ಸೆಪ್ಟಂಬರ್‌ನಲ್ಲಿ ಮತ್ತೆ ಭಾರೀ ಮಳೆ? ದೇಶಾದ್ಯಂತ ಭರ್ಜರಿ ಮುಕ್ತಾಯ ಕಾಣಲಿರುವ ಮಳೆಗಾಲ


Team Udayavani, Sep 6, 2022, 6:45 AM IST

ಸೆಪ್ಟಂಬರ್‌ನಲ್ಲಿ ಮತ್ತೆ ಭಾರೀ ಮಳೆ? ದೇಶಾದ್ಯಂತ ಭರ್ಜರಿ ಮುಕ್ತಾಯ ಕಾಣಲಿರುವ ಮಳೆಗಾಲ

ಹೊಸದಿಲ್ಲಿ: ದೇಶದಲ್ಲಿ ಮುಂಗಾರು ಹಿಂದಕ್ಕೆ ಸರಿಯುವ ಸಮಯ ಸನ್ನಿಹಿತವಾಗಿದೆ. ಈ ವರ್ಷ ವಾಡಿಕೆಗಿಂತ ಸ್ವಲ್ಪ ಬೇಗನೆ ಆಗಮಿಸಿದ್ದರೂ ಮುಂಗಾರು ಆರಂಭದಲ್ಲಿ ಚುರುಕು ಕಂಡಿರಲಿಲ್ಲ. ಆ ಬಳಿಕ ನಿಧಾನವಾಗಿ ಉತ್ತಮ ಮಳೆ ಬೀಳಲು ಆರಂಭವಾಗಿತ್ತು. ನಿಗದಿತ ಸಮಯದಲ್ಲಿ ಅದು ದೇಶವನ್ನಿಡೀ ವ್ಯಾಪಿಸಿದ್ದರೂ ಏಕಪ್ರಕಾರವಾಗಿ ಸಮತೋಲನದಿಂದ ಸುರಿಯದೆ ಒಂದು ಭಾಗಕ್ಕೆ ಹೆಚ್ಚು, ಇನ್ನೊಂದು ಭಾಗಕ್ಕೆ ಕಡಿಮೆ ಎಂಬಂತೆ ಸುರಿದಿದೆ. ಕರಾವಳಿಯಲ್ಲಿ ಜೂನ್‌ ಮತ್ತು ಜುಲೈಯಲ್ಲಿ ಚೆನ್ನಾಗಿ ಮಳೆಯಾಗಿದೆ. ಆ ಬಳಿಕ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಕೊಡಗು- ಹೀಗೆ ಕೆಲವು ಕಡೆಗಳಲ್ಲಿ ದಿಢೀರನೆ ಒಮ್ಮೆಲೆ ಭಾರೀ ಮಳೆಯಾಗುವ ಪ್ರಕೃತಿ ವಿಕೋಪದಂತಹ ಬೆಳವಣಿಗೆ ಈ ವರ್ಷದ ಹೊಸ ವಿದ್ಯಮಾನ.

ಕಳೆದ ಕೆಲವು ವರ್ಷಗಳಂತೆ ಈ ವರ್ಷವೂ ಅಲ್ಲಲ್ಲಿ ಗುಡ್ಡ ಕುಸಿತ, ಭೂಕುಸಿತಗಳು ಸಂಭವಿಸಿವೆ. ಈ ವಿಕೋಪ ಕೇವಲ ಕರಾವಳಿಗೆ ಮಾತ್ರ ಸೀಮಿತವಾಗಿಲ್ಲ; ದೇಶದ ವಿವಿಧ ಭಾಗಗಳಲ್ಲಿಯೂ ಘಟಿಸಿದೆ. ಭಾರತದ ಮಟ್ಟಿಗೆ ಮಳೆಗಾಲ ಕೃಷಿ ಸಹಿತ ವಿವಿಧ ಕ್ಷೇತ್ರಗಳಿಗೆ ಚೈತನ್ಯ ಒದಗಿಸುತ್ತದೆ. ಒಟ್ಟಾರೆಯಾಗಿ ಈ ಬಾರಿಯ ಮಳೆಗಾಲ ಹೇಗಿತ್ತು ಎಂಬ ಪಕ್ಷಿನೋಟ ಇಲ್ಲಿದೆ.

