Election result; 12ಕ್ಕೇರಿದ ಬಿಜೆಪಿ, ಮೂರಕ್ಕಿಳಿದ ಕಾಂಗ್ರೆಸ್‌

ಕವಲು ಹಾದಿಯಲ್ಲಿ ನಾಯಕರು

Team Udayavani, Dec 4, 2023, 6:35 AM IST

BJP 2

ನಾಲ್ಕು ರಾಜ್ಯಗಳ ಫ‌ಲಿತಾಂಶದ ಬಳಿಕ ಬಿಜೆಪಿ ಈಗ ಸ್ವಂತ ಬಲದಿಂದಲೇ12 ರಾಜ್ಯಗಳಲ್ಲಿ ಅಧಿಕಾರಕ್ಕೇರಿದೆ. ಉತ್ತರ
ಪ್ರದೇಶ, ಉತ್ತರಾಖಂಡ, ಗುಜರಾತ್‌, ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ಅಸ್ಸಾಂ, ತ್ರಿಪುರಾ, ಹರಿಯಾಣ, ಗೋವಾ, ಮಣಿಪುರ, ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಮಹಾರಾಷ್ಟ್ರ, ಸಿಕ್ಕಿಂ, ನಾಗಾಲ್ಯಾಂಡ್‌, ಮೇಘಾಲಯದಲ್ಲಿ ಬಿಜೆಪಿ ಮೈತ್ರಿಕೂಟ ಆಡಳಿತದಲ್ಲಿದೆ. ಇನ್ನು ಕಾಂಗ್ರೆಸ್‌ ಸ್ವಂತ ಬಲದ ಮೇಲೆ ಮೂರರಲ್ಲಿ ಅಧಿಕಾರದಲ್ಲಿದೆ. ಕರ್ನಾಟಕ ಮತ್ತು ಹಿಮಾಚಲ ಪ್ರದೇಶದ ಜತೆಗೆ ಈಗ ತೆಲಂಗಾಣ ಸೇರಿಕೊಂಡಿದೆ. ಈ ಹಿಂದೆ ಇದ್ದ ರಾಜಸ್ಥಾನ ಮತ್ತು ಛತ್ತೀಸ್‌ಗಢವನ್ನು ಕಳೆದುಕೊಂಡಿದೆ. ಉಳಿದಂತೆ ಝಾರ್ಖಂಡ್‌ ಮತ್ತು ಬಿಹಾರದಲ್ಲಿ ಸಣ್ಣಪಕ್ಷವಾಗಿ ಇದೆ.

ಪಶ್ಚಿಮ ಬಂಗಾಲ, ಒಡಿಶಾ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳ, ಮಿಜೋರಾಂ, ಪಂಜಾಬ್‌, ದಿಲ್ಲಿ ಸೇರಿ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಪಕ್ಷಗಳು ಆಡಳಿತ ನಡೆಸುತ್ತಿವೆ.

ಲೋಕಸಭಾ ಚುನಾವಣೆಗೆ ಪೂರ್ವಭಾವಿ ಪರೀಕ್ಷೆ ಎಂದೇ ಪರಿಗಣಿಸಲಾಗಿರುವ ವಿಧಾನಸಭಾ ಚುನಾವಣ ಫ‌ಲಿತಾಂಶಗಳು ಹಲವು ನಾಯಕರಿಗೆ ಹೊಸ ಜನ್ಮ ನೀಡಿದರೆ, ಇನ್ನು ಹಲವು ನಾಯಕರ ಭವಿಷ್ಯವನ್ನು ಕತ್ತಲಾಗಿಸಿ ಬಿಟ್ಟಿದೆ.
ಅಶೋಕ್‌ ಗೆಹ್ಲೋ ಟ್‌
ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದ ಅಶೋಕ್‌ ಗೆಹ್ಲೋ ಟ್‌ ಅವರು ಸತತ ಆರನೇ ಬಾರಿ ಗೆದ್ದಿದ್ದಾರೆ. ಆದರೆ ಮುಖ್ಯಮಂತ್ರಿ ಪದವಿಯನ್ನು ಕಳಕೊಂಡಿದ್ದಾರೆ. ಪ್ರತೀ ಸಲ ಇಲ್ಲಿ ಹಾಲಿ ಸರಕಾರವನ್ನು ಕೆಳಗಿಳಿಸುವ ಜಾಯಮಾನ ಇದೆಯಾದರೂ, ಇದನ್ನು ಮೀರಿ ಗೆದ್ದೇ ಗೆಲ್ಲುತ್ತೇವೆ ಎಂಬ ಭರವಸೆಯಲ್ಲಿದ್ದರು ಗೆಹ್ಲೋ ಟ್‌. ಆದರೆ ಅದು ಕೈಗೂಡದೆ ಸೋಲನ್ನಪ್ಪಿದ್ದಾರೆ. ಇದರೊಂದಿಗೆ ಇವರ ರಾಜಕೀಯ ಭವಿಷ್ಯದ ಮುಂದೆ ಪ್ರಶ್ನಾರ್ಥಕ ಚಿಹ್ನೆ ಬಂದು ಕೂತಿದೆ.

