Today World Suicide Prevention Day ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ


Team Udayavani, Sep 10, 2024, 7:45 AM IST

Today World Suicide Prevention Day ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ

ಮನುಷ್ಯ ಜೀವ ಅಮೂಲ್ಯವಾದದ್ದು. ಸಾಮಾನ್ಯನಿಂದ ಹಿಡಿದು ಸೆಲೆಬ್ರಿಟಿವರೆಗೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳನ್ನು ಪ್ರತೀ ದಿನ ನೋಡುತ್ತಿದ್ದೇವೆ. ಹಾಗಾಗಿ ಆತ್ಮಸ್ಥೈರ್ಯ ತುಂಬುವ ಕೆಲಸವಾಗಬೇಕಿದೆ. ಈ ಆಲೋಚನೆಯಿಟ್ಟುಕೊಂಡು ಜಾಗತಿಕವಾಗಿ ಆತ್ಮಹತ್ಯೆ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಬೇಕೆಂಬ ಉದ್ದೇಶದಿಂದ ಪ್ರತೀವರ್ಷ ಸೆ.10ರಂದು ವಿಶ್ವ ಆತ್ಮಹತ್ಯೆ ತಡೆ ದಿನವನ್ನು ಆಚರಿಸಲಾಗುತ್ತದೆ.

ಈ ವರ್ಷದ ಧ್ಯೇಯ
ಪ್ರತೀ ಎರಡು ವರ್ಷಗಳಿಗೆ ಅನ್ವಯವಾಗುವಂತೆ ನಿರ್ದಿಷ್ಟ ಧ್ಯೇಯದೊಂದಿಗೆ ವಿಶ್ವ ಆರೋಗ್ಯ ಸಂಸ್ಥೆ ವಿಶ್ವ ಆತ್ಮಹತ್ಯೆ ತಡೆ ದಿನವನ್ನು ಆಚರಿಸುತ್ತದೆ. 2024-2026ರ ವರೆಗೆ “ಆತ್ಮಹತ್ಯೆಯ ನಿರೂಪಣೆಯನ್ನು ಬದಲಾಯಿಸೋಣ’ ಎಂಬ ಧ್ಯೇಯವಾಕ್ಯದೊಂದಿಗೆ ಆತ್ಮಹತ್ಯೆಗೆ ಯತ್ನಿಸುವ ವ್ಯಕ್ತಿಯನ್ನು ಮಾತನಾಡಿಸುವುದು, ಅವರ ದುಃಖದಲ್ಲಿ ನಾವು ಭಾಗಿಯಾಗೋಣ ಈ ಮೂಲಕ ಆತನನ್ನು ಅಪಾಯದಿಂದ ಪಾರು ಮಾಡೋಣ ಎಂಬ ಉದ್ದೇಶ ಹೊಂದಿದೆ.

ಪ್ರಪಂಚದ ಪರಿಸ್ಥಿತಿ ಹೇಗಿದೆ ?
ವಿಶ್ವದಲ್ಲಿ ಪ್ರತೀ ವರ್ಷ 7 ಲಕ್ಷಕ್ಕೂ ಅಧಿಕ ಮಂದಿ ಆತ್ಮಹತ್ಯೆಗೆ ಶರಣಾದರೆ, ಇದರ 20 ಪಟ್ಟು ಮಂದಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸುತ್ತಾರೆ. ಇನ್ನು ಹಲವರು ಇದರ ಕುರಿತು ಅಲೋಚಿಸುತ್ತಾರೆ. 1 ಲಕ್ಷದಲ್ಲಿ 10.9ರಷ್ಟು ಜನರು ಆತ್ಮಹತ್ಯೆಗೆ ಒಳಾಗಾದರೆ, ಅದರಲ್ಲಿ ಶೇ.73ರಷ್ಟು ಮಧ್ಯಮ ವರ್ಗ ಹಾಗೂ ಆರ್ಥಿಕ ಹಿಂದುಳಿದವರು ಇದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತನ್ನ ಇತ್ತೀಚಿನ ವರದಿಯಲ್ಲಿ ಹೇಳಿದೆ.

ಭಾರತದ ಕಥೆ ಏನು ?
ಭಾರತದಲ್ಲಿ ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆಯ 2022ರ ಅಂಕಿ-ಅಂಶಗಳ ಪ್ರಕಾರ, ವಾರ್ಷಿಕವಾಗಿ 1.7 ಲಕ್ಷ ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರಲ್ಲಿ 1.21ಲಕ್ಷ ಪುರುಷರು ಮತ್ತು 44 ಸಾವಿರ ಮಹಿಳೆಯರಿದ್ದಾರೆ. ಶೇ.58ರಷ್ಟು ನೇಣಿಗೆ, ಶೇ.25ರಷ್ಟು ವಿಷ ಸೇವನೆಯಿಂದ, ಶೇ.5ರಷ್ಟು ನೀರಲ್ಲಿ ಮುಳುಗುವ ಮತ್ತು ಶೇ.2.8ರಷ್ಟು ಅಪಘಾತಗಳ ಮೂಲಕ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮುಖ್ಯವಾಗಿ 18 ರಿಂದ 45 ವಯೋಮಾನದವರೇ ಹೆಚ್ಚಿನ ಸಂಖ್ಯೆಯಲ್ಲಿರುವುದು ಆಘಾತಕಾರಿ ಸಂಗತಿ.

