![Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ](https://www.udayavani.com/wp-content/uploads/2024/12/4-36-415x249.jpg)
Today World Mental Health Day: ಸದೃಢ ಶರೀರದಷ್ಟೇ ಮುಖ್ಯ ಸುಸ್ಥಿರ ಮನಸ್ಸು
Team Udayavani, Oct 10, 2023, 6:15 AM IST
![Today World Mental Health Day: ಸದೃಢ ಶರೀರದಷ್ಟೇ ಮುಖ್ಯ ಸುಸ್ಥಿರ ಮನಸ್ಸು](https://www.udayavani.com/wp-content/uploads/2023/10/MENTAL-620x345.jpg)
ಮನುಷ್ಯ ಆರೋಗ್ಯವಾಗಿರಬೇಕಾದರೇ ದೈಹಿಕ ಸುಸ್ಥಿರತೆಯ ಜತೆಗೆ ಮಾನಸಿಕ ಸ್ಥಿರತೆಯೂ ಅತೀ ಅಗತ್ಯ. ಮಾನಸಿಕ ಸಮಸ್ಯೆಗಳು ಯಾರಿಗೂ, ಯಾವ ವಯಸ್ಸಿನಲ್ಲೂ ಕಾಣಿಸಿಕೊಳ್ಳಬಹುದು. ಮಾನಸಿಕ ಕಾಯಿಲೆಗೆ ಸರಿಯಾದ ಚಿಕಿತ್ಸೆ ಸಿಗದಿದ್ದಲ್ಲಿ ಅಂಗವೈಕಲ್ಯ ಆದಿಯಾಗಿ ವಿವಿಧ ಆರೋಗ್ಯ ಸಮಸ್ಯೆಗಳು ಬಾಧಿಸಬಹುದು. ಮಾತ್ರವಲ್ಲದೇ ಈ ಸಮಸ್ಯೆಗಳು ಉಲ್ಬಣಿಸಿದರೆ ಸಾವು ಸಂಭವಿಸುವ ಅಪಾಯವೂ ಇದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ವಿಶ್ವದ ಪ್ರತೀ ಎಂಟು ಜನರಲ್ಲಿ ಒಬ್ಬರು ಮಾನಸಿಕ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿ¨ªಾರೆ. ಮಾನಸಿಕ ಕಾಯಿಲೆಯ ಕುರಿತು ಜಾಗೃತಿ ಮೂಡಿಸಲು ಮತ್ತದರ ಪರಿಣಾಮಗಳ ಕುರಿತಂತೆ ಜನರಿಗೆ ತಿಳಿಸುವ ಸಲುವಾಗಿ ಪ್ರತೀವರ್ಷ ಅಕ್ಟೋಬರ್ 10ರಂದು ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ.
ಈ ಬಾರಿಯ ಧ್ಯೇಯ
“ಮಾನಸಿಕ ಆರೋಗ್ಯವು ಸಾರ್ವತ್ರಿಕ ಮಾನವ ಹಕ್ಕು’ ಎಂಬುದು ಈ ವರ್ಷದ ಧ್ಯೇಯವಾಗಿದೆ. ಮಾನಸಿಕ ಸಮಸ್ಯೆಗಳ ಕುರಿತು ಜನರಲ್ಲಿ ತಿಳಿವಳಿಕೆಯನ್ನು ಹೆಚ್ಚಿಸು ವುದು, ಮಾನಸಿಕ ಆರೋಗ್ಯವನ್ನು ಸಾರ್ವತ್ರಿಕ ಮಾನವ ಹಕ್ಕಾಗಿ ಉತ್ತೇಜಿಸುವುದು ಮತ್ತು ಮಾನಸಿಕ ಆರೋಗ್ಯ ರಕ್ಷಣೆಗೆ ಅತ್ಯಗತ್ಯ ಕ್ರಮ ಕೈಗೊಳ್ಳವುದು ಈ ಬಾರಿಯ ವಿಶ್ವ ಮಾನಸಿಕ ಆರೋಗ್ಯ ದಿನದ ಪ್ರಮುಖ ಗುರಿಗಳಾಗಿವೆ.
ಕೀಳರಿಮೆ, ನಿರ್ಲಕ್ಷ್ಯ ಸಲ್ಲದು
ಮಾನಸಿಕ ಕಾಯಿಲೆಗಳಿಗೆ ಪ್ರಥಮ ಚಿಕಿತ್ಸೆ ಅಂದರೆ ಇನ್ನೊಬ್ಬರ ಬಳಿ ನಮ್ಮ ಸಮಸ್ಯೆಗಳು ಹೇಳಿಕೊಳ್ಳುವುದು; ಮತ್ತು ಆ ವ್ಯಕ್ತಿ ಅದನ್ನು ಹಾಸ್ಯ ಮಾಡದೆ, ಅದರ ಗಂಭೀರತೆಯನ್ನು ಅರಿತು ಸೂಕ್ತ ಚಿಕಿತ್ಸೆಗೆ ಪ್ರೇರೇಪಿಸುವುದು. ಮಾನಸಿಕ ಸಮಸ್ಯೆ ಅಂದರೆ ಹುಚ್ಚು ಎನ್ನುವ ತಪ್ಪು ಕಲ್ಪನೆಯಿಂದ ಮೊದಲು ಹೊರ ಬರಬೇಕು. ಮಾನಸಿಕ ಕಾಯಿಲೆಯ ಬಗ್ಗೆ ಕೀಳರಿಮೆ ಸಲ್ಲದು. ಸೂಕ್ತ ಚಿಕಿತ್ಸೆ ಪಡೆದಲ್ಲಿ ಎಲ್ಲರಂತೆ ಬಾಳಬಹುದು.
