ಕವಿಹೃದಯದ ಮುತ್ಸದ್ದಿ, ಅಜಾತಶತ್ರು ಅಟಲ್‌ ಬಿಹಾರಿ ವಾಜಪೇಯಿ

ಇಂದು ಅಟಲ್‌ಜನ್ಮದಿನ

Team Udayavani, Dec 25, 2022, 6:20 AM IST

ಕವಿಹೃದಯದ ಮುತ್ಸದ್ದಿ, ಅಜಾತಶತ್ರು ಅಟಲ್‌ ಬಿಹಾರಿ ವಾಜಪೇಯಿ

“India has no dearth of brave young men and women and if they get the opportunity and help then we can compete with other nations in space exploration and one of them will fulfil her dreams.”

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಈ ಕನಸು ಇಂದು ನನಸಾಗುತ್ತಿದೆ. ಜೈ ಜವಾನ್‌, ಜೈ ಕಿಸಾನ್‌ ಘೋಷಣೆಯೊಂದಿಗೆ ಜೈ ವಿಜ್ಞಾನ್‌ ಎಂಬ ದೂರದರ್ಶಿತ್ವ ಹೊಂದಿದ್ದವರು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ.

ಪಂಡಿತ್‌ ದೀನ ದಯಾಳ್‌ ಉಪಾಧ್ಯಾಯ, ಶ್ಯಾಮ್‌ ಪ್ರಸಾದ್‌ ಮುಖರ್ಜಿ ಅವರ ಗರಡಿಯಲ್ಲಿ ಪಳಗಿದ ವಾಜಪೇಯಿ ಅವರು ಕವಿ ಹೃದಯಿ. 26 ಪಕ್ಷಗಳ ಮೈತ್ರಿಕೂಟ ಎನ್‌ಡಿಎಯನ್ನು ಯಶಸ್ವಿಯಾಗಿ ಮುನ್ನಡೆಸಿದ ಅಜಾತಶತ್ರು. ವಿಪಕ್ಷದವರೂ ಗೌರವದಿಂದ ಕಾಣುತ್ತಿದ್ದ ಧೀಮಂತ ವ್ಯಕ್ತಿತ್ವ.

ಒಂಬತ್ತು ಬಾರಿ ಲೋಕಸಭೆ, ಎರಡು ಬಾರಿ ರಾಜ್ಯಸಭೆಯ ಸದಸ್ಯರಾಗಿದ್ದ ಅಟಲ್‌ ಜಿ ಅವರು ಪ್ರಧಾನಮಂತ್ರಿಯಾಗಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಯಶಸ್ವಿಯಾಗಿ ಮುನ್ನಡೆಸಿದರು. ಬರಗಾಲ, ಚಂಡ ಮಾರುತ, ಭೂಕಂಪ, ಕಾರ್ಗಿಲ್‌ ಯುದ್ಧ, ಸಂಸತ್‌ ಭವನದ ಮೇಲಿನ ದಾಳಿ ಮುಂತಾದ ಹಲವು ದುರ್ಘ‌ಟನೆ, ಸವಾಲುಗಳ ನಡುವೆಯೂ ದೇಶದ ಆರ್ಥಿಕತೆಗೆ ಸ್ಥಿರತೆಯನ್ನು ತಂದಿತ್ತರು. ಇದರೊಂದಿಗೆ ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಸರಕಾರಗಳ ಹಣಕಾಸು ನಿರ್ವಹಣೆಯಲ್ಲಿ ಶಿಸ್ತನ್ನು ತಂದರು.

