ನಾರಾಯಣ ಗುರು ತೋರಿದ ಕನ್ನಡಿಯೊಳಗಿನ ಸತ್ಯ 

ಇಂದು ಜಗತ್ತು ರೋಗಗ್ರಸ್ತವಾಗಿರುವ ಸಂದರ್ಭದಲ್ಲಿ ಅವರ ನೆನಪು ಮಾತ್ರ ನಮಗೆ ಸಾಲದು.

Team Udayavani, Aug 23, 2021, 2:20 PM IST

ನಾರಾಯಣ ಗುರು ತೋರಿದ ಕನ್ನಡಿಯೊಳಗಿನ ಸತ್ಯ 

ಇಂದಿಗೆ 93 ವರ್ಷಗಳ ಹಿಂದೆ 1928ನೇ ಇಸವಿ ಸೆಪ್ಟಂಬರ್‌ 20 ತಾರೀಕಿನಂದು ತುಳುವರ ಕನ್ಯ ತಿಂಗಳ 5ರಂದು ಕೇರಳದ ವರ್ಕುಲದ ಶಿವಗಿರಿಯಲ್ಲಿ ಒಂದು ಸೊಡರು ಆರುತ್ತಾ ಬೆಳಗಿತು. ಒಂದೂವರೆ ಶತಮಾನದ ಗತವನ್ನು ತಿರುಗಿ ನೋಡಿದರೆ ನಮ್ಮ ಸಮಾಜವನ್ನು ಕೊಂದು ಹಸಿ ತಿನ್ನುವ ಪಶುಬುದ್ಧಿ ತೋರಿಸುತ್ತಿದ್ದ ಮೇಲು ಕೀಳು ಜಾತಿ ಭೇದದ ರಕ್ಕಸ ಬುದ್ಧಿಯನ್ನು ಮುಟ್ಟದೆ ಗುದ್ದಿ ದೇವರು ಧರ್ಮದ ಬೆಳಕು ಕಾಣದೆ ಕತ್ತಲೆಯಲ್ಲಿದ್ದ ಜನರಿಗೆ ನಿಮಗೂ ಒಂದು ದೇವರು ಬೇಕು, ಧರ್ಮ ಬೇಕು. ನೀವೂ ಮನುಷ್ಯರಂತೆ ಬದುಕಬೇಕು ಎಂದು ಮೌನ ಕ್ರಾಂತಿಯ ಮೂಲಕ ಹೋರಾಡಿ ಅವರ ಬದುಕಿಗೆ ನಿಜ ಜೀವ ಕೊಟ್ಟ ನಾರಾಯಣ ಗುರುಗಳು ಕಾಯದಿಂದ ದೂರವಾಗಿ ಮಾಯ ಸೇರಿದ ದಿನ ಅದು.

ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಅವರ ಸಮಾಧಿಯ ದಿನವನ್ನು ಯಾಕೆ ನೆನಪು ಮಾಡಿದೆ ಎಂದರೆ ಆದಿ ಮತ್ತು ಸಮಾಧಿಗೆ ಹತ್ತಿರದ ಸಂಬಂಧವಿದೆ. ಹುಟ್ಟು ಮತ್ತು ಸಾವು ಒಂದೇ ನಾಣ್ಯದ ಎರಡು ಮುಖಗಳು. ಸಮಾಜ ದಲ್ಲಿ ನಿಜವಾದ ಸಂತ ಸತ್ವದ ಬದುಕು ಸಾರ್ಥಕ ಆಗುವುದು ಅದು ಕಾಲಗರ್ಭದಲ್ಲಿ ಸೇರಿಹೋದ ಮೇಲೆ. ಈ ಮಾತಿಗೆ ನಾರಾಯಣ ಗುರುಗಳೇ ಸಾಕ್ಷಿ.

