Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

ವಿಪಕ್ಷ ರಾಜಕೀಯ ಬಿಟ್ಟು ಜನ ಕಲ್ಯಾಣದ ಕನ್ನಡಕ ಧರಿಸಿ ನೋಡಲಿ ; ಏಕ ಕಾಲಕ್ಕೆ ಚುನಾವಣೆಯಿಂದ ದೇಶಕ್ಕೆ ಸಾಕಷ್ಟು ಲಾಭಗಳುಂಟು

Team Udayavani, Sep 20, 2024, 6:40 AM IST

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

ಅತೀ ಹೆಚ್ಚು ಜನಸಂಖ್ಯೆಯ ಬೃಹತ್‌ ಪ್ರಜಾಪ್ರಭುತ್ವ ದೇಶ ವಾದ ಭಾರತದಲ್ಲಿ ಚುನಾವಣೆಗಳನ್ನು ನಡೆಸುವುದು ಸುಲಭದ ಮಾತಲ್ಲ. ಆದರೂ ಚುನಾವಣ ಆಯೋಗ ಎಲ್ಲ ಚುನಾವಣೆಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ ಎಂದು ಶ್ಲಾಘಿಸಲೇಬೇಕು. ಇಷ್ಟಾದರೂ ಕಾಲಕಾಲಕ್ಕೆ ಚುನಾವಣ ವ್ಯವಸ್ಥೆಯಲ್ಲಿ ಸುಧಾರಣೆ ತರುವುದು ಅನಿವಾರ್ಯ. ಈಗ ಒಂದು ದೇಶ, ಒಂದು ಚುನಾವಣೆ ಎಂಬ ಪರಿಕಲ್ಪನೆಯ ಆಧಾರದಲ್ಲಿ ಏಕಕಾಲಕ್ಕೆ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ನಡೆಸುವ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಯಾವಾಗಲೂ ವಿಶಿಷ್ಟವಾಗಿ ಮತ್ತು ದೂರದೃಷ್ಟಿಯಿಂದ ಚಿಂತಿಸುವ ಪ್ರಧಾನಿ ನರೇಂದ್ರ ಮೋದಿ ಈ ಹೊಸ ಹೆಜ್ಜೆ ಇಟ್ಟಿರುವುದು ದೇಶದ ರಾಜಕೀಯ ಚರಿತ್ರೆಯಲ್ಲೇ ದೊಡ್ಡ ದಿಟ್ಟತನ.

ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿ ಒಂದು ದೇಶ ಒಂದು ಚುನಾವಣೆ ಕುರಿತು ಸಲ್ಲಿಸಿದ ವರದಿಯನ್ನು ಕೇಂದ್ರ ಸರಕಾರ ಅನುಮೋದಿಸಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಪ್ರತೀ 5 ವರ್ಷಕ್ಕೊಮ್ಮೆ ಚುನಾವಣೆ ನಡೆಯುತ್ತದೆ. ಏಕಕಾಲದಲ್ಲಿ ಚುನಾವಣೆ ನಡೆಯಬೇಕು ಎಂದರೆ ಈ ಐದು ವರ್ಷ ಕೂಡ ಸರಕಾರ ಸುಭದ್ರವಾಗಿ ಇರಬೇಕು. ಭಾರತಕ್ಕೆ ಸ್ವಾತಂತ್ರ್ಯ ದೊರೆತ ಬಳಿಕ 1951ರ ಡಿಸೆಂಬರ್‌ ಮತ್ತು 1952 ಫೆಬ್ರವರಿಯ ನಡುವೆ ಲೋಕಸಭೆ ಚುನಾವಣೆ ಮತ್ತು ರಾಜ್ಯಗಳ ವಿಧಾನಸಭೆ ಚುನಾವಣೆ ಒಂದಾಗಿ ನಡೆದಿತ್ತು. 1957, 1962 ಹಾಗೂ 1967ರಲ್ಲೂ ಏಕಕಾಲದಲ್ಲಿ ಚುನಾವಣೆ ನಡೆದಿತ್ತು. 1968-69ರ ನಂತರದ ವರ್ಷಗಳಲ್ಲಿ ಇದು ಅಸಾಧ್ಯವಾಯಿತು. ಅಂದರೆ ಅಲ್ಲಿಯವರೆಗೆ ಆಡಳಿತದಲ್ಲಿದ್ದ ಕಾಂಗ್ರೆಸ್‌ಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಬಗ್ಗೆ ಯಾವ ತಕರಾರು ಇರಲಿಲ್ಲ.

