Onion Manchurian ಅಬ್ಬಬ್ಬಾ ಎಂಥಾ ರುಚಿ ತಪ್ಪದೇ ಈ ರೆಸಿಪಿ ಟ್ರೈ ಮಾಡಿ…
ಶ್ರೀರಾಮ್ ನಾಯಕ್, Jul 20, 2024, 11:14 AM IST
ಗೋಬಿ, ಪನ್ನೀರ್, ಮಶ್ರೂಮ್ ಮಂಚೂರಿಯನ್ನು ನೀವು ಸವಿದಿರುತ್ತೀರಿ ಆದರೆ ನೀವೆಂದಾದರೂ ಈರುಳ್ಳಿ ಮಂಚೂರಿಯನ್ ತಿಂದಿದ್ದೀರಾ ಇಲ್ಲವಾದರೆ ರುಚಿ-ರುಚಿಯಾದ ಈರುಳ್ಳಿ ಮಂಚೂರಿಯನ್ನು ಮನೆಯಲ್ಲೇ ಮಾಡಬಹುದಾಗಿದ್ದು, ವಿಭಿನ್ನ ರುಚಿಯನ್ನು ಸವಿಯಬಹುದು.
ಈರುಳ್ಳಿ ಮಂಚೂರಿ ಮಾಡುವುದು ಎಷ್ಟು ಸುಲಭವೋ ಅಷ್ಟೇ ರುಚಿಯಾಗಿರುತ್ತದೆ. ಹಾಗಾದ್ರೆ ಇನ್ನೇಕೆ ತಡ, ಬೇಕಾಗಿರುವ ಸಾಮಗ್ರಿಗಳ ಪಟ್ಟಿ, ಮಾಡುವ ವಿಧಾನವು ಈ ಕೆಳಗಿನಂತಿದೆ. ಇಂದು ನಾವು ಈರುಳ್ಳಿ ಮಂಚೂರಿ ಮಾಡುವ ಬನ್ನಿ….
ಬೇಕಾಗುವ ಸಾಮಗ್ರಿಗಳು
ಈರುಳ್ಳಿ-5 (ಸಣ್ಣಗೆ -ಉದ್ದಕ್ಕೆ ಹೆಚ್ಚಿದ್ದು), ಶುಂಠಿ-ಬೆಳ್ಳುಳ್ಳಿ ಪೇಸ್ಟ್-2ಚಮಚ, ಅಚ್ಚಖಾರದ ಪುಡಿ-2ಚಮಚ, ಮೈದಾ ಹಿಟ್ಟು-2 ಚಮಚ, ಕಾರ್ನ್ ಫ್ಲೋರ್-2ಚಮಚ, ಹಸಿಮೆಣಸು-1 (ಸಣ್ಣಗೆ ಹೆಚ್ಚಿದ್ದು), ಟೊಮೆಟೋ ಸಾಸ್-2ಚಮಚ,ಸೋಯಾ ಸಾಸ್-1 ಚಮಚ, ಚಿಲ್ಲಿ ಸಾಸ್-1ಚಮಚ, ವಿನೆಗರ್-1ಚಮಚ, ಈರುಳ್ಳಿ-1(ಸಣ್ಣಗೆ ಹೆಚ್ಚಿದ್ದು), ಶುಂಠಿ-ಬೆಳ್ಳುಳ್ಳಿ-ಸಣ್ಣಗೆ ಹೆಚ್ಚಿದ್ದು ಸ್ವಲ್ಪ, ಸ್ಪ್ರಿಂಗ್ ಆನಿಯನ್-ಸಣ್ಣಗೆ ಹೆಚ್ಚಿದ್ದು ಸ್ವಲ್ಪ, ಕ್ಯಾಪ್ಸಿಕಂ-ಸಣ್ಣಗೆ ಹೆಚ್ಚಿದ್ದು ಸ್ವಲ್ಪ, ಕರಿಯಲು-ಎಣ್ಣೆ, ಕೊತ್ತಂಬರಿ ಸೊಪ್ಪು-ಸ್ವಲ್ಪ, ಉಪ್ಪು-ರುಚಿಗೆ ತಕ್ಕಷ್ಟು .
