National Awards: ಅತ್ಯುತ್ತಮ ನಟ ಪ್ರಶಸ್ತಿ ಪಡೆದ ರಿಷಬ್‌ ಶೆಟ್ಟಿ; 2 ಪ್ರಶಸ್ತಿ ಪಡೆದ KGF2

ಕೆಜಿಎಫ್‌ 2 ಚಿತ್ರಕ್ಕೆ 2 ಪ್ರಶಸ್ತಿ

Team Udayavani, Aug 16, 2024, 2:31 PM IST

70th National Film Awards Rishab Shetty wins Best Actor for his work in Kantara

ಹೊಸದಿಲ್ಲಿ: ದೇಶದ ಚಲನಚಿತ್ರ ರಂಗದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು (70th National Film Awards) ಶುಕ್ರವಾರ (ಆ.16) ಘೋಷಿಸಲಾಗಿದೆ. ದೇಶದಾದ್ಯಂತ ಅತ್ಯುತ್ತಮ ಚಲನಚಿತ್ರ ನಿರ್ಮಾಣ ಪ್ರತಿಭೆಗಳನ್ನು ಗೌರವಿಸಲು ವಾರ್ಷಿಕವಾಗಿ ಘೋಷಿಸಲಾಗುತ್ತದೆ.

ಇದೀಗ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಿಸಲಾಗಿದೆ. ಭಾರತೀಯ ಚಲನಚಿತ್ರ ರಂಗದಲ್ಲಿ ಹೊಸ ಅಲೆ ಎಬ್ಬಿಸಿದ್ದ ಕನ್ನಡ ಚಿತ್ರ ಕಾಂತಾರ ಚಿತ್ರಕ್ಕಾಗಿ ನಟ ರಿಷಬ್ ಶೆಟ್ಟಿ (Rishab Shetty) ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ.

ಅಲ್ಲದೆ ಕಾಂತಾರ ಚಿತ್ರಕ್ಕೆ ಸಂಪೂರ್ಣ ಮನರಂಜನೆ ವಿಭಾಗದಲ್ಲಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ನೀಡಲಾಗಿದೆ.

ಕನ್ನಡದ ಮತ್ತೊಂದು ರೆಕಾರ್ಡ್‌ ಬ್ರೇಕಿಂಗ್‌ ಸಿನಿಮಾ ಕೆಜಿಎಫ್‌ 2 (KGF-2) ಚಿತ್ರವು ಎರಡು ವಿಭಾಗದಲ್ಲಿ ಪ್ರಶಸ್ತಿ ಬಾಚಿದೆ. ಕೆಜಿಎಫ್ ಅಧ್ಯಾಯ 2 ಅತ್ಯುತ್ತಮ ಕನ್ನಡ ಚಲನಚಿತ್ರ ವಿಭಾಗದಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಅದೇ ಚಿತ್ರವು ಅತ್ಯುತ್ತಮ ಸ್ಟಂಟ್ ಕೊರಿಯೋಗ್ರಫಿ ಪ್ರಶಸ್ತಿಯನ್ನು ಸಹ ಪಡೆದಿದೆ.

ಅತ್ಯುತ್ತಮ ಚೊಚ್ಚಲ ನಿರ್ದೇಶನದ ಚಿತ್ರ ಪ್ರಶಸ್ತಿಯನ್ನು ʼಮಧ್ಯಂತರʼ ಬಾಚಿಕೊಂಡಿದೆ. ಬಸ್ತಿ ದಿನೇಶ್‌ ಶೆಣೈ ಅವರು ಇದರ ನಿರ್ದೇಶಕರು.

ಅತ್ಯುತ್ತಮ ತೆಲುಗು ಚಿತ್ರ ಪ್ರಶಸ್ತಿಯು ಕಾರ್ತಿಕೇಯ-2 ಪಾಲಾಗಿದ್ದರೆ, ಅತ್ಯುತ್ತಮ ತಮಿಳು ಚಿತ್ರ ಪ್ರಶಸ್ತಿ ಪೊನ್ನಿಯನ್‌ ಸೆಲ್ವನ್‌ -2 ಚಿತ್ರದ ಪಾಲಾಗಿದೆ. ಶರ್ಮಿಳಾ ಟ್ಯಾಗೋರ್ ಅವರ ಗುಲ್ಮೊಹರ್ ಅತ್ಯುತ್ತಮ ಹಿಂದಿ ಚಲನಚಿತ್ರ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದೆ.

ಈ ಬಾರಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಇಬ್ಬರು ಪಡೆದುಕೊಂಡಿದ್ದಾರೆ. ತಮಿಳು ಚಿತ್ರ ತಿರುಚಿತ್ರಾಂಬಲಂಗಾಗಿ ನಿತ್ಯಾ ಮೆನೆನ್ ಮತ್ತು ಕಚ್ ಎಕ್ಸ್‌ಪ್ರೆಸ್‌ ಗಾಗಿ ಮಾನಸಿ ಪರೇಖ್ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದಾರೆ.

ಬ್ರಹ್ಮಾಸ್ತ್ರ ಚಿತ್ರಕ್ಕಾಗಿ ಪ್ರೀತಮ್ ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿಯನ್ನು ಪಡೆದರು. ಪೊನ್ನಿಯಿನ್ ಸೆಲ್ವನ್ 2 ಗಾಗಿ ಎಆರ್ ರೆಹಮಾನ್ ಅತ್ಯುತ್ತಮ ಹಿನ್ನೆಲೆ ಸಂಗೀತ ಪ್ರಶಸ್ತಿ ಪಡೆದರು. ಆನಂದ್ ಕೃಷ್ಣಮೂರ್ತಿ ಅವರು ಪೊನ್ನಿಯಿನ್ ಸೆಲ್ವನ್ ಗಾಗಿ ಅತ್ಯುತ್ತಮ ಧ್ವನಿ ವಿನ್ಯಾಸ ಪ್ರಶಸ್ತಿ ಪಡೆದರು.

ಬ್ರಹ್ಮಾಸ್ತ್ರಕ್ಕಾಗಿ ಅರಿಜಿತ್ ಸಿಂಗ್ ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿ ಪಡೆದರು. ಉಂಚೈ ಚಿತ್ರಕ್ಕಾಗಿ ಸೂರಜ್ ಆರ್ ಬರ್ಜತ್ಯಾ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಪಡೆದರು.

ಟಾಪ್ ನ್ಯೂಸ್

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.