“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

ವಾಸ್ತವವಾಗಿ ಅರಿಶಿನವು ಆಕ್ಸಲೇಟ್ ಅನ್ನು ಹೊಂದಿರುತ್ತದೆ

ಶ್ವೇತಾ.ಎಂ, Aug 30, 2022, 5:40 PM IST

thumb news web exclusive uv (2) (1)

ನಾವು ಅನುಸರಿಸುವ ಕೆಲವು ಅಭ್ಯಾಸಗಳು ನಮ್ಮ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರಬಹುದು. ಈ ಕಾರಣಕ್ಕಾಗಿಯೇ ಎಲ್ಲರೂ ಸಮಯಕ್ಕೆ ಸರಿಯಾಗಿ ಊಟ ಮಾಡಿ ಮತ್ತು ಸಾಕಷ್ಟು ನಿದ್ದೆ ಮಾಡಲು ತಜ್ಞರು, ವೈದ್ಯರು ಸಲಹೆ ನೀಡುತ್ತಾರೆ. ಆರೋಗ್ಯ ತಜ್ಞರ ಪ್ರಕಾರ, ನಾವು ಸೇವಿಸುವ ಆಹಾರ ಮತ್ತು ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಉತ್ತಮ ಆರೋಗ್ಯಕ್ಕಾಗಿ ಅರಿಶಿನ ಹಾಕಿದ ಹಾಲನ್ನು ಕುಡಿಯುವುದು ಪ್ರಯೋಜನಕಾರಿ ಎಂದು ಅನೇಕರು ಹೇಳುತ್ತಾರೆ.

ಹಾಲಿಗೆ ಅರಿಶಿನ ಹಾಕಿ ಕುಡಿದರೆ ದೇಹದ ಆಯಾಸವನ್ನು ಕಡಿಮೆ ಮಾಡುತ್ತದೆ, ದೇಹದ ನೋವನ್ನು ನಿವಾರಿಸುತ್ತದೆ, ಗಾಯ ಗುಣಮುಖವಾಗಲು ಸಹಾಯ ಮಾಡುತ್ತದೆ. ಆದರೆ ಈ ಅರಿಶಿನದ ಹಾಲಿನ ಸೇವನೆ ಎಲ್ಲರಿಗೂ ಒಳ್ಳೆಯದಲ್ಲ. ಕೆಲವೊಂದು ಆರೋಗ್ಯ ಸಮಸ್ಯೆ ಹೊಂದಿರುವವರಿಗೆ ಈ ಅರಿಶಿನದ ಹಾಲನ್ನು ಸೇವಿಸಬಾರದು ಎಂದು ತಜ್ಞರು ಹೇಳುತ್ತಾರೆ.

ಕಡಿಮೆ ರಕ್ತದ ಸಕ್ಕರೆ ಅಂಶ ಇರುವವರು

ಕಡಿಮೆ ರಕ್ತದ ಸಕ್ಕರೆ ಅಂಶ ಇರುವವರು ಅಂದರೆ ಯಾರಿಗೆ ಲೋ ಶುಗರ್‌ ಇದೆಯೋ ಅಂತಹ ವ್ಯಕ್ತಿಗಳು ಅರಿಶಿನ ಹಾಕಿದ ಹಾಲನ್ನು ಕುಡಿಯಬಾರದು, ಅದನ್ನು ಕುಡಿದರೆ ಅವರ ಶುಗರ್‌ ಲೆವೆಲ್‌ ಇನ್ನೂ ಕಡಿಮೆಯಾಗುತ್ತದೆ ಎನ್ನಲಾಗುತ್ತದೆ. ಅರಿಶಿನದಲ್ಲಿ ಕರ್ಕ್ಯುಮಿನ್ ಇರುವುದರಿಂದ ಕಡಿಮೆ ರಕ್ತದ ಸಕ್ಕರೆಯಿಂದ ತೊಂದರೆಗೊಳಗಾದವರು ವೈದ್ಯರ ಸಲಹೆಯ ಮೇರೆಗೆ ಇದನ್ನು ಸೇವಿಸಬೇಕು.

