Teacher’s Day: ಶಿಕ್ಷಕರು ವಿದ್ಯಾರ್ಥಿ ಜೀವನದ ಶಿಲ್ಪಿಗಳು


Team Udayavani, Sep 5, 2024, 8:30 AM IST

11-uv-fusion

ಶಿಕ್ಷಕರೆಂದರೆ ಕೇವಲ ಓದು ಬರಹ ಕಲಿಸುವವರು ಶಿಕ್ಷೆಯನ್ನು ನೀಡುವವರು ಎಂದರ್ಥವಲ್ಲ. ಓದಿನ ಜತೆಗೆ ವಿದ್ಯಾರ್ಥಿಯ ಮುಂದಿನ ಜೀವನಕ್ಕೆ ಸನ್ಮಾರ್ಗವನ್ನು ತೋರಿಸಿ ಅವರಲ್ಲಿ ಅಡಗಿದ ಅಳುಕನ್ನು ದೂರಗೊಳಿಸಿ, ಅವರ ಸುಪ್ತ ಪ್ರತಿಭೆಯನ್ನು ಹೊರಹಾಕಿ ಅವರ ಸಾಧನೆಗೆ ಪ್ರೋತ್ಸಾಹಿಸುವವರು. ಅವರಲ್ಲಿ ಜ್ಞಾನದ ಬೀಜವ ಬಿತ್ತುವವರು. ನಾವು ಶಿಕ್ಷಕರನ್ನು ದೇವರಂತೆ ಪೂಜಿಸುತ್ತೇವೆ.

ದೇವರು ಹೇಗೆ ನಮಗೆ ಕಷ್ಟ ಎದುರಾದಾಗ ಪಾರುಮಾಡುತ್ತಾನೋ ಅದೇ ರೀತಿ ಶಿಕ್ಷಕರು ನಮ್ಮಲ್ಲಿರುವ ಅಜ್ಞಾನವೆಂಬ ಅಂದಕಾರವ ಹೋಗಲಾಡಿಸಿ ಸುಜ್ಞಾನದ ಬೆಳಕನ್ನು ಬೀರುವವರು. ಶಿಕ್ಷಕರು ವಿದ್ಯಾರ್ಥಿಗಳ ಜೀವನದ ಶಿಲ್ಪಿ ಇದ್ದಂತೆ, ಜೇಡಿಮಣ್ಣಿನಂತಿರುವ ವಿದ್ಯಾರ್ಥಿಯ ಜೀವನಕ್ಕೆ ಸರಿಯಾದ ರೂಪುರೇಷೆಯನ್ನು ನೀಡಿ ಸಮಾಜದಲ್ಲಿ ಗೌರವಯುತವಾಗಿ ಬಾಳುವಂತೆ ಮಾಡುವವರು.

ಶಿಕ್ಷಕರ ದಿನಾಚರಣೆ ಎಂದರೆ ನನಗೆ ಮೊದಲು ನೆನಪಾಗುವುದು ನನ್ನ ಪ್ರಾಥಮಿಕ ಶಾಲೆ. ಅಲ್ಲಿ ನಾವು ಶಿಕ್ಷಕರ ದಿನಾಚರಣೆಯಂದು ಶಿಕ್ಷಕರಿಗೆಂದೆ ಹಲವಾರು ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೆವು. ಅದೇ ರೀತಿ ಶಿಕ್ಷಕರೆಂದರೆ ನನಗೆ ಮೊದಲು ನೆನಪಾಗುವುದು ನನ್ನ ನೆಚ್ಚಿನ ಶಿಕ್ಷಕರಲ್ಲಿ ಒಬ್ಬರಾದ ನಾಗರತ್ನ ಅವರು. ನಮಗೆ ಎರಡನೇ ತರಗತಿಯಲ್ಲಿ  ನೈತಿಕ ಮೌಲ್ಯ ವಿಷಯವನ್ನು ಕಲಿಸಿಕೊಟ್ಟವರು.

