ಹಣಕಾಸು ಡೆಡ್‌ಲೈನ್‌ಗಳು ಸಮೀಪಿಸುತ್ತಿವೆ!


Team Udayavani, Jan 20, 2021, 7:40 AM IST

ಹಣಕಾಸು ಡೆಡ್‌ಲೈನ್‌ಗಳು ಸಮೀಪಿಸುತ್ತಿವೆ!

2020-21ರ ಹಣಕಾಸು ವರ್ಷದ ಕೊನೆಯ ತ್ತೈಮಾಸಿಕದಲ್ಲಿದ್ದೇವೆ. ಹಣಕಾಸು ವರ್ಷ  ಪೂರ್ಣಗೊಳ್ಳಲು ಇನ್ನು ಎರಡೂವರೆ ತಿಂಗಳುಗಳಷ್ಟೇ ಉಳಿದಿದೆ. ಈ ಅವಧಿಯಲ್ಲಿ ನಾವು ಪೂರೈಸಲೇಬೇಕಾದ ಕೆಲವೊಂದು ಹಣಕಾಸು ಡೆಡ್‌  ಲೈನ್‌ಗಳು ಇಲ್ಲಿವೆ.

ಜ. 31: ತೆರಿಗೆ ವ್ಯಾಜ್ಯ ಬಗೆಹರಿಸಿ ಕೊಳ್ಳಿ: ಆದಾಯ ತೆರಿಗೆ ವಿವಾದಗಳು, ಬಾಕಿ ಇರುವ ಆದಾಯ ತೆರಿಗೆ ಕೇಸುಗಳನ್ನು ಇತ್ಯರ್ಥ ಪಡಿಸಿಕೊಳ್ಳಲು “ವಿವಾದ್‌ ಸೇ ವಿಶ್ವಾಸ್‌’ ಯೋಜನೆ ಜಾರಿಯಲ್ಲಿದೆ. ಇದರ ಡಿಕ್ಲರೇಷನ್‌ ಸಲ್ಲಿಸಲು ಜ. 31 ಕಡೆಯ ದಿನ. ಬಾಕಿಯಿಟ್ಟುಕೊಂಡವರು ಮಾಸಾಂತ್ಯದ ಮೊದಲು ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಬಹುದು.

ಫೆ. 15: ನಿರ್ದಿಷ್ಟ ಐಟಿಆರ್‌: ಆಡಿಟ್‌ ಅಗತ್ಯವಿರುವ ಖಾತೆದಾರರರು ಆದಾಯ ತೆರಿಗೆ ರಿಟನ್ಸ್‌ (ಐಟಿಆರ್‌) ದಾಖಲಿಸಲು ಫೆ. 15 ಕಡೆಯ ದಿನಾಂಕವಾಗಿದೆ. ಈ ಹಿಂದೆ ಜನವರಿ 31 ಕಡೆಯ ದಿನ ಎಂದು ಸರಕಾರ ಘೋಷಿಸಿತ್ತು. ಡಿಸೆಂಬರ್‌ ತಿಂಗಳಿನಲ್ಲಿಯೂ ಇದರ ದಿನಾಂಕವನ್ನು ಜನವರಿ ಅಂತ್ಯಕ್ಕೆ ವಿಸ್ತರಿಸಲಾಗಿತ್ತು. ಇದೀಗ ಫೆ. 15ರ ದಿನಾಂಕವನ್ನು ವಿಸ್ತರಿಸಬೇಕು ಎಂಬ ಬೇಡಿಕೆಯನ್ನು ಹಣಕಾಸು ಸಚಿವಾಲಯ ತಿರಸ್ಕರಿಸಿದೆ.

ಫೆ. 28: ಜೀವಿತ ಪ್ರಮಾಣ ಪತ್ರ: ಪಿಂಚಣಿ ಪಡೆಯುವ ಹಿರಿಯ ನಾಗರಿಕರು ಫೆ. 28ರೊಳಗೆ “ಜೀವಿತ ಪ್ರಮಾಣ ಪತ್ರ’ ಸಲ್ಲಿಸಬೇಕು. ಸಲ್ಲಿಕೆಯ ಅವಧಿಯನ್ನು 2020ರ ನವೆಂಬರ್‌ 30ರಿಂದ 2021ರ ಫೆ.28ಕ್ಕೆ ಸರಕಾರ ವಿಸ್ತರಿಸಿತ್ತು. ಪಿಂಚಣಿ ಪಡೆಯಲು ಇದು ಅತ್ಯಗತ್ಯವಾಗಿದೆ. ಈ ಪ್ರಕ್ರಿಯೆಯ ಮೇಲ್ವಿಚಾರಣೆ ಹೊಣೆ ಕೇಂದ್ರ ಕಾರ್ಮಿಕ ಇಲಾಖೆಯದ್ದಾಗಿದೆ.

