Teacher’s Day: ಗುರುವಿನ ಗುಲಾಮನಾಗದೇ ದೊರೆಯದಣ್ಣ ಮುಕುತಿ


Team Udayavani, Sep 5, 2024, 9:30 AM IST

12-

ಗುರುಬ್ರಹ್ಮ ಗುರುವಿಷ್ಣು ಗುರುದೇವೋ ಮಹೇಶ್ವರಃ ಗುರು ಸಾಕ್ಷಾತ್‌ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ.

ಗುರು ಭಾರತೀಯ ಪರಂಪರೆಯಲ್ಲಿ ಬಹಳ ಗೌರವಯುತ ಮತ್ತು ಘನತೆಯುಳ್ಳ ಪದ ಹಾಗೂ ಪದವಿ. ಆಚಾರ್ಯ ದೇವೋ ಭವ ಅನ್ನುವಂತೆ ಹಿಂದಿನ ಕಾಲದಿಂದ ಶುರುವಾಗಿ ಇಂದಿನ ಆಧುನಿಕ ಯುಗದವರೆಗೂ ದೈವಿ ಸ್ವರೂಪರಾಗಿಯೇ ಉಳಿದವರೆಂದರೇ ಅದು ಗುರುಗಳು ಮಾತ್ರ. ಜಾತಿ-ಮತ, ಮೇಲು-ಕೀಳು, ಬಡವ-ಬಲ್ಲಿದ ಅನ್ನುವ ತಾರತಮ್ಯ ಮಾಡದೇ ತನ್ನೆಲ್ಲ ಶಿಷ್ಯರನ್ನೂ ಸ್ವಂತ ಮಕ್ಕಳಂತೆ ಭಾವಿಸಿ ತಾನು ಕಲಿತಂಥಹ ವಿದ್ಯೆ, ಸಂಸ್ಕಾರ ಮತ್ತು ಆಚರಣೆಗಳನ್ನು ಬಹಳ ಪ್ರೀತಿ, ಕಾಳಜಿ ಮತ್ತು ಜವಾಬ್ದಾರಿಯುತವಾಗಿ  ಭೋದಿಸಿ ಅವರುಗಳ ವ್ಯಕ್ತಿತ್ವವನ್ನು ರೂಪಿಸಿ, ಅಜ್ಞಾನವನ್ನು ಹೋಗಲಾಡಿಸಿ ಜ್ಞಾನದ ಬೆಳಕಿನೆಡೆಗೆ ಕೈಹಿಡಿದು ಕರೆದುಕೊಂಡು ಹೋಗಿ ಸಮಾಜದಲ್ಲಿ ಒಬ್ಬ ಗಣ್ಯ ಆದರ್ಶ ವ್ಯಕ್ತಿಯನ್ನಾಗಿ ಮಾಡುವ ಅದ್ಭುತ ಶಕ್ತಿಯೇ ಗುರು.

ಗುರು ಎಂದರೆ ಕೇವಲ ಶಾಲೆಗಳಲ್ಲಿ ಅಕ್ಷರ ಹೇಳಿಕೊಡುವ ಗುರುಗಳಷ್ಟೇ ಅಲ್ಲ. ಮನೆಯಲ್ಲಿರುವ ತಾಯಿ-ತಂದೆ ಹಿರಿಯ ಜೀವಗಳು, ಒಡಹುಟ್ಟಿದವರು , ಬಂಧು ಬಳಗದವರು, ಸ್ನೇಹಿತರು, ದಿನಾಲೂ ನಾವು ನೋಡುವ ಮಾತಾಡಿಸುವ ವ್ಯಕ್ತಿಗಳು, ಸಮಾಜದಲ್ಲಿ ಎತ್ತರದಲ್ಲಿರುವ ಗಣ್ಯ ವ್ಯಕ್ತಿಗಳು ಮತ್ತು ಮಹನೀಯರನ್ನೂ ಸಹ ಗುರುಗಳಾಗಿ ಭಾವಿಸಿದರೆ, ಮನುಷ್ಯ ಬಹಳ ಎತ್ತರಕ್ಕೆ ಏರಬಹುದು. “ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ’ ಎನ್ನುವಂತೆ ಏನೂ ತಿಳಿಯದ ಒಬ್ಬ ಸಾಮಾನ್ಯ ಮನುಷ್ಯನಿಗೆ ಜೀವನದ ಮೌಲ್ಯಗಳು, ಜೀವನದ ಅರ್ಥ, ಗುರಿ ಆ ಗುರಿಯನ್ನು ಸಾಧಿಸಲು ಇರುವ ಮಾರ್ಗ ಮುಂತಾದವುಗಳನ್ನು ಗುರುವಿನ ಮಾರ್ಗದರ್ಶನವಿಲ್ಲದೆ ಅರಿಯಲು ಸಾಧ್ಯವಿಲ್ಲ.