ಪೋಖರಣ್‌ ಪರಮಾಣು ಶಸ್ತ್ರ ಪರೀಕ್ಷೆಯೊಂದಿಗೆ ಭಾರತದ ಬಲವರ್ಧನೆಗೆ ಮುಂದಾದರು. ಇದರಿಂದ ಅಮೆರಿಕ ಸಹಿತ ಹಲವು ದೇಶಗಳು ವಿಧಿಸಿದ ನಿರ್ಬಂಧವನ್ನು ಚಾಕಚಕ್ಯದಿಂದ ನಿರ್ವಹಿಸಿ­ದರಲ್ಲದೆ, ವಿದೇಶಿ ವ್ಯಾಪಾರ, ವಹಿವಾಟನ್ನು ಉತ್ತಮಗೊಳಿಸಿದರು. ಕಾರ್ಗಿಲ್‌ನಲ್ಲಿ ಪಾಕಿಸ್ಥಾನಿ ಪಡೆಗಳನ್ನು ಹಿಮ್ಮೆಟ್ಟಿಸಿದರು. ಪಾಕಿಸ್ಥಾನ­ದೊಂದಿಗೆ ಸೌಹಾರ್ದಯುತ ಬಾಂಧವ್ಯ ವೃದ್ಧಿಗೆ ನಿರಂತರ ಪ್ರಯತ್ನ ಮುಂದುವರಿಸಿದರು.

ಭಾರತದ ಪ್ರಮುಖ ಮಹಾನಗರಗಳನ್ನು ಸಂಪರ್ಕಿಸುವ ಸುವರ್ಣ ಚತುಷ್ಪಥ ಹೆದ್ದಾರಿಯ ಮೂಲಕ ದೇಶದ ಆರ್ಥಿಕ ಅಭಿವೃ­ದ್ಧಿಗೆ ಹೊಸ ಆಯಾಮ ಕಲ್ಪಿಸಿದರು. ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯ ಮೂಲಕ ಹಳ್ಳಿಹಳ್ಳಿಗೆ ರಸ್ತೆ ಸೌಲಭ್ಯ ಕಲ್ಪಿಸಿದರು. ಆ ಮೂಲಕ ರಸ್ತೆ ಸಂಪರ್ಕ ಜಾಲವನ್ನು ಬಲಪಡಿಸಿದರು.
ದೂರಸಂಪರ್ಕ ಕ್ಷೇತ್ರದಲ್ಲಿಯೂ ಹೊಸ ಸುಧಾರಣೆಗಳನ್ನು ಮಾಡುವ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾದರು. ಸರ್ವ ಶಿಕ್ಷಣ ಅಭಿಯಾನ, ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ಮಹತ್ವದ ಯೋಜನೆಯಾಗಿತ್ತು. ಅವರ ಜನ್ಮದಿನವನ್ನು”ಸುಶಾಸನ ದಿವಸ’ ಎಂದು ಆಚರಿಸುತ್ತಿರುವುದು ಅತ್ಯಂತ ಔಚಿತ್ಯಪೂರ್ಣವಾಗಿದೆ. ನನ್ನ ರಾಜಕೀಯ ಬದುಕಿನಲ್ಲಿಯೂ ಅವರನ್ನು ಆದರ್ಶ ವ್ಯಕ್ತಿಯಾಗಿ ಕಂಡಿದ್ದೇನೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಅನಂತರ ಮೊದಲ ಬಾರಿಗೆ ಹೊಸದಿಲ್ಲಿಗೆ ತೆರಳಿದಾಗ ನನ್ನ ಮೊದಲ ಭೇಟಿ ಇದ್ದುದ್ದು ಅವರ ಸ್ಮಾರಕ “ಸದೈವ ಅಟಲ್‌’ಗೆ.

ಸರಕಾರದ ಯೋಜನೆಗಳ ಆಶಯಗಳು ಈಡೇರಿದಾಗ, ಪರಿಣಾಮ­ಕಾರಿಯಾಗಿ ಜನರನ್ನು ತಲುಪಿದಾಗ, ಆಡಳಿತ ಉತ್ತಮ­ವಾಗಿದೆ ಎಂಬುದು ಸ್ವಯಂ ವೇದ್ಯವಾಗುತ್ತದೆ. ನಿಗದಿತ ಕಾಲಮಿತಿ­ಯಲ್ಲಿ ಕಾರ್ಯಕ್ರಮಗಳ ಅನುಷ್ಠಾನ, ತುರ್ತು ಸಂದರ್ಭಗಳಲ್ಲಿ ಸಕಾಲದಲ್ಲಿ ಜನರ ನೆರವಿಗೆ ಧಾವಿಸುವುದು, ಪರಿಹಾರ ಕ್ರಮಗಳನ್ನು ಕೈಗೊಳ್ಳುವುದು ಉತ್ತಮ ಆಡಳಿತದ ಲಕ್ಷಣಗಳು.

