿದೆ. ನಗರ ಪ್ರದೇಶಗಳಲ್ಲಿ ನಾಲ್ಕು ದಿನಕ್ಕೊಮ್ಮೆ -ಐದು ದಿನಕ್ಕೊಮ್ಮೆ ನೀರು ಸರಬರಾಜು ಮಾಡುವ ರೇಶನಿಂಗ್‌ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಗ್ರಾಮೀಣ ಭಾಗಗಳಲ್ಲೂ ಬಾವಿ, ಕೆರೆಗಳು ಬತ್ತಿ ಹೋಗಿದ್ದು,ಲಭ್ಯವಿರುವ ಅಲ್ಪಸ್ವಲ್ಪ ಜಲಮೂಲಗಳನ್ನು ಜನರು ಆಶ್ರಯಿಸಿಕೊಂಡಿದ್ದಾರೆ.

ಬೇಸಿಗೆ ಆರಂಭವಾಗುವುದಕ್ಕೂ ಮುಂಚೆಯೇ ಈ ಸಲ ರಾಜ್ಯಕ್ಕೆ ಬರದ ಹೊಡೆತ ಇದೆ ಎನ್ನುವುದು ಖಚಿತವಾಗಿತ್ತು. ಮಳೆಗಾಲದಲ್ಲಿ ಎರಡು ತಿಂಗಳು ಧಾರಾಕಾರ ಮಳೆಯಾಗಿದ್ದು ಬಿಟ್ಟರೆ ಉಳಿದಂತೆ ಒಣಹವೆ ಮುಂದವರಿದಿತ್ತು. ಹಲವು ಜಿಲ್ಲೆಗಳಲ್ಲಿ ಮಳೆಗಾಲದಲ್ಲೂ ನೀರಿನ ಸಮಸ್ಯೆ ಎದುರಾಗಿತ್ತು. ಈ ಪರಿಸ್ಥಿತಿಯನ್ನು ನೋಡಿಯೇ ಸರಕಾರ ಬರವನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಆರಂಭದಲ್ಲಿ ಜಾನುವಾರುಗಳಿಗೆ ಮೇವು ಕೇಂದ್ರ ಸ್ಥಾಪನೆ, ಜನರು ಗುಳೆ ಹೋಗುವುದನ್ನು ತಡೆಯಲು ಉದ್ಯೋಗ ಒದಗಿಸುವಂಥ ಕೆಲವು ಉಪಕ್ರಮಗಳನ್ನು ಕೈಗೊಂಡರೂ ಮಾರ್ಚ್‌ನಲ್ಲಿ ಚುನಾವಣೆ ಘೋಷಣೆಯಾದ ಬಳಿಕ ಎಲ್ಲವೂ ನನೆಗುದಿಗೆ ಬಿದ್ದಿದೆ.

ಚುನಾವಣೆ ಮುಗಿಯುವ ತನಕ ನೀತಿ ಸಂಹಿತೆಯ ನೆಪದಲ್ಲಿ ಬರ ಪರಿಹಾರ ಕುಂಠಿತಗೊಂಡಿತು. ಚುನಾವಣೆ ಮುಗಿದ ಬಳಿಕ ಮುಖ್ಯಮಂತ್ರಿಯಾದಿಯಾಗಿ ಸರಕಾರ ನಡೆಸುವವರೆಲ್ಲರೂ ಸಮ್ಮಿಶ್ರ ಸರಕಾರವನ್ನು ಉಳಿಸಿಕೊಳ್ಳುವುದರಲ್ಲಿ ವ್ಯಸ್ತರಾಗಿದ್ದಾರೆಯೇ ಹೊರತು ಯಾರಿಗೂ ಬರದಿಂದ ಕಂಗೆಟ್ಟಿರುವ ಜನರಿಗೆ ಸಹಾಯ ಮಾಡಬೇಕೆಂಬ ಇರಾದೆಯಿಲ್ಲ. ಚುನಾವಣೆಯ ಪ್ರಚಾರದಲ್ಲಿ ದಣಿದ ನಾಯಕರೆಲ್ಲ ವಿಶ್ರಾಂತಿಗಾಗಿ ರೆಸಾರ್ಟ್‌ಗೆ ಹೋದರು. ಒಂದಷ್ಟು ಮಂದಿ ದೇವಸ್ಥಾನ, ಮಠ ಮಂದಿರಗಳಿಗೆ ಹೋಗಿ ಪೂಜೆ ಹೋಮ ಹವನಗಳಲ್ಲಿ ನಿರತರಾದರು.ಆದರೆ ಯಾರಿಗೂ ಜನರ ಬಳಿಗೆ ಹೋಗಿ ಅವರ ಬವಣೆ ಆಲಿಸಬೇಕೆಂದು ಅನ್ನಿಸಿಲ್ಲ ಎನ್ನುವುದೊಂದು ದುರಂತ.

ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕನಿಷ್ಠ ಕುಡಿಯುವ ನೀರು ಪೂರೈಸುವಂಥ ಪರಿಹಾರ ಕಾರ್ಯಗಳಿಗೆ ವಿನಾಯಿತಿ ಕೇಳಿ ಪಡೆಯಬಹುದಿತ್ತು. ಬೆಂಗಳೂರು ಆಸುಪಾಸಿನಲ್ಲಿ ಕೆಲ ದಿನಗಳಿಂದೀಚೆಗೆ ಉತ್ತಮ ಮಳೆಯಾಗಿ ಬಿಸಿಲಿನ ಬೇಗೆಯಿಂದ ಮುಕ್ತಿ ಸಿಕ್ಕಿದೆ ಹಾಗೂ ನೀರಿನ ಸಮಸ್ಯೆಯೂ ಹೆಚ್ಚಾಗಿ ತಟ್ಟಿಲ್ಲ. ಹೀಗಾಗಿ ನಾಯಕರೆಲ್ಲ ಬೆಂಗಳೂರಿನ ಪರಿಸ್ಥಿತಿಯೇ ಇಡೀ ರಾಜ್ಯದಲ್ಲಿ ಇದೆ ಎಂದು ಭಾವಿಸಿ ಬರವನ್ನು ಕಡೆಗಣಿಸಿರುವಂತೆ ಕಾಣಿಸುತ್ತಿದೆ.

ಕರ್ನಾಟಕದ ಜತೆಗೆ ಮಹಾರಾಷ್ಟ್ರ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಕೇರಳದಲ್ಲೂ ಬರದ ಸಮಸ್ಯೆಯಿದೆ. ಮಳೆಗಾಲದಲ್ಲಿ ಶತಮಾನದ ಭೀಕರ ಪ್ರವಾಹಕ್ಕೆ ಸಾಕ್ಷಿಯಾಗಿದ್ದ ಕೇರಳದಲ್ಲಿ ಬೇಸಿಗೆ ಬಂದ ಬೆನ್ನಿಗೆ ನೀರಿನ ಸಮಸ್ಯೆ ತಲೆದೋರಿದೆ. ಮಳೆಯ ಅಸಮರ್ಪಕ ಹಂಚಿಕೆಯಿಂದಾಗಿ ಪ್ರತಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಲೆದೋರುತ್ತಿದ್ದರೂ ಸರಕಾರ ಈ ನಿಟ್ಟಿನಲ್ಲಿ ಗಂಭೀರವಾದ ಚಿಂತನೆಯನ್ನು ನಡೆಸುತ್ತಿಲ್ಲ.

