ಅಜ್ಞಾತವಾಸಿ ಜೊತೆ ಪಾವನಾ


Team Udayavani, Apr 9, 2023, 1:22 PM IST

ಅಜ್ಞಾತವಾಸಿ ಜೊತೆ ಪಾವನಾ

“ಕೆಲವೊಂದು ಸಿನಿಮಾಗಳ ನಾವು ಅಭಿನಯಿಸುವ ಪಾತ್ರಗಳಿಗಷ್ಟೇ ಸೀಮಿತವಾಗಿರುತ್ತವೆ. ಆದರೆ ಕೆಲವು ಸಿನಿಮಾಗಳು ಹಾಗಲ್ಲ. ಅದರಲ್ಲಿ ಅಭಿನಯಿಸುವ ಜೊತೆಗೆ ನಮಗೆ ಗೊತ್ತಿಲ್ಲದಿರುವುದನ್ನು ಕಲಿತುಕೊಳ್ಳಲು ಸಾಕಷ್ಟು ಅವಕಾಶವಿರುತ್ತದೆ. ಒಂದು ಸಿನಿಮಾ ನಮಗೆ ಗೊತ್ತಿಲ್ಲದ ಎಷ್ಟೋ ವಿಷಯಗಳು ತಿಳಿಸಿಕೊಡುತ್ತದೆ. ಇದು ಅಂಥದ್ದೇ ಒಂದು ಸಿನಿಮಾ. ನನ್ನ ಸಿನಿಮಾ ಕೆರಿಯರ್‌ನಲ್ಲಿ ಇಲ್ಲಿಯವರೆಗೆ ಮಾಡಿರುವ ಬೆಸ್ಟ್‌ ಸಿನಿಮಾಗಳ ಲಿಸ್ಟ್‌ನಲ್ಲಿ ಖಂಡಿತವಾಗಿಯೂ ಈ ಸಿನಿಮಾ ಕೂಡ ಒಂದಾಗಲಿದೆ’ ಇದು ನಟಿ ಪಾವನಾ ಗೌಡ ಮಾತು.

ಅಂದಹಾಗೆ, ಪಾವನಾ ಗೌಡ ಇಂಥದ್ದೊಂದು ಮಾತು ಹೇಳಿರುವುದು ಮುಂಬರಲಿರುವ ತಮ್ಮ ಹೊಸ ಸಿನಿಮಾ “ಅಜ್ಞಾತವಾಸಿ’ಯ ಬಗ್ಗೆ. ಕಳೆದ ತಿಂಗಳಷ್ಟೇ ನಟ ಶ್ರೀನಗರ ಕಿಟ್ಟಿ ಜೊತೆಗೆ “ಗೌಳಿ’ ಸಿನಿಮಾದಲ್ಲಿ ಪ್ರೇಕ್ಷಕರ ಮುಂದೆ ಬಂದಿದ್ದ ಪಾವನಾ ಗೌಡ, ಈಗ “ಅಜ್ಞಾತವಾಸಿ’ಯ ಜೊತೆಯಾಗಿದ್ದಾರೆ. ಪಾವನಾ ಗೌಡ ಅಭಿನಯಿಸುತ್ತಿರುವ “ಅಜ್ಞಾತವಾಸಿ’ ಸಿನಿಮಾದ ಕೆಲಸಗಳು ಅಂತಿಮ ಹಂತದಲ್ಲಿದ್ದು, ಇತ್ತೀಚೆಗಷ್ಟೇ “ಅಜ್ಞಾತವಾಸಿ’ ಸಿನಿಮಾದ ಮೊದಲ ಟೀಸರ್‌ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ.

