ಖಾಸಗಿ ಸುದ್ದಿ ವಾಹಿನಿ ವಿರುದ್ಧ ಸಮರ : ರಕ್ಷಿತ್ ಶೆಟ್ಟಿ ಬೆಂಬಲಕ್ಕೆ ನಿಂತ ನಟ ಅನಿಶ್  


Team Udayavani, Jul 2, 2021, 1:09 PM IST

Rakshit shetty

ಬೆಂಗಳೂರು : ನಟ ಅನಿಶ್ ತೇಜೇಶ್ವರ ತಮ್ಮ ಸ್ನೇಹಿತ ನಟ ರಕ್ಷಿತ್ ಶೆಟ್ಟಿ ಅವರ ಬೆಂಬಲಕ್ಕೆ ನಿಂತಿದ್ದಾರೆ. ತನ್ನ ಹಾಗೂ ರಕ್ಷಿತ್ ನಡುವಿನ ಸ್ನೇಹ ಸಂಬಂಧ ಎಂತಹದು ಎಂಬುದರ ಕುರಿತು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ವಿರುದ್ಧ ಕನ್ನಡದ ಖಾಸಗಿ ವಾಹಿನಿಯೊಂದು ಮಾನಹಾನಿ ಮಾಡುವಂತಹ ಕಾರ್ಯಕ್ರಮ ಪ್ರಸಾರ ಮಾಡಿದೆ. ಇದರ ವಿರುದ್ಧ ಆಕ್ರೋಶ ಗೊಂಡ ರಕ್ಷಿತ್ ನಿನ್ನೆಯಷ್ಟೆ ( ಜುಲೈ 1) ಬಹಿರಂಗ ಸವಾಲು ಹಾಕಿದ್ದಾರೆ. ಜೊತೆಗೆ ನನ್ನ ಜೊತೆ ಕೆಲಸ ಮಾಡಿದವರು ನನ್ನ ಬಗ್ಗೆ ಹೇಳಿಕೊಳ್ಳುತ್ತಾರೆ ಎಂದು ನುಡಿದಿದ್ದರು. ಅದರಂತೆ ಇಂದು ಅನಿಶ್ ತಮ್ಮ ಫೇಸ್ ಬುಕ್ ನಲ್ಲಿ ರಕ್ಷಿತ್ ಶೆಟ್ಟಿಯವರ ವ್ಯಕ್ತಿತ್ವ ಹಾಗೂ ಚಿತ್ರರಂಗದ ಬಗ್ಗೆ ಅವರಲ್ಲಿರುವ ಆಸಕ್ತಿ ಬಗ್ಗೆ ಬರೆದುಕೊಂಡಿದ್ದಾರೆ.

ಅನಿಶ್ ಅವರ ಫೇಸ್ ಬುಕ್ ಪೋಸ್ಟ್ ಇಲ್ಲಿದೆ ನೋಡಿ :

‘ನನ್ನ ಹನ್ನೊಂದು ವರ್ಷಗಳ ಸಿನಿಮಾ ಜೀವನದ ಪಯಣದಲ್ಲಿ ನಾನು ರಕ್ಷಿತ್ ನ ಕಂಡಂತೆ,ತನಗೆ ಕೆಲಸ ಕೊಟ್ಟವರಿಗೆ,ಕಷ್ಟದಲ್ಲಿ ಇರುವ ತನ್ನ ಸುತ್ತಮುತ್ತಲಿನ ಸ್ನೇಹ ಬಳಗಕ್ಕೆ ಮತ್ತು ನಿರ್ಮಾಪಕರಿಗೆ ಸದಾ ಬೆನ್ನೆಲುಬಾಗಿ ನಿಂತಿರುವ ನಾನು ಕಂಡ ಕೆಲವೇ ಕೆಲವು ವ್ಯಕ್ತಿಗಳಲ್ಲಿ ರಕ್ಷಿತ್ ಶೆಟ್ಟಿ ಕೂಡ ಒಬ್ರು,ಆತ ಮೊದಲ ದಿನ ಹೇಗೆ ಇದ್ದ ಇಂದಿಗೂ ಹಾಗೆಯೇ ಇದ್ದಾನೆ, ಸರಳ ಸಜ್ಜನ ಮತ್ತು ಕೆಲಸ ಅಂದ್ರೆ ದೇವರ ಸಮಾನವಾಗಿ ಕಾಣುತ್ತಾನೆ.. ತುಂಬಾ ಜನ ನನ್ನ ಗೆಳೆಯರು ನನ್ನ ಜೊತೆ ಸಿನಿ ಬದುಕು ಶುರು ಮಾಡಿ ಇಂದು ಸ್ಟಾರ್ ಗಳಾಗಿದ್ದಾರೆ ಆದರೆ ಮೊದಲ ದಿನ ಇದ್ದ ಹಾಗೆ ಇಂದಿಗೂ ತನ್ನ ವ್ಯಕ್ತಿತ್ವದಲ್ಲಿ ಒಂದು ಎಳ್ಳಿನಷ್ಟು ಬದಲಾವಣೆ ಆಗದ ವ್ಯಕ್ತಿ ಅಂದ್ರೆ ರಕ್ಷಿತ್ ಶೆಟ್ಟಿ. ಆತನಿಗೆ ಸಿಂಪಲ್ ಸ್ಟಾರ್ ಎಂದು ಸುಮ್ಮನೇ ಬಂದ ಪಟ್ಟವಲ್ಲ..He Is Simple Star

