ಕನ್ನಡದ ಧ್ವನಿಯಾಗಿದ್ದ ಕಾವಿ, ಔದಾರ್ಯದ ನಿಧಿಯಾಗಿದ್ದ ಮಹಾಸ್ವಾಮೀಜಿ 


Team Udayavani, Oct 21, 2018, 5:51 PM IST

2-sadsasa.jpg

”ತಮ್ಮ ಮೂಗಿನ ನೇರಕ್ಕೆ, ಅನುಕೂಲವಾದಿ ರಾಜಕಾರಣಕ್ಕೆ ಬಸವ ತತ್ವವನ್ನು ಬಳಸಿ ಇತ್ತೀಚೆಗೆ ನೀಡಲಾಗುತ್ತಿರುವ ಹೇಳಿಕೆಗಳನ್ನು ಸಮಾಜ ಉಪೇಕ್ಷಿಸಬೇಕು. ಬಸವಣ್ಣ ಸ್ಥಾಪಿಸಿದ ಸಮಾನತೆ ಸಾರುವ ಲಿಂಗಾಯಿತ ಧರ್ಮಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ಸಿಗುವವರೆಗೆ ಹೋರಾಟ ನಿಲ್ಲದು” ಇದು ಜಗದ್ಗುರು ತೋಂಟದ ಸಿದ್ಧಲಿಂಗ ಮಹಾಸ್ವಾಮೀಜಿ ಅವರು  ಲಿಂಗೈಕ್ಯರಾಗುವ 2 ದಿನ ಮುನ್ನ ನೀಡಿದ ಹೇಳಿಕೆ.

ಸಮಾನತೆ,ಶಾಂತಿ, ಸಹಬಾಳ್ವೆ ಗಾಗಿ ನಿರಂತರವಾಗಿ ಹೋರಾಟ ನಡೆಸಿದ್ದ  ಶ್ರೀಗಳು ಬಸವಣ್ಣ  ಹೇಳಿತ ತತ್ವ ಸಿದ್ಧಾಂತಗಳಲ್ಲಿ  ಯಾವುದೇ ರಾಜಿ ಮಾಡಿಕೊಂಡವರಲ್ಲ. 

ನಿರಂತರವಾಗಿ ಕಾಯಕ ದಾಸೋಹದಲ್ಲಿ ತೊಡಗಿದ್ದ ಅವರು ಶೈಕ್ಷಣಿಕ ರಂಗದಲ್ಲಿ ಕ್ರಾಂತಿಯನ್ನೇ ಮಾಡಿದ್ದರು.ತಮ್ಮ ಶಿಕ್ಷಣ ಸಂಸ್ಥೆಗಳ ಮೂಲಕ  ಸಾವಿರಾರು ಮಂದಿ ವಿದ್ಯಾರ್ಥಿಗಳಿಗೆ ಜಾತಿ, ಮತಗಳ ಬೇಧವಿಲ್ಲದೆ ಶಿಕ್ಷಣವನ್ನು ನೀಡಿದ್ದರು. 

ನೇರ ಮಾತುಗಳಿಂದ ಹಲವರ ವಿರೋಧ ಕಟ್ಟಿಕೊಂಡಿದ್ದ ಜಾತ್ಯಾತೀತ ಸಂತ ಹಠಾತ್‌ ಲಿಂಗೈಕ್ಯರಾಗುತ್ತಾರೆ ಎಂದು ಯಾರೂ ಭಾವಿಸಿರಲಿಲ್ಲ. ಆದರೆ ಲಕ್ಷಾಂತರ ಭಕ್ತರಿಗೆ ಬರ ಸಿಡಿಲು ಬಂದೆರಗಿಂತೆ ಸ್ವಾಮೀ ಜಿ ಶನಿವಾರ ತೀವ್ರ ಹೃದಯಾಘಾತದಿಂದ ಲಿಂಗೈಕ್ಯರಾದರು.

ಶಿವೈಕ್ಯರಾಗುವ ಮುನ್ನಾದಿನ ರಾತ್ರಿ 11 ಗಂಟೆಯವರೆಗೆ ಭಕ್ತರಿಗೆ ಆಶೀರ್ವದಿಸಿದ್ದ ಅವರು ನಿದ್ರೆಯಲ್ಲೇ ಚಿರನಿದ್ರೆಗೆ ಜಾರಿದರು. 

ಜಾತಿ ಮತಗಳ ನಡುವಿನ ವೈಷಮ್ಯದ ಕುರಿತಾಗಿ ಪರಮ ವಿರೋಧ ಹೊಂದಿದ್ದ ಅವರು ಜಾತಿ ರಾಜಕಾರಣದ ಕುರಿತಾಗಿಯೂ  ಮನದಲ್ಲಿ ಅಪಾರ ವಿರೋಧ ಹೊಂದಿದ್ದರು ಮತ್ತು ಬಹಿರಂಗವಾಗಿ ವಿರೋಧಿಸಿದ್ದರು. ಹಲವು ಬಾರಿ ನೇರ ಹೇಳಿಕೆಗಳನ್ನು ನೀಡಿ ರಾಜಕಾರಣಿಗಳ ವೈರವನ್ನು ಕಟ್ಟಿಕೊಂಡಿರುವ ಬಗ್ಗೆ ಸ್ವಾಮೀಜಿಗಳ ಬಗ್ಗೆ ಬಲ್ಲವರು ಅವರನ್ನು ನೆನೆಯುತ್ತಾ ಹೇಳಿಕೊಂಡಿದ್ದಾರೆ. 