ಇಲ್ಲಿ ವಿಪಕ್ಷಗಳು ಸರಕಾರದ ಎಲ್ಲ ನಿರ್ಧಾರಗಳನ್ನು ಕೇವಲ ವಿರೋಧ ಮಾಡುವ ದೃಷ್ಟಿಯಿಂದ ನೋಡುವುದು ಬಿಟ್ಟು ಇದರಿಂದ ದೇಶಕ್ಕೇನು ಲಾಭ ಎಂದು ಚಿಂತಿಸಬೇಕು. ಏಕಕಾಲಕ್ಕೆ ಚುನಾವಣೆಗಳು ನಡೆಯುವುದರಿಂದ ಆಗುವ ಆಡಳಿತ ಸುಧಾರಣೆಗಳು ಬಹಳಷ್ಟಿದೆ. ಆಡಳಿತ ಯಂತ್ರಕ್ಕೆ ವೇಗ, ದಕ್ಷತೆ, ಸಮಯದ ಉಳಿತಾಯ ಹಾಗೂ ವೆಚ್ಚಕ್ಕೆ ಕಡಿವಾಣ ಇದರಿಂದ ಸಾಧ್ಯ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಆಗಾಗ ಚುನಾವಣೆ ನಡೆಸುವುದರಿಂದ ಜನರು ಕಟ್ಟುವ ತೆರಿಗೆ ಹಣ ಪೋಲಾಗುವುದಿಲ್ಲವೇ ಎಂದು ಯೋಚಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಗ್ಯಾರಂಟಿಗಾಗಿ ಖಜಾನೆ ಖಾಲಿ ಮಾಡಿಕೊಂಡು ಕೂತಿರುವಾಗ ಏಕಕಾಲದ ಚುನಾವಣೆಯಂತಹ ಕ್ರಮಗಳು ಸರಕಾರದ ಬೊಕ್ಕಸಕ್ಕೆ ಹೊಸ ಉಸಿರು ನೀಡುತ್ತದೆ ಎಂದು ಅರ್ಥ ಮಾಡಿಕೊಳ್ಳಬೇಕು.

ಒಂದು ಚುನಾವಣೆ ನಡೆಯುವಾಗ ಅದಕ್ಕೆ ಶಿಕ್ಷಕರು ಸೇರಿದಂತೆ ಸರಕಾರಿ ನೌಕರರನ್ನು ನೇಮಿಸಲಾಗುತ್ತದೆ. ಭದ್ರತೆಗೆ ಪೊಲೀಸ್‌ ಮತ್ತು ಗೃಹ ಇಲಾಖೆಯಡಿಯ ಭದ್ರತಾ ಪಡೆಯನ್ನು ನಿಯೋಜಿಸಲಾಗುತ್ತದೆ. ಸಾರಿಗೆ, ಸಂಬಳ, ಆಹಾರ, ವಸತಿ ಹೀಗೆ ಒಂದೊಂದೇ ಖರ್ಚುಗಳು ಬೆಳೆಯುತ್ತಲೇ ಹೋಗುತ್ತವೆ. ಅಲ್ಲದೆ ನೌಕರರಿಗೂ ಕಾರ್ಯದ ಒತ್ತಡ ಹೆಚ್ಚುತ್ತದೆ. ಜತೆಗೆ ನೀತಿ ಸಂಹಿತೆಯಿಂದ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿ, ಸಾರ್ವಜನಿಕ ಚಟುವಟಿಕೆಗಳಿಗೆ ಅಡ್ಡಿ, ಹೆಚ್ಚುವರಿ ಕೆಲಸ ಹೀಗೆ ಈ ಎಲ್ಲ ಸಮಸ್ಯೆಗಳನ್ನು ಏಕಕಾಲದ ಚುನಾವಣೆ ನಿವಾರಿಸುತ್ತದೆ.

