Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ


Team Udayavani, Oct 6, 2024, 6:40 AM IST

1-kamakhya

ನಾಡಿನೆಲ್ಲೆಡೆ ಈಗ ನವರಾತ್ರಿಯ ಸಂಭ್ರಮ. ಈ ಹಬ್ಬವನ್ನು ದೇಶದೆಲ್ಲೆಡೆ ಅತ್ಯಂತ ವೈಭವ, ಸಡಗರಗಳಿಂದ ಆಚರಿಸಲಾಗುತ್ತಿದೆ. ದೇಶಾದ್ಯಂತ ಇರುವ ದುರ್ಗಾದೇವಿಯ ದೇವಾಲಯಗಳಲ್ಲಿ ಭಕ್ತರು ವಿಶೇಷ ಶ್ರದ್ಧಾಭಕ್ತಿಯಿಂದ ಶಕ್ತಿಮಾತೆಯಆರಾಧನೆಯಲ್ಲಿ ತೊಡಗಿದ್ದಾರೆ.ನವರಾತ್ರಿಯ ಈ ಸಂದರ್ಭದಲ್ಲಿ ದೇಶದ ಒಂಬತ್ತು ಪ್ರಸಿದ್ಧ ದೇವಿ ದೇವಾಲಯಗಳನ್ನು ಸಂಕ್ಷಿಪ್ತವಾಗಿ ಪರಿಚಯಿಸುವ “ನವರಾತ್ರಿ- ನವದೇವಿ’ ಲೇಖನ ಮಾಲಿಕೆಯಲ್ಲಿ ಈ ದಿನ ಅಸ್ಸಾಂನ ಮಾ ಕಾಮಾಖ್ಯಾ ದೇವಾಲಯ.

ದೇಶದ ಈಶಾನ್ಯ ರಾಜ್ಯವಾದ ಅಸ್ಸಾಂನ ರಾಜಧಾನಿ ಗುವಾಹಟಿಯ ನೀಲಾಚಲ ಪರ್ವತದ ಹೃದಯ ಭಾಗದಲ್ಲಿ ಮಾತಾ ಕಾಮಖ್ಯಾ ದೇವಾಲಯವಿದೆ. ತಾಂತ್ರಿಕ ಸಂಪ್ರದಾಯದ ಅತೀ ಪುರಾತನ ಹಾಗೂ ಪ್ರಸಿದ್ಧ ದೇಗುಲವಿದಾಗಿದೆ.

ಮಾತೆ ಕಾಮಾಖ್ಯಾ ನೆಲೆಯಾಗಿರುವ ಈ ಸ್ಥಳ ಕುಲಾಚಾರ ತಂತ್ರ ಮಾರ್ಗದ ಕೇಂದ್ರವೆಂದೇ ಪರಿಗಣಿಸಲ್ಪಟ್ಟಿದೆ. ಅಷ್ಟು ಮಾತ್ರವಲ್ಲದೆ ದೇವಿಗಳ ಋತುಚಕ್ರವನ್ನು ಸಂಭ್ರಮಿಸುವ ಸಲುವಾಗಿ ಭಕ್ತರು ಈ ದೇವಾಲಯದ ಪರಿಸರದಲ್ಲಿ ಪ್ರತೀ ವರ್ಷ ಅಂಬುಬಾಚಿ ಮೇಳವನ್ನು ಆಚರಿಸುತ್ತಾರೆ.

