ISRO: ಚಂದ್ರ ಆಯ್ತು; ಈಗ ಸೂರ್ಯನತ್ತ ಪಯಣ…

-"ಆದಿತ್ಯ ಎಲ್‌ 1" ಸೆಪ್ಟೆಂಬರ್‌ ಆರಂಭದಲ್ಲಿ ಆಗಸದತ್ತ ನೆಗೆಯುವ ಸಾಧ್ಯತೆ

Team Udayavani, Aug 24, 2023, 9:15 PM IST

AADITYA L 1

ಬೆಂಗಳೂರು: ಚಂದ್ರನ ಅಂಗಳ ನೋಡಿದ್ದಾಯ್ತು. ಈಗ ಸೂರ್ಯನತ್ತ ಇಸ್ರೋ ಕಣ್ಣುನೆಟ್ಟಿದೆ!

ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ನೆಲೆ ನಿಂತಿದೆ. ಈಗಾಗಲೇ ಅದು ತನ್ನ ಕಾರ್ಯಾಚರಣೆಯನ್ನೂ ಶುರುಮಾಡಿದೆ. ಈ ಸಾಧನೆಯು ಈಗ ಭಾರತದ ನಿರೀಕ್ಷೆಗಳನ್ನು ಮತ್ತೂಂದು ಹಂತಕ್ಕೆ ತೆಗೆದುಕೊಂಡು ಹೋಗಿದೆ. ಇದಾದ ನಂತರ ಭಾರತದ ಮೊದಲ ಸೋಲಾರ್‌ ಮಿಷನ್‌ “ಆದಿತ್ಯ ಎಲ್‌ 1′ ಅನ್ನು ಇಸ್ರೋ ಕೈಗೆತ್ತಿಕೊಳ್ಳಲು ಉದ್ದೇಶಿಸಿದ್ದು, ಈ ಮೂಲಕ ಸೂರ್ಯನ ಸಂಶೋಧನೆಗೆ ಮುಂದಾಗುತ್ತಿದೆ.

ಸೂರ್ಯನ ಮೇಲೆ ಮಾತ್ರವಲ್ಲ; ಶುಕ್ರ, ಮತ್ತೂಮ್ಮೆ ಮಂಗಳ, ಗಗನಯಾತ್ರಿಗಳೊಂದಿಗೆ ಬಾಹ್ಯಾಕಾಶಕ್ಕೆ ಪಯಣ ಬೆಳೆಸುವುದು ಹೀಗೆ ಹಲವು ಯೋಜನೆಗಳನ್ನು ಮುಂದೊಂದು ದಶಕದಲ್ಲಿ ಕಾರ್ಯರೂಪಕ್ಕೆ ತರುವ ಗುರಿಯನ್ನು ಭಾರತದ ವಿಜ್ಞಾನಿಗಳು ಹೊಂದಿದ್ದಾರೆ. ಇದಕ್ಕಾಗಿ ಸಿದ್ಧತೆಗಳು ಈಗಿನಿಂದಲೇ ನಡೆದಿದೆ. ಚಂದ್ರನ ಮೇಲೆ ಬೀಡುಬಿಟ್ಟ “ವಿಕ್ರಂ’ ಮತ್ತು “ಪ್ರಗ್ಯಾನ್‌’ ನೀಡುವ ಮಾಹಿತಿಗಳನ್ನು ಕಲೆಹಾಕಿ, ಅವುಗಳ ವಿಶ್ಲೇಷಣೆ ಮಾಡಬೇಕಿದೆ. ಅಗತ್ಯಬಿದ್ದರೆ ಚಂದ್ರಯಾನ-4 ಕೈಗೆತ್ತಿಕೊಳ್ಳಬೇಕಾಗುತ್ತದೆ. ಇದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮೇಲೆ ಜವಾಬ್ದಾರಿಗಳನ್ನೂ ಹೆಚ್ಚಿಸಿದೆ. ಅದನ್ನು ಇಷ್ಟೇ ಚಾಕಚಕ್ಯತೆಯಿಂದ ನಿಭಾಯಿಸುವ ಹೊಣೆ ವಿಜ್ಞಾನಿಗಳ ಮೇಲಿದೆ.

ಇದುವರೆಗೆ ಯಾರೂ ಹೋಗಿರದ ಜಾಗಕ್ಕೆ ಇಸ್ರೋ ವಿಜ್ಞಾನಿಗಳು ಯಾವುದೇ ಅಡತಡೆ ಇಲ್ಲದೆ ಸಲೀಸಾಗಿ ದಾಂಗುಡಿ ಇಟ್ಟಿದ್ದಾರೆ. ಇದಕ್ಕೆ ಉಳಿದ ರಾಷ್ಟ್ರಗಳ ವಿಜ್ಞಾನಿಗಳು ನಿಬ್ಬೆರಗಾಗಿದ್ದು, ಎಲ್ಲೆಡೆ ಶ್ಲಾಘನೆಯೂ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಸಾಲು-ಸಾಲು ಸವಾಲುಗಳಿವೆ. ಗಗನಯಾನ ಸೇರಿ ಭವಿಷ್ಯದಲ್ಲಿ ಹತ್ತಾರು ಯೋಜನೆಗಳನ್ನು ಇಸ್ರೋ ಹಾಕಿಕೊಂಡಿದೆ. ಚಂದ್ರನಲ್ಲಿ ಸ್ಥಾಪಿಸಿದ ಮೈಲುಗಲ್ಲಿನ ಮೇಲೆ ಸಾಧನೆಯ ಸೌಧ ನಿರ್ಮಿಸಬೇಕಿದೆ ಎಂದು ತಜ್ಞರು ಹೇಳುತ್ತಾರೆ.

