ಹರೀಶ್‌ ರಾಜ್ ಜರ್ನಿಗೆ 25 ವರ್ಷ: ಸಿನಿಯಾನ ಹಂಚಿಕೊಂಡ ನಟ


Team Udayavani, Aug 4, 2022, 10:24 AM IST

ಹರೀಶ್‌ ರಾಜ್ ಜರ್ನಿಗೆ 25 ವರ್ಷ:  ಸಿನಿಯಾನ ಹಂಚಿಕೊಂಡ ನಟ

ವೃತ್ತಿ ಜೀವನದ 25ನೇ ವರ್ಷ ಎನ್ನುವುದು ಚಿತ್ರರಂಗದ ಪ್ರತಿಯೊಬ್ಬ ಕಲಾವಿದ, ನಿರ್ದೇಶಕ, ತಂತ್ರಜ್ಞನ ಪಾಲಿಗೆ ಸಾಕಷ್ಟು ಮಹತ್ವದ್ದಾಗಿರುತ್ತದೆ. ಇಂಥದ್ದೇ ವೃತ್ತಿ ಜೀವನದ ಮಹತ್ವದ ಘಟ್ಟದಲ್ಲಿದ್ದಾರೆ ನಟ ಕಂ ನಿರ್ದೇಶಕ ಹರೀಶ್‌ ರಾಜ್‌. ಹೌದು, ಹರೀಶ್‌ ರಾಜ್‌ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಇದೇ ಖುಷಿಯನ್ನು ಹಂಚಿಕೊಳ್ಳುವ ಸಲುವಾಗಿ ಮಾಧ್ಯಮಗಳ ಮುಂದೆ ಬಂದಿದ್ದ ಹರೀಶ್‌ ರಾಜ್‌, ತಮ್ಮ ಸಿನಿಯಾನದ ಅನುಭವಗಳನ್ನು, ನೆನಪುಗಳನ್ನು ಮೆಲುಕು ಹಾಕಿದರು.

“ಶೇಷಾದ್ರಿಪುರಂ ಕಾಲೇಜಿನಲ್ಲಿ ಮೊದಲ ಬಾರಿಗೆ ನಾಟಕದಲ್ಲಿ ಬಣ್ಣ ಹಚ್ಚುವ ಮೂಲಕ ಅಭಿನಯ ಶುರುವಾಯ್ತು. ಅಲ್ಲಿಂದ ಸಿನಿಮಾ, ಸೀರಿಯಲ್‌, ಬಿಗ್‌ ಬಾಸ್‌ ವರೆಗೂ ಮುಂದುವರೆದುಕೊಂಡು ಬಂದಿದೆ. ಆರಂಭದ ದಿನಗಳಲ್ಲಿ ಗಿರೀಶ್‌ ಕಾಸರವಳ್ಳಿ, ಗಿರೀಶ್‌ ಕಾರ್ನಾಡ್‌, ಪಣಿ ರಾಮಚಂದ್ರ ಹೀಗೆ ಅನೇಕ ಹಿರಿಯ ನಿರ್ದೇಶಕರ ಜೊತೆ ಕೆಲಸ ಮಾಡಿದ್ದು ಮರೆಯಲಾಗದ ಅನುಭವ. ವೃತ್ತಿ ಜೀವನದಲ್ಲಿ ಎಲ್ಲರೂ ನೀಡಿದ ಸಹಕಾರದಿಂದ 25 ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಯ್ತು. ನನ್ನ ವೃತ್ತಿ ಜೀವನದ ಬೆಳವಣಿಗೆಯಲ್ಲಿ ಪ್ರೋತ್ಸಾಹಿಸಿ, ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು, ಕೃತಜ್ಞತೆ ಸಲ್ಲಿಸಲು ಇದೊಂದು ಅವಕಾಶ. ಈ ಸಂದರ್ಭದಲ್ಲಿ ನನ್ನ ಬೆಳವಣಿಗೆಗೆ ಕಾರಣರಾದ ಪ್ರತಿಯೊಬ್ಬರನ್ನು ನೆನಪಿಸಿಕೊಳ್ಳುತ್ತೇನೆ’ ಎಂದರು.