“ಕೊಲುವವನೆ ಮಾದಿಗ ಹೊಲಸ ತಿಂಬವನೆ ಹೊಲೆಯ’ ಎಂಬ ಶರಣರ ವಚನದಂತೆ ಜಾತಿ ಹುಟ್ಟಿನಿಂದ ಬರುವುದಿಲ್ಲ. ಬದುಕಿನ ನೀತಿಯಿಂದ ಬರುತ್ತದೆ. ಸಂಸ್ಕಾರವೇ ಸಂಸ್ಕೃತಿಯಾಗಿ ಪರಿವರ್ತನೆ ಆಗುವಂತೆ ಆಚಾರ, ವಿಚಾರ, ಜ್ಞಾನದ ಪೊರೆಯೊಳ ಗಡೆ ನಿಜ ಜಾತಿ ಅಡಗಿದೆ ಎನ್ನುವುದನ್ನು ನಾರಾಯಣ ಗುರುಗಳ ಬದುಕು, ಬರಹ, ಸಾಧನೆ, ಬೋಧನೆ ಲೋಕಮುಖಕ್ಕೆ ತೋರಿಸಿಕೊಟ್ಟಿದೆ.

19ನೇ ಶತಮಾನದ ಸಂದರ್ಭದಲ್ಲಿ ಮನುಷ್ಯ ಧರ್ಮವನ್ನು ಹುಡುಕುತ್ತಾ “ಮನುಷ್ಯರನ್ನು ಮನುಷ್ಯ ರಂತೆ ಬದುಕಲು ಬಿಡುವ ಧರ್ಮವೇ ನಿಜವಾದ ಧರ್ಮ. ಎಲ್ಲ ಧರ್ಮಗಳ ಸಾರ ದಯೆ, ಕರುಣೆ, ಕ್ಷಮೆ, ಮೈತ್ರಿ. ಇವೆಲ್ಲದರ ಸಂಗಮ ಶಕ್ತಿ ಮನುಷ್ಯ ಹೃದಯ ದಲ್ಲಿದೆ. ಮನುಷ್ಯತ್ವಕ್ಕಿಂತ ಮಿಗಿಲಾದ ಧರ್ಮವಿಲ್ಲ. ದೇವರಿಗಾಗಿ, ಧರ್ಮಕ್ಕಾಗಿ ಹೋರಾಟ ಬಲಿದಾನದ ಅಗತ್ಯವಿಲ್ಲ. ನಮ್ಮ ಶಿವನನ್ನು ನಾವು ಪೂಜಿಸುವ’ ಎಂದು ನದಿಯ ಕಲ್ಲನ್ನು ತಂದು ಕಣ್ಣೀರಿನ ಅಭಿಷೇಕದ ಮೂಲಕ ಅರವಿಪುರದಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಮಾಡಿದರು. ಧಾರ್ಮಿಕ ಸ್ವಾತಂತ್ರ್ಯ ನೀಡಿದರು.

ನಾರಾಯಣ ಗುರುಗಳು ಸಂಸ್ಕೃತ ಭಾಷೆಯಲ್ಲಿ ಬರೆದ “ಮಾಯಾದರ್ಶನಂ’ ಎಂಬ ಗ್ರಂಥದಲ್ಲಿ ಹೇಳು ವಂತೆ “ಹಗ್ಗದೊಳ್‌ ಸರ್ಪಮಂ ಕಾಣಲ್‌ ಪೋದೊಡೆ ಸರ್ಪಮಿಲ್ಲ ಬರಿ ಹಗ್ಗವಿರ್ಪುದುಂ ಎಂದು ಅರಿವಪ್ಪ ತೆರದೊಳ್‌ ಆತ್ಮದೊಳ್‌ ಕಾಂಬ ಜಡಮಿದು ಸತ್ಯವಲ್ಲ ಆತ್ಮವದು ಸತ್ಯ ಎಂದು ಅದಾವ ಶಕ್ತಿ ತೋರ್ಪುದೋ ಆ ಶಕ್ತಿಯದು ವಿದ್ಯೆಯೆಂದು ಅರಿಯಲಕ್ಕುಂ’. ಆತ್ಮಶಕ್ತಿ ಎಂಬುದು ವಿದ್ಯೆಯ ಇನ್ನೊಂದು ರೂಪ. ಆತ್ಮವಿಲ್ಲದ ವಿದ್ಯೆ ಸತ್ಯವಲ್ಲ. ಆ ಶಕ್ತಿಯನ್ನು ತಿಳಿದುಕೊಳ್ಳುವ ಸಾಮರ್ಥ್ಯವಿದ್ದರೆ ನಮ್ಮ ದೇಶದ ಅಧ್ಯಾತ್ಮ ಶಕ್ತಿಯ ಮೂಲಕ ಆಗಬೇಕಾದ ಅದೆಷ್ಟೋ ಸಂತ ಸತ್ವಗಳು ಒಂದು ಧರ್ಮದ, ಜಾತಿಯ, ವರ್ಣದ, ಮತದ, ಸಮುದಾಯದ ಬಂಧನದಲ್ಲಿ ಸಿಲುಕಿ ಆತ್ಮಶಕ್ತಿಯ ವಿಶ್ವರೂಪವನ್ನು ತಿಳಿಯಲಾರದೆ ವ್ಯರ್ಥವಾಗುತ್ತಿದೆ.