2024ರ ವರದಿಯಲ್ಲೇನಿದೆ ?
ಇತ್ತೀಚೆಗೆ ಎನ್‌ಸಿಆರ್‌ಬಿ ಬಿಡುಗಡೆ ಮಾಡಿದ “ವಿದ್ಯಾರ್ಥಿ ಆತ್ಮಹತ್ಯೆ ಎಂಬ ಸಾಂಕ್ರಾಮಿಕ ರೋಗ’ ವರದಿಯಲ್ಲಿ, ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿ ಆತ್ಮಹತ್ಯೆಗಳು ಭಾರತದ ವಾರ್ಷಿಕ ಜನಸಂಖ್ಯಾ ಬೆಳವಣಿಗೆ ದರವನ್ನು ಮೀರಿಸುತ್ತಿದೆ ಎಂದು ಉಲ್ಲೇಖಿಸಲಾಗಿದೆ. 2013ರಲ್ಲಿ 6,654 ಇದ್ದ ವಿದ್ಯಾರ್ಥಿ ಆತ್ಮಹತ್ಯೆ ಸಂಖ್ಯೆ, 10 ವರ್ಷಗಳ ಬಳಿಕ 2023ರ ಹೊತ್ತಿಗೆ 13,044ರ ವರೆಗೆ ಏರಿಕೆ ಕಂಡಿದೆ.

ತಜ್ಞರು ಏನು ಹೇಳುತ್ತಾರೆ ?
ಓರ್ವನ ಆತ್ಮಹತ್ಯೆ 125 ಜನರ ಮೇಲೆ ಪರಿಣಾಮ ಬೀರುತ್ತದೆ ಎನ್ನುತ್ತಾರೆ ಮನಃಶಾಸ್ತ್ರಜ್ಞರು. ಇತ್ತೀಚಿನ ವರ್ಷಗಳಲ್ಲಿ 15 – 29 ವಯೋಮಾನದವರ ಆತ್ಮಹತ್ಯೆಗಳು ಹೆಚ್ಚುತ್ತಿವೆ. ವಿದ್ಯಾರ್ಥಿ ಮತ್ತು ಯುವ ಜನಾಂಗದ ಕಾಲಘಟ್ಟ ಇದಾಗಿದ್ದು ಮಾನಸಿಕ ಮತ್ತು ಶಾರೀರಿಕ ಬೆಳವಣಿಗೆಯ ಹಂತವಾಗಿದೆ. ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿ,ಖಿನ್ನತೆ ಮತ್ತು ಮಾನಸಿಕ ಸಮಸ್ಯೆಗಳು ಬಹುತೇಕ ಆತ್ಮಹತ್ಯೆಗೆ ಸಾಮಾನ್ಯ ಕಾರಣಗಳಾಗಿವೆಯಾದರೂ, ಪ್ರತಿಯೊಂದೂ ಆತ್ಮಹತ್ಯೆಗೆ ನಿರ್ದಿಷ್ಟವಾದ ಕಾರಣಗಳಿರುತ್ತವೆ ಎನ್ನುತ್ತಾರೆ ಉಡುಪಿ ಡಾ| ಎ.ವಿ ಬಾಳಿಗಾ ಮೆಮೋರಿಯಲ್‌ ಆಸ್ಪತ್ರೆಯ ಮನೋವೈದ್ಯರಾದ ಡಾ| ವಿರೂಪಾಕ್ಷ ದೇವರಮನೆ.

ಆತ್ಮಹತ್ಯೆ ಪ್ರವೃತ್ತಿಗೆ ಕಡಿವಾಣ ಹೇಗೆ?
-ಮನೆಯಲ್ಲಿ ಮಕ್ಕಳಿಗೆ ಮುಕ್ತವಾಗಿ ಮಾತನಾಡುವ ಅವಕಾಶ ಸೃಷ್ಟಿಸಬೇಕು.
-ಅಗತ್ಯ ಮಾರ್ಗದರ್ಶನ ಮತ್ತು ಸಲಹಾ ಕೇಂದ್ರಗಳನ್ನು ಶಾಲಾ-ಕಾಲೇಜು ಮಟ್ಟದಲ್ಲಿ ಸ್ಥಾಪಿಸಬೇಕು.
-ಸಕಾರಾತ್ಮಕ ಚಿಂತನೆಗಳನ್ನು ಬೆಳೆಸುವುದು.
-ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ
-ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಕಾಳಜಿ
-ಪೋಷಕರಿಂದ ಮಕ್ಕಳೊಂದಿಗೆ ಕುಶಲೋಪರಿ ಮಾತುಗಳು