ಒಬ್ಬ ಸಾಮಾನ್ಯ ನಟ,ಸ್ಟಾರ್ ಆಗಿ ಮಾರ್ಪಾಡು ಆಗುವ ಪ್ರಕ್ರಿಯೆಯಲ್ಲಿ ತನ್ನ ಶ್ರಮ,ಕೆಲಸದ ಮೇಲಿನ ಶ್ರದ್ಧೆ ಮತ್ತು ಅಭಿಮಾನಗಳ ಬೆಂಬಲದ ಜೊತೆಗೆ ಮಾಧ್ಯಮಗಳ ಕೊಡುಗೆ ಕೂಡ ಇರುತ್ತದೆ. ಆದರೆ ಯಾವುದೋ ಒಂದು ಗಾಳಿ ಸುದ್ದಿಯನ್ನ ನಂಬಿ ಅದನ್ನ ಪರಿಶೀಲಿಸದೆ ಈ ರೀತಿ ಒಬ್ಬ ವ್ಯಕ್ತಿಯ ವ್ಯಕ್ತಿತ್ವದ ತೇಜೋವಧೆ ಮಾಡುವುದು ಖಂಡಿತ ಒಳ್ಳೆಯ ಬೆಳವಣಿಗೆಯಲ್ಲ… ರಕ್ಷಿತ್ ಶೆಟ್ಟಿಯಿಂದ ಚಿತ್ರರಂಗದಲ್ಲಿ ದೊಡ್ಡ ಮಟ್ಟಿಗೆ ಬದುಕು ಕಟ್ಟಿಕೊಂಡಿರುವವರ ಸಂಖ್ಯೆ ಬಹಳ ದೊಡ್ಡ ಮಟ್ಟದಲ್ಲಿ ಇದೆ,ಅಂಥವರ ಬಗ್ಗೆ ಇಲ್ಲ ಸಲ್ಲದ ಆರೋಪ ಸಹಿಸುವಂತದಲ್ಲ

ಉದಾಹರಣೆ: ಮಾಧ್ಯಮ ಲೋಕದಲ್ಲಿ ನಿಮಗೆ ತುಂಬಾ ಬೇರೆ ಚಾನಲ್ ನವರು ಪ್ರತಿಸ್ಪರ್ಧಿಗಳಿರುತ್ತಾರೆ ನಿಮ್ಮನ್ನ ಹಿಂದಿಕ್ಕಿ ಮುನ್ನುಗಲು ಆಗದೆ ನಿಮ್ಮ ಚಾನಲ್ ಮತ್ತು ಅಲ್ಲಿ ಕೆಲಸ ಮಾಡುವ ಪ್ರಮುಖರ ಬಗ್ಗೆ ಇಲ್ಲದ ಸಲ್ಲದ ಆರೋಪ ಮಾಡುತ್ತಾ ಗಾಳಿ ಸುದ್ದಿ ಹಬ್ಬಿಸುತ್ತಾರೆ, ಅದನ್ನ ಪರಿಶೀಲಿಸದೆ ಜನರು ನಂಬಿ ನಿಮ್ಮ ಬಗ್ಗೆ ನಿಮ್ಮ ಪ್ರತಿಷ್ಠಿತ ಸಂಸ್ಥೆಯ ಬಗ್ಗೆ ಅಲ್ಲಿಯ ಪ್ರಮುಖರ ಬಗ್ಗೆ ಕಟುವಾಗಿ ಟೀಕಿಸಿದರೆ ನಿಮಗೆ ಹೇಗೆ ಆಗ ಬೇಡ ಹೇಳಿ… ತಪ್ಪು ಮಾಡದೆ ತಪ್ಪಿನ ಹೊರೆಯನ್ನ ಹೊರುವ ನೋವು ಆ ಹೊರೆಯನ್ನ ಹೊತ್ತವರಿಗೆ ಗೊತ್ತಿರುತ್ತದೆ…

ನಿಮ್ಮ ನಿಮ್ಮ ಸಂಸ್ಥೆ ಮತ್ತು ಅಲ್ಲಿ ಕೆಲಸ ಮಾಡುವವರ ಬಗ್ಗೆ ಹೇಗೆ ನಿಮಗೆ ಸತ್ಯ ಗೊತ್ತಿರುತದ್ದೆಯೋ ಹಾಗೆ ನನ್ನ ಗೆಳಯನ ಬಗ್ಗೆ ನನಗೆ ಸಂಪೂರ್ಣವಾಗಿ ಗೊತ್ತಿದೆ.. ತಿಳಿಯದಯೆ ಮಾಡಿರುವ ಅಥವ ಸರಿಯಾದ ಮಾಹಿತಿ ಇಲ್ಲದೆ ಮಾಡಿರುವ ತಪ್ಪನ್ನು ಸರಿಪಡಿಸಿಕೊಳ್ಳಿ?

ರಕ್ಷಿತ್ ಶೆಟ್ಟಿ ಮೇಲೆ ನೀವು ಮಾಡಿರುವ ಅಷ್ಟು ಆರೋಪಗಳಿಗೆ ಅವರೆ ಜುಲೈ 11ರಂದು ಉತ್ತರ ಕೊಡಲಿದ್ದಾರೆ.

ರಕ್ಷಿತ್ ಎಂದಿಗೂ ಯಾರಿಗೂ ಅನ್ಯಾಯ ಮಾಡಿದವನಲ್ಲ ಎಲ್ಲರೂ ಒಟ್ಟಾಗಿ ಗೆಲ್ಲಬೇಕು ಎನ್ನುವ ಮನಸ್ಥಿತಿಯ ಮನುಷ್ಯ. “ಒಂದು ಒಳ್ಳೆಯ ವ್ಯಕ್ತಿತ್ವಕ್ಕೆ,ಕಾಗೆಯ ಮಾತು ಕೇಳಿ ಕುಕ್ಕುವ ಕೆಲಸ ಮಾಡಬೇಡಿ” ನಿಮ್ಮ ಅನಿಶ್.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.