Achar & co: ಕೂಡು ಕುಟುಂಬದ ಸುತ್ತ ಪಿಆರ್ ಕೆ ನಿರ್ಮಾಣದ ಚಿತ್ರ
Team Udayavani, Jul 17, 2023, 4:22 PM IST
ಪಿಆರ್ಕೆ ಪ್ರೊಡಕ್ಷನ್ನಡಿ “ಆಚಾರ್-ಕೋ’ ಎಂಬ ಚಿತ್ರವೊಂದು ಆರಂಭವಾಗಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಜು.28ಕ್ಕೆ ತೆರೆಗೆ ಬರುತ್ತಿದೆ.
ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ಸಿಂಧು ಶ್ರೀನಿವಾಸಮೂರ್ತಿ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಚಿತ್ರವನ್ನು ನಿರ್ಮಿಸಿದ್ದಾರೆ.
“ಇದು ಅರವತ್ತರ ಕಾಲಘಟ್ಟದಲ್ಲಿ ನಡೆಯುವ ಕಥೆ. ಬೆಂಗಳೂರಿನ ಜಯನಗರ ನಿವಾಸಿ ಮಧುಸೂದನ್ ಆಚಾರ್ – ಸಾವಿತ್ರಿ ಆಚಾರ್ ಹಾಗೂ ಅವರ ಹತ್ತು ಜನ ಮಕ್ಕಳ ಸುತ್ತ ಕಥೆ ನಡೆಯುತ್ತದೆ. ಒಟ್ಟಿನಲ್ಲಿ ಇದೊಂದು ಕೂಡು ಕುಟುಂಬದ ಕಥೆ ಎನ್ನಬಹುದು. ಮಧುಸೂದನ್ ಆಚಾರ್ ಪಾತ್ರದಲ್ಲಿ ಹಿರಿಯ ನಟ ಅಶೋಕ್, ಸಾವಿತ್ರಿ ಆಚಾರ್ ಪಾತ್ರದಲ್ಲಿ ಸುಧಾ ಬೆಳವಾಡಿ ಅಭಿನಯಿಸಿದ್ದಾರೆ. ಹೆಚ್ಚು ಜನ ಕಲಾವಿದರನ್ನು ಆಡಿಷನ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗಿದೆ. ಅದರಲ್ಲಿ ಬಹುತೇಕರು ರಂಗಭೂಮಿ ಹಿನ್ನೆಲೆಯುಳ್ಳವರು. ನಾನು ಕೂಡ ಇದರಲ್ಲಿ ಅಭಿನಯಿಸಿದ್ದೇನೆ. ಅರವತ್ತರ ದಶಕದಲ್ಲಿ ನಡೆಯುವ ಕಥೆಯಾಗಿರುವುದರಿಂದ ಚಿತ್ರದಲ್ಲಿ ಸ್ವಲ್ಪ ಕೂಡ ಅಧುನೀಕತೆ ಕಾಣಬಾರದು. ಹಾಗಾಗಿ ಮೈಸೂರಿನಲ್ಲಿ ಚಿತ್ರೀಕರಣ ಮಾಡಿದ್ದೇವೆ. ಈ ಚಿತ್ರದ ಬಗ್ಗೆ ಪುನೀತ್ ರಾಜಕುಮಾರ್ ಅವರ ಬಳಿ ಮಾತನಾಡಿದ್ದೆ. ಇಂದು ಅವರಿದಿದ್ದರೆ ಬಹಳ ಖುಷಿ ಪಡುತ್ತಿದ್ದರು. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಯಾವುದೇ ಕೊರತೆ ಬರದಂತೆ ಅಚ್ಚುಕಟ್ಟಾಗಿ ನಿರ್ಮಾಣ ಮಾಡಿದ್ದಾರೆ. ನಮ್ಮ ಚಿತ್ರದ ಬಹುತೇಕ ತಂತ್ರಜ್ಞರು ಮಹಿಳೆಯರೇ ಆಗಿರುವುದು ವಿಶೇಷ. ಜುಲೈ 28 ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ’ ಎಂದು ವಿವರ ನೀಡಿದರು ಸಿಂಧು.
“ನಾನು ಸಿನಿಮಾ ನೋಡಿದ್ದೇನೆ. ಚೆನ್ನಾಗಿದೆ. ಸಿಂಧು ಶ್ರೀನಿವಾಸಮೂರ್ತಿ ಮತ್ತು ತಂಡಕ್ಕೆ ಶುಭವಾಗಲಿ’ ಎಂದರು ಅಶ್ವಿನಿ ಪುನೀತ್ ರಾಜಕುಮಾರ್. ಹಿರಿಯ ನಟ ಅಶೋಕ್, ಸುಧಾ ಬೆಳವಾಡಿ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರು, ಛಾಯಾಗ್ರಾಹಕ ಅಭಿಮನ್ಯು ಸದಾನಂದನ್ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.
ಬಿಂದು ಮಾಲಿನಿ ಸಂಗೀತ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಹಾಗೂ ಆಶಿಕ್ ಕುಸುಗೊಳ್ಳಿ ಅವರ ಸಂಕಲನವಿರುವ ಈ ಚಿತ್ರಕ್ಕೆ ಸಿಂಧು ಶ್ರೀನಿವಾಸಮೂರ್ತಿ ಹಾಗೂ ಕಣ್ಣನ್ ಗಿಲ್ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸಂಭಾಷಣೆಯನ್ನು ತ್ರಿಲೋಕ್ ತ್ರಿವಿಕ್ರಮ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.