ನಾರಾಯಣ ಗುರುಗಳ ಬದುಕು, ಬರಹ, ತತ್ತ್ವ ಚಿಂತನೆಗಳು ಸೂರ್ಯನ ಬೆಳಕಿನಂತೆ. ಅದಕ್ಕೆ ಜಾತಿ, ಮತ, ಧರ್ಮ, ವರ್ಣದ ಗೋಡೆಯಿಲ್ಲ. ಈ ಭೂಮಿಗೆ ಬಂದ ಮನುಷ್ಯನ ವ್ಯಕ್ತಿತ್ವ ಗಟ್ಟಿಯಾಗುವುದು, ಪರಿಪೂರ್ಣವಾಗುವುದು ಅದು ಶ್ರೀಮಂತಿಕೆಯಿಂದಲ್ಲ. ಅಹಂಕಾರ, ಅಧಿಕಾರ, ಪರಂಪರೆಯ ಅಸ್ವಿತ್ವದಿಂದಲ್ಲ. ನೈತಿಕತೆಯಿಂದ ಕೂಡಿದ ಸ್ವತ್ಛ ಚರಿತ್ರೆಯೇ ನಿಜವಾದ ಶ್ರೀಮಂತಿಕೆ ಎಂಬ ಲೋಕ ಸತ್ಯವನ್ನು “ವಿದ್ಯಾವಂತರಾಗಿ ವಿದ್ಯೆಯಿಂದ ಸ್ವತಂತ್ರರಾಗಿ’ ಎಂಬ ಸರಳ ವಾಕ್ಯದ ಮೂಲಕ ತಿಳಿಹೇಳಿದ್ದಾರೆ.