“ಆದಿತ್ಯ ಎಲ್‌ 1′- ಇದು ಸೂರ್ಯನ ಬಗ್ಗೆ ಅಧ್ಯಯನ ಮಾಡುವ ಮಿಷನ್‌ ಆಗಿದೆ. ಇದು ಸೆಪ್ಟೆಂಬರ್‌ ಆರಂಭದಲ್ಲಿ ಆಗಸದತ್ತ ನೆಗೆಯುವ ಸಾಧ್ಯತೆ ಇದೆ. ಈ ಉಪಗ್ರಹವು ಸೂರ್ಯ ಮತ್ತು ಭೂಮಿಯ ನಡುವಿನ ಬಿಂದು “ಲ್ಯಾಗ್‌ರೇಂಜ್‌- 1’ನಲ್ಲಿ ಗಿರಕಿ ಹೊಡೆಯಲಿದೆ. ಈ ಬಿಂದು ಭೂಮಿಯಿಂದ ಸುಮಾರು 1.5 ಮಿಲಿಯನ್‌ ಕಿ.ಮೀ. ದೂರದಲ್ಲಿರಲಿದೆ. ಅಲ್ಲಿಂದ ಸೂರ್ಯನ ಚಟುವಟಿಕೆಗಳ ಬಗ್ಗೆ ಅಧ್ಯಯನ ನಡೆಸಲಿದೆ. ಇಸ್ರೋಗೆ ಅಲ್ಲಿನ ಮಾಹಿತಿಗಳನ್ನೂ ರವಾನಿಸಲಿದೆ.

ಗಗನಯಾನ- ಇಸ್ರೋದ ಹಲವು ಯೋಜನೆಗಳ ಪೈಕಿ ಅತಿ ಹೆಚ್ಚು ಕುತೂಹಲ ಮೂಡಿಸಿದ ಭಾರತದ ಮೊದಲ ಮಾನವಸಹಿತ ಬಾಹ್ಯಾಕಾಶದತ್ತ ಪಯಣಿಸುವ ಪ್ರಾಜೆಕ್ಟ್ ಇದು. 2024ರಲ್ಲಿ ಇದನ್ನು ಉಡಾವಣೆ ಮಾಡಲು ಉದ್ದೇಶಿಸಲಾಗಿದೆ. ಮೂವರು ಗಗನಯಾತ್ರಿಗಳನ್ನು 400 ಕಿ.ಮೀ. ಎತ್ತರದ ಕಕ್ಷೆಗೆ ಮೂರು ದಿನಗಳ ಪ್ರಯಾಣಕ್ಕಾಗಿ ಕರೆದೊಯ್ದು, ಅವರನ್ನು ಮರಳಿ ಸುರಕ್ಷಿತವಾಗಿ ಭೂಮಿಗೆ ಕರೆತಂದು ಭಾರತದ ವ್ಯಾಪ್ತಿಯ ಸಮುದ್ರದಲ್ಲಿ ಇಳಿಸುವ ಯೋಜನೆ ಇದಾಗಿದೆ. ಸಾಮಾನ್ಯವಾಗಿ ಬಾಹ್ಯಾಕಾಶ ಅವಶೇಷಗಳು ವಾತಾವರಣದಲ್ಲೇ ಉರಿದುಹೋಗುತ್ತವೆ. ಆದರೆ, ಈ ಯೋಜನೆಯಲ್ಲಿ ವಿಜ್ಞಾನಿಗಳ ಮುಂದಿರುವ ದೊಡ್ಡ ಸವಾಲು ಎಂದರೆ ಬಾಹ್ಯಾಕಾಶ ನೌಕೆಯನ್ನು ಸುರಕ್ಷಿತವಾಗಿ ಮರಳಿ ಭೂಮಿಗೆ ತರುವುದು.

