ಬೆಂಗಳೂರು- ಚೆನ್ನೈ ಸಾರಿಗೆಯ ಹೊಸ ಭಾಷ್ಯ ಎಕ್ಸ್‌ಪ್ರೆಸ್‌ ವೇ!


Team Udayavani, May 26, 2022, 7:10 AM IST

ಬೆಂಗಳೂರು- ಚೆನ್ನೈ ಸಾರಿಗೆಯ ಹೊಸ ಭಾಷ್ಯ ಎಕ್ಸ್‌ಪ್ರೆಸ್‌ ವೇ!

ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಒಂದು ದಿನದ ಭೇಟಿಗಾಗಿ ತಮಿಳುನಾಡು ರಾಜಧಾನಿ ಚೆನ್ನೈ ಪ್ರವಾಸ ಕೈಗೊಳ್ಳಲಿದ್ದು, ಆ ಸಂದರ್ಭದಲ್ಲಿ ನಾನಾ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅವುಗಳಲ್ಲಿ ಚೆನ್ನೈ- ಬೆಂಗಳೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಯೋಜನೆಯ ಶಿಲಾನ್ಯಾಸವೂ ಒಂದು. ಈ ಯೋಜನೆಗಳಲ್ಲಿ ಕರ್ನಾಟಕಕ್ಕೆ ಉಪಯೋಗವಾಗುವ ಮತ್ತೊಂದು ಯೋಜನೆಯೆಂದರೆ ಅದು 271 ಕಿ.ಮೀ. ಉದ್ದದ ತಿರುವಳ್ಳೂರ್‌- ಬೆಂಗಳೂರು ಇಟಿಬಿಪಿಎನ್‌ಎಂಟಿ ಅನಿಲ ಪೈಪ್‌ಲೈನ್‌ ನಿರ್ಮಾಣ ಯೋಜನೆ.

ಎಕ್ಸ್‌ಪ್ರೆಸ್‌ ಯೋಜನೆಯ ಹೈಲೈಟ್ಸ್‌
ಇದು 262 ಕಿ.ಮೀ. ಉದ್ದದ ರಸ್ತೆ ನಿರ್ಮಾಣ ಯೋಜನೆ. ಒಟ್ಟು 14,870 ಕೋಟಿ ರೂ. ವೆಚ್ಚದಲ್ಲಿ ಇದು ನಿರ್ಮಾಣವಾಗಲಿದೆ. ಈ ಎಕ್ಸ್‌ಪ್ರೆಸ್‌ ವೇಯು ಮೂರು ರಾಜ್ಯಗಳಲ್ಲಿ – ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದ ಮೂಲಕ ಹಾದು ಹೋಗುತ್ತದೆ. ಕರ್ನಾಟಕದಲ್ಲಿ ಕೋಲಾರ, ಆಂಧ್ರದಲ್ಲಿ ಪಾಲಾಮರ್‌, ತಮಿಳುನಾಡಿನಲ್ಲಿ ಶ್ರೀಪೆರಂಬದೂರಿನ ಮೂಲಕ ಇದು ಹಾದು ಹೋಗುತ್ತದೆ.

ವಿನ್ಯಾಸ ಹೇಗೆ?
ಇದು ಚತುಷ್ಪಥ ಹೆದ್ದಾರಿಯಾಗಿದ್ದು ವ್ಯಾಪಕ ಪ್ರವೇಶ- ನಿಯಂತ್ರಿತ ಹೆದ್ದಾರಿ. ಭವಿಷ್ಯದಲ್ಲಿ ಅಗತ್ಯಕ್ಕೆ ತಕ್ಕಂತೆ ಇದರ ಅಗಲವನ್ನು ವಿಸ್ತರಿಸಬಹುದಾಗಿದ್ದು, ಎಂಟು ಲೇನ್‌ಗಳ (ಅಷ್ಟ ಪಥ) ಹೆದ್ದಾರಿಯನ್ನಾಗಿಯೂ ಪರಿವರ್ತಿಸಬಹುದಾಗಿದೆ.

