Diabetics: ಮಧುಮೇಹಿಗಳ ರಾಷ್ಟ್ರವಾಗುತ್ತಿದೆ ಭಾರತ 

India is becoming a nation of diabetics

Team Udayavani, Jun 13, 2023, 7:29 AM IST

DIABETES
ಆಧುನಿಕ ಜೀವನ ಶೈಲಿ, ಜಂಕ್‌ ಫ‌ುಡ್‌ ಸೇವನೆ,  ವ್ಯಾಯಾಮದ  ಕೊರತೆ, ಒತ್ತಡದ ಬದುಕು ಇವೆಲ್ಲವುಗಳನ್ನು ನಿಭಾಯಿಸುವಲ್ಲಿ ವಿಫ‌ಲವಾಗಿರುವ ಭಾರತವು ಇಂದು ಮಧುಮೇಹಿಗಳ ರಾಷ್ಟ್ರವಾಗುತ್ತಿದೆ. ದಿ ಲ್ಯಾನ್‌ಸೆಟ್‌ ಜರ್ನಲ್‌ ಇತ್ತೀಚಿಗೆ ಪ್ರಕಟಿಸಿದ ಸಮೀಕ್ಷೆಯ ವರದಿಯಲ್ಲಿ ಈ ಮಾಹಿತಿ ಹೊರಬಿದ್ದಿದೆ. ಭಾರತದ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಿದ ಆರೋಗ್ಯ ಸಮೀಕ್ಷೆಯಲ್ಲಿ ದೇಶದಲ್ಲಿ ಮಧುಮೇಹ ಸಮಸ್ಯೆಗೆ ಒಳಗಾಗಿರುವವರ  ಸಂಖ್ಯೆ ಅಧಿಕವಾಗಿದ್ದು  ಈ ನಿಟ್ಟಿನಲ್ಲಿ ಶೀಘ್ರವಾಗಿ ಕ್ರಮ ತೆಗೆದು ಕೊಳ್ಳಬೇಕು ಎಂದು  ವರದಿ ಹೇಳಿದೆ. ಏನಿದು ವರದಿ ? ವರದಿಯಲ್ಲೇನಿದೆ? ಎಂಬ ಮಾಹಿತಿ ಇಲ್ಲಿದೆ.
ಯಾರ ಸಮೀಕ್ಷೆ ?
ಮದ್ರಾಸ್‌ ಡಯಾಬಿಟಿಕ್ಸ್‌ ರಿಸರ್ಚ್‌ ಫೌಂಡೇಶನ್‌ (ಎಂಡಿಆರ್‌ಆಫ್ ), ಇಂಡಿಯನ್‌ ಕೌನ್ಸಿಲ್‌ ಆಫ್ ಮೆಡಿಕಲ್‌ ರಿಸರ್ಚ್‌ (ಐಸಿಎಂಆರ್‌), ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಜಂಟಿಯಾಗಿ ಮಧುಮೇಹ ಹಾಗೂ ಕ್ರೋನಿಕ್‌ ನಾನ್‌ ಕಮ್ಯುನಿಕೇಬಲ್‌ ಡಿಸೀಸ್‌ನ (ಎನ್‌ಸಿಡಿ ) ಮೇಲೆ ಕೈಗೊಂಡ ದೇಶದ ಅತೀ ದೊಡ್ಡ ಸಮೀಕ್ಷೆ ಇದಾಗಿದೆ.
ಗೋವಾದಲ್ಲಿ ಅಧಿಕ 
ಈ ಸಮೀಕ್ಷೆಯ ಪ್ರಕಾರ 2019-2021ರ ನಡುವೆ ಭಾರತದಲ್ಲಿ 101 ಮಿಲಿಯನ್‌ ಮಧುಮೇಹ  ಹಾಗೂ 136 ಮಿಲಿಯನ್‌ ಜನರು ಪೂರ್ವ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ.  ರಾಜ್ಯವಾರು ಸಮೀಕ್ಷೆಯಲ್ಲಿ ಗೋವಾ ಗರಿಷ್ಠ ಅಂದರೆ ಶೇ.26.4 ರಷ್ಟು ಮಧುಮೇಹಿಗಳನ್ನು ಒಳಗೊಂಡಿದ್ದು ಮೊದಲ ಸ್ಥಾನದಲ್ಲಿದ್ದರೆ, ಅನಂತರದ ಸ್ಥಾನದಲ್ಲಿ  ಪುದುಚೇರಿ, ಕೇರಳ (ಶೇ.25) ರಾಜ್ಯಗಳಿವೆ. ಇನ್ನು ಕನಿಷ್ಠ ಅಂದರೆ ಶೇ.4.8ರಷ್ಟು ಮಧುಮೇಹಿಗಳನ್ನು ಹೊಂದಿರುವ ಉತ್ತರ ಪ್ರದೇಶ ಕೊನೆಯ ಸ್ಥಾನದಲ್ಲಿದೆ. ವರದಿಯ ಪ್ರಕಾರ ಭಾರತದ ಗ್ರಾಮೀಣ ಭಾಗದಲ್ಲಿ ಮುಂದಿನ 5 ವರ್ಷಗಳಲ್ಲಿ ಈ ಪರಿಸ್ಥಿತಿ ತೀವ್ರಸ್ತರಕ್ಕೆ ಹೋಗಲಿದೆ ಎಂದು ಎಚ್ಚರಿಸಿದೆ. ಜತೆಗೆ ವಿಶ್ವಸಂಸ್ಥೆಯು ಕುರುಡುತನ, ಕಿಡ್ನಿ ವೈಫ‌ಲ್ಯ, ಹೃದಯಾಘಾತ, ಪಾರ್ಶ್ವವಾಯು ಅಂತಹ ಸಮಸ್ಯೆಗಳಿಗೆ ಮಧುಮೇಹವೇ ಮೂಲ ಕಾರಣವಾಗಬಹುದು ಎಂದು ಎಚ್ಚರಿಸಿದೆ.
ಮಧುಮೇಹ ದೊಂದಿಗೆ ದೇಶದಲ್ಲಿ 315 ಮಿಲಿಯನ್‌ ಮಂದಿ ಅಧಿಕ ರಕ್ತದೊತ್ತಡ, 254 ಮಿಲಿಯನ್‌ ಬೊಜ್ಜಿನ ಹಾಗೂ 351 ಮಿಲಿಯನ್‌ ಹೊಟ್ಟೆಯ ಬೊಜ್ಜಿನ ಸಮಸ್ಯೆಗೆ ಒಳಗಾಗಿದ್ದಾರೆ ಅಲ್ಲದೇ 213 ಮಿಲಿಯನ್‌ ಜನರು ಹೈಪರ್‌ಕೊಲೆಸ್ಟ್ರಾಲ್‌ ಹಾಗೂ 185 ಮಿಲಿಯನ್‌ ಮಂದಿ ಅಧಿಕ ಎಲ್‌ಡಿಎಲ್‌ ಕೊಲೆಸ್ಟ್ರಾಲ್‌ನ್ನು ಹೊಂದಿದ್ದಾರೆ ಎಂದು ವರದಿಯಲ್ಲಿದೆ.
ಮಧುಮೇಹ ಹಾಗೂ ಎನ್‌ಸಿಡಿ 
ಸಮಸ್ಯೆಯು ದೇಶದಲ್ಲಿ ಊಹಿಸಿದ್ದಕ್ಕಿಂತ ಹೆಚ್ಚಿದ್ದು, ಕೆಲವು ರಾಜ್ಯಗಳಲ್ಲಿ ಇದು ಅಧಿಕ ವಾಗುವ ಲಕ್ಷಣಗಳಿವೆ ಎಂದು ವರದಿ ಉಲ್ಲೇಖೀಸಿದೆ. ಈ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ರಾಜ್ಯವಾರು ಯೋಜನೆಗಳನ್ನು ಶೀಘ್ರವಾಗಿ ರೂಪಿಸುವ ಅಗತ್ಯವಿದೆ ಎಂದು ಸಂಶೋಧನಕಾರರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

