![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 16, 2019, 5:10 AM IST
ಹೊಸದಿಲ್ಲಿ: ಅಯೋಧ್ಯೆಯಲ್ಲಿನ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಮುಕ್ತಾಯಗೊಳಿಸಲು ವಿಶೇಷ ನ್ಯಾಯಮೂರ್ತಿ ಸುಪ್ರೀಂಕೋರ್ಟ್ನಿಂದ ಆರು ತಿಂಗಳ ಸಮಯಾವಕಾಶ ಕೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾ| ಆರ್.ಎಫ್.ನಾರಿಮನ್ ನೇತೃತ್ವದ ನ್ಯಾಯಪೀಠ, ಈ ಬಗ್ಗೆ ಉತ್ತರ ಪ್ರದೇಶ ಸರಕಾರಕ್ಕೆ ಸೂಚನೆ ನೀಡಿದ್ದು, ವಿಶೇಷ ನ್ಯಾಯಮೂರ್ತಿಯ ಅವಧಿಯನ್ನು ಹೇಗೆ ವಿಸ್ತರಿಸಬಹುದು ಎಂಬ ಕುರಿತು ಇದೇ 19ರ ಒಳಗಾಗಿ ಮಾಹಿತಿ ಸಲ್ಲಿಸಬೇಕು ಎಂದು ನಿರ್ದೇಶಿಸಿದೆ.
ಬಿಜೆಪಿಯ ಹಿರಿಯ ನಾಯಕರಾಗಿರುವ ಎಲ್.ಕೆ. ಆಡ್ವಾಣಿ, ಎಂ.ಎಂ.ಜೋಶಿ ಮತ್ತು ಇತರರ ವಿರುದ್ಧ ದಾಖಲಾಗಿರುವ ಪ್ರಕರಣ ಇದಾಗಿದೆ. ವಿಶೇಷ ನ್ಯಾಯಮೂರ್ತಿಯು ಮೇನಲ್ಲಿ ಸುಪ್ರೀಕೋರ್ಟ್ಗೆ ಪತ್ರ ಬರೆದು ಸೆಪ್ಟಂಬರ್ 29ರಂದು ನಿವೃತ್ತಿಯಾಗುತ್ತಿರುವುದಾಗಿ ಹೇಳಿಕೊಂಡಿದ್ದರು. 2017ರ ಎ. 19ರಂದು ನಡೆದಿದ್ದ ವಿಚಾರಣೆ ವೇಳೆ, 1992ರಲ್ಲಿ ನಡೆದಿದ್ದ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪ್ರತಿ ದಿನ ನಡೆದು, ಎರಡು ವರ್ಷಗಳ ಅವಧಿಯಲ್ಲಿ ವಿಚಾರಣೆ ಮುಕ್ತಾಯಗೊಳ್ಳಬೇಕು ಎಂದು ನ್ಯಾಯಾಲಯ ಆದೇಶ ನೀಡಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.