ಕಿಡ್ನಿ ಸಂಬಂಧಿತ ಸಮಸ್ಯೆ

ವ್ಯಕ್ತಿಗೆ ಕಿಡ್ನಿ ಸಂಬಂಧಿತ ಯಾವುದೇ ಸಮಸ್ಯೆ ಇದ್ದಲ್ಲಿ ಅಂತಹ ಪರಿಸ್ಥಿತಿಯಲ್ಲಿ ಅರಿಶಿನದ ಹಾಲಿನ ಸೇವನೆಯು ಆರೋಗ್ಯಕ್ಕೆ ಹಾನಿಯಾಗಬಹುದು.

ವಿಶೇಷವಾಗಿ ಕಿಡ್ನಿ ಸ್ಟೋನ್‌ ಸಮಸ್ಯೆ ಇದ್ದಾಗ, ವಾಸ್ತವವಾಗಿ ಅರಿಶಿನವು ಆಕ್ಸಲೇಟ್ ಅನ್ನು ಹೊಂದಿರುತ್ತದೆ, ಇದು ಕಿಡ್ನಿಸ್ಟೋನ್‌ ಸಮಸ್ಯೆಯನ್ನು ಪ್ರಚೋದಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಮೂತ್ರಪಿಂಡದ ಸಮಸ್ಯೆಯ ಸಮಯದಲ್ಲಿ ಹಾಲಿಗೆ ಅರಿಶಿನ ಸೇರಿಸಿ ಕುಡಿಯಲೇ ಬಾರದು.

ಜೀರ್ಣಾಂಗ ವ್ಯವಸ್ಥೆಯ ಸಮಸ್ಯೆ

ಜೀರ್ಣಾಂಗ ವ್ಯವಸ್ಥೆಯ ಸಮಸ್ಯೆ ಇರುವವರು ಅಂದರೆ ಮಲಬದ್ಧತೆ ಸಮಸ್ಯೆ, ಹೊಟ್ಟೆಯಲ್ಲಿ ಗ್ಯಾಸ್, ಹೊಟ್ಟೆ ಉಬ್ಬುವುದು, ಎದೆಯುರಿ ಅಥವಾ ಆಸಿಡ್ ರಿಫ್ಲಕ್ಸ್, ಅಜೀರ್ಣ ಇತ್ಯಾದಿ ಸಮಸ್ಯೆಯನ್ನು ಹೊಂದಿರುವ ಜನರು ಅರಿಶಿನ ಹಾಲನ್ನು ಸೇವಿಸಬಾರದು.

ಕಬ್ಬಿಣದಂಶದ ಕೊರತೆ ಇರುವವರು

ನಿಮ್ಮ ದೇಹದಲ್ಲಿ ಕಬ್ಬಿಣದಂಶದ ಕೊರತೆಯಿದ್ದರೆ, ಅಂತಹ ಪರಿಸ್ಥಿತಿಯಲ್ಲಿ ಅರಿಶಿನ ಮಿಶ್ರಿತ ಹಾಲನ್ನು ಸೇವಿಸಬಾರದು. ಇದು ನಿಮ್ಮ ಸಮಸ್ಯೆಯನ್ನು ಇನ್ನಷ್ಟು ಉಲ್ಭಣಗೊಳಿಸಬಹುದು. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಮತ್ತು ನಂತರ ರಕ್ತಸ್ರಾವದ ಅಪಾಯದ ಕಾರಣದಿಂದ ನಿಗದಿತ ಶಸ್ತ್ರಚಿಕಿತ್ಸೆಗೆ ಎರಡು ವಾರಗಳ ಮೊದಲು ಅರಿಶಿನವನ್ನು ನಿಲ್ಲಿಸಬೇಕು. ಅರಿಶಿನವು ರಕ್ತ ಹೆಪ್ಪುಗಟ್ಟುವಿಕೆಯ ರಚನೆಯನ್ನು ವಿಳಂಬಗೊಳಿಸುತ್ತದೆ.

ಟಾಪ್ ನ್ಯೂಸ್

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

web focus 1

ಹವ್ಯಾಸವನ್ನು ಉದ್ಯಮವನ್ನಾಗಿಸಿದ ಸಾಧಕಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.