ತಯಾರಿಸುವ ವಿಧಾನ
ಮೊದಲಿಗೆ ಒಂದು ಬೌಲ್ ಗೆ ಸಣ್ಣಗೆ ಉದ್ದಕ್ಕೆ ಹೆಚ್ಚಿದ ಈರುಳ್ಳಿಯನ್ನು ಹಾಕಿ ಅದಕ್ಕೆ ಅಚ್ಚಖಾರದ ಪುಡಿ ಮತ್ತು ಸ್ವಲ್ಪ ಉಪ್ಪನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಇದಕ್ಕೆ ಮೈದಾ ಹಿಟ್ಟು, ಕಾರ್ನ್ ಫ್ಲೋರ್ ,ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ಸ್ವಲ್ಪ ನೀರನ್ನು ಸೇರಿಸಿ ಪುನಃ ಮಿಶ್ರಣ ಮಾಡಿ ಸಣ್ಣ-ಸಣ್ಣ ಉಂಡೆಗಳನ್ನಾಗಿ ಮಾಡಿಕೊಳ್ಳಿ.
ತದನಂತರ ಒಲೆಯ ಮೇಲೆ ಒಂದು ಬಾಣಲೆಯಿಟ್ಟು ಎಣ್ಣೆ ಹಾಕಿ, ಕಾದನಂತರ ಮಾಡಿಟ್ಟ ಉಂಡೆಗಳನ್ನು ಹಾಕಿ ಸರಿಯಾಗಿ ಫ್ರೈ ಮಾಡಿರಿ.ಆ ಬಳಿಕ ಸಣ್ಣಗೆ ಹೆಚ್ಚಿದ ಈರುಳ್ಳಿ, ಶುಂಠಿ-ಬೆಳ್ಳುಳ್ಳಿ, ಹಸಿಮೆಣಸು,ಕ್ಯಾಪ್ಸಿಕಂ ಹಾಕಿ ಕಂದು ಬಣ್ಣ ಬರುವವರೆಗೆ ಹುರಿದುಕೊಳ್ಳಿ. ಇದಕ್ಕೆ ಟೊಮೆಟೋ ಸಾಸ್, ಚಿಲ್ಲಿ ಸಾಸ್, ಸೋಯಾ ಸಾಸ್, ವಿನೆಗರ್ ಹಾಗೂ ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಸರಿಯಾಗಿ ಮಿಶ್ರಣ ಮಾಡಿ.
ನಂತರ ಸ್ವಲ್ಪ ನೀರಿಗೆ ಕಾರ್ನ್ ಫ್ಲೋರ್ ಹಾಕಿ ಈ ಮಿಶ್ರಣಕ್ಕೆ ಸೇರಿಸಿ ಚೆನ್ನಾಗಿ ಕುದಿಯಲು ಬಿಡಿ. ತದನಂತರ ಫ್ರೈ ಮಾಡಿಟ್ಟ ಈರುಳ್ಳಿ ಉಂಡೆಗಳನ್ನು ಹಾಕಿ ಮಿಶ್ರಣ ಮಾಡಿ ಇದಕ್ಕೆ ಸ್ಪ್ರಿಂಗ್ ಆನಿಯನ್ ಮತ್ತು ಕೊತ್ತಂಬರಿ ಸೊಪ್ಪನ್ನು ಹಾಕಿದರೆ ರುಚಿಕರವಾದ ಈರುಳ್ಳಿ ಮಂಚೂರಿಯನ್ ಸವಿಯಲು ಸಿದ್ಧ.
-ಶ್ರೀರಾಮ್ ಜಿ.ನಾಯಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti Irani ದೆಹಲಿ ಬಿಜೆಪಿಯಲ್ಲಿ ಸಕ್ರಿಯ: ”ಸಿಎಂ ಫೇಸ್” ಆಗಿ ಕೇಳಿ ಬರುತ್ತಿರುವ ಹೆಸರು!
International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ
Beauty Tips: ಮುಖದ ಕಾಂತಿ ಹೆಚ್ಚಿಸಲು ಟೊಮ್ಯಾಟೋ ಫೇಸ್ ಪ್ಯಾಕ್; ಇದರ ಲಾಭವೇನು ಗೊತ್ತಾ?
South Indian actors: ನಾಗಾರ್ಜುನ್ ಟು ವಿಜಯ್; ದಕ್ಷಿಣ ಭಾರತದ ಶ್ರೀಮಂತ ನಟರು ಯಾರ್ಯಾರು
Special Food ಮನೆಯಲ್ಲೊಮ್ಮೆ ಈ ರೆಸಿಪಿ ಟ್ರೈ ಮಾಡಿ ನೋಡಿ… ಟೇಸ್ಟ್ ಹೇಗಿದೆ ಹೇಳಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.