Tomorrow ಮೊಳಹಳ್ಳಿ ಶಿವರಾವ್‌ ಜಯಂತಿ; ಸಹಕಾರ ರಂಗದ ಅಮರ ಚೇತನ


Team Udayavani, Aug 3, 2024, 6:05 AM IST

Tomorrow ಮೊಳಹಳ್ಳಿ ಶಿವರಾವ್‌ ಜಯಂತಿ; ಸಹಕಾರ ರಂಗದ ಅಮರ ಚೇತನ

ಮೊಳಹಳ್ಳಿ ಶಿವರಾವ್‌ ಅವರು ಸಹಕಾರ ಚಳವಳಿಯ ಹರಿಕಾರರು. ಅವರು ಕೈಗೊಂಡ ಸಹಕಾರ ಕ್ಷೇತ್ರದ ಕಾರ್ಯಗಳೆಲ್ಲವೂ ಸಫ‌ಲವಾಗಿ ಸಾವಿರಾರು ಜನರ ಜೀವನಕ್ಕೆ ಆಸರೆಯಾಗಿದೆ. ಸಹಕಾರ ರಂಗದ ಪಿತಾಮಹರಾಗಿ, ಸೇವಾ ಧುರೀಣರಾಗಿ ದಕ್ಷಿಣ ಭಾರತದಲ್ಲೇ ಶಿವರಾವ್‌ ಅವರು ಅತ್ಯಂತ ಸುಪ್ರಸಿದ್ಧರಾಗಿದ್ದರು.

ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ ಸಹಕಾರ ರಂಗದ ಬೆಳವಣಿಗೆಗೆ ಅಹರ್ನಿಶಿ ದುಡಿದ ಮೊಳ ಹಳ್ಳಿ ಶಿವರಾಯರು ತನ್ನ ಸರ್ವಸ್ವವನ್ನು ಈ ರಂಗಕ್ಕೆ ಸಮರ್ಪಿಸಿದವರು. ಸಮಾಜ ಸೇವೆಯನ್ನು ತನ್ನ ಪರಮ ಗುರಿಯನ್ನಾಗಿಸಿಕೊಂಡ ಶಿವರಾಯರು ಜನಸೇವೆಗಾಗಿ ದುಡಿದು ಕಾರ್ಯ ಸಂಪನ್ನರಾಗಿ ದ್ದರು. ಇವರ ಪವಾಡ ಸದೃಶ ಕಾರ್ಯವೈಖರಿ ಯಿಂದ ಜಿಲ್ಲೆಯಲ್ಲಿ ಸಹಕಾರಿ ಚಳವಳಿ ಇಂದು ಬಲವಾಗಿ ಬೇರೂರಿದೆ. ಕಠಿನ ದುಡಿಮೆಯನ್ನೇ ಮೂಲಮಂತ್ರವನ್ನಾಗಿಸಿಕೊಂಡ ಶಿವರಾಯರು ಸಹಕಾರ ಆಂದೋಲನದ ಮೂಲ ಪುರುಷರು.

ರಂಗಪ್ಪಯ್ಯ ಮತ್ತು ಮೂಕಾಂಬಿಕಾ ದಂಪತಿ ಯ ಪುತ್ರನಾಗಿ 1880ರ ಆಗಸ್ಟ್‌ 4ರಂದು ಪುತ್ತೂರಿನಲ್ಲಿ ಜನಿಸಿದ ಮೊಳಹಳ್ಳಿ ಶಿವರಾಯರು, ವಿದ್ಯಾರ್ಥಿ ದೆಸೆಯಲ್ಲಿಯೇ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರು. ಮುಂದೆ ಸಹಕಾರ ಕ್ಷೇತ್ರದ ಜತೆಗೆ ಅನೇಕ ವಿದ್ಯಾಸಂಸ್ಥೆಗಳ ಸ್ಥಾಪನೆಗೆ ಕಾರಣಕರ್ತರಾದ ತಮ್ಮ ಪ್ರಾಮಾಣಿಕ, ದಕ್ಷ ಸೇವೆಯನ್ನು ಸಲ್ಲಿಸಿ ಸಾಮಾಜಿಕ ಪರಿವರ್ತ ನೆಯ ಹರಿಕಾರರೆನಿಸಿಕೊಂಡರು.