ಅದ್ವೈತ ತಣ್ತೀವನ್ನು ಪ್ರತಿಪಾದಿಸುವ ಗುರುಗಳು “ಅಸತ್ಯ ದರ್ಶನ’ ಎಂಬ ಸಂಸ್ಕೃತ ಕೃತಿಯಲ್ಲಿ ಈ ಲೋಕ ದಲ್ಲಿ ಸತ್ಯ ಎಂಬುದು ಒಂದೇ, ಎರಡಿಲ್ಲ. ಪಂಚೇಂದ್ರಿಯಗಳ ಬಲೆಯಲ್ಲಿ ಸಿಲುಕಿ ಮನುಷ್ಯ ಜೀವಕ್ಕೆ ಅಸತ್ಯವೂ ಸತ್ಯದಂತೆ ಕಾಣುತ್ತದೆ. ಗುಡ್ಡದ ಸಾಮಾನ್ಯ ಕಲ್ಲೊಂದು ಶಿಲ್ಪಿಯ ಹೃದಯದ ಮೂಲೆ ಯಲ್ಲಿದ್ದ ದೇವರ ಕಲ್ಪನೆಯ ಮೂಲಕ ಕಲೆಯ ಬಲೆ ಯಲ್ಲಿ ಒಂದೊಂದು ಹೊಡೆತಕ್ಕೆ ವಿವಿಧ ದೇವರ ಮೂರ್ತಿಗಳಾಗುತ್ತದೆ. “ದೇವರು’ ಎನ್ನುವುದು ಶಿಲ್ಪಿ ಯೊಳಗಿನ ಆತ್ಮದಲ್ಲಿರುವ ರೂಪ. ಒಬ್ಬನೇ ದೇವರೆಂಬ ಈ ಸತ್ಯವನ್ನು ಹೃದಯಕ್ಕೆ ಮುಟ್ಟುವಂತೆ ಹೇಳಿದ ನಾರಾಯಣ ಗುರುಗಳು ಕೃಷಿ  ಮೂಲದ, ವೈದ್ಯ ಮೂಲದ ಪಂಡಿತ ಪರಂಪರೆಯ ತಾಯಿ ಬೇರಿನಿಂದ ಚಿಗುರಿದವರು. ಶ್ರಾವಣ ಮಾಸದ ಓಣಂ ಹಬ್ಬದ ದಿನ ಶತಭಿಷ ನಕ್ಷತ್ರದಲ್ಲಿ ಕೇರಳದ ತಿರುವನಂತಪುರದ ಚೆಂಬಿಳಂತಿ ಗ್ರಾಮದಲ್ಲಿ ಈಳವ ಜನಾಂಗಕ್ಕೆ ಸೇರಿದ ಮಾದಲ್‌ ಆಶಾನ್‌ ಮತ್ತು ಕುಟ್ಟಿ ಅಮ್ಮಾಳ್‌ ದಂಪತಿಗೆ ಮಗನಾಗಿ ಹುಟ್ಟಿದ ನಾಣಿ, 2,500 ವರ್ಷಗಳ ಹಿಂದೆ ಹುಟ್ಟಿದ ಸಿದ್ಧಾರ್ಥ ಲೋಕದ ಕಣ್ಣೀರ ಸ್ನಾನದಿಂದ ಮಡಿಯಾಗಿ ಬುದ್ಧನಾದಂತೆ ಬಡವರ ಹಸಿವೆ, ದುಃಖ, ಅವಮಾನಗಳನ್ನು ಅನುಭವಿಸಿ ನಾರಾಯಣ ಗುರುವೆನಿಸಿದರು.