ಅಲ್ಲಿನ ಕಾಂಗ್ರೆಸ್‌ ಸರಕಾರದಲ್ಲಿ ಗೆಹ್ಲೋ ಟ್‌ ಮತ್ತು ಸಚಿನ್‌ ಪೈಲಟ್‌ ಅವರ ನಡುವಿನ ವಿರಸ ಪಕ್ಷಕ್ಕೆ ದುಬಾರಿಯಾಯಿತು ಎನ್ನುವುದು ಗುಟ್ಟಾಗಿ ಉಳಿದಿಲ್ಲ. ತಾನು ಮುಖ್ಯಮಂತ್ರಿಯಾಗಿ ಉಳಿಯಬೇಕೆನ್ನುವ ಅವರ ಹಪಹಪಿಯಿಂದಾಗಿ ಹಿಂದೆ ಪಕ್ಷದ ರಾಷ್ಟ್ರೀಯ ಮಟ್ಟದ ಜವಾಬ್ದಾರಿ ಬಂದಾಗಲೂ ಅದನ್ನು ತಿರಸ್ಕರಿಸಿದ್ದ 72ರ ಪ್ರಾಯದ ಗೆಹ್ಲೋ ಟ್‌ಗೆ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಿ ಮುಂದಿನ ಲೋಕಸಭಾ ಚುನಾವಣೆಗೆ ಸಜ್ಜಾಗುವ ದೊಡ್ಡ ಹೊಣೆಗಾರಿಕೆ ಇದೆ. ಆದರೆ ಈ ಸೋಲಿನಿಂದಾಗಿ ನೈತಿಕ ಧೈರ್ಯ ಕಳೆದುಕೊಂಡಿರುವ ಗೆಹ್ಲೋ ಟ್‌ ಪಕ್ಷದಲ್ಲಿ ಹೆಚ್ಚು ವಿರೋಧಗಳನ್ನು ಎದುರಿಸಬೇಕಾಗಬಹುದು. ಈವರೆಗೆ ಪಕ್ಷದೊಳಗೆ ಹಿಡಿತ ಇಟ್ಟುಕೊಂಡಿರುವ ಇವರು ಇನ್ನು ಮುಂದೆ ಸಚಿನ್‌ ಪೈಲಟ್‌ ಅವರ ಬಣದ ನೇರಾನೇರ ವಿರೋಧವನ್ನು ಎದುರಿಸಲೇಬೇಕು.

