ಲಡ್ಡು ತಯಾರಿಗೆ ಬೆಂಗಳೂರಿನ ತುಪ್ಪ!


Team Udayavani, Aug 6, 2020, 6:40 AM IST

Ghee

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಅಯೋಧ್ಯೆ: ರಾಮಮಂದಿರದ ಭೂಮಿಪೂಜೆ ನೆರವೇರಿದ ಸಂಭ್ರಮವನ್ನು ಆಚರಿಸುವ ಸಲುವಾಗಿ ಪಟ್ನಾ ಮೂಲದ ಮಹಾವೀರ ಮಂದಿರ ಟ್ರಸ್ಟ್‌ ಬರೋಬ್ಬರಿ 1.25 ಲಕ್ಷ ರಘುಪತಿ ಲಡ್ಡುಗಳನ್ನು ವಿತರಿಸಿದೆ.

ವಿಶೇಷವೆಂದರೆ, ಈ ಲಡ್ಡುಗಳನ್ನು ತಯಾರಿಸಲು ಬೆಂಗಳೂರಿನಿಂದ ತರಿಸಲಾದ ಶುದ್ಧ ತುಪ್ಪವನ್ನು ಬಳಸಲಾಗಿತ್ತು.

ದೇಶದ ವಿವಿಧ ಮೂಲೆಗಳಿಂದ ಸಾಮಗ್ರಿಗಳನ್ನು ತರಿಸಿ ಲಡ್ಡುಗಳನ್ನು ಸಿದ್ಧಪಡಿಸಲಾಗಿತ್ತು.

ಬೆಂಗಳೂರಿನ ಶುದ್ಧ ತುಪ್ಪ, ಕಾಶ್ಮೀರದ ಪುಲ್ವಾಮಾ ದಿಂದ ಕೇಸರಿ, ಕೇರಳದಿಂದ ಗೋಡಂಬಿ, ಪಟ್ನಾದಿಂದ ಒಣದ್ರಾಕ್ಷಿ, ಸಕ್ಕರೆ ಮತ್ತು ಏಲಕ್ಕಿಯನ್ನು ತರಿಸಿ ಈ ವಿಶೇಷ ಲಡ್ಡು ತಯಾರಿಸಲಾಗಿತ್ತು.

ಇನ್ನೂ ವಿಶೇಷವೆಂದರೆ, ಲಡ್ಡು ಮಾಡಲು ಬಳಸಿದ ಕಡಲೆಹಿಟ್ಟನ್ನು ದೂರದ ಆಸ್ಟ್ರೇಲಿಯಾದಿಂದ ತರಿಸಲಾಗಿತ್ತು. ಒಟ್ಟು 1.25 ಲಕ್ಷ ಲಡ್ಡುಗಳ ಪೈಕಿ 51,000 ಲಡ್ಡುಗಳನ್ನು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಹಸ್ತಾಂತರಿಸಲಾಗಿದೆ.

ಉಳಿದ ಲಡ್ಡುಗಳನ್ನು ಬಿಹಾರದ ಸೀತಾಮಡಿ ಹಾಗೂ ಶ್ರೀರಾಮನಿಗೆ ಸಂಬಂಧಿಸಿದ 25 ಯಾತ್ರಾ ಸ್ಥಳಗಳಿಗೆ ನೀಡಲಾಗಿದೆ. ಜತೆಗೆ, ಬಿಹಾರದಲ್ಲಿನ ರಾಮಭಕ್ತರಿಗೆ ವಿತರಿಸಲಾಗಿದೆ ಎಂದು ಟ್ರಸ್ಟ್‌ ತಿಳಿಸಿದೆ.

