Diabetics: ಮಧುಮೇಹಿಗಳ ರಾಷ್ಟ್ರವಾಗುತ್ತಿದೆ ಭಾರತ 

India is becoming a nation of diabetics

Team Udayavani, Jun 13, 2023, 7:29 AM IST

DIABETES
ಆಧುನಿಕ ಜೀವನ ಶೈಲಿ, ಜಂಕ್‌ ಫ‌ುಡ್‌ ಸೇವನೆ,  ವ್ಯಾಯಾಮದ  ಕೊರತೆ, ಒತ್ತಡದ ಬದುಕು ಇವೆಲ್ಲವುಗಳನ್ನು ನಿಭಾಯಿಸುವಲ್ಲಿ ವಿಫ‌ಲವಾಗಿರುವ ಭಾರತವು ಇಂದು ಮಧುಮೇಹಿಗಳ ರಾಷ್ಟ್ರವಾಗುತ್ತಿದೆ. ದಿ ಲ್ಯಾನ್‌ಸೆಟ್‌ ಜರ್ನಲ್‌ ಇತ್ತೀಚಿಗೆ ಪ್ರಕಟಿಸಿದ ಸಮೀಕ್ಷೆಯ ವರದಿಯಲ್ಲಿ ಈ ಮಾಹಿತಿ ಹೊರಬಿದ್ದಿದೆ. ಭಾರತದ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಿದ ಆರೋಗ್ಯ ಸಮೀಕ್ಷೆಯಲ್ಲಿ ದೇಶದಲ್ಲಿ ಮಧುಮೇಹ ಸಮಸ್ಯೆಗೆ ಒಳಗಾಗಿರುವವರ  ಸಂಖ್ಯೆ ಅಧಿಕವಾಗಿದ್ದು  ಈ ನಿಟ್ಟಿನಲ್ಲಿ ಶೀಘ್ರವಾಗಿ ಕ್ರಮ ತೆಗೆದು ಕೊಳ್ಳಬೇಕು ಎಂದು  ವರದಿ ಹೇಳಿದೆ. ಏನಿದು ವರದಿ ? ವರದಿಯಲ್ಲೇನಿದೆ? ಎಂಬ ಮಾಹಿತಿ ಇಲ್ಲಿದೆ.
ಯಾರ ಸಮೀಕ್ಷೆ ?
ಮದ್ರಾಸ್‌ ಡಯಾಬಿಟಿಕ್ಸ್‌ ರಿಸರ್ಚ್‌ ಫೌಂಡೇಶನ್‌ (ಎಂಡಿಆರ್‌ಆಫ್ ), ಇಂಡಿಯನ್‌ ಕೌನ್ಸಿಲ್‌ ಆಫ್ ಮೆಡಿಕಲ್‌ ರಿಸರ್ಚ್‌ (ಐಸಿಎಂಆರ್‌), ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಜಂಟಿಯಾಗಿ ಮಧುಮೇಹ ಹಾಗೂ ಕ್ರೋನಿಕ್‌ ನಾನ್‌ ಕಮ್ಯುನಿಕೇಬಲ್‌ ಡಿಸೀಸ್‌ನ (ಎನ್‌ಸಿಡಿ ) ಮೇಲೆ ಕೈಗೊಂಡ ದೇಶದ ಅತೀ ದೊಡ್ಡ ಸಮೀಕ್ಷೆ ಇದಾಗಿದೆ.
ಗೋವಾದಲ್ಲಿ ಅಧಿಕ 
ಈ ಸಮೀಕ್ಷೆಯ ಪ್ರಕಾರ 2019-2021ರ ನಡುವೆ ಭಾರತದಲ್ಲಿ 101 ಮಿಲಿಯನ್‌ ಮಧುಮೇಹ  ಹಾಗೂ 136 ಮಿಲಿಯನ್‌ ಜನರು ಪೂರ್ವ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ.  ರಾಜ್ಯವಾರು ಸಮೀಕ್ಷೆಯಲ್ಲಿ ಗೋವಾ ಗರಿಷ್ಠ ಅಂದರೆ ಶೇ.26.4 ರಷ್ಟು ಮಧುಮೇಹಿಗಳನ್ನು ಒಳಗೊಂಡಿದ್ದು ಮೊದಲ ಸ್ಥಾನದಲ್ಲಿದ್ದರೆ, ಅನಂತರದ ಸ್ಥಾನದಲ್ಲಿ  ಪುದುಚೇರಿ, ಕೇರಳ (ಶೇ.25) ರಾಜ್ಯಗಳಿವೆ. ಇನ್ನು ಕನಿಷ್ಠ ಅಂದರೆ ಶೇ.4.8ರಷ್ಟು ಮಧುಮೇಹಿಗಳನ್ನು