ಮುಂದೆ ನಾನು ಭಾರತ ಸ್ಕೌಟ್ಸ್ ಮತ್ತು ಗೈ‌ಡ್ಸ್ ಸ್ವಯಂ ಸೇವಕ ಸಂಘಕ್ಕೆ ಸೇರಲು, ಈಗಲೂ ಅದರಲ್ಲಿ ಕಾರ್ಯನಿರ್ವಹಿಸುತ್ತಿದ್ದೆನೆಂದರೆ ಅದಕ್ಕೆ ಅವರೇ ಪ್ರೇರಣೆ. ಪ್ರಾಥಮಿಕ ಶಿಕ್ಷಣದಲ್ಲಿ ನನಗೆ ನೆನಪಾಗುವ ಇನೋರ್ವ ಶಿಕ್ಷಕಿಯೆಂದರೆ ವಿಲ್ಮಾ ಅವರು. ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಮಕ್ಕಳ ಮೊಗದಲ್ಲಿ ನಗುವನ್ನು ಮೂಡಿಸಿದವರು. ತರಗತಿ ಆರಂಭಿಸುವ ಮುನ್ನ ನಮಗೆ ಅಭಿನಯ ಗೀತೆಗಳನ್ನು ಹಾಡಿಸಿ ಅನಂತರ ತಮ್ಮ ತರಗತಿಯನ್ನು ಪ್ರಾರಂಭಿಸುವರು. ಅವರು ಆಂಗ್ಲ ಭಾಷೆಯ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಓದಲು ಆಂಗ್ಲ ಭಾಷೆಯ ಪುಸ್ತಕವನ್ನು ನೀಡಿ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಲು ಪ್ರರೇಪಿಸುತ್ತಿದ್ದರು.

ಅನಂತರ ಪ್ರೌಢಶಾಲಾ ಶಿಕ್ಷಣದ ಸಮಯದಲ್ಲಿ ನನಗೆ ನೆನಪಾಗುವವರು ಸವಿತಾ ಮೇಡಂ.  ನಮಗೆ ಸಮಾಜ ವಿಜ್ಞಾನದ ಬಗ್ಗೆಗಿನ ಆಸಕ್ತಿ ಇಮ್ಮಡಿಗೊಳಿಸಿದವರು. ನಮಗೆ ಪ್ರತಿನಿತ್ಯ ದಿನಪತ್ರಿಕೆ ಓದಲು, ಸುದ್ದಿ ವಾಹಿನಿಗಳನ್ನು ವೀಕ್ಷಿಸಲು ಹೇಳುತ್ತಿದ್ದರು. ಸಮಾಜ ವಿಜ್ಞಾನದ ಕೆಲವೊಂದು ವಿಚಾರಗಳನ್ನು ಸರಳವಾಗಿ ತಿಳಿಸಿಕೊಟ್ಟವರು. ಅವರನ್ನು ಹೆಚ್ಚುವರಿಯೆಂದು ಬೇರೆ ಶಾಲೆಗೆ ವರ್ಗಾವಣೆಗೊಂಡಾಗ ನಾವು ಧರಣಿ ನೆಡೆಸಿದ್ದು ಈಗಲೂ ನೆನಪಿಗೆ ಬರುತ್ತದೆ.

ನಾನು ಪದವಿ ಪೂರ್ವ ಶಿಕ್ಷಣಕ್ಕೆ ಸೇರಿದಾಗ ನಮಗೆ ಹಿಂದಿ ಭಾಷೆಯನ್ನು ಕಲಿಸಿದ ಜಯಶೀಲ ಮ್ಯಾಮ್‌ ನೆನಪಿಗೆ ಬರುತ್ತಾರೆ. ಎಲ್ಲ ಮಕ್ಕಳನ್ನು ತಮ್ಮ ಮಕ್ಕಳಂತೆ ಕಂಡವರು. ಪ್ರಸ್ತುತ ನಾನು ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ ಇಲ್ಲಿ ನಮಗೆ ಕಲಿಸುವ ಪ್ರತಿಯೊಬ್ಬ ಪ್ರಾಧ್ಯಾಪಕರು ಒಂದೊಂದು ಅಮೂಲ್ಯ ರತ್ನವಿದ್ದಂತೆ.

ಪದವಿ ಶಿಕ್ಷಣದಲ್ಲಿ ಕೇವಲ ಪಾಠ ಮಾಡುತ್ತಾರೆ. ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದಿಲ್ಲ ಎಂದು ಈ ಮೊದಲು ಕೇಳಿದ್ದೆ. ಆದರೆ ನಮ್ಮ ಕಾಲೇಜಿನ ಪ್ರಾಧ್ಯಾಪಕರು ಎಲ್ಲರಿಗಿಂತ ವಿಭಿನ್ನರು, ಅವರು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಒತ್ತುನೀಡುತ್ತಾ ಬಂದಿದ್ದಾರೆ. ಮಕ್ಕಳ ಯಾವುದೇ ಸಮಸ್ಯೆಗೆ ಪರಿಹಾರವನ್ನು ಸೂಚಿಸಿ ಸರಿಯಾದ ಸಮಯಕ್ಕೆ ಪಾಠ ಪ್ರವಚನಗಳನ್ನು ಮುಗಿಸಿ ನಮ್ಮ ಹೊರೆಯನ್ನು ಕಡಿಮೆಗೊಳಿಸುತ್ತಿದ್ದಾರೆ.

