ಮಾಸ್ಕ್ ಧರಿಸಬೇಕೇ ಅಥವಾ ಬೇಡವೇ?


Team Udayavani, Apr 8, 2022, 1:30 PM IST

ಮಾಸ್ಕ್ ಧರಿಸಬೇಕೇ ಅಥವಾ ಬೇಡವೇ?

ಕೋವಿಡ್‌ನಿಂದ ಸ್ವಯಂ ರಕ್ಷಣೆ ಪಡೆಯುವುದು, ಅದರಿಂದ ಪಾರಾಗುವುದು ಪ್ರತಿಯೊಬ್ಬರ ಗುರಿಯಾಗಬೇಕು. ಉದ್ದೇಶವೂ ಆಗಬೇಕು. ಗುರಿಸಾಧನೆ ಆಗಬೇಕೆಂದರೆ, ಕೆಲವು ನಿಯಮ­ಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಆಗ ಮಾತ್ರ ನಮ್ಮ ನೆಲದಿಂದ ಕೋವಿಡ್‌ ಕಾಲ್ಕಿಳುವಂತೆ ಮಾಡಬಹುದು ಮತ್ತು ಕೋವಿಡ್‌ ಜಯಿಸಿದೆವು ಎಂಬ ಹಮ್ಮಿನಲ್ಲಿ ತಲೆಯೆತ್ತಿ ತಿರುಗಬಹುದು.

ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕೊರೊನಾ ಅಥವಾ ಕೋವಿಡ್‌ ಉಂಟುಮಾಡಿದ ಅನಾಹುತ­ವನ್ನು ಈ ಕಾಲಮಾನದ ಜನರು ಬದುಕಿಡೀ ಮರೆಯಲಾರರು. ಕಣ್ಣಿಗೆ ಕಾಣದಂಥ ರೋಗಾಣುವಿನ ಮೂಲಕ ಹರಡಿದ ಕಾಯಿಲೆಯೊಂದು ಇಡೀ ಜಗತ್ತಿನ ಜನರನ್ನು ದುಃಸ್ವಪ್ನದಂತೆ ಕಾಡಿದ್ದನ್ನು ವಿವರಿಸಲು ಪದಗಳಿಲ್ಲ. ಕೋವಿಡ್‌ನ‌ ಮೊದಲ ಅಲೆಯ ಸಂದರ್ಭದಲ್ಲಿ ಅಸಹಾಯಕತೆಯೇ ಎಲ್ಲರ ಬದುಕಾಗಿತ್ತು. ಗೆಳೆಯರು, ಬಂಧುಗಳು, ಒಡಹುಟ್ಟಿದವರು ಒಬ್ಬರ ಹಿಂದೊಬ್ಬರು ಸಾಯುತ್ತಿದ್ದಾಗ ಜಗತ್ತು ಒಂದರೆಕ್ಷಣ ಏನು ಮಾಡಲೂ ತೋಚದೆ ಸ್ತಬ್ಧಗೊಂಡಿತ್ತು. ಕೊರೊನಾದಿಂದ ತಪ್ಪಿಸಿ­ಕೊಂಡವರು, ಮುಂದೇನಾದೀತೋ ಎಂಬ ಭಯದಲ್ಲಿ ಅಂಗೈಲಿ ಜೀವ ಹಿಡಿದುಕೊಂಡು ನಿಂತುಬಿಟ್ಟಿದ್ದರು.

ಕೋವಿಡ್‌ನ‌ ಅಬ್ಬರದ ಕಾರಣಕ್ಕೆ ಜನ ಮನೆಯೊಳಗೇ ಬಂಧಿಗಳಾದರು. ಎಲ್ಲಿಗೂ ಪ್ರಯಾಣಿಸುವಂತಿಲ್ಲ, ಪರಸ್ಪರ­ರನ್ನು ಮುಟ್ಟುವಂತಿಲ್ಲ, ಮಾತನಾಡಿಸುವಂತಿಲ್ಲ ಎಂಬಂಥ ಕಾರಣದಿಂದಾಗಿ ಜನಜೀವನ ಸ್ತಬ್ಧವಾಯಿತು. ಯಂತ್ರಗಳು ಕೆಲಸ ಮಾಡುವುದನ್ನು ನಿಲ್ಲಿಸಿದವು! ಪರಿಣಾಮ, ಉದ್ಯಮಗಳಲ್ಲಿ ಉತ್ಪಾದನೆಯೇ ನಿಂತುಹೋಗಿ ಜಗತ್ತಿನ ಆರ್ಥಿಕ ಸ್ಥಿತಿಯಲ್ಲಿ ನಂಬಲಾಗದಂಥ ಏರುಪೇರು ಕಾಣಿಸಿಕೊಂಡಿತು. ಕೋವಿಡ್‌ನ‌ ಕಾರಣದಿಂದ ಆರೋಗ್ಯ ವ್ಯವಸ್ಥೆ ಹದಗೆಟ್ಟಿತು. ರೋಗಿಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಾ ಹೋಗಿದ್ದರಿಂದ ಚಿಕಿತ್ಸೆ ನೀಡುವುದೇ ಕಷ್ಟವಾ­ಯಿತು. ಪರಿಣಾಮ, ನಮ್ಮ ಕಣ್ಣೆದುರೇ ಜನರು ಉಸಿ­ರಾಟದ ಸಮಸ್ಯೆಯಿಂದ ಸಾಯುವುದನ್ನು ನೋಡಬೇಕಾಯಿತು.