ಹೊಂದಿರುವ ಉತ್ತರ ಪ್ರದೇಶ ಕೊನೆಯ ಸ್ಥಾನದಲ್ಲಿದೆ. ವರದಿಯ ಪ್ರಕಾರ ಭಾರತದ ಗ್ರಾಮೀಣ ಭಾಗದಲ್ಲಿ ಮುಂದಿನ 5 ವರ್ಷಗಳಲ್ಲಿ ಈ ಪರಿಸ್ಥಿತಿ ತೀವ್ರಸ್ತರಕ್ಕೆ ಹೋಗಲಿದೆ ಎಂದು ಎಚ್ಚರಿಸಿದೆ. ಜತೆಗೆ ವಿಶ್ವಸಂಸ್ಥೆಯು ಕುರುಡುತನ, ಕಿಡ್ನಿ ವೈಫ‌ಲ್ಯ, ಹೃದಯಾಘಾತ, ಪಾರ್ಶ್ವವಾಯು ಅಂತಹ ಸಮಸ್ಯೆಗಳಿಗೆ ಮಧುಮೇಹವೇ ಮೂಲ ಕಾರಣವಾಗಬಹುದು ಎಂದು ಎಚ್ಚರಿಸಿದೆ.
ಮಧುಮೇಹ ದೊಂದಿಗೆ ದೇಶದಲ್ಲಿ 315 ಮಿಲಿಯನ್‌ ಮಂದಿ ಅಧಿಕ ರಕ್ತದೊತ್ತಡ, 254 ಮಿಲಿಯನ್‌ ಬೊಜ್ಜಿನ ಹಾಗೂ 351 ಮಿಲಿಯನ್‌ ಹೊಟ್ಟೆಯ ಬೊಜ್ಜಿನ ಸಮಸ್ಯೆಗೆ ಒಳಗಾಗಿದ್ದಾರೆ ಅಲ್ಲದೇ 213 ಮಿಲಿಯನ್‌ ಜನರು ಹೈಪರ್‌ಕೊಲೆಸ್ಟ್ರಾಲ್‌ ಹಾಗೂ 185 ಮಿಲಿಯನ್‌ ಮಂದಿ ಅಧಿಕ ಎಲ್‌ಡಿಎಲ್‌ ಕೊಲೆಸ್ಟ್ರಾಲ್‌ನ್ನು ಹೊಂದಿದ್ದಾರೆ ಎಂದು ವರದಿಯಲ್ಲಿದೆ.
ಮಧುಮೇಹ ಹಾಗೂ ಎನ್‌ಸಿಡಿ 
ಸಮಸ್ಯೆಯು ದೇಶದಲ್ಲಿ ಊಹಿಸಿದ್ದಕ್ಕಿಂತ ಹೆಚ್ಚಿದ್ದು, ಕೆಲವು ರಾಜ್ಯಗಳಲ್ಲಿ ಇದು ಅಧಿಕ ವಾಗುವ ಲಕ್ಷಣಗಳಿವೆ ಎಂದು ವರದಿ ಉಲ್ಲೇಖೀಸಿದೆ. ಈ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ರಾಜ್ಯವಾರು ಯೋಜನೆಗಳನ್ನು ಶೀಘ್ರವಾಗಿ ರೂಪಿಸುವ ಅಗತ್ಯವಿದೆ ಎಂದು ಸಂಶೋಧನಕಾರರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

12-

ಅಭಿಮತ: ಮಾನವೀಯತೆ ಎಂಬುದು ಬೊಗಳೆಯಾಗದಿರಲಿ

MUST WATCH

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

ಹೊಸ ಸೇರ್ಪಡೆ

7

Uv Fusion: ಕನ್ನಡಿಗರ ಅಸ್ಮಿತೆ ಕೆಚ್ಚೆದೆಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ

11-

Swami Vivekananda: “ವಿವೇಕತನ’ವನ್ನು ಜಾಗೃತಗೊಳಿಸಿದ “ವೈಚಾರಿಕ ಸಂತ’

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

6

Uv Fusion: ಗಣರಾಜ್ಯೋತ್ಸವ ಭಾರತೀಯತೆಯ ಸಂಭ್ರಮ

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.