ಶತಮಾನದ‌‌ ಹಿಂದೆ ರೂಪು ಪಡೆದಿತ್ತು ಧ್ವಜ


Team Udayavani, Apr 1, 2021, 6:20 AM IST

ಶತಮಾನದ‌‌ ಹಿಂದೆ ರೂಪು ಪಡೆದಿತ್ತು ಧ್ವಜ

ಇಂದು ಭಾರತೀಯರೆಲ್ಲರೂ ಹೆಮ್ಮೆಯಿಂದ ಸೆಲ್ಯೂಟ್‌ ಮಾಡುವ ತ್ರಿವರ್ಣ ಧ್ವಜವು ಒಂದು ಸ್ಪಷ್ಟ ರೂಪ ಪಡೆಯಲು ಹಲವಾರು ಬದಲಾವಣೆಗಳನ್ನು ಕಂಡಿತ್ತು ಎನ್ನುವುದು ನಮಗೆ ತಿಳಿದೇ ಇದೆ.

ಗಮನಾರ್ಹ ಸಂಗತಿಯೆಂದರೆ ಮಾರ್ಚ್‌ 31ಕ್ಕೆ ಭಾರತೀಯ ಬಾವುಟದ ಮೊದಲ ಕರಡು ವಿನ್ಯಾಸ ರೂಪು ತಳೆದು 100 ವರ್ಷಗಳಾಗಿವೆ. 1921ರ ಮಾರ್ಚ್‌ 31 ಹಾಗೂ ಎಪ್ರಿಲ್‌ 1ರಂದು ಬೆಜವಾಡಾದಲ್ಲಿ(ವಿಜಯವಾಡಾ) ಆಯೋಜನೆ ಯಾಗಿದ್ದ ಆಲ್‌ ಇಂಡಿಯಾ ಕಾಂಗ್ರೆಸ್‌ ಕಮಿಟಿ(ಎಐಸಿಸಿ)ಯ ಸಭೆಯಲ್ಲಿ ಯುವ ಸ್ವಾತಂತ್ರ್ಯ ಹೋರಾಟಗಾರ ಪಿಂಗಳಿ ವೆಂಕಯ್ಯ ಅವರು ಮಹಾತ್ಮಾ ಗಾಂಧೀಜಿಗೆ ಈ ಬಾವುಟದ ಕರಡು ವಿನ್ಯಾಸವನ್ನು ಸಮರ್ಪಿಸಿದ್ದರು. ಗಾಂಧೀಜಿಯವರು ಎಪ್ರಿಲ್‌ ತಿಂಗಳ ತಮ್ಮ “ಯಂಗ್‌ ಇಂಡಿಯಾ’ ಪತ್ರಿಕೆಯಲ್ಲಿ ಈ ಧ್ವಜದ ವಿನ್ಯಾಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಬೆಜವಾಡದ ಕೊಡುಗೆ: ಭಾರತೀಯ ಧ್ವಜದ ಮೊದಲ ಕರಡು ವಿನ್ಯಾಸ ಸಮರ್ಪಿತವಾಯಿತು ಎನ್ನುವ ಕಾರಣಕ್ಕಷ್ಟೇ ಅಲ್ಲ, ಎರಡು ದಿನಗಳವರೆಗೆ ಬೆಜವಾಡಾದಲ್ಲಿ ನಡೆದಿದ್ದ ಆ ಎಐಸಿಸಿ ಸಭೆಯು ಭಾರತೀಯ ಸ್ವಾತಂತ್ರ್ಯ ಹೋರಾಟಕ್ಕೆ ಬೃಹತ್‌ ತಿರುವು ಕೊಟ್ಟಿತ್ತು ಎನ್ನುವ ಕಾರಣಕ್ಕೂ ಮಹತ್ವ ಪಡೆದಿದೆ ಎನ್ನುತ್ತಾರೆ ಇತಿಹಾಸಕಾರರು. ಆ ಸಭೆಯು ಸ್ವಾತಂತ್ರ್ಯ ಹೋರಾಟಕ್ಕೆ ಚಂದಾ ಸಂಗ್ರಹಿಸಲು ಮುನ್ನುಡಿ ಬರೆದಿದ್ದಷ್ಟೇ ಅಲ್ಲದೇ ಬೆಜವಾಡಾವನ್ನು ಸ್ವಾತಂತ್ರ್ಯ ಹೋರಾಟದ ಪ್ರಮುಖ ನೆಲೆಯಾಗಿಸಿತು. ಈ ಕಾರಣಕ್ಕಾಗಿಯೇ  ಸ್ವಾತಂತ್ರ್ಯ ಹೋರಾಟಕ್ಕೆ ಬೆಜವಾಡಾದ ಕೊಡುಗೆಯನ್ನು ಪರಿಗಣಿಸಿ ಮುಂದೆ ಅಲ್ಲಿ ಗಾಂಧಿ ಸ್ಥೂಪವನ್ನೂ ಸ್ಥಾಪಿಸಲಾಯಿತು ಎನ್ನುವುದು ವಿಶೇಷ.

30 ದೇಶಗಳ ಧ್ವಜ ಅಧ್ಯಯನ: ಧ್ವಜದ ವಿಚಾರಕ್ಕೆ ಬಂದರೆ, ಹತ್ತಿಯ ಬಗ್ಗೆ ಅಪಾರ ಜ್ಞಾನ ಹೊಂದಿದ್ದ ವೆಂಕಯ್ಯ ಅವರು ಹತ್ತಿಯಿಂದ ಧ್ವಜ ತಯಾರಿಸಲು ನಿರ್ಧರಿಸಿ, ಇದಕ್ಕಾಗಿ 30ಕ್ಕೂ ಹೆಚ್ಚು ದೇಶಗಳ ಬಾವುಟಗಳನ್ನು ಅಭ್ಯಾಸ ಮಾಡಿದರು. 1921ರಲ್ಲಿ ಸಿದ್ಧವಾದ ಮೊದಲ ವಿನ್ಯಾಸ ಅನಂತರದಲ್ಲಿ ಹಲವು ಬದಲಾವಣೆಗಳನ್ನು ಕಂಡು ಕೊನೆಗೆ ಕೇಸರಿ, ಬಿಳಿ, ಹಸುರು ಪಟ್ಟಿ ಹಾಗೂ ನಡುವೆ ಅಶೋಕ ಚಕ್ರವನ್ನೊಳಗೊಂಡ ತ್ರಿವರ್ಣ ಧ್ವಜವಾಗಿ 1947ರಲ್ಲಿ ಅಂಗೀಕಾರಗೊಂಡಿತು. ಒಟ್ಟಲ್ಲಿ ನೂರು ವರ್ಷಗಳ ಹಿಂದೆ ಬೆಜವಾಡಾದಲ್ಲಿ ನಡೆದ ಸಭೆ ಎಷ್ಟೆಲ್ಲ ಬದಲಾವಣೆಗೆ ಮುನ್ನುಡಿ ಬರೆಯಿತು ಎನ್ನುವುದು ಅಷ್ಟಾಗಿ ಸ್ಮರಣೆಯಾಗುವುದೇ ಇಲ್ಲ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.