ಸಹಕಾರ ಸಂಸ್ಥಾಪಕ: ನ್ಯಾಯಾಧೀಶರಾಗಿದ್ದ ಶಿವರಾಯರು ಸಹಕಾರ ಆಂದೋಲನವನ್ನು ಕೈಗೆತ್ತಿಕೊಂಡಾಗ ತನ್ನ ವೃತ್ತಿಯನ್ನೇ ಮರೆತು ಕಾರ್ಯೋನ್ಮುಖರಾದವರು. ಪ್ರತಿಭೆ, ಪಾಂಡಿತ್ಯ, ಸಂಘಟನ ಚಾತುರ್ಯ, ಆಡಳಿತ ಕೌಶಲ, ಪ್ರಗತಿಪರ ಮನೋಧರ್ಮ, ಪರೋಪಕಾರಿ ಬುದ್ಧಿ, ಬಡವರ ಸೇವೆ, ಕರ್ತವ್ಯ ನಿಷ್ಠೆಯಲ್ಲಿ ಎಲ್ಲಕ್ಕೂ ಮಿಗಿಲಾಗಿ ಸಹಕಾರಿ ತತ್ತದಲ್ಲಿ ಅವರು ಇಟ್ಟಿದ್ದ ಅಚಲ ಮತ್ತು ಅಪಾರವಾದ ವಿಶ್ವಾಸವೇ ಅವರನ್ನು ಸಹಕಾರ ಕ್ಷೇತ್ರದ ಮಹಾನ್‌ ಚೇತನವನ್ನಾಗಿಸಿದವು.

ಭಾರತದಲ್ಲಿ ಸಹಕಾರ ಅಂದೋಲನವು 1904ರ ಮಾರ್ಚ್‌-23ರಂದು ಕಾಯ್ದೆ ರೂಪ ದಲ್ಲಿ ಜಾರಿಗೆ ಬಂದಾಗ ಇದರ ಪ್ರಭಾವವು ದಕ್ಷಿಣ ಕನ್ನಡ ಜಿಲ್ಲೆಗೂ ಪಸರಿಸಿತು. ಸಹಕಾರಿ ಕಾಯ್ದೆಯ ಮಹತ್ವವನ್ನು ಮನಗಂಡ ಶಿವರಾಯರು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಈ ಕಾಯ್ದೆಯು ಸಹಕಾರಿಯಾಗುವುದೆಂದು ತಿಳಿದುಕೊಂಡು, ಸಹಕಾರ ಸಂಘಗಳ ಸಂಘಟನೆಗೆ ಅವರು ಮುಂದಾದರು.

ಶಿವರಾಯರು ಮೊತ್ತ ಮೊದಲಿಗೆ ಹುಟ್ಟೂರಾದ ಪುತ್ತೂರಿನಲ್ಲಿ ಸಹಕಾರಿ ಕ್ರೆಡಿಟ್‌ ಸೊಸೈಟಿಯನ್ನು 1909ರಲ್ಲಿ ಸ್ಥಾಪಿಸಿದರು. ಸಹಕಾರ ಚಳವಳಿಯನ್ನು ಇನ್ನಷ್ಟು ಫ‌ಲಪ್ರದ ವನ್ನಾಗಿಸುವ ಇರಾದೆಯಿಂದ ಶಿವರಾಯರು ಹಳ್ಳಿ ಹಳ್ಳಿಗಳಿಗೂ ಸಂಚರಿಸಿ ಸಹಕಾರ ತತ್ತದ ಮಹತ್ವವನ್ನು ವಿವರಿಸಿ ಸಹಕಾರಿ ಸಂಘಗಳನ್ನು ಸ್ಥಾಪಿಸಿದರು.