ಇಂಥ ಸಂದರ್ಭದಲ್ಲಿ ಕೋವಿಡ್‌ನಿಂದ ಪಾರಾಗಲು ಕಾಣಿಸಿದ ಮಾರ್ಗಗಳು- ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸ್‌ ಮಾಡಿ­ಕೊಳ್ಳುವುದು, ಸಾಧ್ಯವಾದಷ್ಟೂ ಮಟ್ಟಿಗೆ ಪ್ರಯಾಣ­ವನ್ನು ಕಡಿಮೆ ಮಾಡುವುದು ಮತ್ತು ಲಸಿಕೆ ಹಾಕಿಸಿ­ಕೊಳ್ಳುವುದು. ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ­ದ್ದರಿಂದ ಕೋವಿಡ್‌ನ‌ ಹೊಡೆತದಿಂದ ಪಾರಾಗಲು ಸಾಧ್ಯ­ವಾಗಿದೆ ಎನ್ನುವುದು ಎಲ್ಲರಿಗೂ ತಿಳಿದಿರುವ ಸತ್ಯ.

ಇದೀಗ, ಒಮಿಕ್ರಾನ್‌ ತಳಿಯ ಹೆಸರಿನಲ್ಲಿ ಕೋವಿಡ್‌ನ‌ ಮೂರನೇ ಅಲೆಯೂ ಬಂದುಹೋಗಿದೆ. ಅದು ಅಷ್ಟೇನೂ ಮಾರಣಾಂತಿಕವಾಗಿರಲಿಲ್ಲ ಅನ್ನುವುದು ಸಮಾಧಾನದ ಸಂಗತಿ. ಕೋವಿಡ್‌ ರೂಪಾಂತರಿ ತಳಿಯು ಉಂಟು­ಮಾಡುವ ಸಣ್ಣಪುಟ್ಟ ಸಮಸ್ಯೆಗಳೊಂದಿಗೆ ಹೊಂದಿಕೊಂಡು ಬಾಳಲು ಮತ್ತು ಹಳೆಯದನ್ನು ಮರೆತು ಬದುಕುವುದನ್ನೂ ಜನ ಅಭ್ಯಾಸ ಮಾಡಿಕೊಂಡಿದ್ದಾರೆ.

ಒಮಿಕ್ರಾನ್‌ ತಳಿ ಪ್ರಾಣಾಂತಿಕವಲ್ಲ ಎಂದು ಖಚಿತವಾದ ಬಳಿಕ ಮಾಸ್ಕ್ ಧರಿಸುವುದು ಕಡ್ಡಾಯ ಎಂಬ ನಿಯಮ­ವನ್ನು ಹಲವು ರಾಜ್ಯಗಳು ತೆಗೆದುಹಾಕಿವೆ. ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಬೇಕೋ ಬೇಡವೋ ಎಂಬ ವಿಷಯವೂ ಈಗ ಗಂಭೀರ ಚರ್ಚೆಯ ವಸ್ತುವಾಗಿದೆ. ಮಾಸ್ಕ್ ಧರಿಸಿ ಓಡಾಡುವುದು ಸರಿಯೋ ಅಥವಾ ಮಾಸ್ಕ್ ಇಲ್ಲದೇ ಅಡ್ಡಾಡುವುದೇ ಸರಿಯೋ ಎಂಬುದು ಮಿಲಿಯನ್‌ ಡಾಲರ್‌ ಪ್ರಶ್ನೆಯಾಗಿದೆ.

