![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Dec 2, 2019, 7:13 PM IST
ಸುರೇಶ್ ಎಂ ಗಿಣಿ ನಿರ್ದೇಶನದ 19 ಏಜ್ ಈಸ್ ನಾನ್ಸೆನ್ಸ್ ಚಿತ್ರ ಡಿಸೆಂಬರ್ 6ನೇ ತಾರೀಕಿನಂದು ತೆರೆಗಾಣುತ್ತಿದೆ. ಯಾವ ಸದ್ದು ಗದ್ದಲವೂ ಇಲ್ಲದೆ ಕೆಲಸ ಕಾರ್ಯ ಮುಗಿಸಿಕೊಂಡಿದ್ದ ಈ ಸಿನಿಮಾ ಪ್ರೇಕ್ಷಕರ ನಡುವೆ ಚರ್ಚೆ ಹುಟ್ಟು ಹಾಕಿದ್ದೇ ತನ್ನ ವಿಶೇಷವಾದ ಕಂಟೆಂಟಿನ ಸುಳಿವುಗಳ ಮೂಲಕ. ಈಗಂತೂ ಇದು ಬಹು ನಿರೀಕ್ಷಿತ ಚಿತ್ರವಾಗಿ ಹೊರ ಹೊಮ್ಮಿದೆ. ಆರಂಭ ಕಾಲದಲ್ಲಿ ಈ ಸಿನಿಮಾದ ಕಥೆಯ ಬಗ್ಗೆ ಪ್ರೇಕ್ಷಕರು ಯಾವ್ಯಾವ ಕಲ್ಪನೆಗಳನ್ನಿಟ್ಟುಕೊಂಡಿದ್ದರೋ ಅದಕ್ಕೆ ಮಿಗಿಲಾದ ಕಥನದೊಂದಿಗೆ ಇದು ಪ್ರೇಕ್ಷಕರನ್ನು ಮುಖಾಮುಖಿಯಾಗ ಹೊರಟಿದೆ.
ಇದು ಲೋಕೇಶ್ ನಿರ್ಮಾಣ ಮಾಡಿರುವ ಚಿತ್ರ. ಅವರ ಪುತ್ರ ಮನುಷ್ ಇಲ್ಲಿ ನಾಯಕನಾಗಿ ನಟಿಸಿದ್ದಾರೆ. ಇದು ಹತ್ತೊಂಬತ್ತರ ಹುಡುಗನ ಸುತ್ತ ಸುತ್ತುವ ಕಥೆಯನ್ನೊಳಗೊಂಡಿರೋದರಿಂದ ಆ ಪಾತ್ರ ಸಹಜವಾಗಿ ಮೂಡಿ ಬರಲಿ ಅನ್ನೋ ಕಾರಣದಿಂದಲೇ ಮನುಷ್ನನ್ನು ಆಯ್ಕೆ ಮಾಡಿಕೊಳ್ಳಲಾಗದೆಯಂತೆ. ಅಷ್ಟಕ್ಕೂ ಇದು ಸಲೀಸಾದ ಪಾತ್ರವೇನಲ್ಲ. ಅದಕ್ಕೆಂದೇ ನಟನೆ, ಫೈಟಿಂಗ್ ಸೇರಿದಂತೆ ಎಲ್ಲದರಲ್ಲಿಯೂ ಮನುಷ್ ತರಬೇತಿ ಪಡೆದುಕೊಂಡಿದ್ದಾರೆ. ವಿಶೇಷವಾಗಿ ಇಲ್ಲಿ ಹೈ ವೋಲ್ಟೇಜ್ ಸಾಹಸ ಸನ್ನಿವೇಶಗಳಿರೋದರಿಂದ ಅದು ಹೊಸಾ ಹುಡುಗ ಮನುಷ್ ಪಾಲಿಗೆ ಸವಾಲಾಗಿತ್ತಂತೆ.
ಆದರೆ ಮೊದಲ ಪ್ರಯತ್ನದಲ್ಲಿಯೇ ಅಂಥಾ ಹೈ ವೋಲ್ಟೇಜ್ ಸಾಹಸ ಸನ್ನಿವೇಶಗಳನ್ನು ಈತ ನಿರ್ವಹಿಸಿರುವ ರೀತಿ ಕಂಡು ಚಿತ್ರತಂಡ ಖುಷಿಗೊಂಡಿದೆ. ಮನುಷ್ ಸಾಹಸ ಸನ್ನಿವೇಶಗಳನ್ನು ಹೇಗೆ ನಿಭಾಯಿಸಿದ್ದಾರೆಂಬುದು ಟ್ರೇಲರ್ನಲ್ಲಿ ಸ್ಪಷ್ಟವಾಗಿಯೇ ಕಾಣಿಸಿದೆ. ಅದಕ್ಕೆ ವ್ಯಾಪಕ ಮೆಚ್ಚುಗೆಗಳೂ ಕೇಳಿ ಬರುತ್ತಿವೆ. ಅಂತೂ 19 ಏಜ್ ಈಸ್ ನಾನ್ಸೆನ್ಸ್ ಚಿತ್ರದ ಪ್ರಧಾನ ಆಕರ್ಷಣೆಗಳಲ್ಲಿ ಸಾಹಸವೂ ಒಂದಾಗಿ ಸೇರಿಕೊಂಡಿದೆ. ಈ ಮೂಲಕ ಫ್ಯಾಮಿಲಿ ಪ್ರೇಕ್ಷಕರೊಂದಿಗೆ ಮಾಸ್ ಆಡಿಯನ್ಸ್ಗೂ ಈ ಸಿನಿಮಾ ಇಷ್ಟವಾಗಲಿದೆ ಎಂಬ ನಂಬಿಕೆ ಚಿತ್ರ ತಂಡದಲ್ಲಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.