ಹಸಿದವನಿಗೆ ಮಾತ್ರ ಗೊತ್ತು ಅಗುಳಿನ ಮಹತ್ವ


Team Udayavani, Jan 20, 2022, 7:35 AM IST

thumb 5

ಸಾಂದರ್ಭಿಕ ಚಿತ್ರ.

ಅನ್ನವೇ ದೇವರು, ಅನ್ನವೇ ಬದುಕು, ಅನ್ನವೇ ಸಂಸ್ಕೃತಿ, ಅನ್ನವೇ ಪ್ರಸಾದ. ಅನ್ನ ದೇವರ ಮುಂದೆ ಅನ್ಯ ದೇವರುಂಟೆ? ಅನ್ನವಿರುವತನಕ ಅಷ್ಟೇ ಪ್ರಾಣ ಈ ಜಗದೊಳಗೆ ಅನ್ನವೇ ದೈವ ಸರ್ವಜ್ಞ ಎಂಬ ಸರ್ವಜ್ಞನ ವಚನದಲ್ಲೇ ಅನ್ನದ ಮಹತ್ವದ ಬಗ್ಗೆ ವಿವರವಾಗಿ ಹೇಳಲಾಗಿದೆ. ಇದರ ಅರ್ಥ, ಅನ್ನ ವೆಂಬ ದೇವರ ಮುಂದೆ ಬೇರೆ ಯಾವ ದೇವರೂ ಇಲ್ಲ, ಎಲ್ಲಿಯವರೆಗೆ ಮನು ಷ್ಯನಿಗೆ ತಿನ್ನಲು ಈ ಭೂಮಿಯಲ್ಲಿ ಅನ್ನ ದೊರೆಯುವುದೋ ಅಲ್ಲಿಯವರೆಗೆ ಮಾತ್ರ ಮನುಷ್ಯನ ಜೀವನ ಇರುತ್ತದೆ ಎಂದು. ಅನ್ನವೆಂದರೆ ಮನುಷ್ಯನ ಜೀವಧಾತುವಾಗಿದ್ದು, ದಾನಗಳಲ್ಲಿ ಅತ್ಯಂತ ಶ್ರೇಷ್ಠವಾದ ದಾನ ಅನ್ನದಾನ. ಏಕೆಂದರೆ ಮನುಷ್ಯನಿಗೆ ಧನ, ಕನಕ, ಆಸ್ತಿ ಅಥವಾ ಏನನ್ನೇ ದಾನವಾಗಿ ನೀಡಿದರೂ ಆತನನ್ನು ತೃಪ್ತಿ ಪಡಿಸಲು ಸಾಧ್ಯವಿಲ್ಲ. ಇನ್ನಷ್ಟು ಬೇಕು, ಮತ್ತಷ್ಟು ಬೇಕು ಎನ್ನುವ ಲಾಲಸೆ ಆತನಿಗೆ ದೊರೆತಷ್ಟೂ ಹೆಚ್ಚುತ್ತಾ ಹೋಗುತ್ತದೆ. ಆದರೆ ಹಸಿದವನಿಗೆ ಅನ್ನವನ್ನು ಹೊಟ್ಟೆ ತುಂಬುವಷ್ಟು ನೀಡಿದರೆ ಆತ ತೃಪ್ತನಾಗುತ್ತಾನೆ, ಹೊಟ್ಟೆ ತುಂಬಿದ ಅನಂತರ ಮತ್ತಷ್ಟು ಅನ್ನವನ್ನು ಆತನಿಗೆ ನೀಡಿದರೆ ಆತ ತಿನ್ನಲಾರ.