ಮಾ. 31: ಪ್ಯಾನ್‌-ಆಧಾರ್‌ ಲಿಂಕ್‌: 2019ರಿಂದಲೂ ಇದರ ದಿನಾಂಕಗಳನ್ನು ಮುಂದೂಡಲಾಗುತ್ತಾ ಬರಲಾಗಿತ್ತು. ಇದೀಗ ಹಲವು ಬಾರಿ ವಿಸ್ತರಣೆಯಾಗಿ ಪ್ಯಾನ್‌-ಆಧಾರ್‌ ಜೋಡಣೆಯ ಗಡುವನ್ನು ಮಾ.31ಕ್ಕೆ ಸರಕಾರ ವಿಸ್ತರಿಸಿದೆ. ಈಗ ಬ್ಯಾಂಕ್‌ನ ಎಲ್ಲ ಕೆಲಸ ಕಾರ್ಯಗಳಿಗೆ ಪ್ಯಾನ್‌ ಕಾರ್ಡ್‌ ಕಡ್ಡಾಯವಾಗಿದ್ದು, ತೆರಿಗೆ ಪಾವತಿಗಳಿಗೂ ತುಂಬಾ ಅತ್ಯಗತ್ಯವಾಗಿದೆ.

ಮಾ.31: ಎಲ್‌ಟಿಸಿ ಕ್ಯಾಶ್‌ ವೋಚರ್‌: ಲೀವ್‌ ಟ್ರಾವೆಲ್‌ ಕನ್ಸೇಷನ್‌ ಅಥವಾ ಎಲ್‌ಟಿಸಿ ಕ್ಯಾಶ್‌ ವೋಚರ್‌ ಸ್ಕೀಮ್‌ನಡಿಯಲ್ಲಿ ತೆರಿಗೆ ವಿನಾಯಿತಿ ಪಡೆಯಲು ಮಾ.31 ಕಡೆಯ ದಿನಾಂಕ. ಎಲ್‌ಟಿಸಿ ಎಂದರೆ ಕೇಂದ್ರ ಸರಕಾರಿ ನೌಕರರಿಗೆ ದೇಶದ ವಿವಿಧ ಭಾಗಗಳಿಗೆ ಮತ್ತು ಮನೆಗೆ ಪ್ರಯಾಣಿಸಲು ನೀಡಲಾಗುವ ಸೌಲಭ್ಯವಾಗಿದೆ.

ಸಂಬಳದಲ್ಲಿ ಕಡಿತ! :

ಹೊಸ ವೇತನ ನಿಯಮದ ಅನುಸಾರ ವೇತನವನ್ನು ಉದ್ಯೋಗದಾತರು ಮರು ಹೊಂದಾಣಿಕೆ ಮಾಡಬೇಕಾಗಿದೆ. ಹೊಸ ವೇತನ ಸಂಹಿತೆಯ ಭಾಗವಾಗಿ ಕಳೆದ ವರ್ಷ ಸಂಸತ್‌ನಲ್ಲಿ ಪರಿಹಾರ ನಿಯಮವನ್ನು ಮಂಡಿಸಿ ಅಂಗೀಕಾರ ಪಡೆದುಕೊಳ್ಳಲಾಗಿದ್ದು, ಎಪ್ರಿಲ್‌ನಿಂದ ಅನುಷ್ಠಾನಕ್ಕೆ ಬರಲಿದೆ. ಅದರ ಪ್ರಕಾರ ಒಟ್ಟಾರೆ ವೇತನದಲ್ಲಿ ಭತ್ತೆಯು ಶೇ. 50 ದಾಟುವಂತಿಲ್ಲ. ಹೀಗಾಗಿ ವೇತನ ಸ್ವರೂಪದಲ್ಲಿ ಇಳಿಕೆಯಾಗಬಹುದು. ಆದರೆ ಮೂಲ ವೇತನದಲ್ಲಿ ಹೆಚ್ಚಳ ಆಗಬಹುದು ಮತ್ತು ಪಿಎಫ್ ಕೊಡುಗೆ ಏರಿಕೆಯಾಗಿ ಟೇಕ್‌ ಹೋಮ್‌ ಸಂಬಳದಲ್ಲಿ ಇಳಿಕೆ ಆಗುತ್ತದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.