ಏನು ಮುಸ್ಲಿಮರ ರಕ್ತ ಹಸಿರು, ಬ್ರಾಹ್ಮಣರ ರಕ್ತ ಬಿಳಿ, ಬೇರೆಯವರ ರಕ್ತ ಕೆಂಪು ಬಣ್ಣದ್ದೇ, ಸೂಜಿಯನ್ನು ಚುಚ್ಚಿದರೆ ಬರುವ ರಕ್ತ ಕೆಂಪು, ಆಗುವ ಬೇನೆ ಎಲ್ಲರಿಗೂ ಒಂದೇ ಅಲ್ಲವೇ ಎಂದು ಹಲವು ವೇದಿಕೆಗಳಲ್ಲಿ  ಸಂದೇಶ ಸಾರುತ್ತಿದ್ದರು. 

ಸಾಮಾನ್ಯ ಸ್ವಾಮೀಜಿಯಾಗಿರದೆ ಮಹಾ ಶಕ್ತಿಯಾಗಿದ್ದ ಶ್ರೀಗಳು ಅಪಾರ ಭಕ್ತರ ಆರಾಧ್ಯ ದೈವವಾಗಿದ್ದರು. ನೊಂದವರ ಪಾಲಿಗೆ ಸಾಂತ್ವನ ಹೇಳುವ ಆಪತ್ಬಾಂಧವರಾಗಿದ್ದರು. 

ಡಾ.ರಾಜ್‌ ಹೋರಾಟಕ್ಕೆ ಪ್ರೇರಣೆ 
ಕನ್ನಡ ನಾಡು ಕಂಡ ದೊಡ್ಡ ಚಳುವಳಿಯಾದ ಗೋಕಾಕ್‌ ಚಳುವಳಿಗೆ ವರ ನಟ ಡಾ.ರಾಜ್‌ಕುಮಾರ್‌ ಅವರು ಧುಮುಕಲು ಶ್ರೀಗಳು ಪ್ರೇರಣೆಯಾಗಿದ್ದರು. ನಿರಂತರವಾಗಿ ಸರಕಾರಗಳಿಗೆ ಎಚ್ಚರಿಕೆ ನೀಡಿದ್ದ ಶ್ರೀಗಳು ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ಸೂಚಿಸಿ ಕನ್ನಡ ಪರ ದೊಡ್ಡ ಧ್ವನಿಯಾಗಿ ಗೋಚರಿಸಿದ್ದರು. 

ಜಗದ್ಗುರು ಎನಿಸಿಕೊಂಡ ಸಿದ್ದಲಿಂಗ ಶ್ರೀಗಳಿಗೆ ಕನ್ನಡ ಪರ ಕಾಳಜಿಗೆ , ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಪರಿಗಣಿಸಿ ವಿವಿಧ ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ ಪದವಿ ನೀಡಿವೆ. 

“ಕನ್ನಡದಜಗದ್ಗುರು’ ಎಂದೇ ಶ್ರೀಗಳನ್ನು ಕರೆಯುವುದು ಅವರು ಕನ್ನಡ ನಾಡಿಗೆ ಕೊಟ್ಟ ಕೊಡುಗೆಯನ್ನು ಸಾರಿ ಹೇಳುತ್ತದೆ. 

ಮೌಢ್ಯಗಳ ವಿರೋಧಿ
ಜಾತ್ಯಾತೀತ ತತ್ವವನ್ನು ತಮ್ಮ ಕಾಯಕದಲ್ಲಿ ಅಳವಡಿಸಿಕೊಂಡಿದ್ದ ಶ್ರೀಗಳು ಎಂದೂ ಮೌಢ್ಯಗಳಿಗೆ ಬೆಲೆ ನೀಡುತ್ತಿರಲಿಲ್ಲ. ಅಡ್ಡಪಲ್ಲಕ್ಕಿ  ಉತ್ಸವನ್ನು ವಿರೋಧಿಸಿದ್ದ ಶ್ರೀಗಳು ಪಲ್ಲಕ್ಕಿಯಲ್ಲಿ ಬಸವಣ್ಣನ ವಚನಗಳ ಪುಸ್ತಕಗಳನ್ನಿಟ್ಟು  ಮಾದರಿಯಾಗಿದ್ದರು. 

ಸಿದ್ದಲಿಂಗ ಶ್ರೀಗಳ ಆದರ್ಶಗಳನ್ನು , ಹೋರಾಟದ ಜೀವನವನ್ನು ಮುಂದುವರಿಸುವ ಮಹತ್ವದ ಜವಾಬ್ಧಾರಿ ಮಠದ ಮುಂದಿನ ಉತ್ತರಾಧಿಕಾರಿಯ ಮುಂದಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahakumbha–Kharge-Bjp

MahaKumbh Mela: ಪುಣ್ಯಸ್ನಾನದ ಬಗ್ಗೆ ಪ್ರಶ್ನಿಸಿ ಮಲ್ಲಿಕಾರ್ಜುನ ಖರ್ಗೆ ಸಾಧಿಸಿದ್ದೇನು?

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.