ಇಂದು ಕೊರೊನಾ ಎಂಬ ಮಹಾಮಾರಿಯಿಂದ ಪ್ರಪಂಚ ತತ್ತರಿಸುತ್ತಿರುವ ಈ ಸಂದರ್ಭದಲ್ಲಿ ನಾರಾ ಯಣ ಗುರುಗಳ ಪ್ರಕೃತಿ ತಣ್ತೀ, ಬೈದ್ಯ ಸತ್ವ ನಮಗೆ ನೆನಪಾಗಬೇಕಾಗಿದೆ. ಒಬ್ಬರ ಮುಖವನ್ನು ಇನ್ನೊಬ್ಬ ನೋಡಲಾರದಂತೆ ಮುಖ ಮುಚ್ಚಿಕೊಂಡು ಬದುಕುವ ಕಾಲದಲ್ಲಿ ಪ್ರಕೃತಿಯೇ ನಮ್ಮ ನಿಜ ಬದುಕು ಎಂದು ಹೇಳಿದ ನಾರಾಯಣ ಗುರುಗಳ ಮಾತುಗಳು ಅಮೃತ ಸದೃಶವಾಗುತ್ತವೆ. ಎಂತಹ ಜ್ಞಾನಿಯಾಗಲೀ ವಿಜ್ಞಾನಿ ಯಾಗಲೀ ಸಂತನಾಗಲೀ ಸಂಸಾರಿಯಾಗಲೀ ಪಂಚ ಭೂತಗಳ ತಣ್ತೀವನ್ನು ಮೀರಿ ಬದುಕಲು ಸಾಧ್ಯವಿಲ್ಲ. ಸಂಸ್ಕೃತ, ಮಲೆಯಾಳ, ತಮಿಳು ಭಾಷೆಗಳಲ್ಲಿ 79 ಕೃತಿಗಳನ್ನು ರಚಿಸಿದ ನಾರಾಯಣ ಗುರುಗಳು ಎಲ್ಲ ಕಡೆಯಲ್ಲೂ ಹೇಳಿರುವುದು ಹಸಿವು, ಬಡತನ, ಸ್ವಾಭಿಮಾನ, ಸಮಾನತೆಯ ಬಗ್ಗೆ. ಅವರ ಬದುಕು ಪವಾಡವಲ್ಲ, ಪರಿಶ್ರಮ. ಸ್ವಾಮಿ ಎಂದುಕೊಂಡು ಪೀಠದಲ್ಲಿ ಕೂರಲಿಲ್ಲ, ತಲೆ ಮೇಲೆ ಕಿರೀಟ ಇಡಲಿಲ್ಲ. ಸಮಾಜದಲ್ಲಿ ತಲೆಯೆತ್ತಿ ನಡೆಯಲಾರದವನಿಗೆ ಸಾಮಾಜಿಕ ನ್ಯಾಯ ಕೊಡುವುದೇ ನನಗೆ ಪೀಠ. ಅವರ ಬದುಕಿನಲ್ಲಿ ಬೆಳಕು ಕಂಡು ಮುಖದಲ್ಲಿ ನಗುವನ್ನು ಕಾಣುವುದೇ ನನಗೆ ಕಿರೀಟ ಎಂದು ಕನ್ನಡಿಯಲ್ಲಿ ನಿಮ್ಮ ನಿಮ್ಮ ಮುಖವನ್ನು ನೋಡಿಕೊಳ್ಳಿ ಎಂದರು. ನಾವು ದೇವರನ್ನು ಕಾಣಬೇಕಾದುದು ಮೂರ್ತಿಯಲ್ಲಿ ಅಲ್ಲ, ದೇವಸ್ಥಾನದಲ್ಲಿ ಅಲ್ಲ. ಭಜನೆ, ಬಲಿ, ಮೆರವಣಿಗೆಗಳಲ್ಲಿ ಅಲ್ಲ. ನಮ್ಮ ಒಳಗಿನ ಗುಡಿಯನ್ನು ಅರಿತುಕೊಳ್ಳುವುದ ರಲ್ಲಿ. ನಮ್ಮ ವಿದ್ಯೆ, ಸಂಘಟನೆ ನಮ್ಮ ಉದ್ಧಾರಕ್ಕೆ, ಸಮಾಜದ ಒಳಿತಿಗೆ. ಇನ್ನೊಬ್ಬರಿಗೆ ನೋವು ಕೊಡುವುದ ಕ್ಕಲ್ಲ. ಶಾಲೆಗಳು ವಿದ್ಯಾಮಂದಿರಗಳಾಗಬೇಕು. ಜ್ಞಾನಕ್ಕೆ ಜಾತಿಯಿಲ್ಲ. ವಿದ್ಯೆಯಿಂದ ಮಾತ್ರ ಉದ್ಧಾರ, ಸಮಾನತೆ ಸಾಧ್ಯ ಎಂದರು. 1916ರಲ್ಲಿ ರಮಣ ಮಹರ್ಷಿಗಳು, 1922ರಲ್ಲಿ ರವೀಂದ್ರನಾಥ ಠಾಗೋರರು, 1925ರಲ್ಲಿ ಮಹಾತ್ಮಾ ಗಾಂಧೀಜಿಯವರಂತಹ ಲೋಕ ಚಿಂತಕರು ಗುರುಗಳನ್ನು ಕಂಡು ಅವರ ತಣ್ತೀಗಳನ್ನು ಮನಗಾಣಿಸಿ ಕೊಂಡರು. ಅಂಬೇಡ್ಕರ್‌ರಂತಹ ಮೇಧಾವಿಗಳು ಅವರ ಸಂದೇಶದ ಸತ್ವವನ್ನು ಸಂವಿಧಾನದಲ್ಲಿ ಅಳ ವಡಿಸಿದರು. ವಿವೇಕಾನಂದರಂತಹ ಯೋಗಿಗಳು, ತ್ಯಾಗಿಗಳು ನಾರಾಯಣ ಗುರುಗಳ ಸೇವೆಗೆ ತಲೆದೂಗಿ ಅವರನ್ನು “ಲೋಕ ಗುರು’ ಎಂದು ಕರೆದರು.