ಮನುಷ್ಯನ ದೇಹದ ರೋಗನಿರೋಧಕ ಶಕ್ತಿಯು ಅನ್ನದ ಅಗುಳಿನಲ್ಲಿಯೇ ಇದ್ದು, ದಿನದ ಮೂರು ಹೊತ್ತು ಊಟ ಮಾಡುವವರನ್ನು ಶ್ರೀಮಂತರು ಎಂದು ಪರಿಗಣಿಸಲಾಗುತ್ತದೆ. ಆಹಾರದ ರುಚಿಯನ್ನು ಹೆಚ್ಚಿಸುವುದು ಹಸಿವು; ಅದೇ ರೀತಿ ಪಾನೀಯದ ರುಚಿಯನ್ನು ಹೆಚ್ಚಿಸುವುದು ತೃಷೆ ಎಂಬ ಮಾತನ್ನು ಸಾಕ್ರಟೀಸ್‌ ಹೇಳಿದ್ದಾರೆ. ಇದರ ಪ್ರಕಾರ ವ್ಯಕ್ತಿಯು ತಿನ್ನುವ ಆಹಾರದ ರುಚಿ ಮತ್ತು ಮೌಲ್ಯವನ್ನು ಹೆಚ್ಚಿಸುವುದು ಆ ವ್ಯಕ್ತಿಯ ಹಸಿವಿನ ಪ್ರಮಾಣ. ತೀರಾ ಹಸಿದು ಇನ್ನೇನು ಆತನ ಪ್ರಾಣ ಹೊರಟೇ ಹೋಗುತ್ತದೆ ಎನ್ನುವ ಸ್ಥಿತಿಯಲ್ಲಿರುವ ವ್ಯಕ್ತಿಗೆ ಒಣರೊಟ್ಟಿ ಅಥವಾ ಹಳಸಲು ಬ್ರೆಡ್‌ ಸಹಾ ಮೃಷ್ಟಾನ್ನ ಭೋಜನದಷ್ಟೇ ಮೌಲ್ಯದ್ದಾಗಿರುತ್ತದೆ. ಅದೇ ರೀತಿ ಹೊಟ್ಟೆ ತುಂಬಿರುವ ವ್ಯಕ್ತಿಗೆ ಆತನ ನೆಚ್ಚಿನ ಆಹಾರವನ್ನು ತಯಾರಿಸಿ ಬಡಿಸಿದರೂ ಆತ ಒಂದು ತುತ್ತೂ ತಿನ್ನಲಾರ ಮತ್ತು ಆ ಮೃಷ್ಟಾನ್ನ ಭೋಜನದ ನೈಜ ಸವಿಯನ್ನೂ ಅನುಭವಿಸಲಾರ. ಅದೇ ರೀತಿ ಕುಡಿ ಯುವ ಪಾನೀಯದ ರುಚಿಯನ್ನು ಹೆಚ್ಚಿ ಸುವುದು ಆತನ ತೃಷೆಯ ಆಳ. ಏಕೆಂದರೆ ಬಾಯಾರಿಕೆಯಿಂದ ಸಾಯುವ ಸ್ಥಿತಿ ಯಲ್ಲಿ ಇರುವವನಿಗೆ ಒಂದು ಗುಟುಕು ಕೊಳಚೆ ನೀರು ಸಿಕ್ಕರೂ ಅದು ಆತನಿಗೆ ಜೀವ ಜಲವೇ ಆಗುತ್ತದೆ.