ಸ್ಥಳೀಯ ದೇವಿಯ ಆರಾಧನೆಯ ಸ್ಥಳವಾಗಿದ್ದ ಈ ದೇಗುಲದಲ್ಲಿ ಇಂದಿಗೂ ದೇವಿಯನ್ನು ನೈಸರ್ಗಿಕ ಕಲ್ಲುಗಳಿಂದ ಪೂಜಿಸುವ ಪದ್ಧತಿ ಇದೆ. ಆರಂಭದಲ್ಲಿ ಈ ದೇಗುಲದ ಅಭಿವೃದ್ಧಿಗೆ ಕಾಮರಾಪುರದ ಮ್ಲೆàಚ್ಚಾ ರಾಜವಂಶ ತನ್ನ ಕೊಡುಗೆ ನೀಡಿದ್ದರೆ ಕಾಲಾನಂತರದಲ್ಲಿ ಈ ಪ್ರದೇಶವನ್ನು ಆಳಿದ ಪಾಲಾಸ್‌, ಕೋಕಿ ಹಾಗೂ ಅಹೋಮಿತ್ರ ರಾಜವಂಶಗಳು ಕೂಡ ದೇಗುಲದ ಖ್ಯಾತಿಯನ್ನು ಮತ್ತಷ್ಟು ಹೆಚ್ಚಿಸುವಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದವು.
ಈ ದೇವಾಲಯದ ವಾಸ್ತುಶಿಲ್ಪಗಳನ್ನು ಗಮನಿಸಿದಾಗ 8-9ನೇ ಶತಮಾನದಲ್ಲಿ ಇದು ನಿರ್ಮಿತವಾದಂತೆ ಕಂಡುಬರುತ್ತದೆ. ಅನಂತರ 11ರಿಂದ 14ನೇ ಶತಮಾನದ ನಡುವೆ ಹಲವು ಬಾರಿ ಇದನ್ನು ಪುನರ್‌ ನಿರ್ಮಿಸಲಾಗಿದೆ ಎಂಬುದು ಪುರಾತತ್ವ ಶಾಸ್ತ್ರಜ್ಞರ ಅಭಿಮತ. ಹಾಲಿ ದೇವಾಲಯದಲ್ಲಿನ ಶಿಲ್ಪಗಳು 16ನೇ ಶತಮಾನದ್ದಾಗಿದ್ದು ಪ್ರಮುಖವಾಗಿ ನೀಲಾಚಲ ಶೈಲಿ ಹಾಗೂ ಇನ್ನಿತರ ಶೈಲಿಯನ್ನು ಹೊಂದಿದೆ. ನಾಲ್ಕು ಭಾಗಗಳನ್ನು ಒಳಗೊಂಡಿರುವ ಈ ದೇಗುಲ, ಪೂರ್ವದಿಂದ ಪಶ್ಚಿಮ ದಿಕ್ಕಿಗೆ ಪ್ರವೇಶವನ್ನು ಹೊಂದಿದೆ. ಶಕ್ತ ಪರಂಪರೆಯ 51 ಪುರಾತನ ಶಕ್ತಿ ಪೀಠಗಳಲ್ಲಿ ಇದು ಒಂದಾಗಿ ಗುರುತಿಸಲ್ಪಟ್ಟಿದೆ. 19ನೇ ಶತಮಾನದಲ್ಲಿ ಬಂಗಾಲದಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗಾಗಮಿಸಲಾರಂಭಿಸಿದ ಬಳಿಕ ಈ ದೇವಾಲಯ ದೇಶದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದೆಂದು ಗುರುತಿಸಲ್ಪಟ್ಟಿತು.

ದೇವಿಯ ಹತ್ತು ಅವತಾರಗಳನ್ನು ಇಲ್ಲಿ ಆರಾಧಿಸಲಾಗುತ್ತದೆ. ಮಾತಾಂಗಿ ಮತ್ತು ಕಮಲಾ ದೇವತೆಯನ್ನು ಒಳಗೊಂಡ ತ್ರಿಪುರಸುಂದರಿ ಮಾತಾ ಕಾಮಾಖ್ಯಾ ದೇವಿ ಪ್ರಧಾನ ದೇವತೆಯಾಗಿದ್ದಾಳೆ. ಜತೆಯಲ್ಲಿ ಕಾಳಿ, ತಾರಾ, ಭುವನೇಶ್ವರಿ, ಬಗ್ಲಾಮುಖಿ , ಛಿನ್ನಮಸ್ತಾ, ಭೈರವಿ, ಧೂಮಾವತಿ ಹಾಗೂ ಶಿವನ ವಿವಿಧ ರೂಪಗಳಾದ ಕಾಮೇಶ್ವರ, ಸಿದ್ದೇಶ್ವರ, ಕೇದಾರೇಶ್ವರ, ಅಮೃತೋಕೇಶ್ವರ, ಅಘೋರ ಮತ್ತು ಕೋಟಿಲಿಂಗ ದೇವಾಲಯಗಳು ಈ ನೀಲಾಚಲ ಪರ್ವತದ ಸುತ್ತಮುತ್ತವಿದೆ. ಇವೆಲ್ಲವನ್ನೂ ಜತೆಯಾಗಿ ಕಾಮಾಖ್ಯಾ ದೇವಾಲಯ ಸಮುಚ್ಚಯ ಎಂದೇ ಕರೆಯಲಾಗುತ್ತದೆ.

ದೇಶದ ಈಶಾನ್ಯ ಭಾಗದಲ್ಲಿನ ಪ್ರಧಾನ ಶಕ್ತಿಪೀಠವಾಗಿರುವ ಈ ದೇವಾಲಯಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಯಾತ್ರಿಕರು ಭೇಟಿ ನೀಡುತ್ತಿರುತ್ತಾರೆ. ನವರಾತ್ರಿಯ ಸಂದರ್ಭದಲ್ಲಂತೂ ಕಾಮಾಖ್ಯಾ ಮಾತೆಯ ದರುಶನಕ್ಕಾಗಿ ಭಕ್ತರ ದಂಡೇ ಹರಿದುಬರುತ್ತದೆ.

ಟಾಪ್ ನ್ಯೂಸ್

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

1-weqewewqe

Yakshagana;ಇನ್ನೂ ನೂರಾರು ಸುಶ್ರಾವ್ಯ ರಾಗಗಳ ಅಳವಡಿಕೆ ಸಾಧ್ಯ: ವಿದ್ವಾನ್‌ ಗಣಪತಿ ಭಟ್‌

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.