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸ್ಥಾಪನೆ: ಸ್ಥಾಪನೆಗೊಂಡ ಸಹಕಾರ ಸಂಘಗಳಿಗೆ ಆರ್ಥಿಕ ನೆರವನ್ನು ನೀಡುವ ಉದ್ದೇಶದಿಂದ ಒಂದು ಮಾತೃಸಂಸ್ಥೆಯ ಆವಶ್ಯಕತೆ ಇರುವುದನ್ನು ಮನ ಗಂಡ ಶಿವರಾಯರು 1914ರಲ್ಲಿ ಪುತ್ತೂರಿನಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ್ನು ಸ್ಥಾಪಿಸಿದರು, ಮುಂದೆ 1925ರಲ್ಲಿ ಜನತೆಯ ಅನುಕೂಲ ತೆಗೋಸ್ಕರ ಈ ಬ್ಯಾಂಕ್‌ನ್ನು ಜಿಲ್ಲಾ ಕೇಂದ್ರವಾದ ಮಂಗಳೂರಿಗೆ ಸ್ಥಳಾಂತರಿಸಲಾಯಿತು. ಶಿವ ರಾಯರಿಂದ ಸ್ಥಾಪನೆಗೊಂಡ ಈ ಬ್ಯಾಂಕ್‌ ಇಂದು 110 ವರ್ಷಗಳನ್ನು ಪೂರೈಸಿ ಸಹಕಾರ ಕ್ಷೇತ್ರದಲ್ಲಿ ಅಮೋಘ ಸಾಧನೆಯ ಮೂಲಕ ಗುರುತಿಸಿ ಕೊಂಡಿದೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಶಿವರಾಯರ ಮಹತ್ವಾಕಾಂಕ್ಷೆಯ ಸಹಕಾರ ಕ್ಷೇತ್ರವನ್ನು ಈ ಬ್ಯಾಂಕ್‌ ಪ್ರಜ್ವಲಿಸುವಂತೆ ಮಾಡಿದೆ.

ಶಿವರಾಯರು ತಮ್ಮ 87 ವರ್ಷಗಳ ಜೀವಿತ ಅವಧಿಯಲ್ಲಿ 58 ವರ್ಷಗಳ ಕಾಲವನ್ನು ಸಹಕಾರ ರಂಗಕ್ಕೆ ಮೀಸಲಿಸಿದರು. ಮೊಳಹಳ್ಳಿ ಶಿವರಾ ಯರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹ ಕಾರಿ ಆಂದೋಲನದಲ್ಲಿ ಮಾಡಿದ ಸೇವೆ ಶ್ಲಾಘನೀಯ ಹಾಗೂ ಅಪ್ರತಿಮವಾದುದು. ಸಹಕಾರ ಆಂದೋಲನದ ಪೀಳಿಗೆಯೊಂದಕ್ಕೆ ಉಸಿರನ್ನು ನೀಡಿ ಜೀವನವಿಡೀ “ಸಹಕಾರ’ ಮಂತ್ರವನ್ನು ಜಪಿಸಿದ ಶಿವರಾಯರು 1967ರ ಜುಲೈ 4 ರಂದು ಕೀರ್ತಿಶೇಷರಾದರು. ಅವರ ಅವಿಸ್ಮರಣೀಯ ನೆನಪು ಸಹಕಾರಿಗಳೆಲ್ಲರಲ್ಲಿ ಸದಾ ಅಮರ.

-ಎಸ್‌.ಜಗದೀಶ್ಚಂದ್ರ ಅಂಚನ್‌, ಸೂಟರ್‌ಪೇಟೆ

ಟಾಪ್ ನ್ಯೂಸ್

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

Anantha-Padnabha-Swamy

Anant Chaturdashi; ಅನಂತವ್ರತ ಅನಂತಕಲ್ಪನೆ…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.