ವಾಸ್ತವವೇನೆಂದರೆ ನಾವು ಕೋವಿಡ್‌ನಿಂದ ಸಂಪೂರ್ಣವಾಗಿ ಮುಕ್ತರಾಗಿಲ್ಲ. ಈ ಕಾಯಿಲೆ ಇನ್ನೂ ಕೆಲವು ವರ್ಷ ನಮ್ಮೊಂದಿಗೆ ಇರುತ್ತದೆ ಎಂಬುದು ಸ್ಪಷ್ಟ. ಸಮಾಧಾನದ ಸಂಗತಿಯೆಂದರೆ- ಇದು ಮೊದಲಿನಷ್ಟು ತೀವ್ರವಾಗಿರುವುದಿಲ್ಲ. ಕಾರಣಗಳು ಹಲವು. ಅವುಗಳನ್ನು ಹೀಗೆ ಪಟ್ಟಿ ಮಾಡಬಹುದು: 1. ನಮ್ಮ ದೇಶದ ಪ್ರತಿಯೊಬ್ಬರೂ ಕೋವಿಡ್‌ನ‌ ಮೂರು ಅಲೆಗಳ ಪೈಕಿ ಒಂದರ ಸೋಂಕಿಗಾದರೂ ಒಳಗಾಗಿ¨ªಾರೆ. 2. ಹೆಚ್ಚಿನವರು ಲಸಿಕೆ ತೆಗೆದುಕೊಂಡಿ¨ªಾರೆ. (ಈವರೆಗೆ 180 ಕೋಟಿ ವ್ಯಾಕ್ಸಿನೇಶನ್‌ ಆಗಿದೆ) 3. 12 ವರ್ಷಕ್ಕಿಂತ ಮೇಲ್ಪಟ್ಟ ವಯೋಮಾನದ ಮಕ್ಕಳಿಗೆ ಕೋವಿಡ್‌ ಪ್ರತಿರೋಧಕ ಇಂಜೆಕ್ಷನ್‌ ನೀಡಲಾಗುತ್ತಿದೆ. 4. ಸೋಂಕು ಮತ್ತು ವ್ಯಾಕ್ಸಿನೇಶನ್‌ನ ಕಾರಣದಿಂದ ಜನರಿಗೆ ಹೆಚ್ಚಿನ ಪ್ರತಿರೋಧಕ ಶಕ್ತಿ ಬಂದಿದ್ದು ಗಂಭೀರ ಕಾಯಿಲೆಯ ವಿರುದ್ಧ ಹೋರಾಡಲು ಸಹಕಾರಿಯಾಗಿದೆ. 5. ಒಮಿಕ್ರಾನ್‌ ತಳಿಯು ಹೆಚ್ಚು ರೂಪಾಂತರಗಳನ್ನು ಹೊಂದಿರುವುದು ನಿಜವಾದರೂ ಹೆಚ್ಚು ಅಪಾಯಕಾರಿಯಲ್ಲ ಮತ್ತು ಹೆಚ್ಚು ಅವಧಿಯವರೆಗೆ ಉಳಿಯುವಂಥದಲ್ಲ ಎಂದೂ ತಿಳಿದುಬಂದಿದೆ. 6. ಭವಿಷ್ಯದ ದಿನಗಳಲ್ಲಿ ಕಾಣಿಸಿಕೊಳ್ಳುವ ರೂಪಾಂತರಿ ತಳಿಗಳೂ ಹೆಚ್ಚಿನಂಶ ಇದೇ ಗುಣವಿಶೇಷ ಹೊಂದಿರುತ್ತವೆ ಎಂದು ಭಾವಿಸಬಹುದಾಗಿದೆ.

