ಸವಾಲುಗಳು ಇಲ್ಲದೆ, ಸಮ್ಮೇಳನ ನಡೆಯದು

ಕಸಾಪ ಅಧ್ಯಕ್ಷ ಮನು ಬಳಿಗಾರ್‌ ಸಂದರ್ಶನ

Team Udayavani, Feb 6, 2020, 6:01 AM IST

sam-10

ಕಲ್ಯಾಣ ಕರ್ನಾಟಕದ ನಾಡು ಕಲಬುರಗಿಯಲ್ಲಿ ಸಾಹಿತ್ಯ ಸಮ್ಮೇಳನವೆಂಬ ಕನ್ನಡದ ಹಬ್ಬದ ಅಬ್ಬರ ಜೋರಾಗಿಯೇ ನಡೆಯುತ್ತಿದೆ. ಈ ಸಾರ್ಥಕತೆಯ ಹಿಂದಿರುವ ಶಕ್ತಿ, ಕನ್ನಡ ಸಾಹಿತ್ಯ ಪರಿಷತ್ತು. ಕಸಾಪ ಅಧ್ಯಕ್ಷ ಮನು ಬಳಿಗಾರ್‌ ಅವರಿಗೆ ಇದು 4ನೇ ಸಮ್ಮೇಳನ ಸಂಘಟನೆಯ ಅನುಭವ. ಈ ಕುರಿತು ಒಂದು ಪುಟ್ಟ ಮಾತುಕತೆ…

*ಗಡಿನಾಡಿನಲ್ಲಿ ಸಮ್ಮೇಳನಗಳನ್ನು ಸಂಘಟಿಸುವಾಗ ಎದುರಾಗುವ ಪ್ರಮುಖ ಸವಾಲುಗಳೇನು?
– ಎಲ್ಲಾ ಕಡೆಗಳಲ್ಲಿ ಇರುವಂಥ ಸಮಸ್ಯೆಗಳು ಇಲ್ಲಿಯೂ ಇದ್ದವು. ಅದರಲ್ಲೂ ಗಡಿನಾಡಿನಲ್ಲಿ ಸಮ್ಮೇಳನವನ್ನು ಸಂಘಟಿಸುವಾಗ ಪ್ರಮುಖವಾಗಿ ಅಲ್ಲಿನ ಸ್ಥಿತಿ- ಗತಿ, ಕನ್ನಡ ಮಾಧ್ಯಮ ಜತೆಗೆ ಅಲ್ಲಿನ ಉದ್ಯೋಗದ ಬಗ್ಗೆ ಸವಾಲುಗಳು ಎದುರಾಗುತ್ತವೆ. ಗಡಿನಾಡಿನ ಹಲವು ಸಮಸ್ಯೆಗಳ ಬಗ್ಗೆ 85ನೇ ಅಖೀಲ ಭಾರತ ಸಾಹಿತ್ಯ ಸಮ್ಮೇಳನ ಬೆಳಕು ಚೆಲ್ಲಲಿದೆ.

* ಪ್ರತಿ ಬಾರಿ ಸಮ್ಮೇಳನ ಎದುರಾದಾಗಲೂ ಎಡ- ಬಲ ಎನ್ನುವ ಪಂಥಗಳ ವೈಚಾರಿಕ ಸಂಘರ್ಷಗಳು ಇದ್ದಿದ್ದೇ. ಅವರನ್ನು ಒಂದು ಮಾಡುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಳುವ ನಿಲುವೇನು?
– ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಈ ವೇಳೆ, ಇದುವರೆಗೂ ಯಾವುದೇ ರೀತಿಯ ವಿಚಾರ ಸಂಘರ್ಷಗಳು ನಡೆದಿಲ್ಲ ಜತೆಗೆ ವೈಚಾರಿಕ ಸಂಘರ್ಷಗಳೂ ನಡೆದಿಲ್ಲ. ಕನ್ನಡ ಸಾಹಿತ್ಯ ಪರಿಷತ್ತು ಕೇವಲ ಒಬ್ಬರಿಗೆ ಸೇರಿದ್ದಲ್ಲ. ಅದು ಸಮಸ್ತ ಕನ್ನಡಿಗರಿಗೆ ಸೇರಿದ್ದಾಗಿದೆ. ಇದು ಸಮಗ್ರ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ. ಆ ಹಿನ್ನೆಲೆಯಲ್ಲಿಯೇ ಕನ್ನಡ ಸಾಹಿತ್ಯ ಪರಿಷತ್ತಿನ ಉದ್ದೇಶ, ಆಶಯಗಳನ್ನು ಅರಿತು ಕನ್ನಡಿಗರೆಲ್ಲರೂ ನಡೆಯಬೇಕು.