ನಾವು ಪ್ರತೀ ವರ್ಷ ಸೆಪ್ಟಂಬರ್‌ 5ರಂದು ನಮ್ಮ ದೇಶದ ಎರಡನೇ ರಾಷ್ಟ್ರಪತಿಯಾಗಿದ್ದ ಡಾ| ಸರ್ವಪಳ್ಳಿ ರಾಧಾಕೃಷ್ಣನ್‌ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯಾಗಿ ಆಚರಿಸುತ್ತ ಬರುತ್ತಿದ್ದೇವೆ. ತತ್ತÌಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಅವರು ವಿದ್ಯಾರ್ಥಿ ಸಮೂಹದ ಮಧ್ಯೆ ಜನಪ್ರಿಯತೆ ಗಳಿಸಿದ್ದರು. ಅವರು ಉಪನ್ಯಾಸ ನೀಡಲು ನಿಂತರೆ ತರಗತಿಯ ತುಂಬಾ ವಿದ್ಯಾರ್ಥಿಗಳು ತುಂಬಿರುತ್ತಿದ್ದರು.

ಭೌತಶಾಸ್ತ್ರದ ವಿದ್ಯಾರ್ಥಿಗಳು ಸಹ ತಮ್ಮ ಪಾಠ ಪ್ರವಚನಗಳನ್ನು ಬಿಟ್ಟು ತತ್ತ್ವಶಾಸ್ತ್ರದ ಉಪನ್ಯಾಸ ಕೇಳಲು ಕಾರಿಡಾರಿನಲ್ಲಿ ಸೇರುತ್ತಿದ್ದರು. ಇವರು ಕಲ್ಕತ್ತ  ವಿಶ್ವವಿದ್ಯಾಲಯಕ್ಕೆ ಉಪಕುಲಪತಿಯಾಗಿ ನೇಮಕಗೊಂಡಾಗ ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅವರು ಮೈಸೂರಿನಿಂದ ಹೊರಡಬೇಕಾದರೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಅದರಲ್ಲಿ ಕೆಲವರು ಅವರನ್ನು ಕೂರಿಸಿ ರೈಲು ನಿಲ್ದಾಣಕ್ಕೆ ಹೊರಟಿದ್ದ ಗಾಡಿಯಿಂದ ಕುದುರೆಗಳನ್ನು ಬಿಡಿಸಿ ತಾವೇ ಸ್ವತಃ ಗಾಡಿಯನ್ನು ರೈಲು ನಿಲ್ದಾಣದ ವರೆಗೆ ಎಳೆದೊಯ್ದರಂತೆ. ಅದೊಂದು ಉದಾತ್ತ ಗುರುವಿನ ಭಕ್ತಿಯ ಅಪೂರ್ವ ದೃಶ್ಯವಾಗಿತ್ತು.

ಅಂತಹ ಮಹಾನ್‌ ಶಿಕ್ಷಕರನ್ನು ಪಡೆದ ಆ ವಿದ್ಯಾರ್ಥಿಗಳೇ ಧನ್ಯರು. ಇಂದಿಗೂ ಅಂತಹ ಮಹಾನ್‌ ಶಿಕ್ಷಕರು ನಮ್ಮ ನಡುವೆಯೂ ಇದ್ದಾರೆ. ನಾವು ಕೇವಲ ಸೆಪ್ಟಂಬರ್‌ 5ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸದೇ ಪ್ರತಿನಿತ್ಯವೂ ಶಿಕ್ಷಕರ ದಿನಾಚರಣೆಯೆಂದು ತಿಳಿದು ಅವರನ್ನು ಗೌರವಿಸಿ ಅವರು ನಮಗೆ ತೋರಿದ ದಾರಿಯಲ್ಲಿ ಮುನ್ನಡೆಯೋಣ.

-ಸಮೃದ್ಧಿ ಕಿಣಿ

ಡಾ| ಬಿ.ಬಿ. ಹೆಗ್ಡೆ, ಕಾಲೇಜು, ಕುಂದಾಪುರ

 

ಟಾಪ್ ನ್ಯೂಸ್

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.