ಸಮಾಜ ಸೇವೆಯಿಂದ ಬದುಕನ್ನು ಸಾರ್ಥಕವಾಗಿಸೋಣ


Team Udayavani, Aug 4, 2022, 6:15 AM IST

ಸಮಾಜ ಸೇವೆಯಿಂದ ಬದುಕನ್ನು ಸಾರ್ಥಕವಾಗಿಸೋಣ

ಹುಟ್ಟಿನ ತೊಟ್ಟಿಲಿನಿಂದ ಮಸಣದ ಮೆರವಣಿಗೆಯವರೆಗೂ ಇನ್ನೊಬ್ಬರನ್ನು ಅವಲಂಬನೆ ಮಾಡುವ ಮಾನವ ಸಂಘ ಜೀವಿ. ಆತ ಸಮಾಜವನ್ನು ಬಿಟ್ಟು ಒಂಟಿ ಯಾಗಿ ಎಂದೂ ಬದುಕಲಾರ. ಪ್ರತಿಯೊಂದು ರೀತಿಯಲ್ಲೂ ಸಮಾಜ ವನ್ನೇ ಅವಲಂಬಿಸಿ ಬದುಕುವ ನಮಗೆ ಸಮಾಜಕ್ಕಾಗಿ ದುಡಿಯುವ ತುಡಿತವಿರಬೇಕು. ದಯಾ ಧರ್ಮಸ್ಯ ಮೂಲ ಎಂದು ಶ್ರುತಿಗಳೂ, ದಯವೇ ಧರ್ಮದ ಮೂಲವಯ್ಯ ಎಂದು ಬಸವಣ್ಣನವರು ಹೇಳಿದಂತೆ ದಯೆ-ದಾನಾದಿಗಳಿಂದ ಸಮಾಜದ ಸುಭಿಕ್ಷೆ ಸಾಧ್ಯ. ತನ್ನಲ್ಲಿರುವ ಸೊತ್ತು ಬೇಕಾದ್ದಕ್ಕಿಂತ ಹೆಚ್ಚಿರುವಾಗ ಮತ್ತೂಬ್ಬರ ಭೋಗಕ್ಕೆ ಸೇರಬೇಕು. ಆಹಾರ, ವಸತಿ, ಬಟ್ಟೆ ಸಮಾನವಾಗಿ ಹಂಚಲ್ಪಟ್ಟಿರಬೇಕು. “ಭೂಷಿತಃ ಕಿಂ ನಕರೋತಿ ಪಾಪಂ’ ಎಂಬ ಸಂಸ್ಕೃತ ಮಾತಿನಂತೆ ಹಸಿದ ಹೊಟ್ಟೆ ಯಾವ ಪಾಪ ಮಾಡಲಿಕ್ಕಿಲ್ಲ? ಇದರಿಂದ ಸಮಾಜ ಅಸ್ಥಿರವಾಗುವುದು. ಇದನ್ನು ನಿವಾರಿಸಲು ಉಳಿದಿರುವ ಏಕೈಕ ಮಾರ್ಗವೆಂದರೆ ಅದು ದಾನ ಮಾತ್ರ.