ರಂಗೋಲಿ ಬಿಡಿಸಿದ ಸಚಿವೆ ನಿರ್ಮಲಾ


ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಭೂಮಿ ಪೂಜೆ ಪ್ರಯುಕ್ತ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ತಮ್ಮ ಮನೆಯಲ್ಲಿ ರಂಗೋಲಿ ಬಿಡಿಸಿ ಗಮನ ಸೆಳೆದಿದ್ದಾರೆ. ರಂಗೋಲಿ ಚಿತ್ರವನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿರುವ ಅವರು, ‘ಬಹುತೇಕ ಮನೆಗಳಲ್ಲಿ ಅಕ್ಕಿ ಹಿಟ್ಟಿನ ಮೂಲಕ ಪ್ರತಿ ದಿನವೂ ತಾಜಾ ರಂಗೋಲಿ ಬಿಡಿಸಲಾಗುತ್ತದೆ. ಇಂದು, ನನ್ನ ಮನೆಯ ಪುಟ್ಟ ದೇಗುಲದಲ್ಲಿ ಬಿಡಿಸಿದ ರಂಗೋಲಿ ಇದು’ ಎಂದು ತಿಳಿಸಿದ್ದಾರೆ. ಸಂಸ್ಕೃತದಲ್ಲಿ ಶ್ರೀ ರಾಮ್‌ ಜಯಂ ಎಂದು ರಂಗೋಲಿಯಲ್ಲಿ ಬರೆದಿದ್ದಾರೆ.

ಫೋಟೋ ಟ್ವೀಟ್‌ ಮಾಡಿದ ಪ್ರಸಾದ್‌


ಭೂಮಿ ಪೂಜೆ ನೆರವೇರಿಸುವ ಕೆಲವೇ ಗಂಟೆಗಳ ಮುನ್ನ ಕೇಂದ್ರ ಕಾನೂನು ಸಚಿವರಾದ ರವಿಶಂಕರ್‌ ಪ್ರಸಾದ್‌, ಸಂವಿಧಾನದ ಮೂಲ ಪ್ರತಿಯಲ್ಲಿರುವ ರಾಮ, ಸೀತೆ, ಲಕ್ಷ್ಮಣರ ಚಿತ್ರವನ್ನು ಟ್ವಿಟರ್‌ನಲ್ಲಿ ಹಾಕಿದ್ದಾರೆ. ಈ ಚಿತ್ರ, ಲಂಕೆಯನ್ನು ಜಯಿಸಿದ ಅನಂತರ ಶ್ರೀರಾಮ, ಸೀತಾ ಮಾತೆ ಹಾಗೂ ಲಕ್ಷ್ಮಣರು ವಿಜಯ ದುಂಧುಬಿಯ ಜತೆಗೆ ಅಯೋಧ್ಯೆಗೆ ಹಿಂದಿರುಗಿರುವುದನ್ನು ತೋರಿಸುತ್ತದೆ. ಸಂವಿಧಾನದ ಮೂಲ ಪ್ರತಿಯಲ್ಲಿನ ಮೂಲಭೂತ ಹಕ್ಕುಗಳ ಅಧ್ಯಾಯದ ಮೊದಲ ಪುಟದಲ್ಲಿ ಇದನ್ನು ಮುದ್ರಿಸಲಾಗಿದೆ.

ಟಾಪ್ ನ್ಯೂಸ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

ram mandir imp

Ayodhya: ವ್ಯಾಟಿಕನ್‌, ಮೆಕ್ಕಾ ಮೀರಿಸಲಿದೆ- ವರ್ಷಕ್ಕೆ ಐದು ಕೋಟಿ ಭಕ್ತರು ಭೇಟಿ ನಿರೀಕ್ಷೆ

ram mandir 2

Ayodhya: ಅಯೋಧ್ಯೆಯಲ್ಲಿ ಕರ್ನಾಟಕ ಸರಕಾರದಿಂದ ಅತಿಥಿಗೃಹ ?

yogi ram mandir

Ayodhya: ಭೇಟಿ ಬಗ್ಗೆ ಹತ್ತು ದಿನ ಮೊದಲೇ ತಿಳಿಸಿ: ವಿವಿಐಪಿಗಳಿಗೆ ಯೋಗಿ ಸರಕಾರದ ಕೋರಿಕೆ

ram mandir 2

Ram Mandir: ಭಕ್ತ ಪ್ರವಾಹ- ರಾಮನ ದರ್ಶನ ಸಮಯ ವಿಸ್ತರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.