![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-415x229.jpg)
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
Team Udayavani, Apr 28, 2024, 4:25 PM IST
![Aditya on kangaroo movie](https://www.udayavani.com/wp-content/uploads/2024/04/Kangaro-1-620x342.jpg)
ಆದಿತ್ಯ ನಾಯಕರಾಗಿ ನಟಿಸಿರುವ “ಕಾಂಗರೂ’ ಚಿತ್ರ ಮೇ 3ರಂದು ತೆರೆಕಾಣುತ್ತಿದೆ. ಟ್ರೇಲರ್ ನೋಡಿದವರಿಂದ ಈ ಸಿನಿಮಾದಲ್ಲಿ ಹೊಸದೇನೋ ಇದೆ ಎಂಬ ಮಾತು ಕೇಳಿಬರುವ ಮೂಲಕ ಆದಿತ್ಯ ಖುಷಿಯಾಗಿದ್ದಾರೆ. ನಾಯಕ ಆದಿತ್ಯ ಈ ಸಿನಿಮಾ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಅದಕ್ಕೆ ಕಾರಣ ಕಥೆ.
“ನಿರ್ದೇಶಕ ಕಿಶೋರ್ ಕಥೆ ಕೇಳಿ ಎಂದರು. ನಾನು ಸರಿ ಎಂದೆ. ಆನಂತರ ಕೇಳುವುದು ಬೇಡ ಸಿನಿಮಾನೇ ತೋರಿಸುತ್ತೇನೆ ಎಂದರು. ನನಗೆ ಆಶ್ಚರ್ಯವಾಯಿತು. ಚಿತ್ರದ ಕಥೆಯನ್ನು ಅನಿಮೇಶನ್ ಮೂಲಕ ತೋರಿಸಿದ ಪ್ರಥಮ ನಿರ್ದೇಶಕ ಇವರೇ ಇರಬಹುದು. ನಾನು ಈ ಚಿತ್ರದಲ್ಲಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಚಿತ್ರ ಚೆನ್ನಾಗಿ ಬಂದಿದೆ. ದಯವಿಟ್ಟು ಎಲ್ಲರೂ ನಮ್ಮ ಚಿತ್ರ ಸೇರಿದಂತೆ ಎಲ್ಲಾ ಕನ್ನಡ ಚಿತ್ರಗಳನ್ನು ಚಿತ್ರಮಂದಿರಗಳಲ್ಲೇ ನೋಡಿ’ ಎನ್ನುವುದು ಆದಿತ್ಯ ಮಾತು.
ಇದೊಂದು ಸಸ್ಪೆನ್ಸ್ – ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಕನ್ನಡದಲ್ಲಿ ಸಾಕಷ್ಟು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳು ಬಂದಿವೆಯಾದರೂ, ನಮ್ಮ ಚಿತ್ರ ಸ್ವಲ್ಪ ವಿಭಿನ್ನ. ಫ್ಯಾಮಿಲಿ ಆಡಿಯನ್ಸ್ಗಾಗಿಯೇ ಮಾಡಿರುವ ಕಥೆ ಇದು. ಇನ್ನು ಕಾಂಗರೂ ಮೃದು ಸ್ವಭಾವದ ಪ್ರಾಣಿ. ಯಾರ ತಂಟೆಗೂ ಹೋಗುವುದಿಲ್ಲ. ಆದರೆ ತನ್ನ ಮಕ್ಕಳ ತಂಟೆಗೆ ಬಂದರೆ ಅದು ಯಾರನ್ನು ಬಿಡುವುದಿಲ್ಲ. ಇದೇ ಚಿತ್ರದ ಕಥಾಸಾರಾಂಶ. ಕಿಶೋರ್ ಈ ಚಿತ್ರದ ನಿರ್ದೇಶಕರು.
ಆರೋಹ ಪ್ರೊಡಕ್ಷನ್ಸ್ ಬ್ಯಾನರ್ನಡಿ ಚನ್ನಕೇಶವ ಬಿ.ಸಿ, ಕುಣಿಗಲ್, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ.ಜಿ. ಆರ್. ಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ
ಟಾಪ್ ನ್ಯೂಸ್
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-150x83.jpg)
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
![ಕರ್ಮಫಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ](https://www.udayavani.com/wp-content/uploads/2024/07/BK-Karuna-150x92.jpg)
ಕರ್ಮಫಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ
![Bajaj](https://www.udayavani.com/wp-content/uploads/2024/07/Bajaj-150x91.jpg)
Bajaj Freedom: ಬಜಾಜ್ ಫ್ರೀಡಂ 125 CNG ಬೈಕ್ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?
![Nanna Devru; ದೇವ್ರ ನಂಬಿ ಬಂದ ಮಯೂರಿ](https://www.udayavani.com/wp-content/uploads/2024/07/nanna-devru-150x83.jpg)
Nanna Devru; ದೇವ್ರ ನಂಬಿ ಬಂದ ಮಯೂರಿ
![1-aaaa](https://www.udayavani.com/wp-content/uploads/2024/07/1-aaaa-150x84.jpg)
Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.