* ಶೃಂಗೇರಿ ಸಮ್ಮೇಳನದ ಕುರಿತು ಅಪಸ್ವರ ಕೇಳಿಬಂತಲ್ಲ… ಆ ಬಗ್ಗೆ…?
– ಶೃಂಗೇರಿಯಲ್ಲಿನ ಸಾಹಿತ್ಯ ಸಮ್ಮೇಳನದ ಆಯೋಜಕರು ಹಲವು ವಿಚಾರಗಳ ಬಗ್ಗೆ ನನ್ನ ಮಾತು ಕೇಳಲಿಲ್ಲ. ಅವರವರುಗಳೇ ಹೇಳಿಕೆಗಳನ್ನು ನೀಡುತ್ತಿದ್ದರು. ಸತ್ಯ ಏನು ಎಂದರೆ, ನಾನು ಆ ಅಧ್ಯಕ್ಷರನ್ನು ಬದಲಿ ಮಾಡಿ ಎಂದು ಹೇಳಲಿಲ್ಲ. ಸಮ್ಮೇಳನ ಮಾಡಬೇಡಿ ಅಂತ ಕೂಡ ಹೇಳಿಲ್ಲ. ಜತೆಗೆ ಅನುದಾನ ನೀಡುವುದಿಲ್ಲ ಎಂದು ಹೇಳಿಯೇ ಇಲ್ಲ. ಪ್ರಕ್ಷುಬ್ಧ ವಾತಾವರಣ ಇದ್ದ ಹಿನ್ನೆಲೆಯಲ್ಲಿ 2-3 ತಿಂಗಳು ಮುಂದೆ ಹಾಕಿ ಎಂದು ಹೇಳಿದ್ದೆ ಅಷ್ಟೇ. ನಮ್ಮ ಮಾತನ್ನು ಅವರು ಕೇಳಲೇ ಇಲ್ಲ.

* ಕನ್ನಡದ ಪ್ರಮುಖ ಸಾಹಿತ್ಯ ರಚನೆಗಳನ್ನು ಡಿಜಿಟಲೀಕರಿಸುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಎಲ್ಲಿ ತನಕ ಬಂದಿದೆ?
– ಈಗಾಗಲೇ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಪ್ರಮುಖ ಸಾಹಿತ್ಯ ಕೃತಿಗಳನ್ನು ಡಿಜಟಲೀಕರಿಸುವ ಕೆಲಸದಲ್ಲಿ ನಿರತವಾಗಿದೆ. ಜತೆಗೆ 8 ನಿಘಂಟುಗಳನ್ನು ಡಿಜಿಟಲೀಕರಿಸುವ ಕಾರ್ಯವೂ ಪೂರ್ತಿಯಾಗಿದೆ. ಅಲ್ಲದೆ, 140 ಪುಸ್ತಕಗಳನ್ನು ಸಿಐಎಲ್‌ ( ಸೆಂಟ್ರಲ್‌ ಇನ್ಸ್‌ಸ್ಟಿಟ್ಯೂಟ್‌ ಆಫ್ ಇಂಡಿಯನ್‌ ಲಾಂಗ್ವೇಜ್‌ ) ಮೂಲಕ ಪ್ರಕ್ರಿಯೆಗಳು ನಡೆಯುತ್ತಿವೆ.

* ಸಮ್ಮೇಳನ ಎಂದರೆ ಕನ್ನಡದ ಹಲವು ತೊರೆಗಳು ಒಂದಾಗುವ ತಾಣ. ಸಾಹಿತ್ಯದ ಜತೆ ಸಾಂಸ್ಕೃತಿಕ, ಜಾನಪದ ಕಲಾತಂಡಗಳನ್ನೂ ಸಂಘಟಿಸಿ ಸಮ್ಮೇಳನಕ್ಕೆ ಮೆರುಗು ನೀಡುವ ಕೆಲಸ ಆಗಬೇಕು. ಆ ಬಗ್ಗೆ ಎದುರಾಗುವ ಸವಾಲುಗಳೇನು?
– ಅಂಥ ಯಾವುದೇ ರೀತಿಯ ಸಮಸ್ಯೆಗಳು ಇಲ್ಲಿಯವರೆಗೂ ಎದುರಾಗಿಲ್ಲ. ಜಾನಪದ ಮತ್ತು ಜಾನಪದ ಸಾಹಿತ್ಯದ ಕುರಿತಾದ ಗೋಷ್ಠಿಗಳನ್ನು ಸಾಹಿತ್ಯ ಸಮ್ಮೇಳನದಲ್ಲಿ ಹಮ್ಮಿಕೊಳ್ಳಲಾಗಿದೆ. ಜಾನಪದದ ಕುರಿತ ಚರ್ಚೆಗೆ ಅಖೀಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ವೇದಿಕೆಯನ್ನು ಕಲ್ಪಿಸಿ ಕೊಡಲಾಗಿದೆ. ಜತೆಗೆ ನಾಡಿನ ನೂರಾರು ಜಾನಪದ ಕಲಾ ತಂಡಗಳಿಗೆ ಅವಕಾಶವನ್ನು ಮಾಡಿಕೊಡಲಾಗಿದೆ.

– ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.