ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…


Team Udayavani, Sep 20, 2024, 6:30 AM IST

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ನೆರೆಯ ಕೇರಳದ ವಯನಾಡಿನಲ್ಲಾದ ಭೀಕರ ಭೂಕುಸಿತವು ರಾಜ್ಯದ ಪಶ್ಚಿಮಘಟ್ಟದ ತಪ್ಪಲಿನಲ್ಲಿ ಬದುಕು ಕಟ್ಟಿಕೊಂಡವರನ್ನೂ ಬೆಚ್ಚಿಬೀಳಿಸಿದೆ. ಇತ್ತೀಚೆಗೆ ರಾಜ್ಯದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡಗಳನ್ನೂ ಒಳಗೊಂಡಂತೆ ಘಟ್ಟ ಪ್ರದೇಶದ ಹಲವೆಡೆ ಭೂಕುಸಿತದಂಥ ಘಟನೆಗಳು ನಡೆದಿವೆ. ಈ ಎಲ್ಲ ದುರಂತಗಳು, ಶತಮಾನಗಳಿಂದಲೂ ಪಶ್ಚಿಮಘಟ್ಟ ಪ್ರದೇಶ ಅತ್ಯಂತ ಸುರಕ್ಷಿತ ಅನ್ನುವ ಭಾವದಲ್ಲಿ ಬದುಕುತ್ತಿದ್ದ ಮಲೆನಾಡಿನ ಜನಸಮೂಹದ ದಿಗಿಲಿಗೆ ಕಾರಣವಾಗಿದೆ.

ಕಾಡನ್ನೂ ಒಳಗೊಂಡಂತೆ ನಾಡಿನ ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆಯು ಆಳುವ ಸರಕಾರ ಮತ್ತು ಸಾರ್ವಜನಿಕರ ಹೊಣೆಯಾಗಿದೆ. ಆದರೆ ಇತ್ತೀಚಿನ ಅರಣ್ಯ ಒತ್ತುವರಿ, ಗಣಿಗಾರಿಕೆ, ರಸ್ತೆ, ಅಣೆಕಟ್ಟು ಮತ್ತಿತರ ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ತೀವ್ರಗತಿಯ ಅರಣ್ಯನಾಶವು ಸಕಲ ಜೀವಚರಗಳ ವರ್ತಮಾನ ಮತ್ತು ಭವಿಷ್ಯತ್ತಿನ ಆತಂಕವನ್ನು ಹೆಚ್ಚಿಸಿದೆ.

ಪರಿಣಾಮವಾಗಿ ವನ್ಯಮೃಗಗಳ ಆವಾಸ ನಾಶ, ಅಕಾಲಿಕ ಮಳೆ, ಋತುಮಾನ- ಹವಾಮಾನಗಳ ವೈಪರೀತ್ಯಗಳಂತಹ ನೈಸರ್ಗಿಕ ವಿಪತ್ತುಗಳು ಹೆಚ್ಚುತ್ತಲೇ ಇವೆ. ಸರಕಾರವೇ ಹೇಳಿರುವಂತೆ ಕರ್ನಾಟಕದಲ್ಲಿ 2.04 ಲಕ್ಷ ಎಕ್ರೆ ಅರಣ್ಯ ಭೂಮಿ ಒತ್ತುವರಿಯಾಗಿದೆ. ಇದರಲ್ಲಿ ಹೊಟ್ಟೆಪಾಡಿಗಾಗಿ ಬಡಕುಟುಂಬಗಳು ಮಾಡಿಕೊಂಡಿರುವ ಒತ್ತುವರಿ ಅಲ್ಪ ಪ್ರಮಾಣದ್ದು. ಆದರೆ ನೂರಾರು ಎಕ್ರೆ ಜಮೀನಾªರರು ಪುನಃ ಎಕ್ರೆಗಟ್ಟಲೆ ಅರಣ್ಯ ಒತ್ತುವರಿ ಮಾಡಿ ತೋಟ, ಅನಧಿಕೃತ ರೆಸಾರ್ಟ್‌, ಹೋಮ್‌ ಸ್ಟೇ ನಿರ್ಮಿಸಿರುವುದು ಅಕ್ಷಮ್ಯ.