ಆಗಸ್ಟ್‌ನಲ್ಲಿ ಎಷ್ಟು ಮಳೆ?
ವಾಡಿಕೆಗಿಂತ ಶೇ. 3.4 ಅಧಿಕ

ಎಲ್ಲಿ ಮಳೆ ಕಡಿಮೆ?
ಜುಲೈ ಮತ್ತು ಆಗಸ್ಟ್‌ನಲ್ಲಿ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಮಳೆ ಕಡಿಮೆ.

ಸೆಪ್ಟಂಬರ್‌ನಲ್ಲಿ ಎಷ್ಟು ಮಳೆ?
ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ ಬಿಡುಗಡೆ ಮಾಡಿರುವ ಮುನ್ಸೂ ಚನೆಯ ಪ್ರಕಾರ 2022ರ ಸೆಪ್ಟಂಬರ್‌ನಲ್ಲಿ ಈ ತಿಂಗಳ ದೀರ್ಘಾವಧಿ ಸರಾಸರಿ ಗಿಂತ ಶೇ. 109ರಷ್ಟು ಹೆಚ್ಚು ವರಿ ಮಳೆಯಾಗಲಿದೆ.
ಸೆ. 9ರ ಬಳಿಕ ಮುಂಗಾರು ಮಾರುತ ಗಳು ಮತ್ತೆ ಚುರು ಕಾಗ ಲಿವೆ ಎಂದಿದ್ದಾರೆ ಮೊಹಾಪಾತ್ರ.

ಮಳೆಗಾಲ ಮುಕ್ತಾಯ:
ಐಎಂಡಿ ಮುನ್ಸೂಚನೆ ಏನು?
01.ಮಳೆಗಾಲ ಮುಕ್ತಾಯವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕೆಲವು ದಿನಗಳ ಹಿಂದೆ ಹೇಳಿತ್ತು. ಆದರೆ ಮುಂಗಾರು ಮಾರುತಗಳು ಈಗ ಮತ್ತೆ ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಮಳೆಗಾಲ ಮುಕ್ತಾಯ ವಿಳಂಬವಾಗಬಹುದು ಎಂದಿದೆ.
02.ನೈಋತ್ಯ ಮುಂಗಾರು ಮಾರುತಗಳು ಸೆಪ್ಟಂಬರ್‌ನಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಅತ್ಯಧಿಕ ಮಳೆ ಸುರಿಸಲಿವೆ. ಪೂರ್ವ ಮತ್ತು ಈಶಾನ್ಯ ಭಾಗಗಳಲ್ಲಿ ಮಾತ್ರ ಮಳೆ ಕಡಿಮೆ ಇರಲಿದೆ.
03.ಉತ್ತರ ಪ್ರದೇಶ, ಬಿಹಾರ, ಝಾರ್ಖಂಡ್‌, ಪ. ಬಂಗಾಲಗಳಲ್ಲಿ ಈವರೆಗೆ ಉತ್ತಮ ಮಳೆ ಸುರಿದಿಲ್ಲ. ಹೀಗಾಗಿ ಅಲ್ಲಿ ಭತ್ತ ಬಿತ್ತನೆ ನಿರೀಕ್ಷಿತ ಪ್ರಗತಿ ಕಂಡಿಲ್ಲ. ಸೆಪ್ಟಂಬರ್‌ ಮಳೆಯೂ ಬೀಳದೆ ಇದ್ದರೆ ಇನ್ನಷ್ಟು ಹಿನ್ನಡೆಯಾಗಬಹುದು.
04.ಮಧ್ಯ, ಪಶ್ಚಿಮ, ದಕ್ಷಿಣ ಭಾರತದಲ್ಲಿ ಈಗಾಗಲೇ ಬಿತ್ತನೆ ಯಾ ಗಿದ್ದು, ಈಗ ಅಧಿಕ ಮಳೆಯಾದರೆ ಬೆಳೆಗಳಿಗೆ ತೊಂದರೆ.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.