![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Nov 15, 2022, 12:46 PM IST
ಮುಂಬಯಿ: ಮಿಸ್ಟರ್ ಫರ್ಪೆಕ್ಟ್ ಆಮಿರ್ ಖಾನ್ ಅವರ ʼಲಾಲ್ ಸಿಂಗ್ ʼ ಬಾಕ್ಸ್ ಆಫೀಸ್ ನಲ್ಲಿ ಹೇಳಿಕೊಳ್ಳುವಷ್ಟರ ಮಟ್ಟಿಗೆ ಸದ್ದು ಮಾಡಿಲ್ಲ. ಓಟಿಟಿಯಲ್ಲಿ ಪ್ರೇಕ್ಷಕರು ಸಿನಿಮಾವನ್ನು ನೋಡಿ ಮೆಚ್ಚಿಕೊಂಡಿದ್ದರು. ಸದ್ಯ ಆಮಿರ್ ಖಾನ್ ಹೊಸ ಚಿತ್ರವೊಂದರ ನಿರ್ಮಾಣಕ್ಕೆ ಸಿದ್ದರಾಗಿದ್ದಾರೆ.
ʼಕ್ಯಾಂಪಿಯೋನ್ಸ್ʼ ಎಂಬ ಸ್ಪ್ಯಾನಿಷ್ ಚಲನಚಿತ್ರದ ರೂಪಾಂತರ( adaptation) ʼಚಾಂಪಿಯನ್ಸ್ʼ ಸಿನಿಮಾವನ್ನು ಆಮಿರ್ ಖಾನ್ ಅವರ ಆಮಿರ್ ಪ್ರೂಡಕ್ಷನ್, ಸೋನಿ ಪಿಕ್ಚರ್ಸ್ ಇಂಡಿಯಾ ಹಾಗೂ 200 ನಾಟ್ ಔಟ್ ಪ್ರೊಡಕ್ಷನ್ಸ್ ನೊಂದಿಗೆ ಜಂಟಿಯಾಗಿ ನಿರ್ಮಾಣ ಮಾಡಲಿದ್ದಾರೆ.
ಇದೊಂದು ಕ್ರೀಡಾ ಕಥೆಯ ಸ್ಪೂರ್ತಿದಾಯಕ ಸಿನಿಮಾವಾಗಿದ್ದು. ಆಮಿರ್ ಖಾನ್ ಅವರೇ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಮೊದಲು ಖಾತ್ರಿಯಾಗಿತ್ತು. ಆದರೆ ಈಗ ಯೋಜನೆ ಬದಲಾಗಿದೆ. ಇತ್ತೀಚೆಗೆ ಮಾಧ್ಯಮದ ಮುಂದೆ ಮಾತನಾಡುತ್ತಾ ಆಮಿರ್ ಖಾನ್ ʼಚಾಂಪಿಯನ್ಸ್ʼ ಸಿನಿಮಾದಲ್ಲಿ ನಟಿಸುವುದಿಲ್ಲ ಎಂದಿದ್ದಾರೆ.
“ನಾನು 35 ವರ್ಷಗಳಿಂದ ಸಿನಿಮಾರಂಗದಲ್ಲಿ ನಟಿಸುತ್ತಿದ್ದೇನೆ. ಈ ವರ್ಷಗಳಲ್ಲಿ ನಾನು ಸಂಪೂರ್ಣವಾಗಿ ನನ್ನ ಕೆಲಸದ ಮೇಲೆ ಗಮನ ಹರಿಸಿದ್ದೇನೆ. ನನ್ನ ಆತ್ಮೀಯರಾದವರಿಗೆ ನನ್ನ ನಿರ್ಣಯ ಸರಿಯಲ್ಲ ಎಂದು ಅನ್ನಿಸಬಹುದು. ಆದರೆ ನನ್ನ ಪ್ರಕಾರ ನಾನು ಅವರಿಂದ ದೂರವಿರುವುದು ಸರಿ ಎಂದು ಅನ್ನಿಸುತ್ತದೆ. ಜೀವನವನ್ನು ಬೇರೊಂದು ಮಾರ್ಗದಲ್ಲಿಯೂ ಅನುಭವಿಸಬೇಕು. ಮುಂದಿನ ಒಂದೂವರೆ ವರ್ಷ ನಾನು ನಟನಾಗಿ ಕೆಲಸ ಮಾಡುವುದಿಲ್ಲ” ಎಂದು ಹೇಳಿದ್ದಾರೆ.
ನಾನು ನಟನೆಯಿಂದ ಬ್ರೇಕ್ ತೆಗೆದುಕೊಂಡು ನನ್ನ ಕುಟುಂಬ, ಮಕ್ಕಳು,ತಾಯಿಯೊಂದಿಗೆ ಸಮಯ ಕಳೆಯುತ್ತೇನೆ ಎಂದು ಆಮಿರ್ ಹೇಳಿದ್ದಾರೆ.
ʼಲಾಲ್ ಸಿಂಗ್ ಚಡ್ಡಾʼ ಚಿತ್ರಕ್ಕೆ ಟ್ವಿಟರ್ ನಲ್ಲಿ ಬಾಯ್ಕಾಟ್ ಕೂಗು ಕೇಳಿ ಬಂದಿತ್ತು. ಇದರಿಂದ ಸಿನಿಮಾಕ್ಕೆ ಹೊಡೆತ ಬಿದ್ದಿತ್ತು. ಬಹುಶಃ ಆ ಕಾರಣದಿಂದಲೂ ಆಮಿರ್ ಈ ನಿರ್ಧಾರವನ್ನು ತೆಗೆದುಕೊಂಡಿರಬಹುದು ಎಂದು ಕೆಲ ಅಭಿಮಾನಿಗಳು ಊಹಿಸಿದ್ದಾರೆ. ಕಾಜೂಲ್ ನಟನೆಯ ʼಸಲಾಂ ವೆಂಕಿʼ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಆಮಿರ್ ಖಾನ್ ಕಾಣಿಸಿಕೊಂಡಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.