ಕಮಲನಾಥ್‌- ದಿಗ್ವಿಜಯ ಸಿಂಗ್‌
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್‌ ಈ ಬಾರಿ ಕಮಾಲ್‌ ಮಾಡುತ್ತಾರೆ, ಮತ್ತೆ ಮುಖ್ಯಮಂತ್ರಿಯಾಗುತ್ತಾರೆ ಎಂಬ ನಿರೀಕ್ಷೆಯಲ್ಲಿ ಕಾಂಗ್ರೆಸ್‌ ಇತ್ತು. ಕಮಲನಾಥ್‌ ಮತ್ತು ದಿಗ್ವಿಜಯ ಸಿಂಗ್‌ ಜೋಡಿ ರಾಜ್ಯದಾದ್ಯಂತ ಸಂಚರಿಸಿ ಪಕ್ಷಕ್ಕೆ ಬಲ ತಂದುಕೊಟ್ಟಿದ್ದರು. 77ರ ಕಮಲ್‌ನಾಥ್‌ ಮತ್ತು 76ರ ದಿಗ್ವಿಜಯ ಸಿಂಗ್‌ ಅವರು ಮಧ್ಯಪ್ರದೇಶದಲ್ಲಿ ಪಕ್ಷವನ್ನು ಎಷ್ಟರ ಮಟ್ಟಿಗೆ ವ್ಯಾಪಿಸಿದರೆಂದರೆ, ಹೊಸ ತಲೆಮಾರಿನ ನಾಯಕರ ಪ್ರವೇಶಕ್ಕೆ ಅವಕಾಶ ಕೊಡಲಿಲ್ಲ, ಇವರಿಬ್ಬರ ಪ್ರಾಬಲ್ಯದಿಂದಾಗಿ ಕಾಂಗ್ರೆಸ್‌ ಈಗ ಅಲ್ಲಿ ನರಳುವಂತಾಗಿದೆ.
ಟಿಕೆಟ್‌ ಹಂಚಿಕೆಯಿಂದ ಹಿಡಿದು ಪ್ರತಿಯೊಂದು ವಿಚಾರದಲ್ಲಿ ಮೇಲುಗೈ ಸಾಧಿಸಿದ್ದ ಈ ಜೋಡಿ ಈಗ ಕವಲು ಹಾದಿಯಲ್ಲಿದೆ. ಹೊಸ ತಲೆಮಾರನ್ನು ಮುಂದಕ್ಕೆ ತರುವ ಅನಿವಾರ್ಯತೆಯಲ್ಲಿ ಕಾಂಗ್ರೆಸ್‌ಗೆ ಸಿಲುಕಿದೆ.

ಕೆ.ಸಿ.ಚಂದ್ರಶೇಖರ್‌ ರಾವ್‌
ಬಿಆರ್‌ಎಸ್‌ ಗೆದ್ದು ತಾನೇ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂಬ ಅತೀವ ಆತ್ಮವಿಶ್ವಾಸ ದಿಂದ ಇದ್ದ ತೆಲಂಗಾಣದ ಹಾಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಹೀನಾಯ ಸೋಲು ಅನುಭವಿಸಿದ್ದಾರೆ. ಕಳೆದ ಎರಡು ಅವಧಿಯಲ್ಲಿ ಸಿಎಂ ಆಗಿರುವ ಕೆಸಿಆರ್‌ ತನ್ನ ರಾಜ್ಯವನ್ನು ಬಿಟ್ಟು ದೇಶದ ರಾಜಕಾರಣದಲ್ಲೂ ಚಮಕ್‌ ತೋರಬೇಕೆನ್ನುವ ಮಹತ್ವಾಕಾಂಕ್ಷೆ ಹೊಂದಿದ್ದರು, ಆ ಕಾರಣಕ್ಕಾಗಿಯೇ ತೆಲಂಗಾಣ ರಾಷ್ಟ್ರೀಯ ಪಕ್ಷ (ಟಿಆರ್‌ಎಸ್‌) ಎಂಬ ಹೆಸರಿನ ತಮ್ಮ ಪಕ್ಷವನ್ನು ಭಾರತ ರಾಷ್ಟ್ರೀಯ ಪಕ್ಷ (ಬಿಆರ್‌ಎಸ್‌) ಎಂದ ಬದಲಿಸಿ ರಾಷ್ಟ್ರ ರಾಜಕಾರಣದತ್ತ ಹೆಜ್ಜೆ ಹಾಕೋಣ ಎಂದು ಹೊರಟಿದ್ದರು. ಈ ಸೋಲು ಅವರ ಎಲ್ಲ ಪ್ರಯತ್ನಗಳಿಗೂ ನೀರು ಎರಚಿದೆ. ಅತ್ತ ಎನ್‌ಡಿಎ ಮತ್ತು ಇತ್ತ ಐಎನ್‌ಡಿಐಎ ನಿಂದ ಸಮಾನ ದೂರದಲ್ಲಿದ್ದ ಕೆಸಿಆರ್‌ ಈಗ ಒಂಟಿಯಾಗಿರುವುದು ಸತ್ಯ.

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.