![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Nov 9, 2019, 7:40 PM IST
ಕಳೆದ ಒಂದಷ್ಟು ದಿನಗಳಿಂದ ಹೊಸಬರೇ ಸೇರಿ ರೂಪಿಸಿರುವ 19 ಏಜ್ ಈಸ್ ನಾನ್ಸೆನ್ಸ್ ಚಿತ್ರ ಭಾರೀ ಸೌಂಡು ಮಾಡುತ್ತಿದೆ. ಹೇಳಿಕೇಳಿ ಇದೀಗ ಕನ್ನಡ ಚಿತ್ರರಂಗ ಹೊಸ ಅಲೆಯ ಚಿತ್ರಗಳಿಂದ ಸಮೃದ್ಧಗೊಂಡಿದೆ. ಈ ಘಳಿಗೆಯಲ್ಲಿ ಹೊಸಾ ತಂಡವೊಂದು ಎಂಟ್ರಿ ಕೊಟ್ಟಿತೆಂದರೆ ಪ್ರೇಕ್ಷಕರ ಚಿತ್ತ ತಾನೇ ತಾನಾಗಿ ಅದರತ್ತ ನೆಟ್ಟುಕೊಳ್ಳುತ್ತದೆ. 19 ಏಜ್ ಈಸ್ ನಾನ್ಸೆನ್ಸ್ ಚಿತ್ರದತ್ತ ಪ್ರೇಕ್ಷಕರು ಹೊರಳಿ ನೋಡುತ್ತಿರೋದೂ ಕೂಡಾ ಈ ಕಾರಣದಿಂದಲೇ. ಹೊಸಬರೇ ಸೇರಿ ರೂಪಿಸಿರೋ ಈ ಸಿನಿಮಾ ಸೆನ್ಸಾರ್ ಅನ್ನೂ ಇದೀಗ ಮುಗಿಸಿಕೊಂಡಿದೆ. ವಿಶೇಷವೆಂದರೆ ಈ ಚಿತ್ರ ಖುದ್ದು ಸೆನ್ಸಾರ್ ಅಧಿಕಾರಿಗಳಿಂದಲೇ ಮೆಚ್ಚುಗೆ ಪಡೆದುಕೊಂಡಿದೆ.
ಸೆನ್ಸಾರ್ ಅಧಿಕಾರಿಗಳು ತಿಂಗಳೊಂದಕ್ಕೆ ಹತ್ತಾರು ಚಿತ್ರಗಳನ್ನು ನೋಡುತ್ತಾರೆ. ಆದರೆ ಅವರ ಕಡೆಯಿಂದಲೇ ಮೆಚ್ಚುಗೆ ಪಡೆದುಕೊಳ್ಳೋ ಸಿನಿಮಾಗಳು ವಿರಳ. 19 ಏಜ್ ಈಸ್ ನಾನ್ಸೆನ್ಸ್ ಚಿತ್ರ ಅಂಥಾ ವಿರಳ ಸಿನಿಮಾಗಳ ಸಾಲಿನಲ್ಲಿ ಸೇರಿಕೊಂಡಿದೆ. ಈ ಚಿತ್ರಕ್ಕೆ ಯು/ಎ ಸರ್ಟಿಫಿಕೆಟ್ ಕೊಟ್ಟಿರೋ ಸೆನ್ಸಾರ್ ಮಂಡಳಿ ಅಧಿಕಾರಿಗಳು ಚಿತ್ರತಂಡದ ಶ್ರಮವನ್ನು, ಕ್ರಿಯೇಟಿವಿಟಿಗಳನ್ನು ಮೆಚ್ಚಿಕೊಂಡಿದ್ದಾರೆ. ಈ ಉತ್ತೇಜಕ ಮಾತುಗಳಿಂದ ಇಡೀ ಚಿತ್ರತಂಡ ಖುಷಿಗೊಂಡಿದೆ. ಈ ಮೂಲಕವೇ ಹೊಸಬರ ತಂಡಕ್ಕೆ ಗೆಲುವು ಸಿಗೋದು ಗ್ಯಾರೆಂಟಿ ಎಂಬಂಥಾ ನಂಬಿಕೆಯೂ ಹುಟ್ಟಿಕೊಂಡಿದೆ.
ಇದು ಲೋಕೇಶ್ ನಿರ್ಮಾಣದಲ್ಲಿ ಮೂಡಿ ಬಂದಿರೋ ಚೊಚ್ಚಲ ಚಿತ್ರ. ಇಲ್ಲಿ ಲೋಕೇಶ್ ಅವರ ಪುತ್ರ ಮನುಷ್ ನಾಯಕನಾಗಿ ನಟಿಸಿದ್ದಾನೆ. ಈ ಸಿನಿಮಾದ ಕಥೆ ಹತ್ತೊಂಬತ್ತರ ಹರೆಯದ ಸುತ್ತ ಗಿರಕಿ ಹೊಡೆಯುವಂಥಾದ್ದು. ಆದ್ದರಿಂದಲೇ ಅದೇ ವಯೋಮಾನದ ಮನುಷ್ನನ್ನು ನಾಯಕನನ್ನಾಗಿಸಲಾಗಿದೆ. ಹಾಗೆಂದು ಇದೀಗ ತಾನೇ ಬಿಕಾಂ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರೋ ಮನುಷ್ ಏಕಾಏಕಿ ನಾಯಕನಾಗಿಲ್ಲ. ನಿರ್ಮಾಪಕ ಲೋಕೇಶ್ ಆತನಿಗೆ ಸೂಕ್ತವಾದ ತರಬೇತಿ ಕೊಡಿಸಿದ್ದಾರೆ. ಈ ಬಲದಿಂದಲೇ ಮನುಷ್ ಚೆಂದಗೆ ನಟಿಸಿದ್ದಾನಂತೆ. ಇದೆಲ್ಲ ಅಂಶಗಳು ಸೇರಿಕೊಂಡು ಸೆನ್ಸಾರ್ ಮಂಡಳಿಯಿಂದ ಈ ಸಿನಿಮಾಗೆ ಶಹಬ್ಬಾಸ್ಗಿರಿ ಸಿಕ್ಕಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.