ಪ್ರಾಯೋಗಿಕದ ಚರ್ಚೆ
ಇದು ಪ್ರಾಯೋಗಿಕವಲ್ಲ, ಒಕ್ಕೂಟ ವ್ಯವಸ್ಥೆಗೆ ವಿರೋಧ, ಸರಕಾರಗಳನ್ನು ಬೀಳಿಸುವ ತಂತ್ರ, ಹೀಗೆ ವಿಪಕ್ಷಗಳ ವಾಗ್ಧಾಳಿ ಮುಂದುವರಿದಿದೆ. ಆದರೆ ಇದೇ ಕಾಂಗ್ರೆಸ್‌ ಸೇರಿದಂತೆ ಎಲ್ಲ ವಿಪಕ್ಷಗಳು ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸುವುದು ಪ್ರಾಯೋಗಿಕವಲ್ಲ ಎಂದು ಭಾವಿಸಿ ಏನೂ ಮಾಡದೆ ಸುಮ್ಮನಾಗಿದ್ದವು. ಅದನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿ ತೋರಿಸಿದ್ದು, ಈಗ ಜಮ್ಮು- ಕಾಶ್ಮೀರ ಭಾರತದಲ್ಲಿ ಒಂದಾಗಿದೆ. ಯಾವುದೇ ಗಲಭೆ, ಹಿಂಸಾಚಾರವಿಲ್ಲದೆ ಕಾಶ್ಮೀರ ಕಣಿವೆ ಪ್ರಗತಿಯತ್ತ ಹೆಜ್ಜೆ ಇರಿಸಿದೆ. ಇದು ಬದಲಾವಣೆಯನ್ನು ತರುವ ಕ್ರಾಂತಿಕಾರಕ ವಿಧಾನ.

ಇದೇ ರೀತಿ ಏಕ ಕಾಲಕ್ಕೆ ಚುನಾವಣೆ ನಡೆಸಲಾಗದು ಎನ್ನುವ ಮೂಲಕ ಕಾಂಗ್ರೆಸ್‌ ನಾಯಕರು ತಮ್ಮ ಹಳೆ ಗೊಡ್ಡು ಸಂಪ್ರದಾಯಕ್ಕೆ ಜೋತು ಬಿದ್ದಿದ್ದಾರೆ. ಸುಧಾರಣೆ ಎಂದ ಮೇಲೆ ಅಲ್ಲಿ ಸವಾಲುಗಳು, ಕಷ್ಟಗಳು ಇದ್ದೇ ಇರುತ್ತದೆ ಎಂಬ ಅರಿವು ಅಗತ್ಯ.

ಆಂಧ್ರ ಪ್ರದೇಶದಲ್ಲಿ 2024ರ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆ ನಡೆಯಿತು. ಆಗ ಯಾವುದೇ ಸಮಸ್ಯೆ ಉಂಟಾಗಲಿಲ್ಲ. 2019ರಲ್ಲಿ ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂ ಮೊದಲಾದ ರಾಜ್ಯಗಳಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಒಂದೇ ಅವಧಿಯಲ್ಲಿ ನಡೆದಿತ್ತು. ಆಗಲೂ ಏನೂ ಸಮಸ್ಯೆಗಳಾಗಲಿಲ್ಲ. ಇದನ್ನೇ ಸ್ವಲ್ಪ ವಿಸ್ತರಿಸಿ ನೋಡಿದರೆ, ಇಡೀ ದೇಶದಲ್ಲಿ ಒಂದೇ ಬಾರಿಗೆ ಚುನಾವಣೆ ನಡೆಸುವುದು ಖಂಡಿತ ಸಾಧ್ಯವಿದೆ ಎಂಬ ಅರಿವು ಉಂಟಾಗುತ್ತದೆ.