ಇಂದು ಜಗತ್ತು ರೋಗಗ್ರಸ್ತವಾಗಿರುವ ಸಂದರ್ಭದಲ್ಲಿ ಅವರ ನೆನಪು ಮಾತ್ರ ನಮಗೆ ಸಾಲದು. ಅವರ ಸಂದೇಶಗಳನ್ನು ಮುಂದಿನ ಜನಾಂಗಕ್ಕೆ ಸಾರುವ ಕೆಲಸ ಆಗಬೇಕು. ಅವರು ಹೇಳಿದ ಮನುಷ್ಯ ಧರ್ಮ ಬೇಕು. ನಮ್ಮ ವೈಭವಕ್ಕೆ, ಉತ್ಸವಕ್ಕೆ, ಮನಸ್ಸು-ಮನಸ್ಸುಗಳನ್ನು ಮುರಿದು ಕಟ್ಟುವ ದೇವಸ್ಥಾನಗಳು, ಮಠ ಮಂದಿರ ಗಳು ಬೇಡ. ಸರ್ವ ಧರ್ಮದ ಜನರನ್ನು ಒಂದು ಮಾಡುವ ಬ್ರಹ್ಮಜ್ಞಾನ ಬೇಕಾಗಿದೆ. ಬನ್ನಿ, ನಾರಾಯಣ ಗುರುಗಳು ಹೇಳಿದ ಕನ್ನಡಿ ಯಲ್ಲಿ ನೋಡುವ. ಹೃದಯ ದೇಗುಲಕ್ಕೆ ಬ್ರಹ್ಮಕಲಶ ಮಾಡಿ ಕೊಳ್ಳುವ.

 

ಡಾ| ಗಣೇಶ ಅಮೀನ್‌ ಸಂಕಮಾರ್‌

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

31 ವರ್ಷದ ಲಾರೆನ್ಸ್‌ ಬಿಷ್ಣೋಯ್‌ ಪಾತಕಲೋಕಕ್ಕೆ ಹೊಸ ಎಂಟ್ರಿ; ಮುಂಬಯಿಗೆ ಹೊಸ ಡಾನ್‌!

31 ವರ್ಷದ ಲಾರೆನ್ಸ್‌ ಬಿಷ್ಣೋಯ್‌ ಪಾತಕಲೋಕಕ್ಕೆ ಹೊಸ ಎಂಟ್ರಿ; ಮುಂಬಯಿಗೆ ಹೊಸ ಡಾನ್‌!

ನಾನೂ ಸೀನಿಯರ್‌ ಲೀಡರ್‌, ರಾಜ್ಯಕ್ಕೆ ದಲಿತ ಸಿಎಂ ಪ್ರಸ್ತಾವ ಬಂದರೆ ಮುಂಚೂಣಿಯಲ್ಲಿರುವೆ

ನಾನೂ ಸೀನಿಯರ್‌ ಲೀಡರ್‌, ರಾಜ್ಯಕ್ಕೆ ದಲಿತ ಸಿಎಂ ಪ್ರಸ್ತಾವ ಬಂದರೆ ಮುಂಚೂಣಿಯಲ್ಲಿರುವೆ

ಚುನಾವಣೆ ಗೆಲ್ಲುವ ಅಸ್ತ್ರವಾದ ಉಚಿತ ಕೊಡುಗೆ

Election: ಗೆಲ್ಲುವ ಅಸ್ತ್ರವಾದ ಉಚಿತ ಕೊಡುಗೆ

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.