ಕರ್ನಾಟಕ ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಬರಕ್ಕೆ ತುತ್ತಾಗುತ್ತಿದೆ. ಪ್ರತಿ ವರ್ಷ ಸರಕಾರ ಬರದ ಬೇಗೆ ತಟ್ಟದಿರಲು ಶಾಶ್ವತ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಭರವಸೆ ನೀಡುತ್ತದೆಯಾದರೂ ಯಾವುದೂ ಇನ್ನೂ ಕಾರ್ಯಗತಗೊಂಡಿಲ್ಲ. ಹನಿ ನೀರಾವರಿ, ಇಸ್ರೇಲ್‌ ಮಾದರಿಯ ಕೃಷಿ ಪದ್ಧತಿ ಇತ್ಯಾದಿ ನೀರುಳಿಸುವ ವಿಧಾನಗಳ ಬಗ್ಗೆ ಭಾರೀ ಚರ್ಚೆಗಳಾಗಿತ್ತು. ಆದರೆ ಯಾವುದೂ ಕಾರ್ಯಗತವಾಗದೆ ಕಡತಗಳಲ್ಲೇ ಉಳಿದಿವೆ.

ಜನರಿಗೆ ಕುಡಿಯುವ ನೀರು ಒದಗಿಸುವುದು ಸರಕಾರದ ಮೊದಲ ಆದ್ಯತೆಯಾಗಬೇಕು. ಇದಕ್ಕಾಗಿ ಲಭ್ಯವಿರುವ ಎಲ್ಲ ನೀರಿನ ಮೂಲಗಳನ್ನು ಬಳಸಿಕೊಳ್ಳಬೇಕು. ಅನೇಕ ಪ್ರದೇಶಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಆಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಮತ್ತು ಇನ್ನಿತರ ಅಧಿಕಾರಿಗಳು ಒಂದಷ್ಟು ಪ್ರಯತ್ನ ಪಡುತ್ತಿದ್ದಾರೆ ಎನ್ನುವುದು ಸಮಾಧಾನಕೊಡುವ ಅಂಶ. ಂದು ರಾಜ್ಯ ಸತತವಾಗಿ ಬರಕ್ಕೆ ತುತ್ತಾದಾಗ ಅದರಿಂದ ಸಾಕಷ್ಟು ಪಾಠಗಳನ್ನು ಕಲಿತುಕೊಂಡು ಭವಿಷ್ಯದಲ್ಲಿ ಇಂಥ ಪರಿಸ್ಥಿತಿಯನ್ನು ಎದುರಿಸಲು ಯೋಜನೆಗಳನ್ನು ಹಾಕಿಕೊಳ್ಳಬೇಕಿತ್ತು. ಆದರೆ ನಾವಿನ್ನೂ ಬರಕ್ಕೆ ತಾತ್ಕಾಲಿಕ ಶಮನ ಕಾರ್ಯಗಳನ್ನು ಕೈಗೊಳ್ಳುವುದರಲ್ಲಿ ನಿರತರಾಗಿದ್ದೇವೆಯೇ ಹೊರತು ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವ ಪ್ರಯತ್ನಗಳನ್ನು ಮಾಡುತ್ತಿಲ್ಲ.ತಾಪಮಾನ ಏರಿಕೆಯ ಪರಿಣಾಮ ಋತುಗಳ ಮೇಲಾಗುತ್ತಿದ್ದು, ಪ್ರತಿವರ್ಷ ಮಳೆಯ ಪ್ರಮಾಣದಲ್ಲಿ ವ್ಯತ್ಯಯವಾಗುತ್ತಿ ರುವುದು ನಮ್ಮ ಅನುಭವಕ್ಕೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಸಿಗುವ ನೀರನ್ನು ಸಾಧ್ಯವಾದಷ್ಟು ಸದುಪಯೋಗಪಡಿಸಿಕೊಳ್ಳುವ ಯೋಜನೆಗಳನ್ನು ತುರ್ತಾಗಿ ಅನುಷ್ಠಾನಿಸಿಕೊಳ್ಳುವ ಅಗತ್ಯವಿದೆ.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.