“ಸಾಮಾನ್ಯವಾಗಿ ಯಾವುದೇ ನಟನ ಅಭಿನಯದ ಬಗ್ಗೆ ಸಕಾರಾತ್ಮಕ ಮತ್ತು ನಕಾರಾತ್ಮಕ ವಿಮರ್ಶೆಗಳು ಬರುವುದು ಸಹಜ. ಆದ್ರೆ ಈ ವಿಷಯದಲ್ಲಿ ನಾನು ತುಂಬ ಅದೃಷ್ಟಶಾಲಿ ಎಂದೇ ಹೇಳಬಹುದು. ಇಲ್ಲಿಯವರೆಗೆ ನಾನು ಅಭಿನಯಿಸಿದ ಸಿನಿಮಾಗಳು, ಸೀರಿಯಲ್‌, ನಿರ್ವಹಿಸಿದ ಪಾತ್ರಗಳು ಎಲ್ಲರದ ಬಗ್ಗೆಯೂ ಪ್ರೇಕ್ಷಕರು ಮತ್ತು ವಿಮರ್ಶಕರು ಮೆಚ್ಚುಗೆಯನ್ನೇ ಸೂಚಿಸುತ್ತ ಬಂದಿದ್ದಾರೆ. ಚಿತ್ರರಂಗದಲ್ಲಿ ಹಿರಿಯದಿಂದ ಕಿರಿಯರವರೆಗೂ ಎಲ್ಲರೂ ನನ್ನನ್ನು ಪ್ರೀತಿಯಿಂದ ನೋಡಿದ್ದಾರೆ. ಇಲ್ಲಿಯವರೆಗೆ ಚಿತ್ರರಂಗದಲ್ಲಿ ಯಾರಿಂದಲೂ ಬೇಸರವಾಗಲಿ, ನೋವಾಗಲಿ ಆಗಿಲ್ಲ. ನನ್ನನ್ನು ಜೊತೆಯಾಗಿಸಿಕೊಂಡು ಕೆಲಸ ಮಾಡಿದ ಎಲ್ಲ ನಿರ್ದೇಶಕರು, ನಿರ್ಮಾಪಕರು ಮತ್ತು ಸಹ ಕಲಾವಿದರಿಗೂ ಈ ವಿಷಯದಲ್ಲಿ ನಾನು ಋಣಿಯಾಗಿದ್ದೇನೆ’ ಎಂದರು.

ಇದೇ ವೇಳೆ ಮಾತನಾಡಿದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಹಿರಿಯ ನಿರ್ದೇಶಕ ಗಿರೀಶ್‌ ಕಾಸರವಳ್ಳಿ, “ಹರೀಶ್‌ ರಾಜ್‌ ನಾನು ನೋಡಿದ ಅತ್ಯುತ್ತಮ ಕಲಾವಿದರಲ್ಲಿ ಒಬ್ಬರು. ಸಾಮಾನ್ಯವಾಗಿ ನನ್ನ ಸಿನಿಮಾಗಳಲ್ಲಿ ಯಾವುದೇ ಕಲಾವಿದರನ್ನು ಎರಡನೇ ಬಾರಿಗೆ ಪಾತ್ರಕ್ಕೆ ಆಯ್ಕೆಮಾಡಿ ಕೊಳ್ಳುವುದು ತೀರಾ ವಿರಳ. ಉಮಾಶ್ರೀ ಅವರನ್ನು ಬಿಟ್ಟರೆ, ಎರಡನೇ ಬಾರಿಗೆ ನನ್ನ ಸಿನಿಮಾದಲ್ಲಿ ಅಭಿನಯಿಸಿದ ನಟ ಹರೀಶ್‌ ರಾಜ್‌. ಚಿತ್ರರಂಗದಲ್ಲಿ ಹರೀಶ್‌ ರಾಜ್‌, 25 ವರ್ಷಗಳನ್ನು ಪೂರೈಸಿದ್ದು ನಿಜಕ್ಕೂ ಖುಷಿಯ ವಿಷಯ. ಅವರ ಸಿನಿಮಾ ಜರ್ನಿ ಹೀಗೆ ಯಶಸ್ವಿಯಾಗಿ ಮುಂದುವರೆಯಲಿ’ ಎಂದು ಶುಭ ಹಾರೈಸಿದರು.

ಇದನ್ನೂ ಓದಿ:ಸ್ಕೇಟಿಂಗ್ ಬೋರ್ಡ್​ನಲ್ಲೆ ಕಾಶ್ಮೀರಕ್ಕೆ ಹೊರಟಿದ್ದ ಕೇರಳದ ಯುವಕ ರಸ್ತೆ ಅಪಘಾತದಲ್ಲಿ ಸಾವು!

ಈ ಸಂದರ್ಭದಲ್ಲಿ ಹಾಜರಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ. ಹರೀಶ್‌, ನಿರ್ಮಾಪಕ ಮಧುಸೂದನ್‌ ಗೌಡ, ಚಲನಚಿತ್ರ ಅಕಾಡೆಮಿ ಮಾಜಿ ಅಧ್ಯಕ್ಷ ಮತ್ತು ನಟ-ನಿರ್ದೇಶಕ ಸುನೀಲ್‌ ಪುರಾಣಿಕ್‌ ಮತ್ತಿತರರು ಹಾಜರಿದ್ದು, ಹರೀಶ್‌ ರಾಜ್‌ ಅವರೊಂದಿನಿಗ ಸಿನಿಮಾ ನಂಟಿನ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.