Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ


Team Udayavani, Oct 6, 2024, 6:40 AM IST

1-kamakhya

ನಾಡಿನೆಲ್ಲೆಡೆ ಈಗ ನವರಾತ್ರಿಯ ಸಂಭ್ರಮ. ಈ ಹಬ್ಬವನ್ನು ದೇಶದೆಲ್ಲೆಡೆ ಅತ್ಯಂತ ವೈಭವ, ಸಡಗರಗಳಿಂದ ಆಚರಿಸಲಾಗುತ್ತಿದೆ. ದೇಶಾದ್ಯಂತ ಇರುವ ದುರ್ಗಾದೇವಿಯ ದೇವಾಲಯಗಳಲ್ಲಿ ಭಕ್ತರು ವಿಶೇಷ ಶ್ರದ್ಧಾಭಕ್ತಿಯಿಂದ ಶಕ್ತಿಮಾತೆಯಆರಾಧನೆಯಲ್ಲಿ ತೊಡಗಿದ್ದಾರೆ.ನವರಾತ್ರಿಯ ಈ ಸಂದರ್ಭದಲ್ಲಿ ದೇಶದ ಒಂಬತ್ತು ಪ್ರಸಿದ್ಧ ದೇವಿ ದೇವಾಲಯಗಳನ್ನು ಸಂಕ್ಷಿಪ್ತವಾಗಿ ಪರಿಚಯಿಸುವ “ನವರಾತ್ರಿ- ನವದೇವಿ’ ಲೇಖನ ಮಾಲಿಕೆಯಲ್ಲಿ ಈ ದಿನ ಅಸ್ಸಾಂನ ಮಾ ಕಾಮಾಖ್ಯಾ ದೇವಾಲಯ.

ದೇಶದ ಈಶಾನ್ಯ ರಾಜ್ಯವಾದ ಅಸ್ಸಾಂನ ರಾಜಧಾನಿ ಗುವಾಹಟಿಯ ನೀಲಾಚಲ ಪರ್ವತದ ಹೃದಯ ಭಾಗದಲ್ಲಿ ಮಾತಾ ಕಾಮಖ್ಯಾ ದೇವಾಲಯವಿದೆ. ತಾಂತ್ರಿಕ ಸಂಪ್ರದಾಯದ ಅತೀ ಪುರಾತನ ಹಾಗೂ ಪ್ರಸಿದ್ಧ ದೇಗುಲವಿದಾಗಿದೆ.

ಮಾತೆ ಕಾಮಾಖ್ಯಾ ನೆಲೆಯಾಗಿರುವ ಈ ಸ್ಥಳ ಕುಲಾಚಾರ ತಂತ್ರ ಮಾರ್ಗದ ಕೇಂದ್ರವೆಂದೇ ಪರಿಗಣಿಸಲ್ಪಟ್ಟಿದೆ. ಅಷ್ಟು ಮಾತ್ರವಲ್ಲದೆ ದೇವಿಗಳ ಋತುಚಕ್ರವನ್ನು ಸಂಭ್ರಮಿಸುವ ಸಲುವಾಗಿ ಭಕ್ತರು ಈ ದೇವಾಲಯದ ಪರಿಸರದಲ್ಲಿ ಪ್ರತೀ ವರ್ಷ ಅಂಬುಬಾಚಿ ಮೇಳವನ್ನು ಆಚರಿಸುತ್ತಾರೆ.

