ಬೆಳ್ತಂಗಡಿ ಟು ಸ್ಯಾಂಡಲ್‌ ವುಡ್:‌ ಮನೆ ಕೆಲಸದಲ್ಲಿದ್ದಾಕೆ ಖ್ಯಾತ ನಟಿಯಾಗಿ ಮಿಂಚಿದ ಲೀಲಾವತಿ


Team Udayavani, Dec 8, 2023, 6:46 PM IST

ಬೆಳ್ತಂಗಡಿ ಟು ಸ್ಯಾಂಡಲ್‌ ವುಡ್:‌ ಮನೆ ಕೆಲಸದಲ್ಲಿದ್ದಾಕೆ ಖ್ಯಾತ ನಟಿಯಾಗಿ ಮಿಂಚಿದ ಲೀಲಾವತಿ

ಬೆಂಗಳೂರು: ಚಂದನವನದ ಹಿರಿಯ ನಟಿ ಲೀಲಾವತಿ (85) ವಯೋಸಹಜ ಅನಾರೋಗ್ಯದಿಂದ ಶುಕ್ರವಾರ(ಡಿ.8 ರಂದು) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಚಂದನವನ ಕಂಬನಿ ಮಿಡಿದಿದೆ.

ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ 1937 ರಲ್ಲಿ ಜನಿಸಿದ ಅವರು, ಬಾಲ್ಯದಲ್ಲೇ ನಾಟಕ ಹಾಗೂ ರಂಗಭೂಮಿಯಲ್ಲಿ ಆಸಕ್ತಿಯನ್ನು ಹೊಂದಿದ್ದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಅವರು, ಹಲವಾರು ನಾಟಕದಲ್ಲಿ ನಟಿಸಿದ್ದರು.ಇದಾದ ಬಳಿಕ ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸುಬ್ಬಯ್ಯ ನಾಯ್ಡು ಅವರ ‘ಭಕ್ತ ಪ್ರಹ್ಲಾದ’ದಲ್ಲಿ ಕೂಡ ಅಭಿನಯಿಸಿದರು.

ಸಿನಿರಂಗದಲ್ಲಿ ಸಂಪೂರ್ಣವಾಗಿ ತೊಡಗಿಕೊಳ್ಳುವ ಮುನ್ನ ಅವರು ಮನೆ ಕೆಲಸಕ್ಕೂ ಹೋಗುತ್ತಿದ್ದರು. ಆ ಮೂಲಕ ದಿನ ಸಾಗಿಸುತ್ತಿದ್ದರು.

ಅರಮನೆ ನಗರಿ ಮೈಸೂರಿನಲ್ಲಿ ವೃತ್ತಿ ಜೀವನವನ್ನು ಆರಂಭಿಸಿದ ಲೀಲಾವತಿ 1949 ರಲ್ಲಿ ಬಂದ ಶಂಕರ್‌ ಸಿಂಗ್ ನಿರ್ಮಾಣದ  ʼನಾಗಕನ್ನಿಕೆʼ ಸಿನಿಮಾದಲ್ಲಿ ʼಸಖಿʼ ಎನ್ನುವ ಪಾತ್ರವನ್ನು ಮಾಡುವ ಮೂಲಕ ಚಂದನವನಕ್ಕೆ ಪ್ರವೇಶಿಸಿದರು.

1958 ರಲ್ಲಿ ಬಂದ ʼಮಾಂಗಲ್ಯ ಯೋಗ’ ಸಿನಿಮಾದಲ್ಲಿ ಮೊದಲು ನಾಯಕಿಯಾಗಿ ಕಾಣಿಸಿಕೊಂಡರು. ʼರಣಧೀರ ಕಂಠೀರವʼ ಸಿನಿಮಾದಲ್ಲಿ ಡಾ.ರಾಜ್‌ ಕುಮಾರ್‌ ಅವರೊಂದಿಗೆ ನಾಯಕಿಯಾಗಿ ಮೊದಲ ಬಾರಿ ಕಾಣಿಸಿಕೊಂಡರು. ಈ ಸಿನಿಮಾದ ಮೂಲಕ ರಾಜ್‌ ಕುಮಾರ್‌ – ಲೀಲಾವತಿ ಜೋಡಿ ಜನಪ್ರಿಯವಾಯಿತು.

ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಇನ್ನಷ್ಟು  ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ರಾಜ್‌ ಕುಮಾರ್‌ ಜತೆ ಲೀಲಾವತಿ ಸಾಲು ಸಾಲು ಸಿನಿಮಾದಲ್ಲಿ ಕಾಣಿಸಿಕೊಂಡರು.

ನಟಿಸಿದ ಪ್ರಮುಖ ಸಿನಿಮಾಗಳು:

ಭಕ್ತ ಪ್ರಹ್ಲಾದ, ಮಾಂಗಲ್ಯ ಯೋಗ, ರಾಜ ಮಲಯ ಸಿಂಹ, ಅಬ್ಬಾ ಆ ಹುಡುಗಿ, ಧರ್ಮ ವಿಜಯ, ದಶವತಾರ, ರಣಧೀರ ಕಂಠೀರವ, ರಾಣಿ ಹೊನ್ನಮ್ಮ, ಕೈವಾರ ಮಹಾತ್ಮೆ, ಕಣ್ತೆರೆದು ನೋಡು, ಕಿತ್ತೂರು ಚೆನ್ನಮ್ಮ, ಗಾಳಿ ಗೋಪುರ, ಕರುಣೆಯೇ ಕುಟುಂಬದ ಕಣ್ಣು, ಭೂದಾನ, ಮನ ಮೆಚ್ಚಿದ ಮಡದಿ, ನಂದಾ ದೀಪಾ, ಪಟ್ಟಿನಥರ್‌ (ತಮಿಳು), ರಾಣಿ ಚೆನ್ನಮ್ಮ, ರತ್ನ ಮಂಜರಿ, ಸುಮತಾಂಗಿ (ತಮಿಳು, ವಲರ್‌ ಪಿರಾಯಿ (ತಮಿಳು), ವಿಧಿ ವಿಲಾಸ, ಕುಲವಧು, ಕನ್ಯಾರತ್ನ, ಕಲಿತರೂ ಹೆಣ್ಣೇ, ಬೇವು ಬೆಲ್ಲ, ಜೀವನ ತರಂಗ, ಮಲ್ಲಿ ಮದುವೆ, ಮನ ಮೆಚ್ಚಿದ ಮಡದಿ, ಸಂತ ತುಕರಾಮ, ವಾಲ್ಮಿಕಿ, ವೀರ ಕೇಸರಿ, ಮರ್ಮಯೋಗಿ (ತೆಲುಗು), ಶಿವರಾತ್ರಿ ಮಹಾತ್ಮೆ, ತುಂಬಿದ ಕೊಡ, ಚಂದ್ರಹಾಸ, ಇದೇ ಮಹಾಸುದಿನ, ಮದುವೆ ಮಾಡಿ ನೋಡು ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

ಡಾ.ರಾಜ್‌ ಕುಮಾರ್‌,, ಅನಂತ್‌ ನಾಗ್‌, ಶಂಕರ್‌ ನಾಗ್ ,ವಿಷ್ಣುವರ್ಧನ್‌, ಅಂಬರೀಷ್‌, ಪ್ರಭಾಕರ್‌ ಸೇರಿದಂತೆ ಕನ್ನಡದ ಪ್ರಮುಖ ಕಲಾವಿದರೊಂದಿಗೆ ಅವರು ನಟಿಸಿದ್ದರು.

ಕನ್ನಡ, ತಮಿಳು, ತೆಲುಗು  ಮಲಯಾಳಂ ಹಾಗೂ ತುಳು ಸೇರಿ ಪಂಚ ಭಾಷೆಯ ಸಿನಿರಂಗದಲ್ಲಿ 600ಕ್ಕೂ ಹೆಚ್ಚಿನ ಸಿನಿಮಾದಲ್ಲಿ ಅವರು ನಟಿಸಿದ ಲೀಲಾವತಿ ಅವರಿಗೆ ಅನೇಕ ಪ್ರಶಸ್ತಿಗಳು ಹುಡುಕಿಕೊಂಡು ಬಂದಿದೆ.

‘ಮದುವೆ ಮಾಡಿನೋಡು’ ಮತ್ತು ‘ಸಂತ ತುಕಾರಾಮ್​’ ಸಿನಿಮಾಗಳಲ್ಲಿನ ಅಭಿನಯಕ್ಕಾಗಿ ಅವರಿಗೆ ಎರಡು ರಾಷ್ಟ್ರ ಪ್ರಶಸ್ತಿಗಳು ಸಿಕ್ಕಿವೆ. ‘ತುಂಬಿದ ಕೊಡ’, ‘ಮಹಾತ್ಯಾಗ’, ‘ಭಕ್ತ ಕುಂಬಾರ’, ‘ಸಿಪಾಯಿ ರಾಮು’, ‘ಗೆಜ್ಜೆ ಪೂಜೆ’ ಸಿನಿಮಾಗಳಲ್ಲಿನ ಅವರ ನಟನೆಗೆ ರಾಜ್ಯ ಪ್ರಶಸ್ತಿಗಳು ಸಂದಿವೆ. ‘ಕನ್ನಡದ ಕಂದ’ ಚಿತ್ರಕ್ಕೆ ಫಿಲ್ಮ್ ಫೇರ್​ ಪ್ರಶಸ್ತಿ ಕೂಡ ಸಿಕ್ಕಿತ್ತು. ಜೀವಮಾನ ಸಾಧನೆಗಾಗಿ ಲೀಲಾವತಿ ಅವರು 1999 -2000 ರ ಸಾಲಿನ ‘ಡಾ. ರಾಜ್​ಕುಮಾರ್​ ಪ್ರಶಸ್ತಿ’ ಪಡೆದರು. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದಿಂದ ಅವರಿಗೆ ಗೌರವ ಡಾಕ್ಟರೇಟ್​ ನೀಡಲಾಗಿತ್ತು.

ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದ ಲೀಲಾವತಿ:  ಲೀಲಾವತಿ ಸ್ಟಾರ್‌ ನಟಿಯಾಗಿ ಮಾತ್ರವಲ್ಲದೆ, ‘ಅಷ್ಟಲಕ್ಷ್ಮೀ ಕಂಬೈನ್ಸ್​’, ‘ಲೀಲಾವತಿ ಕಂಬೈನ್ಸ್​’ ಸಂಸ್ಥೆಗಳ ಮೂಲಕ 5 ಸಿನಿಮಾಗಳನ್ನು ಅವರು ನಿರ್ಮಿಸಿದ್ದರು.

ಲೀಲಾವತಿ ಅವರ ಮಗ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟರಾಗಿದ್ದಾರೆ. ತಾಯಿ-ಮಗ ಇಬ್ಬರೂ ತೋಟಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.

ಇತ್ತೀಚೆಗೆ ಲೀಲಾವತಿ ಅವರ ಕನಸಿನ ಪಶು ಆಸ್ಪತ್ರೆಯನ್ನು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಉದ್ಘಾಟಿಸಿದ್ದರು.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

Komal Kumar’s Yala kunni ready to release

Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ

Arjun Sarja announces new film Seetha Payana

Seetha Payana: ಅರ್ಜುನ್‌ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್‌ ಹೀರೋ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.