ಇದೆಲ್ಲ ಅಕ್ರಮಗಳಿಗೆ ಆಸ್ಪದ ನೀಡುತ್ತಾ ಬಂದ ಎಲ್ಲ ಸರಕಾರಗಳು, ಜನಪ್ರತಿನಿಧಿಗಳು, ಅಧಿಕಾರಿಗಳ ವೈಫಲ್ಯವೂ ಹೌದು. ಎಲ್ಲರ ಆತ್ಮದ್ರೋಹಕ್ಕೆ ಮಲೆನಾಡು ಬರಿದಾಗುತ್ತಲಿದೆ. ಉಳ್ಳವರು ದುರಾಸೆಗಾಗಿ ಮಾಡಿಕೊಂಡ ಒತ್ತುವರಿಯನ್ನು ಸಕ್ರಮಗೊಳಿಸದೆ ತೆರವುಗೊಳಿಸಿ ಪಶ್ಚಿಮಘಟ್ಟದ ಅರಣ್ಯ ಸಂಪತ್ತನ್ನು ರಕ್ಷಣೆ ಮಾಡಬೇಕೆಂಬ ಕೂಗು ಜೋರಾಗಿ ಕೇಳುತ್ತಿದೆ.

ರಾಜ್ಯ ಸರಕಾರವು ಇದೀಗ ಎಚ್ಚೆತ್ತುಕೊಂಡು ಜೇನುಗೂಡಿಗೆ ಕೈಹಾಕುವ ಧೈರ್ಯಮಾಡಿ ಅರಣ್ಯ ಒತ್ತುವರಿ ತೆರವಿಗೆ “ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯ ಪಡೆ’ ರಚಿಸಿರುವುದು ಸ್ವಾಗತಾರ್ಹ ಬೆಳವಣಿಗೆ. ನ್ಯಾಯಾಲಯದ ನಿರ್ದೇಶನದಂತೆ ಅರಣ್ಯ ಇಲಾಖೆ ಕ್ರಮಕ್ಕೆ ಮುಂದಾಗುವ ಹೊತ್ತಿಗೆ ಕೇಂದ್ರ ಸರಕಾರವೂ ಕಸ್ತೂರಿರಂಗನ್‌ ವರದಿ ಜಾರಿಗೆ ಪುನಃ ಅಧಿಸೂಚನೆ ಹೊರಡಿಸಿದೆ. ಮಳೆಗಾಲದ ಕೊನೆಗಾಲದಲ್ಲಿ ಮಲೆನಾಡಿನಲ್ಲಿ ದೊಡ್ಡ ಸಂಚಲನಕ್ಕೆ ಕಾರಣವಾಗುತ್ತಿರುವ “ಒತ್ತುವರಿ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಎಲ್ಲೆಡೆ ಪ್ರತಿಭಟನೆಗಳೂ ತೀವ್ರಗೊಂಡಿವೆ. ಜೀವನ ನಿರ್ವಹಣೆಯ ಅನಿವಾರ್ಯತೆಯಲ್ಲಿ ಒಂದಷ್ಟು ಕಾಡು ಒತ್ತುವರಿ ಮಾಡಿ ಬದುಕು ಕಟ್ಟಿಕೊಂಡ ಸಣ್ಣಪುಟ್ಟ ಸಾಗುವಳಿದಾರರು, ವಿವಿಧ ನೀರಾವರಿ ಯೋಜನೆಗಳ ಮುಳುಗಡೆ ಸಂತ್ರಸ್ತರು, ಯೋಜನಾ ನಿರಾಶ್ರಿತರು, ಭೂರಹಿತರು ಹಲವಾರು ವರ್ಷಗಳಿಂದಲೂ ಸರಕಾರ ಹೇಳಿದಾಗಲೆಲ್ಲ ವಿವಿಧ ನಮೂನೆಗಳಲ್ಲಿ ಅರ್ಜಿ ಸಲ್ಲಿಸಿ ಹಕ್ಕುಪತ್ರಕ್ಕಾಗಿ ಕಾಯುತ್ತಿರುವ ಚಾತಕಪಕ್ಷಿಗಳಂತಾಗಿದ್ದು ಇದೀಗ ಒತ್ತುವರಿ ಗುಮ್ಮ ಅವರ ನಿದ್ದೆಗೆಡಿಸಿದೆ.