ಇದೇ ವೇಳೆ “ಅಜ್ಞಾತವಾಸಿ’ ಬಗ್ಗೆ ಮಾತನಾಡಿದ ಪಾವನಾ ಗೌಡ ಸಿನಿಮಾದ ಪಾತ್ರ ಮತ್ತು ಚಿತ್ರದ ಒಂದಷ್ಟು ಅನುಭವಗಳನ್ನು ಹಂಚಿಕೊಂಡಿದ್ದಾರೆ. “ಸಿನಿಮಾದ ಟೈಟಲ್ಲೇ ಹೇಳುವಂತೆ “ಅಜ್ಞಾತವಾಸಿ’ ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯ ಸಿನಿಮಾ. ಇದರಲ್ಲಿ ನಾನು ಪಂಕಜಾ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಪಂಕಜಾ ಎಂದರೆ ಕಮಲ ಎಂಬ ಅರ್ಥವಿದೆ. ಕಮಲದ ಗುಣ ಮತ್ತು ವೈಶಿಷ್ಟ್ಯತೆಗಳು ಹೇಗಿರುತ್ತದೆಯೋ ಅದೇ ರೀತಿ ನನ್ನ ಪಾತ್ರವಿದೆ. ಕಡಿಮೆ ಮಾತನಾಡುವ ಅಭಿನಯಕ್ಕೆ ಹೆಚ್ಚು ಅವಕಾಶವಿರುವ, ಅಷ್ಟೇ ರಿಸರ್ವ್‌ ಆಗಿರುವಂಥ ಪಾತ್ರವಿದು. ಸಿನಿಮಾ ನೋಡುವವರನ್ನು ನಿಧಾನವಾಗಿ ಆವರಿಸಿಕೊಳ್ಳುವಂಥ ಪಾತ್ರ ಸಿನಿಮಾದಲ್ಲಿದೆ. ಇದೊಂದು ಥ್ರಿಲ್ಲರ್‌ ಸಬೆjಕ್ಟ್ ಆಗಿರುವುದರಿಂದ, ಇದಕ್ಕಿಂತ ಹೆಚ್ಚಾಗಿ ನನ್ನ ಪಾತ್ರದ ಗುಟ್ಟು ಬಿಟ್ಟುಕೊಟ್ಟರೆ ಕುತೂಹಲ ಕಡಿಮೆಯಾಗಬಹುದು’ ಎನ್ನುವುದು ಪಾವನಾ ಮಾತು.

“ನನ್ನ ಪ್ರಕಾರ ಇದೊಂದು ಕಂಪ್ಲೀಟ್‌ ಟೆಕ್ನೀಷಿಯನ್ಸ್‌ ಸಿನಿಮಾ. ತುಂಬ ಬ್ರಿಲಿಯೆಂಟ್‌ ಸ್ಕ್ರಿಪ್ಟ್ ಸಿನಿಮಾದಲ್ಲಿದೆ. ನಿರ್ದೇಶಕ ಜನಾರ್ಧನ್‌ ಚಿಕ್ಕಣ್ಣ, ನಿರ್ಮಾಪಕ ಹೇಮಂತ್‌ ರಾವ್‌ ಇಬ್ಬರೂ ಈಗಾಗಲೇ ಕ್ರಿಯಾಶೀಲ ನಿರ್ದೇಶಕರಾಗಿ ಗುರುತಿಸಿಕೊಂಡಿರುವವರು. ಉಳಿದಂತೆ ಅದ್ವೆ„ತ ಗುರುಮೂರ್ತಿ ಛಾಯಾಗ್ರಹಣ, ಚರಣ್‌ ರಾಜ್‌ ಸಂಗೀತ, ಭರತ್‌ ಸಂಕಲನ ಹೀಗೆ ಇಡೀ ಸಿನಿಮಾದ ಎಲ್ಲ ವಿಭಾಗಗಳಲ್ಲೂ ಅತ್ಯುತ್ತಮ ಟೆಕ್ನೀಷಿಯನ್ಸ್‌ ಸಿನಿಮಾದಲ್ಲಿದ್ದಾರೆ. ಬಜೆಟ್‌ಗಿಂತ ಸಬ್ಜೆಕ್ಟ್ ಮುಖ್ಯ ಎಂಬುದನ್ನು ತೋರಿಸುವಂಥ ಸಿನಿಮಾವಿದು’ ಎಂಬ ಅಭಿಪ್ರಾಯ ಪಾವನ ಅವರದ್ದು. “”ಅಜ್ಞಾತವಾಸಿ’ ನೋಡುಗರನ್ನು ಮಾಯಾಲೋಕಕ್ಕೆ ಕರೆದುಕೊಂಡು ಹೋಗುವಂಥ ಸಿನಿಮಾ ಎಂಬ ನಂಬಿಕೆ ನನಗಿದೆ.

ನಮ್ಮ ಪ್ಲಾನ್‌ ಪ್ರಕಾರ ಎಲ್ಲ ನಡೆದರೆ, ಇದೇ ಜೂನ್‌ ವೇಳೆಗೆ “ಅಜ್ಞಾತವಾಸಿ’ ಥಿಯೇಟರ್‌ಗೆ ಬರುತ್ತದೆ’ ಎಂಬ ಮಾಹಿತಿ ನೀಡುತ್ತಾರೆ ಪಾವನಾ ಗೌಡ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Jigar

Jigar; ತೆರೆಗೆ ಬಂತು ಪ್ರವೀಣ್ ತೇಜ್ ನಟನೆಯ ಜಿಗರ್

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.