ಈ ನಿಟ್ಟಿನಲ್ಲಿ ನಮ್ಮ ಸರಕಾರವೂ ಉತ್ತಮ ಆಡಳಿತ ನೀಡಲು ಸರ್ವ ಪ್ರಯತ್ನಗಳನ್ನೂ ಮಾಡಿದೆ. ಆರ್ಥಿಕ ಶಿಸ್ತು, ಮೂಲ­ಸೌಕರ್ಯ ಅಭಿವೃದ್ಧಿಗೆ ಆದ್ಯತೆ, ಜನಸ್ನೇಹಿ ಆಡಳಿತ, ಮಾನವೀ­ಯತೆ, ಸ್ಪಂದನಾಶೀಲತೆಯನ್ನು ಮೈಗೂಡಿಸಿಕೊಳ್ಳುವ ಪ್ರಯತ್ನವನ್ನು ನಮ್ಮ ಸರಕಾರ ಮಾಡಿದೆ. ಅಟಲ್‌ ಜೀ ಅವರ ಆದರ್ಶ ಪಾಲನೆಯನ್ನು ಕಾರ್ಯರೂಪಕ್ಕಿಳಿಸುವ ಪ್ರಯತ್ನ ಮಾಡಿದ್ದೇವೆ.

ಅಟಲ್‌ ಜೀ ಅವರಿಗೆ ಅವರೇ ಸಾಟಿ. ಭಾರತೀಯ ಜನಸಂಘದಲ್ಲಿ ಸಕ್ರಿಯರಾಗಿದ್ದು, ಅನಂತರ ಭಾರತೀಯ ಜನತಾ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾಗಿ ಪಕ್ಷವನ್ನು ಅವರು ಮುನ್ನಡೆಸಿದ ಪರಿ ಅನನ್ಯವಾದುದು. ಅವರು ಕವಿ ಹೃದಯ, ಮುತ್ಸದ್ದಿತನ ಹಾಗೂ ಚಿಂತನಶೀಲತೆಯ ಅಪೂರ್ವ ಸಂಗಮವೇ ಸರಿ. ಅವರ ನೇತೃತ್ವದಲ್ಲಿ ವಿಜ್ಞಾನ, ತಂತ್ರಜ್ಞಾನ, ಮೂಲಸೌಲಭ್ಯ, ಆರ್ಥಿಕತೆ­ಯಲ್ಲಿ ಭಾರತ ಹೊಸ ಮೈಲುಗಲ್ಲನ್ನೇ ಕ್ರಮಿಸಿತು. ಇದೀಗ ಪ್ರಧಾನಿ ನರೇಂದ್ರ ಮೋದಿಜಿ ಅವರು ಈ ಪರಂಪರೆಯನ್ನು ಮುಂದುವ­ರಿಸುತ್ತಿದ್ದಾರೆ. ವಿಶ್ವಶ್ರೇಷ್ಠ ಭಾರತದ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. ಅಟಲ್‌ ಜೀ ಅವರ ಕನಸುಗಳನ್ನು ನನಸಾಗಿಸುತ್ತಿದ್ದಾರೆ. ಅವರ ಜನ್ಮದಿನವನ್ನು ಸುಶಾಸನ ದಿನವೆಂದು ಆಚರಿಸಲಾಗುತ್ತದೆ. ಆದರೆ ಸುಶಾಸನ ನಮ್ಮ ದಿನನಿತ್ಯದ ಮಂತ್ರವಾದಾಗ ಅದು ಸಾರ್ಥಕವಾಗುತ್ತದೆ.

ಅಟಲ್‌ ಜೀ ಅವರ ಜನ್ಮದಿನದಂದು ಅವರಿಗೆ ನನ್ನ ಭಾವಪೂರ್ಣ ನಮನಗಳು!!

-ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ, ಕರ್ನಾಟಕ

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.