ವಿಶ್ವ ಆತ್ಮಹತ್ಯೆ ನಿಯಂತ್ರಣ
ದಿನವನ್ನು ಕೇವಲ ಒಂದು ದಿನಕ್ಕೆ ಸೀಮಿತ ಮಾಡದೇ, ಪ್ರತೀ ದಿನ ಈ ಕುರಿತಾದ ಚರ್ಚೆ, ನೊಂದವರೊಂದಿಗೆ ಮಾತು, ಮನೋಸ್ಥೈರ್ಯ ತುಂಬುವ ಕಾರ್ಯಗಳು ನಡೆಯಬೇಕು. ಅದೇ ರೀತಿ ಪೋಷಕರು, ಶಿಕ್ಷಕರು ಹಾಗೂ ಸಂಘ-ಸಂಸ್ಥೆಗಳ ಪಾತ್ರವು ಮುಖ್ಯವಾದದ್ದು.

- ವಿಜಯಕುಮಾರ ಹಿರೇಮಠ

ಟಾಪ್ ನ್ಯೂಸ್

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?

ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?

9

BBK11: ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ

Udupi: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ

Udupi: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ

Nagamangala Incident: ತನಿಖೆ ಬಳಿಕ ಇನ್ನಷ್ಟು ಕ್ರಮ… ಗೃಹ ಸಚಿವ ಪರಮೇಶ್ವರ್ ಹೇಳಿಕೆ

Nagamangala Incident: ತನಿಖೆ ಬಳಿಕ ಇನ್ನಷ್ಟು ಕ್ರಮ… ಗೃಹ ಸಚಿವ ಪರಮೇಶ್ವರ್ ಹೇಳಿಕೆ

Delhi: ಸಚಿವೆ ಅತಿಶಿ ಮರ್ಲೆನಾ ದೆಹಲಿ ನೂತನ ಸಿಎಂ: ಶಾಸಕಾಂಗ ಪಕ್ಷದ ಸಭೆ ತೀರ್ಮಾನ?

Delhi: ಸಚಿವೆ ಅತಿಶಿ ಮರ್ಲೆನಾ ದೆಹಲಿ ನೂತನ ಸಿಎಂ: ಶಾಸಕಾಂಗ ಪಕ್ಷದ ಸಭೆ ತೀರ್ಮಾನ?

Kaup: ದಂಡತೀರ್ಥ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್, ಪ್ರಯಾಣಿಕರು ಪಾರು

Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

Anantha-Padnabha-Swamy

Anant Chaturdashi; ಅನಂತವ್ರತ ಅನಂತಕಲ್ಪನೆ…

ಮರುನಾಮಕರಣ ರಾಜಕಾರಣ! ಪ್ರಮುಖ ಸ್ಥಳಗಳು, ನಗರಗಳ ಹೆಸರು ಬದಲಾವಣೆ ಈಚೆಗಿನ ಟ್ರೆಂಡ್‌

ಮರುನಾಮಕರಣ ರಾಜಕಾರಣ! ಪ್ರಮುಖ ಸ್ಥಳಗಳು, ನಗರಗಳ ಹೆಸರು ಬದಲಾವಣೆ ಈಚೆಗಿನ ಟ್ರೆಂಡ್‌

ವಿಕಸಿತ ಭಾರತದ ಕನಸು ಸಾಕಾರದತ್ತ ದಿಟ್ಟ ಹೆಜ್ಜೆ

ವಿಕಸಿತ ಭಾರತದ ಕನಸು ಸಾಕಾರದತ್ತ ದಿಟ್ಟ ಹೆಜ್ಜೆ

1-rrrr

Yakshagana;ನೋಡಿ ಕಲಿಯುವುದು ಬಹಳಷ್ಟಿದೆ: ಶಿವರಾಮ ಜೋಗಿ ಬಿ.ಸಿ.ರೋಡು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Belthangady: ರಸ್ತೆ ಮಧ್ಯೆಯೇ ಬಸ್‌ ನಿಲ್ಲಿಸಿದರೆ ಶಿಸ್ತು ಕ್ರಮ

Belthangady: ರಸ್ತೆ ಮಧ್ಯೆಯೇ ಬಸ್‌ ನಿಲ್ಲಿಸಿದರೆ ಶಿಸ್ತು ಕ್ರಮ

Puttur: ಸಂಪ್ಯ ಮದ್ರಸಾದಲ್ಲಿ ಹಳೆ ಕಾಲದ ವಸ್ತು ಪ್ರದರ್ಶನ

Puttur: ಸಂಪ್ಯ ಮದ್ರಸಾದಲ್ಲಿ ಹಳೆ ಕಾಲದ ವಸ್ತು ಪ್ರದರ್ಶನ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?

ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.