-ಒತ್ತಡಮುಕ್ತ ಜೀವನದಿಂದ ಮನಸ್ಸಿನ ಆರೋಗ್ಯ ರಕ್ಷಣೆ ಸಾಧ್ಯ
- ದೈಹಿಕ ಮತ್ತು ಮಾನಸಿಕ ಚಟುವಟಿಕೆಯಿಂದ ಕೂಡಿರಲಿ ನಮ್ಮ ದಿನಚರಿ
- ಆರೋಗ್ಯಕರ ಜೀವನ ಶೈಲಿ ಯನ್ನು ನಮ್ಮದಾಗಿಸಿ ಕೊಳ್ಳೋಣ
- ಮದ್ಯಪಾನ, ಮಾದಕದ್ರವ್ಯ ಸೇವನೆಗಳಂತಹ ಚಟಗಳಿಂದ ದೂರವಿರಿ
- ಮಾನಸಿಕ ಸಮಸ್ಯೆಗಳಿಗೆ ಸೂಕ್ತ ಚಿಕಿತ್ಸೆಯಿಂದ ಪರಿಹಾರ ಸಾಧ್ಯ
- ಮಾನಸಿಕ ಸಮಸ್ಯೆ ಎಂದಾಕ್ಷಣ ಭಯಪಡುವ ಅಗತ್ಯವಿಲ್ಲ.
-ಯಾವುದೇ ಮೂಢನಂಬಿಕೆಗಳಿಗೆ ಬಲಿಯಾಗದಿರಿ.
- ಯೋಗ, ಧ್ಯಾನ, ಪ್ರಾರ್ಥನೆಯಂತಹ ಚಟುವಟಿಕೆಗಳಿಗೆ ಪ್ರತೀದಿನ ನಿರ್ದಿಷ್ಟ ಸಮಯವನ್ನು ಮೀಸಲಿಡಿ.
ಭಾರತದಲ್ಲಿ ಹೆಚ್ಚುತ್ತಿದೆ ಮಾನಸಿಕ ಸಮಸ್ಯೆ
ವಿಶ್ವದ ನೆಮ್ಮದಿಯುತ 146 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 126ನೇ ಸ್ಥಾನದಲ್ಲಿದ್ದು, ಇದು ಕಳವಳಕಾರಿ ಸಂಗತಿ ಯಾಗಿದೆ. ಕೋವಿಡ್ ಬಳಿಕ ಈ ಸಂಖ್ಯೆಯಲ್ಲಿ ಹೆಚ್ಚಳ ಆಗಿರುವುದು ಗಮನಿಸಬೇಕಾದ ಸಂಗತಿ. ಸರ್ವೇ ಯೊಂದರ ಪ್ರಕಾರ ದೇಶದ ಜನಸಂಖ್ಯೆಯ ಶೇ. 10ರಿಂದ 15ರಷ್ಟು ಮಂದಿ ಮಾನಸಿಕ ಸಮಸ್ಯೆ ಗಳಿಂದ ಬಳಲುತ್ತಿದ್ದಾರೆ. ಹೀಗಿದ್ದರೂ ಭಾರತದಲ್ಲಿ ಪ್ರಾಥಮಿಕ ಹಂತದಲ್ಲಿ ಮಾನಸಿಕ ಆರೋಗ್ಯ ಸೇವೆಗಳ ಕೊರತೆಯಿದೆ. ಅಲ್ಲದೇ ಗ್ರಾಮೀಣ ಪ್ರದೇಶದ ಜನರಿಗೆ ಈ ಬಗ್ಗೆ ಸಾಕಷ್ಟು ತಿಳಿವಳಿಕೆಯಿಲ್ಲ. ಸರಕಾರ ಈ ಕುರಿತು ಆದಷ್ಟು ಬೇಗ ಎಚ್ಚೆತ್ತು ಕೊಳ್ಳಬೇಕಾಗಿರುವುದು ಅನಿವಾರ್ಯ. ತಳಮಟ್ಟ ದಿಂದಲೇ ಮಾನಸಿಕ ಆರೋಗ್ಯದ ಕಾಳಜಿಯ ಕುರಿತಂತೆ ಜನರಲ್ಲಿ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ.
– ಸುಶ್ಮಿತಾ ನೇರಳಕಟ್ಟೆ
ಟಾಪ್ ನ್ಯೂಸ್
![Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ](https://www.udayavani.com/wp-content/uploads/2024/12/4-36-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…](https://www.udayavani.com/wp-content/uploads/2024/12/Kannada-Sahitya-Sammelana-2024-150x79.jpg)
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
![One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?](https://www.udayavani.com/wp-content/uploads/2024/12/Election1-150x90.jpg)
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
![8](https://www.udayavani.com/wp-content/uploads/2024/12/8-24-150x90.jpg)
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
![ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!](https://www.udayavani.com/wp-content/uploads/2024/12/anwar-manippady-1-150x84.jpg)
ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!
![ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅತ್ಯಗತ್ಯ](https://www.udayavani.com/wp-content/uploads/2024/12/courts-s-1-150x102.jpg)
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅತ್ಯಗತ್ಯ
MUST WATCH
ಹೊಸ ಸೇರ್ಪಡೆ
![Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ](https://www.udayavani.com/wp-content/uploads/2024/12/6-35-150x90.jpg)
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
![5](https://www.udayavani.com/wp-content/uploads/2024/12/5-36-150x90.jpg)
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
![Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ](https://www.udayavani.com/wp-content/uploads/2024/12/4-36-150x90.jpg)
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
![Krantiveer Brigade launched by worshipping the feet of 1008 saints: KS Eshwarappa](https://www.udayavani.com/wp-content/uploads/2024/12/kse-150x87.jpg)
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
![BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ](https://www.udayavani.com/wp-content/uploads/2024/12/3-34-150x90.jpg)
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.