ಸಮಾಜದಲ್ಲಿ ಸಾಮಾನ್ಯನಂತೆ ಜೀವಿಸಿ ಸಾಯುವುದರಲ್ಲಿ ಅರ್ಥವಿಲ್ಲ. ನಾವು ಬದುಕಿರುವುದು ಅಲ್ಪ ಸಮಯ ವಾದರೂ, ಈ ಕಡಿಮೆ ಅವಧಿಯಲ್ಲೇ ಸಹಸ್ರ ವರ್ಷಗಳ ಕಾಲ ನೆನಪಿಡು ವಂತಹ ಹಲವಾರು ಕೆಲಸ ಕಾರ್ಯಗಳನ್ನು ಮಾಡಬಹುದು. ಮಹಾವೀರ, ಬುದ್ಧ, ಯೇಸು, ಮಹಮ್ಮದ್‌ ಪೈಗಂಬರ್‌, ಆರ್ಯಭಟ, ಸುಶ್ರುತ, ಚರಕ, ಕಾಳಿದಾಸರಾದಿಯಾಗಿ ಆಧುನಿಕ ಕಾಲದ ಸಂಶೋಧಕರಾದ ಥಾಮಸ್‌ ಅಲ್ವಾ ಎಡಿಸನ್‌, ಐನ್‌ಸ್ಟಿನ್‌ ಇವರೆಲ್ಲರೂ ಸಾವಿರಾರು ವರ್ಷಗಳ ಹಿಂದೆ ಬದುಕಿ ಹೋದರೂ ಅವರು ಮಾಡಿದ ಸಮಾಜಮುಖೀ ಕಾರ್ಯಗಳಿಂದ ಇಂದಿಗೂ ಜೀವಂತವಾಗಿರುವುದರ ಜತೆಗೆ ಎಂದೆಂದಿಗೂ ಜೀವಂತ ವಾಗಿರುತ್ತಾರೆ. ಈ ಮಹಾನುಭಾವರಷ್ಟು ದೊಡ್ಡ ಸಾಧನೆಗಳನ್ನುಮಾಡಲು ಸಾಧ್ಯವಾಗದಿದ್ದರೂ ಸಣ್ಣ ಪುಟ್ಟ ಕಾರ್ಯ ಸಾಧನೆಯಂತೂ ಸಾಧ್ಯವಿದೆ. ನಮ್ಮ ಸಾವಿನ ಅನಂತರ ನಾವು ನೆಟ್ಟ ಮರ ಇನ್ನೊಬ್ಬರಿಗೆ ನೆರಳು, ಹೂ, ಹಣ್ಣು ಕೊಡುತ್ತಿದ್ದರೆ, ನಾವು ತೋಡಿದ ಬಾವಿ ಇನ್ನೊಬ್ಬರ ದಾಹ ನೀಗುತ್ತಿದ್ದರೆ, ನಾವು ಹೊತ್ತಿಸಿದ ಜ್ಞಾನದ ಜ್ಯೋತಿ ಮುಂದಿನವರಿಗೆ ದಾರಿ ದೀಪವಾದರೆ, ನಾವು ಮಾಡಿದ ಇತಿಹಾಸ ದಿಂದ ಮುಂದಿನವರು ಪಾಠ ಕಲಿಯು ವಂತಾದರೆ ನಾವು ಭೂಮಿಯ ಮೇಲೆ ಬದುಕಿದ್ದು ಸಾರ್ಥಕ. ಕೆಲವೇ ಕೆಲವು ದಿನ ಈ ಮಣ್ಣಿನಲ್ಲಿ ಜೀವಿಸುವ ಸಣ್ಣ ಎರೆಹುಳ ಕೂಡ ಈ ಮಣ್ಣನ್ನು ಫ‌ಲವತ್ತಾಗಿಸಿ ಸಾಯುತ್ತದೆ. ಆದ್ದರಿಂದ ಎಷ್ಟು ವರ್ಷ ಬದುಕಿದ್ದೆವು ಎನ್ನುವುದಕ್ಕಿಂತ ಬದುಕಿದ್ದಾಗ ಏನು ಮಾಡಿದೆವು ಎನ್ನುವುದೇ ಬಹಳ ಮುಖ್ಯ.ಉದ್ಯಮಿಯೋ, ರಾಜಕಾರ ಣಿಯೋ, ಶ್ರೀಮಂತನೋ ಮಾತ್ರ ಸಮಾಜಕ್ಕೆ ಅಪಾರ ಕೊಡುಗೆ ನೀಡ ಬಹುದು ಎಂಬುದು ತಪ್ಪು ಪರಿಕಲ್ಪನೆ. ಶ್ರೀಮಂತಿಕೆ ಇಲ್ಲದ ಒಬ್ಬ ಸಾಮಾನ್ಯ ವ್ಯಕ್ತಿಯೂ ಕೂಡ ತನ್ನ ಹೃದಯ ಶ್ರೀಮಂತಿಕೆಯಿಂದ ಸಮಾಜ ಸೇವೆಯನ್ನು ಮಾಡಿ ಯಶಸ್ಸು ಗಳಿಸಬಹುದು.

ಇತರರ ನೆಮ್ಮದಿಯನ್ನು ಘಾಸಿಗೊಳಿಸಿ ಸಮಾಜ ಮೆಚ್ಚುವ ಕೆಲಸ ಮಾಡಿ ಜನಪ್ರಿಯರಾಗುವ ಈ ಕಾಲದಲ್ಲಿ
ಸ್ವಂತ ಸೂರಿಲ್ಲದೆ ಕಿತ್ತಳೆ ಹಣ್ಣು ಮಾರಿಕೊಂಡು ಅಕ್ಷರದ ಕನಸು ಕಂಡು ಬಡ ಮಕ್ಕಳ ಶಿಕ್ಷಣಕ್ಕಾಗಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬನಂತವರು ನಮ್ಮೆಲ್ಲರಿಗೂ ಆದರ್ಶರು. ಮತ್ತೊಬ್ಬರ ನೋವನ್ನು ಅರಿತುಕೊಂಡು, ಅವರ ನೋವಿಗೆ ಸ್ಪಂದಿಸಬೇಕು ಎಂಬ ಮನಸ್ಸೊಂದು ಇದ್ದರೆ ಎಂತಹ ದೀನರು ಕೂಡ ಜಗಮೆಚ್ಚುವ ಕೆಲಸ ಕಾರ್ಯ ಗಳನ್ನು ಮಾಡಲು ಸಾಧ್ಯ ಎಂಬುದನ್ನು ಈಗಾಗಲೇ ಹಲವು ಮಂದಿ ನಿರೂಪಿಸಿದ್ದಾರೆ.

ಬಲ ಕೈಯಲ್ಲಿ ಕೊಟ್ಟ ದಾನ ಎಡ ಕೈಗೆ ಗೊತ್ತಾಗಬಾರದು ಎಂಬ ನಾಣ್ಣುಡಿ ಯಂತೆ ತನ್ನ ಸುತ್ತಮುತ್ತಲಿನ ಪರಿಸರದ ಜನರ ಅನುಕೂಲಕ್ಕಾಗಿ ಯಾವುದೇ ಪ್ರತಿಫ‌ಲಾಪೇಕ್ಷೆ ಇಲ್ಲದೆ ಜನ ಸೇವೆಯೇ ಜನಾರ್ದನ ಸೇವೆ ಎಂಬಂತೆ ಸಮಾಜದ ಒಳಿತಿಗಾಗಿ ಕೆಲಸ ಮಾಡಬೇಕು. ಸಂಘ ಜೀವಿಯಾಗಿರುವ ಮಾನವ ಸಮಾಜದಲ್ಲಿ ಸದಾಚಾರ ಉಳ್ಳವನಾಗಿ ಬದುಕಿದಾಗ ಮಾತ್ರ ಜೀವನ ಸಾರ್ಥಕ ಎನಿಸುವುದು.

- ಸುಪ್ರಿಯಾ ಬೈಲೂರು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.