ಕೋವಿಡ್‌ನ‌ ಕಾರಣಕ್ಕೆ ಕಳೆದ ಎರಡು ವರ್ಷದಲ್ಲಿ ಎಲ್ಲ ಬಗೆಯ ಔದ್ಯೋಗಿಕ ಚಟುವಟಿಕೆಗಳು ನಿಂತುಹೋಗಿ­ದ್ದರಿಂದ ಆದ ಉದ್ಯೋಗ ನಷ್ಟ, ಆರ್ಥಿಕ ಸಂಕಷ್ಟ, ನಿರುದ್ಯೋಗ ಸಮಸ್ಯೆಗಳಿಂದ ಜತೆಯಾದ ಸಮಸ್ಯೆಗಳು ಈಗಲೂ ಕಣ್ಣೆದುರಿಗೇ ಇವೆ. ಈ ಸಮಸ್ಯೆಗಳಿಂದ ಸ್ವಲ್ಪಮಟ್ಟಿ­ಗಾ­ದರೂ ಪಾರಾಗಬೇಕೆಂದರೆ ಕೋವಿಡ್‌ ತಡೆಯಲು ಹಾಕಿಕೊಂಡಿದ್ದ ಕಠಿನ ನಿಯಮಗಳನ್ನು ಸ್ವಲ್ಪ ಮಟ್ಟಿಗೆ ಸಡಿಲಿಸುವುದು ಉತ್ತಮ ಎಂಬುದು ನನ್ನ ಅಭಿಪ್ರಾಯ. ಆದರೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದು­ಕೊಳ್ಳು­ವುದು, ಸ್ಯಾನಿಟೈಸ್‌( ಪದೇಪದೆ ಕೈ ತೊಳೆದುಕೊಳ್ಳು­ವುದು) ಮಾಡಿಕೊಳ್ಳುವುದನ್ನು ಕಡ್ಡಾಯವಾಗಿ ಉಳಿಸಿ­ಕೊಂಡೇ ಹೆಜ್ಜೆ ಮುಂದಿಡಬೇಕು ಅನ್ನುವುದೂ ನನ್ನ ಸ್ಪಷ್ಟ ಅಭಿಪ್ರಾಯ. ಹೀಗೆ ಮಾಡುವುದರಿಂದ ಇನ್ನೂ ಅಸ್ತಿತ್ವದಲ್ಲಿರುವ ಕೋವಿಡ್‌ ಸೋಂಕು ಹರಡುವುದನ್ನು ತಡೆಗಟ್ಟಬಹುದು ಮತ್ತು ಉಸಿರಾಟದ ಕಾರಣಕ್ಕೆ ಹರಡುವ ಹಲವು ಸೋಂಕಿನ ಕಾಯಿಲೆಗಳನ್ನು ತಡೆಯಬಹುದಾಗಿದೆ. ಹಾಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಪದೇಪದೆ ಕೈ ತೊಳೆದುಕೊಳ್ಳುವುದು ಮತ್ತಷ್ಟು ದಿನಗಳ ವರೆಗೆ ಎಲ್ಲರೂ ಪಾಲಿಸಬೇಕಾದ ನಿಯಮವೇ ಆಗಿರಲಿ.

ಹೇಳಲೇಬೇಕಾದ ಮಾತೊಂದಿದೆ. ಏನೆಂದರೆ, ಕೋವಿಡ್‌ ಅನಾಹುತದಿಂದ ಪಾರಾಗಲೇಬೇಕೆಂದರೆ ಹಲವು ಬಗೆಯ ಎಚ್ಚರಿಕೆ ವಹಿಸಬೇಕಿರುವುದು ಅತ್ಯಗತ್ಯ. ಮಾಸ್ಕ್ ಧರಿಸುವುದು, ಸ್ಯಾನಿಟೈಸ್‌ ಮಾಡಿಕೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಎಲ್ಲ ನಾಗರಿಕರ ಕರ್ತವ್ಯವಾಗ­ಬೇಕೇ ವಿನಾ ಅದು ಯಾರಿಗೂ ಹೊರೆ ಎಂಬಂತೆ ಭಾಸವಾಗ­ಬಾರದು. ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ದಂಡ ವಿಧಿಸುವ ಸಂದರ್ಭ ಉದ್ಭವಿಸಲೇಬಾರದು. ಕೋವಿಡ್‌ನಿಂದ ಸ್ವಯಂ ರಕ್ಷಣೆ ಪಡೆಯುವುದು, ಅದರಿಂದ ಪಾರಾಗು­ವುದು ಪ್ರತಿಯೊಬ್ಬರ ಗುರಿಯಾಗಬೇಕು. ಉದ್ದೇಶವೂ ಆಗಬೇಕು. ಗುರಿಸಾಧನೆ ಆಗಬೇಕೆಂದರೆ ಕೆಲವು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಆಗ ಮಾತ್ರ ನಮ್ಮ ನೆಲದಿಂದ ಕೋವಿಡ್‌ ಕಾಲ್ಕಿಳುವಂತೆ ಮಾಡಬಹುದು ಮತ್ತು ಕೋವಿಡ್‌ ಜಯಿಸಿದೆವು ಎಂಬ ಹಮ್ಮಿನಲ್ಲಿ ತಲೆಯೆತ್ತಿ ತಿರುಗಬಹುದು.

ಲೇಖಕರು: ಮಣಿಪಾಲ್‌ ಆಸ್ಪತ್ರೆ ಸಮೂಹದ ಮುಖ್ಯಸ್ಥರು.

– ಡಾ| ಸುದರ್ಶನ ಬಲ್ಲಾಳ್‌

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.