ನಿಸಾರ್‌- ಅಮೆರಿಕ ಮೂಲದ ಬಾಹ್ಯಾಕಾಶ ಸಂಸ್ಥೆ ನಾಸಾ ಪಾಲುದಾರಿಕೆಯಲ್ಲಿ ಕೈಗೆತ್ತಿಕೊಂಡ ಯೋಜನೆ ಇದಾಗಿದೆ. ಮುಂದಿನ ವರ್ಷದಲ್ಲಿ ಇದು ಉಡಾವಣೆಯಾಗುವ ನಿರೀಕ್ಷೆ ಇದೆ. ಇದು ಭೂಮಿಯ ಮೇಲ್ಮೆ„ನಲ್ಲಿರುವ ಮಣ್ಣು, ಮಂಜುಗಡ್ಡೆಯ ಬಗ್ಗೆ ಅಧ್ಯಯನ ನಡೆಸಲಿದೆ. ಹವಾಮಾನ ಬದಲಾವಣೆ, ಅರಣ್ಯ ನಾಶ, ಕರಗುತ್ತಿರುವ ಹಿಮನದಿಗಳು, ಭೂಮಿಯ ಕಂಪನಗಳು ಮತ್ತಿತರ ಅಂಶಗಳ ಬಗ್ಗೆ ಮಾಹಿತಿ ನೀಡಲಿದೆ. ಅಷ್ಟೇ ಅಲ್ಲ, ಮಣ್ಣಿನಲ್ಲಿರುವ ತೇವಾಂಶ, ಇಳುವರಿ ಮುನ್ಸೂಚನೆ, ಅಕ್ಕಿ ಮತ್ತು ಸೆಣಬಿನಂತಹ ಪ್ರಮುಖ ಬೆಳೆಗಳ ಕೊಯ್ಲಿಗೆ ಮೊದಲೇ ಸೂಚನೆ ಮತ್ತಿತರ ಹಲವಾರು ಕೃಷಿಗೆ ಉಪಯುಕ್ತವಾದ ಮಾಹಿತಿಯನ್ನು ಈ ನಿಸಾರ್‌ ಮಿಷನ್‌ನಿಂದ ಲಭ್ಯವಾಗಲಿದೆ.

ಶುಕ್ರಯಾನ- ಹೆಸರೇ ಸೂಚಿಸುವಂತೆ ಇದು ಶುಕ್ರನ ಮೇಲೆ ಅಧ್ಯಯನ ನಡೆಸಲಿದೆ. 2024ರ ಡಿಸೆಂಬರ್‌ನಲ್ಲಿ ಇದನ್ನು ಉಡಾವಣೆ ಮಾಡುವ ಯೋಜನೆ ಇತ್ತು. ಆದರೆ, 2031ಕ್ಕೆ ಮುಂದೂಡಿಕೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಶುಕ್ರ ಮತ್ತು ಭೂಮಿ ತುಂಬಾ ಹತ್ತಿರದಲ್ಲಿ ಒಂದೇ ಸಾಲಿನಲ್ಲಿ ಇದು ಆಗುವಂತಹದ್ದು. ಅತ್ಯಂತ ತಾಪಮಾನ ಹೊಂದಿರುವ ಈ ಶುಕ್ರನ ಮೇಲ್ಮೆ„ ಅನ್ನು ಇಸ್ರೋ ವೀಕ್ಷಿಸಲಿದೆ.

ಮಂಗಳಯಾನ 2- ಇದೊಂದು ಅಂತರ ಗ್ರಹ ಮಿಷನ್‌. 2024ರಲ್ಲಿ ಯೋಜನೆ ಜಾರಿಗೊಳಿಸುವ ಗುರಿಯನ್ನು ಹೊಂದಲಾಗಿದೆ. ಹೈಪರ್‌ಸ್ಪೆಕ್ಟ್ರಲ್‌ ಕ್ಯಾಮೆರಾ, ಅತ್ಯಧಿಕ ರೆಸಲ್ಯುಷನ್‌ವುಳ್ಳ ಕ್ಯಾಮೆರಾ ಮತ್ತು ರೆಡಾರ್‌ ಮೂಲಕ ಮಂಗಳನ ಆರಂಭಿಕ ಹೊರಪದರ, ಅಗ್ನಿಶಿಲೆ, ಬಂಡೆಗಳನ್ನು ಶೋಧಿಸಲು ಉದ್ದೇಶಿಸಲಾಗಿದೆ.

ವಿಜಯ ಕುಮಾರ ಚಂದರಗಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganapa

Ganesha Festival: ಇಂದು ಗಣೇಶ ಚತುರ್ಥಿ; ವಿಘ್ನ ನಿವಾರಕ ವಿನಾಯಕ ವಿಶ್ವನಾಯಕನೂ ಹೌದು

ETTINAHOLE

Ettinahole Drinking Water Project: ದಶಕದ ಬಳಿಕ ಎತ್ತಿನಹೊಳೆ ಯೋಜನೆ ಸಾಕಾರ

Gouri-Puja-

Gowri Festival: ಇಂದು ಗೌರಿ ತದಿಗೆ: ಭಾದ್ರಪದ ಶುಕ್ಲ ತೃತೀಯಾ ಹರಿತಾಲಿಕಾ ವ್ರತಂ

ETTINAHOLE1

Ettinahole Project: ಬತ್ತಿದ ಕನಸುಗಳಿಗೆ ಎತ್ತಿನಹೊಳೆ ಜೀವಜಲ ಧಾರೆ!

10-uv-fusion

Teacher’s Day: ಆದರ್ಶ ಬದುಕಿಗೆ ದಾರಿ ತೋರುವ ಗುರು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.