‘ನ್ಯಾಯಾಲಯದಲ್ಲಿಯೇ ತಕ್ಕ ಉತ್ತರ ನೀಡುತ್ತೇವೆ’ : ಲಹರಿ ಸಂಸ್ಥೆ ವಿರುದ್ಧ ಹರಿಹಾಯ್ದ ರಿಷಬ್


Team Udayavani, Apr 11, 2021, 1:30 PM IST

fgbdfgd

ಬೆಂಗಳೂರು: ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಸಾಂಗ್ ವಿಚಾರವಾಗಿ ತಮ್ಮ ವಿರುದ್ಧ ಹೊರಡಿಸಲಾದ ಜಾಮೀನು ರಹಿತ ವಾರೆಂಟ್‍ಗೆ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾತಾಡಿರುವ ಅವರು, ‘ಸಿನಿಮಾ ಬಿಡುಗಡೆ ಮಾಡುವ ಒಂದು ತಿಂಗಳ ಹಿಂದೆಯೇ ನಾವು ಹಾಡಿನ ಲಿರಿಕ್ಸ್ ಬಿಡುಗಡೆ ಮಾಡಿದ್ವಿ. ಹಾಡು ಬಿಡುಗಡೆ ಹಿಂದಿನ ದಿನವೇ ಸ್ಟೇ ತರಲು ಹೋಗಿದ್ದರು ಆದರೆ ನ್ಯಾಯಾಲಯದಲ್ಲಿ ಹೋರಾಡಿ ಗೆದ್ದಿದ್ವಿ. ಪ್ರಕರಣ ದಾಖಲಿಸುವುದು ಅವರಿಗೆ ಅಭ್ಯಾಸವಾಗಿ ಹೋಗಿದೆ’ ಎಂದು ಲಹರಿ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಬಿಡುಗಡೆ ಸಮಯದಲ್ಲಿ ‘ನಿಮ್ಮನ್ನು ನ್ಯಾಯಾಲಯಗಳಿಗೆ ಅಲೆಸುತ್ತೇವೆ’ ಎಂದು ನಮಗೆ ಬೆದರಿಕೆ ಹಾಕಿದ್ದರು. ರಾಜಿಗೆ ಬಂದಾಗಲೂ ಬೆದರಿಕೆ ಹಾಕಿದ್ದರು. ನಮಗೆ ಹಣದ ಆಮಿಷ ಕೂಡ ಒಡ್ಡಿದ್ದರು. ಈಗ ಈ ನೊಟೀಸ್ ಬೇರೆ. ನಾವು ಓಡಿಹೋಗೋರಲ್ಲ. ಕೋರ್ಟ್‌ನಲ್ಲಿ ಎಲ್ಲದಕ್ಕೂ ಉತ್ತರ ನೀಡುತ್ತೇವೆ’ ಎಂದು ಖಡಕ್ ಉತ್ತರ ನೀಡಿದ್ದಾರೆ ರಿಷಬ್ ಶೆಟ್ಟಿ.

ಆ ಹಾಡು ಬಿಡುಗಡೆ ಆದಾಗ, ನಮ್ಮ ಬಳಿ ರಾಜಿಗೆ ಬಂದಿದ್ದರು. ಪ್ರಶಾಂತ್ ಸಂಬರ್ಗಿಯೇ ರಾಜಿಗೆ ಬಂದಿದ್ದು. ನೀವು ಇಷ್ಟು ಹಣ ಕೊಡಬೇಕು ಎಂದರು ನಾವು ಒಪ್ಪಲಿಲ್ಲ. ನಾವೇ ಹಣ ಕೊಡ್ತೀವಿ ಹಾಡು ಬಿಟ್ಟುಬಿಡಿ ಎಂದರು ಅದಕ್ಕೂ ನಾವು ಒಪ್ಪದೆ, ಅದೇ ಹಾಡಿನ ಮಾದರಿಯಲ್ಲಿ ಬೇರೆ ಲಿರಿಕ್ಸ್ ಬಳಸಿ, ಬೇರೆ ವಾದ್ಯಗಳನ್ನು ಬಳಸಿ ಹಾಡು ಮಾಡಿದೆವು’.

ಇನ್ನು ನ್ಯಾಯಾಲಯದ ಎದುರು ಹಾಜರಾಗದಿರುವ ಬಗ್ಗೆ ಕಾರಣ ನೀಡಿರುವ ರಿಷಬ್ ಶೆಟ್ಟಿ, ಲಾಕ್‌ಡೌನ್‌ ಮುಂಚೆ ನಾವು ಆಫೀಸ್ ಬದಲಿಸಿದೇವು. ಹಾಗಾಗಿ ನೋಟೀಸ್‌ಗಳು ಹಳೆ ಅಡ್ರೆಸ್‌ಗೆ ಹೋಗಿವೆ. ಕಳೆದ ತಿಂಗಳು ರಕ್ಷಿತ್‌ ಶೆಟ್ಟಿಗೆ ನೊಟೀಸ್ ಸಿಕ್ಕಿದೆ, ಅವರು ಅದನ್ನು ಫಾಲೋ ಮಾಡುತ್ತಿದ್ದಾರೆ. ನಮಗೆ ಈಗ ವಿಷಯ ಗೊತ್ತಾಗಿದೆ. ನಾವು ನ್ಯಾಯಾಲಯದಲ್ಲಿಯೇ ಇದಕ್ಕೆ ತಕ್ಕ ಉತ್ತರ ನೀಡುತ್ತೇವೆ’ ಎಂದಿದ್ದಾರೆ.

ವಿವಾದ ಏನು ?

‘ಮಧ್ಯ ರಾತ್ರೀಲಿ ಹೈವೇ ರೋಡಲ್ಲಿ’ ಹಾಡಿನ ಹಕ್ಕುಗಳನ್ನು ಲಹರಿ ಆಡಿಯೋ ಸಂಸ್ಥೆ ಹೊಂದಿದ್ದು, ಅದೇ ಹಾಡಿನ ಸಂಗೀತವನ್ನು ‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ಬಳಸಲಾಗಿದೆ. ‘ಕಿರಿಕ್ ಪಾರ್ಟಿ’ ಸಿನಿಮಾ ತಂಡವು ಹಕ್ಕುಸ್ವಾಮ್ಯ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಲಹರಿ ಸಂಸ್ಥೆ ಪ್ರಕರಣ ದಾಖಲಿಸಿತ್ತು. ಅದೇ ವಿಚಾರವಾಗಿ ಈಗ ‘ಕಿರಿಕ್ ಪಾರ್ಟಿ’ ಚಿತ್ರ ತಂಡದ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.