ಯಾವಾಗ ಗುರುವಿನಿಂದ ಕಲಿತ ಈ ಎಲ್ಲ ವಿದ್ಯೆಗಳನ್ನು ಉಪಯೋಗಿಸಿಕೊಂಡು ನಾವು ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಯಾಗಿ ಬಿಂಬಿತರಾಗುತ್ತೇವೋ ಅದುವೇ ಗುರುಗಳಿಗೆ  ನೀಡುವ ಗುರುದಕ್ಷಿಣೆಯಾಗಿರುತ್ತದೆ. ಗುರುವನ್ನು ಪ್ರೀತಿಸೋಣ ಗುರುವನ್ನು ಗೌರವಿಸೋಣ.

ಪ್ರಸಾದ್‌ ಆಚಾರ್ಯ

ಕುಂದಾಪುರ

ಟಾಪ್ ನ್ಯೂಸ್

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

Traffic-Jam

Democracy Day: ಮಾನವ ಸರಪಳಿ; ಉಭಯ ಜಿಲ್ಲೆಗಳಲ್ಲಿ ವಾಹನ ಚಾಲಕರು, ಸಾರ್ವಜನಿಕರು ಹೈರಾಣು!

Udupi1

International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

1-mmmm

PM Modi ಕಿಡಿ ; ರೊಹಿಂಗ್ಯಾ ಜತೆ ಜೆಎಂಎಂ ಶಾಮೀಲಾಗಿದೆ

1-weewqeqwe

Bihar;ಹೊಲಕ್ಕೆ ನುಗ್ಗಿದ ರೈಲು ಎಂಜಿನ್‌: ನೆಟ್ಟಿಗರ ಕಟು ಟೀಕೆ

Malpe

Holiday: ಮಲ್ಪೆ ಬೀಚ್‌ನಲ್ಲಿ ಜನಸಂದಣಿ; ತಡೆಬೇಲಿ ದಾಟಿ ನೀರಿನಾಟದಲ್ಲಿ ನಿರತ ಪ್ರವಾಸಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-uv-fusion

Education System: ಶಿಕ್ಷಕರು, ಶಿಕ್ಷಣ ಹೇಗಿದ್ದರೆ ಚೆನ್ನ..?

19-uv-fusion

UV Fusion: ಶಿಕ್ಷಕರೊಂದಿಗಿನ ನೆನಪುಗಳು

18-uv-fusion

UV Fusion: ಬಯಕೆಯ ಬೆನ್ನೇರಿದಷ್ಟು ನೆಮ್ಮದಿ ಮರೀಚಿಕೆಯಷ್ಟೇ?

17-uv-fusion

Kasaragod Inscriptions: ಇತಿಹಾಸದ ಕಥೆ ಹೇಳುವ ಕಾಸರಗೋಡಿನ ಶಾಸನಗಳು

16-uv-fusion

UV Fusion: ಮಾತು ಅತಿಯಾಗದಿರಲಿ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

train-track

Landslide: ತುರ್ತು ಬ್ರೇಕ್‌ ಹಾಕಿದ ಕಾರಣ ತಪ್ಪಿದ ರೈಲು ದುರಂತ

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

1-ghhh

ಹೃದಯಾಘಾತ: ಶಾಲೆಯಲ್ಲೇ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

Traffic-Jam

Democracy Day: ಮಾನವ ಸರಪಳಿ; ಉಭಯ ಜಿಲ್ಲೆಗಳಲ್ಲಿ ವಾಹನ ಚಾಲಕರು, ಸಾರ್ವಜನಿಕರು ಹೈರಾಣು!

CBI

Trainee doctor ಹ*ತ್ಯೆ ಕೇಸು: ಮಾಜಿ ಪ್ರಿನ್ಸಿ ಸಂದೀಪ್‌ 17ರ ವರೆಗೆ ಸಿಬಿಐ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.