ಮತ್ತೊಂದೆಡೆ ಇಲ್ಲಿಯ ಉಳ್ಳವರು ಮತ್ತು ಜಮೀನಾªರರು ತಮಗೆ ಸಾಕಷ್ಟು ಕೃಷಿ ಜಮೀನು ಇದ್ದಾಗಲೂ ಗುಡ್ಡಗಳಿಗೆ ಬೇಲಿ ಹಾಕಿಕೊಂಡು ಹತ್ತಾರು ಎಕ್ರೆ ಕಾಡು ಕರಗಿಸಿ ಸಾಗುವಳಿಗಾಗಿ ವರ್ಷವೂ ತಮ್ಮ ಬೇಲಿಯನ್ನು ಕಾಡುಗುಡ್ಡ, ಹೊಳೆ, ಹಳ್ಳಗಳವರೆಗೆ ತೋಟವನ್ನು ವಿಸ್ತರಿಸಿಕೊಂಡಿರುವ ಪ್ರಭಾವಿಗಳಾಗಿದ್ದಾರೆ. ಅವರೆಲ್ಲರೂ ಈಗ ಬಡ ರೈತರು, ಕೂಲಿಕಾರ್ಮಿಕರ ಜತೆಗೂಡಿ ಒತ್ತುವರಿ ವಿರೋಧಿ ಹೋರಾಟದ ಕಾವೇರಿಸಿ ಹೇಗಾದರೂ ಒತ್ತುವರಿ ತೆರವು ಕಾರ್ಯಚರಣೆಯನ್ನು ಹತ್ತಿಕ್ಕಲೇಬೇಕೆಂದು ಹತ್ತುಹಲವು ನಮೂನೆಯಲ್ಲಿ ಒತ್ತಡ ಹೇರಲು ಸಕಲ ಶಕ್ತಿ, ಪ್ರಭಾವಗಳ ಮೊರೆಹೋಗಿದ್ದಾರೆ.

ಅರಣ್ಯವಾಸಿಗಳ ಪ್ರಕಾರ “ಸಹಜ ಕಾಡನ್ನು ಕಡಿದು ಅಕೇಶಿಯ, ನೀಲಗಿರಿ ನೆಡುತೋಪುಗಳನ್ನು ಬೆಳೆಸಿದ ಇಲಾಖೆ/ಸರಕಾರವೇ ಅರಣ್ಯನಾಶದ ಮೊದಲ ಆರೋಪಿ’. ಅಷ್ಟರ ನಡುವೆ ಹೊಟ್ಟೆಪಾಡಿಗೆ ಬಡವರು ಮಾಡಿಕೊಂಡ 3 ಎಕ್ರೆವರೆಗಿನ ಒತ್ತುವರಿ, ರೆವಿನ್ಯೂ ಮತ್ತು ಸೊಪ್ಪಿನಬೆಟ್ಟ 4(1) ಭೂಮಿಯನ್ನು ಮಾನವೀಯ ನೆಲೆಯಲ್ಲಿ ಹೊರಗಿರಿಸಿ, ಸ್ಥಿತಿವಂತರ ಅನಿಯಂತ್ರಿತ ಒತ್ತುವರಿ ಭೂಮಿಯನ್ನು ಯಾವುದೇ ಪ್ರಭಾವಕ್ಕೆ ಮಣಿಯದೆ ತೆರವುಗೊಳಿಸುವ ಮೂಲಕ ಪಶ್ಚಿಮಘಟ್ಟದ ಸೂಕ್ಷ್ಮ ಪರಿಸರಕ್ಕೆ ಹಾನಿಯಾಗದಂತೆ ಕ್ರಮವಹಿಸಬೇಕೆಂಬ ನಿಲುವಿಗೆ ಸಾರ್ವಜನಿಕರ ಒಲವಿದೆ.