ಸ್ಥಳೀಯ ದೇವಿಯ ಆರಾಧನೆಯ ಸ್ಥಳವಾಗಿದ್ದ ಈ ದೇಗುಲದಲ್ಲಿ ಇಂದಿಗೂ ದೇವಿಯನ್ನು ನೈಸರ್ಗಿಕ ಕಲ್ಲುಗಳಿಂದ ಪೂಜಿಸುವ ಪದ್ಧತಿ ಇದೆ. ಆರಂಭದಲ್ಲಿ ಈ ದೇಗುಲದ ಅಭಿವೃದ್ಧಿಗೆ ಕಾಮರಾಪುರದ ಮ್ಲೆàಚ್ಚಾ ರಾಜವಂಶ ತನ್ನ ಕೊಡುಗೆ ನೀಡಿದ್ದರೆ ಕಾಲಾನಂತರದಲ್ಲಿ ಈ ಪ್ರದೇಶವನ್ನು ಆಳಿದ ಪಾಲಾಸ್‌, ಕೋಕಿ ಹಾಗೂ ಅಹೋಮಿತ್ರ ರಾಜವಂಶಗಳು ಕೂಡ ದೇಗುಲದ ಖ್ಯಾತಿಯನ್ನು ಮತ್ತಷ್ಟು ಹೆಚ್ಚಿಸುವಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದವು.
ಈ ದೇವಾಲಯದ ವಾಸ್ತುಶಿಲ್ಪಗಳನ್ನು ಗಮನಿಸಿದಾಗ 8-9ನೇ ಶತಮಾನದಲ್ಲಿ ಇದು ನಿರ್ಮಿತವಾದಂತೆ ಕಂಡುಬರುತ್ತದೆ. ಅನಂತರ 11ರಿಂದ 14ನೇ ಶತಮಾನದ ನಡುವೆ ಹಲವು ಬಾರಿ ಇದನ್ನು ಪುನರ್‌ ನಿರ್ಮಿಸಲಾಗಿದೆ ಎಂಬುದು ಪುರಾತತ್ವ ಶಾಸ್ತ್ರಜ್ಞರ ಅಭಿಮತ. ಹಾಲಿ ದೇವಾಲಯದಲ್ಲಿನ ಶಿಲ್ಪಗಳು 16ನೇ ಶತಮಾನದ್ದಾಗಿದ್ದು ಪ್ರಮುಖವಾಗಿ ನೀಲಾಚಲ ಶೈಲಿ ಹಾಗೂ ಇನ್ನಿತರ ಶೈಲಿಯನ್ನು ಹೊಂದಿದೆ. ನಾಲ್ಕು ಭಾಗಗಳನ್ನು ಒಳಗೊಂಡಿರುವ ಈ ದೇಗುಲ, ಪೂರ್ವದಿಂದ ಪಶ್ಚಿಮ ದಿಕ್ಕಿಗೆ ಪ್ರವೇಶವನ್ನು ಹೊಂದಿದೆ. ಶಕ್ತ ಪರಂಪರೆಯ 51 ಪುರಾತನ ಶಕ್ತಿ ಪೀಠಗಳಲ್ಲಿ ಇದು ಒಂದಾಗಿ ಗುರುತಿಸಲ್ಪಟ್ಟಿದೆ. 19ನೇ ಶತಮಾನದಲ್ಲಿ ಬಂಗಾಲದಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗಾಗಮಿಸಲಾರಂಭಿಸಿದ ಬಳಿಕ ಈ ದೇವಾಲಯ ದೇಶದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದೆಂದು ಗುರುತಿಸಲ್ಪಟ್ಟಿತು.

ದೇವಿಯ ಹತ್ತು ಅವತಾರಗಳನ್ನು ಇಲ್ಲಿ ಆರಾಧಿಸಲಾಗುತ್ತದೆ. ಮಾತಾಂಗಿ ಮತ್ತು ಕಮಲಾ ದೇವತೆಯನ್ನು ಒಳಗೊಂಡ ತ್ರಿಪುರಸುಂದರಿ ಮಾತಾ ಕಾಮಾಖ್ಯಾ ದೇವಿ ಪ್ರಧಾನ ದೇವತೆಯಾಗಿದ್ದಾಳೆ. ಜತೆಯಲ್ಲಿ ಕಾಳಿ, ತಾರಾ, ಭುವನೇಶ್ವರಿ, ಬಗ್ಲಾಮುಖಿ , ಛಿನ್ನಮಸ್ತಾ, ಭೈರವಿ, ಧೂಮಾವತಿ ಹಾಗೂ ಶಿವನ ವಿವಿಧ ರೂಪಗಳಾದ ಕಾಮೇಶ್ವರ, ಸಿದ್ದೇಶ್ವರ, ಕೇದಾರೇಶ್ವರ, ಅಮೃತೋಕೇಶ್ವರ, ಅಘೋರ ಮತ್ತು ಕೋಟಿಲಿಂಗ ದೇವಾಲಯಗಳು ಈ ನೀಲಾಚಲ ಪರ್ವತದ ಸುತ್ತಮುತ್ತವಿದೆ. ಇವೆಲ್ಲವನ್ನೂ ಜತೆಯಾಗಿ ಕಾಮಾಖ್ಯಾ ದೇವಾಲಯ ಸಮುಚ್ಚಯ ಎಂದೇ ಕರೆಯಲಾಗುತ್ತದೆ.

ದೇಶದ ಈಶಾನ್ಯ ಭಾಗದಲ್ಲಿನ ಪ್ರಧಾನ ಶಕ್ತಿಪೀಠವಾಗಿರುವ ಈ ದೇವಾಲಯಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಯಾತ್ರಿಕರು ಭೇಟಿ ನೀಡುತ್ತಿರುತ್ತಾರೆ. ನವರಾತ್ರಿಯ ಸಂದರ್ಭದಲ್ಲಂತೂ ಕಾಮಾಖ್ಯಾ ಮಾತೆಯ ದರುಶನಕ್ಕಾಗಿ ಭಕ್ತರ ದಂಡೇ ಹರಿದುಬರುತ್ತದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.