ಉಪಯೋಗವೇನು?
ಇದರ ಬಹುಮುಖ್ಯ ಉಪಯೋಗ, ಬೆಂಗಳೂರು- ಚೆನ್ನೈ ನಡುವಿನ ಪ್ರಮಾಣದ ಅವಧಿ ಗಣನೀಯವಾಗಿ ತಗ್ಗುವುದು. ಸದ್ಯಕ್ಕೆ ಬೆಂಗಳೂರಿನಿಂದ ಚೆನ್ನೈಗೆ ಹೋಗಲು 7 ಗಂಟೆ‌ ಅವಧಿ ಬೇಕಾಗುತ್ತದೆ. ಆದರೆ ಈ ಎಕ್ಸ್‌ಪ್ರೆಸ್‌ ವೇ ಸಿದ್ಧವಾದ ಅನಂತರ ಈ ಪ್ರಯಾಣದ ಅವಧಿ ಅರ್ಧಕ್ಕೆ ಅಂದರೆ ಸುಮಾರು ಮೂರೂವರೆ ಗಂಟೆಗೆ ಇಳಿಯಲಿದೆ.

ಇತರ ವಿಶೇಷತೆಗಳು
ಈ ಎಕ್ಸ್‌ಪ್ರೆಸ್‌ ವೇಯಲ್ಲಿ ಇಂಟರ್‌ ಚೇಂಜಿಂಗ್‌ಗಾಗಿ (ಯು ಟರ್ನ್ ಗಾಗಿ) ಮೂರು ಕಡೆ ಮಾತ್ರ ಅವಕಾಶ ಕೊಡಲಾಗಿದೆ. ಪ್ರಯಾಣಿಕರ ಸುರಕ್ಷತೆಗೆ ಅನುಗುಣವಾಗಿ ಈ ಎಕ್ಸ್‌ಪ್ರೆಸ್‌ ವೇನಲ್ಲಿ ಟ್ರಾಫಿಕ್‌ ಸೇಫ್ಟಿ ಡಿವೈಸಸ್‌ ಅಳವಡಿಸಲಾಗಿದೆ.

ಮಹತ್ವದ ಅನಿಲ
ಪೈಪ್‌ಲೈನ್‌ ಯೋಜನೆ
ತಿರುವಳ್ಳೂರ್‌- ಬೆಂಗಳೂರು ನಡುವಿನ 217 ಕಿ.ಮೀ. ದೂರದ ಎಟಿಬಿಪಿಎನ್‌ಎಂಪಿಟಿ ಅನಿಲ ಪೈಪ್‌ಲೈನ್‌ ಯೋಜನೆಯು ಪ್ರಧಾನಿ ಅವರಿಂದ ಉದ್ಘಾಟನೆಗೊಳ್ಳಲಿದೆ. 910 ಕೋಟಿ ರೂ. ವೆಚ್ಚ. ಎರಡೂ ಯೋಜನೆಗಳಿಂದ ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶ ನಡುವೆ ನೈಸರ್ಗಿಕ ಅನಿಲ ಯೋಜನೆ ಪೂರೈಕೆ ಸುಗಮವಾಗಲಿದೆ. ತಮಿಳುನಾಡಿನ ಆನೆಗಳ ಸಂರಕ್ಷಿತಾರಣ್ಯವಾದ ಕೌಂಡಿನ್ಯ ವನ್ಯಜೀವಿ ಸಂರಕ್ಷಣಾರಣ್ಯದ ಪಾಲಮಾರ್‌ ಅರಣ್ಯದ 4.6 ಹೆಕ್ಟೇರ್‌ ವ್ಯಾಪ್ತಿ ಕಾಡಿನಲ್ಲಿ ಈ ಪೈಪ್‌ಲೈನ್‌ ಹಾದು ಹೋಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.