ಪ್ರತಿಭಟನೆಯು ತೀವ್ರಗೊಂಡು ಸದ್ಯಕ್ಕೆ ಒತ್ತುವರಿ ತೆರವು ಕಾರ್ಯ ನಿಂತು ಯಥಾಸ್ಥಿತಿ ಮುಂದುವರಿಯುವುವಂತಾದರೆ ಮಲೆನಾಡಿನ ಜ್ವಲಂತ ಸಮಸ್ಯೆಗೆ ಪರಿಹಾರ ಲಭಿಸೀತೆ? ಯೋಚಿಸಬೇಕಿದೆ. ರೈತ ಸಂಘಟನೆಗಳು ಒತ್ತುವರಿ ಸಮಸ್ಯೆ ಬಗೆಹರಿಸಲು ನೀಡಿದ ಪರಿಹಾರ ಸೂತ್ರಗಳನ್ನೂ ಮುಕ್ತವಾಗಿ, ಸಂವೇದನಾಶೀಲರಾಗಿ ಚರ್ಚಿಸಬೇಕು.

-ಕಂದಾಯ ಮತ್ತು ಅರಣ್ಯ ಭೂಮಿಗಳ ವಿಂಗಡನೆಯನ್ನು ಪುನರ್‌ಪರಿಶೀಲಿಸಿ ವಾಸ್ತವಿಕ ನೆಲೆಗಟ್ಟಿನಲ್ಲಿ ವಿಂಗಡಿಸಬೇಕು.
-ಜೀವನೋಪಾಯಕ್ಕಾಗಿ ಮಾಡಿರುವ ಕನಿಷ್ಠ ಪ್ರಮಾಣದ ಸಾಗುವಳಿ ಭೂಮಿಗೆ ಹಕ್ಕುಪತ್ರ ನೀಡಿ ಮಿಕ್ಕ ಜಾಗಗಳನ್ನು ಅರಣ್ಯ ಎಂದು ಘೋಷಿಸಬೇಕು.
-ಸ್ವತಃ ಅರಣ್ಯ ಇಲಾಖೆಯೇ ಕಾಡನ್ನು ಒತ್ತುವರಿ ಮಾಡಿ ಬೆಳೆಸಿರುವ ನೆಡುತೋಪುಗಳನ್ನು ತೆರವುಗೊಳಿಸಿ ಸಹಜ ಅರಣ್ಯ ಬೆಳಸಬೇಕು. ಬಲಾಡ್ಯರ ಒತ್ತುವರಿಗಳನ್ನು ತೆರವುಗೊಳಿಸಿ ಅರಣ್ಯ ಪ್ರದೇಶಕ್ಕೆ ಪುನಃ ಸೇರಿಸಬೇಕು.
-ಮನೆಕಟ್ಟಿಕೊಂಡು ವಾಸವಾಗಿರುವ ಪ್ರತೀ ಕುಟುಂಬಕ್ಕೆ ಮನೆಯ ಹಕ್ಕುಪತ್ರ ನೀಡಬೇಕು.
-ಸಾರ್ವಜನಿಕ ಸಹಭಾಗಿತ್ವದ ಪರಿಸರ ಸಂರಕ್ಷಣ ಯೋಜನೆಗಳನ್ನು ಜಾರಿಗೊಳಿಸಬೇಕು. ಅದಕ್ಕಾಗಿ ಸಮಗ್ರ ಪರಿಸರ ಇಲಾಖೆಯೊಂದನ್ನು ಸ್ಥಾಪಿಸಬೇಕು.
-ವಿನಾಶಕಾರಿ ಅಭಿವೃದ್ಧಿಗೆ ಕಡಿವಾಣ ಹಾಕಿ ವೈಜ್ಞಾನಿಕ ಅಭಿವೃದ್ಧಿ ಜಾರಿಗೊಳಿಸಬೇಕು.
-ಹವಾಗುಣ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ಯೋಜನೆ ರೂಪಿಸಬೇಕು. ಇದಕ್ಕೆ ಪೂರಕವಾಗಿ ತಜ್ಞರು, ರೈತರು-ಸ್ಥಳೀಯರನ್ನೊಳಗೊಂಡ ನಾಗರಿಕ ಸಮಿತಿಗಳನ್ನು ರಚಿಸಬೇಕು.
-ಅದಕ್ಕಾಗಿ ಕಾನೂನು ತಿದ್ದುಪಡಿ ಮಾಡಬೇಕು.
ಇದು ಸಾಧ್ಯವಾಗಲಿ, ರಾಜಕೀಯ ಹಿತಾಸಕ್ತಿಗಳಾಚೆಗೆ ಮಲೆನಾಡಿನ ನಿವಾಸಿಗಳ ಬದುಕು ಕಸಿಯದೆಯೇ ಹಸುರು ಉಳಿಯುವಂತಾಗಲಿ. ಸರಕಾರವು ಈ ತಂತಿಮೇಲಿನ ನಡಿಗೆಯನ್ನು ನಾಜೂಕಿನಿಂದ ಕೈಗೊಳ್ಳಲಿ ಎಂಬುದು ಆಶಯ.