ವಿಶ್ವಾಸ ಮತವಿಲ್ಲದೆ ಸರಕಾರ ಬಿದ್ದುಹೋಗುವ ಸಂದರ್ಭ ಸೇರಿದಂತೆ ಭವಿಷ್ಯದಲ್ಲಿ ಎದುರಾಗಬಹುದಾದ ಅನೇಕ ಸಮಸ್ಯೆಗಳಿಗೆ ಕೋವಿಂದ್‌ ಸಮಿತಿ ಪರಿಹಾರಗಳನ್ನು ಸೂಚಿಸಿದೆ. ಇನ್ನಷ್ಟು ಸಮಸ್ಯೆಗಳು ಎದುರಾದರೆ, ಆ ಬಗ್ಗೆ ಚಿಂತನೆ ನಡೆಸಲು ಅವಕಾಶ ಇದ್ದೇ ಇದೆ.

ಬೆಂಬಲಿಸಿದ್ದ ಸಿಎಂ ಸಿದ್ದರಾಮಯ್ಯ!
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕ್ರಮವನ್ನು ಬೆಂಬಲಿಸಿ ಈ ಹಿಂದೆ ಮಾತನಾಡಿದ್ದರು. ಆದರೆ ಅದೇ ವ್ಯವಸ್ಥೆಯಲ್ಲಿ ಅವರಿಗೆ ದಿಢೀರನೆ ಹುಳುಕು ಕಾಣುತ್ತಿದೆ. 2016ರ ಜುಲೈಯಲ್ಲಿ ಆಗಿನ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಹೀಗೆ ಹೇಳಿದ್ದರು:
ಏಕಕಾಲದ ಚುನಾವಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರ ಅಭಿಪ್ರಾಯ ಹಾಗೂ ನನ್ನ ಅಭಿಪ್ರಾಯ ಒಂದೇ. ವಿಧಾನಸಭೆ ಹಾಗೂ ಲೋಕಸಭೆಗೆ ಏಕಕಾಲಕ್ಕೆ ನಡೆಸುವ ಚುನಾವಣೆ, ವೆಚ್ಚವನ್ನು ಕಡಿಮೆ ಮಾಡಿ ಸರಕಾರಕ್ಕೆ ನೆರವಾಗುತ್ತದೆ. ಕಳೆದ ಒಂದು ವರ್ಷದಲ್ಲಿ ತಾಲೂಕು, ಜಿಲ್ಲಾ ಪಂಚಾಯತ್‌ಚುನಾವಣೆ, ಲೋಕಸಭೆ, ರಾಜ್ಯಸಭೆ ಚುನಾವಣೆ ನೀತಿ ಸಂಹಿತೆಯಿಂದ ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿವೆ. ಏಕಕಾಲ ಚುನಾವಣೆ ನಡೆಯುವುದು ಉತ್ತಮ ನಿರ್ಧಾರವಾಗಿದ್ದು, ಎಲ್ಲ ರಾಜಕೀಯ ಪಕ್ಷಗಳು ಈ ಬಗ್ಗೆ ಸಾಮೂಹಿಕ ನಿರ್ಧಾರ ತೆಗೆದುಕೊಳ್ಳಬೇಕು.

… ಹೀಗೆ ಹೇಳಿದ್ದ ಸಿಎಂ ಸಿದ್ದರಾಮಯ್ಯ ಈಗ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ. ರಾಜಕೀಯವನ್ನು ಬದಿಗಿಟ್ಟು ಜನ ಕಲ್ಯಾಣದ ಕನ್ನಡಕವನ್ನು ಧರಿಸಿ ಈ ಬಗ್ಗೆ ಚಿಂತನೆ ನಡೆಸುವುದು ಈಗಿನ ಅಗತ್ಯ.

-ಆರ್‌. ಅಶೋಕ ವಿಧಾನಸಭೆ ವಿಪಕ್ಷ ನಾಯಕ

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.