ಆದ್ದರಿಂದ ಒಂದು ಅನ್ನದ ಅಗುಳಿನ ಮಹತ್ವ ಹಸಿದವನಿಗೆ ಚೆನ್ನಾಗಿ ತಿಳಿದಿರುತ್ತದೆ. ಅನ್ನವನ್ನು ತಿನ್ನುವ ಹಕ್ಕಿದೆಯೇ ವಿನಾ ಬಿಸಾಡುವ ಹಕ್ಕು ನಮಗ್ಯಾರಿಗೂ ಇಲ್ಲ. “ನಾವು ತಿನ್ನುವ ಒಂದೊಂದು ಅನ್ನದ ಅಗುಳಿನ ಮೇಲೂ ಅದನ್ನು ತಿನ್ನುವವನ ಹೆಸರನ್ನು ಮೊದಲೇ ಬರೆದಿರಲಾಗುತ್ತದೆ’ ಎನ್ನುವ ಮಾತು ಜನಜನಿತ. ಆದರೆ ಇಂದು ಮನುಷ್ಯನ ಹೊಟ್ಟೆ ಸೇರಬೇಕಾದ ಅನ್ನ ಸ್ವೇಚ್ಛಾಚಾರ ಮತ್ತು ಪಾರ್ಟಿಗಳ ಹೆಸರಲ್ಲಿ ಕಸದ ತೊಟ್ಟಿ ಸೇರುತ್ತಿರುವುದು ವಿಷಾದದ ಸಂಗತಿ. ಅಕ್ಕಿಯು ಮಿಕ್ಕಿ ಉಳಿದರೆ ಇಂದಲ್ಲ ನಾಳೆ ಅದನ್ನು ಬೇಯಿಸಿ ತಿನ್ನಬಹುದು. ಆದರೆ ತಯಾರಿಸಿದ ಅನ್ನ ಅಥವಾ ಖಾದ್ಯ ಮಿಕ್ಕಿದರೆ ಅದು ಹಾಳಾಗಿ ಹೋಗುತ್ತದೆ. ನಮಗೆಷ್ಟು ಬೇಕೋ ಅಷ್ಟನ್ನೇ ಬಳಸಬೇಕು. ಬದುಕಿಗೆ ನೀಡುವಷ್ಟೇ ಪ್ರಾಧಾನ್ಯವನ್ನು ಅನ್ನಕ್ಕೂ ನೀಡಬೇಕು. ಅನ್ನ ಪರಬ್ರಹ್ಮ ವಸ್ತು ಎಂಬ ಮಾತೇ ಇದೆ. ಅಂದರೆ ಪ್ರತಿಯೊಂದು ಅಗುಳಿಗೂ ಜೀವವನ್ನು ನೀಡುವ ಶಕ್ತಿಯಿದೆ.

ಒಂದು ಅನ್ನದ ಅಗುಳೂ ತಿಪ್ಪೆಯನ್ನು ಸೇರದಿರಲಿ. ಜನರ ನಿರ್ಲಕ್ಷ್ಯದಿಂದಾಗಿ ದೇಶದಲ್ಲಿ ಲಕ್ಷಗಟ್ಟಲೆ ಟನ್‌ ಆಹಾರ ಪೋಲಾಗುತ್ತಿದೆ.

ಒಂದು ಅನ್ನದ ಅಗುಳಿನ ಉಳಿತಾಯ ನೂರು ಅಗುಳುಗಳ ಉತ್ಪಾದನೆ ಗಿಂತಲೂ ದೊಡ್ಡದು ಎಂಬುದನ್ನು ಎಲ್ಲರೂ ಅರಿಯಬೇಕು. ನಾಲ್ಕು ಅಗುಳು ಕಡಿಮೆ ತಿಂದರೂ ಪರವಾಗಿಲ್ಲ, ಹತ್ತು ಅಗುಳು ಹಾಳಾಗದಂತೆ ನೋಡಿ ಕೊಳ್ಳಬೇಕು. ಹಸಿವಾದಾಗ ಅನ್ನ ಸಿಕ್ಕರೆ ಸಾಕೆನ್ನುವ ನಮ್ಮಂತೆಯೇ ಎಲ್ಲ ಜೀವಿಗಳಿಗೂ ಹಸಿವಿನ ಕೂಗು ಇದ್ದೇ ಇದೆ. ಮನೆ-ಮನೆಗಳಲ್ಲಿ ತಟ್ಟೆಯ ಲ್ಲಿಯೇ ಅನ್ನವನ್ನು ಬಿಟ್ಟು ಅದರಲ್ಲೇ ಕೈತೊಳೆಯುವ ಅದೆಷ್ಟೋ ಜನರಿದ್ದಾರೆ. ಇನ್ನಾದರೂ ಎಚ್ಚೆತ್ತುಕೊಂಡು ಆಹಾರ ವನ್ನು ಬಿಸಾಡದೆ ಅಗತ್ಯವಿರುವವರಿಗೆ ನೀಡೋಣ.

- ಸಂತೋಷ್‌ ರಾವ್‌ ಪೆರ್ಮುಡ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.