31 ವರ್ಷದ ಲಾರೆನ್ಸ್‌ ಬಿಷ್ಣೋಯ್‌ ಪಾತಕಲೋಕಕ್ಕೆ ಹೊಸ ಎಂಟ್ರಿ; ಮುಂಬಯಿಗೆ ಹೊಸ ಡಾನ್‌!

31 ವರ್ಷದ ಲಾರೆನ್ಸ್‌ ಬಿಷ್ಣೋಯ್‌ ಪಾತಕಲೋಕಕ್ಕೆ ಹೊಸ ಎಂಟ್ರಿ; ಮುಂಬಯಿಗೆ ಹೊಸ ಡಾನ್‌!

ನಾನೂ ಸೀನಿಯರ್‌ ಲೀಡರ್‌, ರಾಜ್ಯಕ್ಕೆ ದಲಿತ ಸಿಎಂ ಪ್ರಸ್ತಾವ ಬಂದರೆ ಮುಂಚೂಣಿಯಲ್ಲಿರುವೆ

ನಾನೂ ಸೀನಿಯರ್‌ ಲೀಡರ್‌, ರಾಜ್ಯಕ್ಕೆ ದಲಿತ ಸಿಎಂ ಪ್ರಸ್ತಾವ ಬಂದರೆ ಮುಂಚೂಣಿಯಲ್ಲಿರುವೆ

ಚುನಾವಣೆ ಗೆಲ್ಲುವ ಅಸ್ತ್ರವಾದ ಉಚಿತ ಕೊಡುಗೆ

Election: ಗೆಲ್ಲುವ ಅಸ್ತ್ರವಾದ ಉಚಿತ ಕೊಡುಗೆ

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.