-ಸತೀಶ್‌ ಜಿ.ಕೆ.,ತೀರ್ಥಹಳ್ಳಿ,

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India ಸೆಕ್ಯುಲರ್‌ ಸಿವಿಲ್‌ ಕೋಡ್‌-ನಾಡಿನ ನಾಡಿಮಿಡಿತದ ಕರೆ

India ಸೆಕ್ಯುಲರ್‌ ಸಿವಿಲ್‌ ಕೋಡ್‌-ನಾಡಿನ ನಾಡಿಮಿಡಿತದ ಕರೆ

Cinema Story:”ಇಂತಹ” ನೆಗೆಟಿವ್ ಕಥಾ ವಸ್ತುಗಳಿಲ್ಲದೇನೆ ಸಿನಿಮಾ ಬಾಕ್ಸಾಫೀಸ್ ತುಂಬ ಬಹುದೇ ?

Cinema Story:”ಇಂತಹ” ನೆಗೆಟಿವ್ ಕಥಾ ವಸ್ತುಗಳಿಲ್ಲದೇನೆ ಸಿನಿಮಾ ಬಾಕ್ಸಾಫೀಸ್ ತುಂಬ ಬಹುದೇ ?

ರಾಜ್ಯದಲ್ಲಿ ಇನ್ನೊಂದು ಪಕ್ಷದ ಸರ್ಕಾರವಿದ್ದಾಗ ಈ ರಾಜ್ಯಪಾಲರುಗಳು‎ ತುಂಬಾ ಆತಂತ್ರ ಸ್ಥಿತಿ

ಮುಡಾ: ಸಿದ್ದು ವಿರುದ್ಧ ರಾಜ್ಯಪಾಲರ prosecution ಅನುಮತಿ ಸಿಎಂ ಸ್ಥಾನಕ್ಕೆ ಮುಳುವಾಗಬಹುದೇ?

ಪ್ರವಾಸ ಕಥನ 5:ಕನ್ನಡ ತುಳು, ನಾಡು-ನುಡಿ ಸಂಸ್ಕೃತಿಯ ರಾಯಭಾರಿ ಸರ್ವೋತ್ತಮ ಶೆಟ್ಟಿ

ಪ್ರವಾಸ ಕಥನ 5:ಪರೀಕ To ಅಬುಧಾಬಿ ಪಯಣ….ಸಂಸ್ಕೃತಿಯ ರಾಯಭಾರಿ ಸರ್ವೋತ್ತಮ ಶೆಟ್ಟಿ ಯಶೋಗಾಥೆ

Private Job Quota:ಖಾಸಗಿ ವಲಯದಲ್ಲಿ ಮೀಸಲಾತಿ ವಿಧೇಯಕ ಜಾರಿಯಾದರೆ…ಮುಂದಿನ ಪರಿಣಾಮವೇನು?

Private Job Quota:ಖಾಸಗಿ ವಲಯದಲ್ಲಿ ಮೀಸಲಾತಿ ವಿಧೇಯಕ ಜಾರಿಯಾದರೆ…ಮುಂದಿನ ಪರಿಣಾಮವೇನು?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.