
ಅಜ್ಜ ಬರುತ್ತಿದ್ದಾರೆ!
Team Udayavani, Dec 27, 2018, 3:43 PM IST

ರಾಷ್ಟ್ರಪ್ರಶಸ್ತಿ ಪುರಸ್ಕೃತ ಹಿರಿಯ ನಟ ದತ್ತಣ್ಣ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ “ಅಜ್ಜ’ ಚಿತ್ರ ನಾಳೆ (ಡಿ. 28) ತೆರೆಗೆ ಬರುತ್ತಿದೆ. ಈ ಹಿಂದೆ ಎರಡು-ಮೂರು ಬಾರಿ ಚಿತ್ರದ ಬಿಡುಗಡೆಯನ್ನು “ಅಜ್ಜ’ ಚಿತ್ರತಂಡ ಘೋಷಿಸಿದ್ದರೂ, ಥಿಯೇಟರ್ ಸಮಸ್ಯೆ ಮತ್ತಿತರ ತಾಂತ್ರಿಕ ಕಾರಣಗಳಿಂದ ಚಿತ್ರವನ್ನು ಅಂದುಕೊಂಡ ಸಮಯಕ್ಕೆ ಸರಿಯಾಗಿ ತೆರೆಗೆ ತರಲು ಸಾಧ್ಯವಾಗಿರಲಿಲ್ಲ. ಇವೆಲ್ಲದರ ನಡುವೆಯೇ ಕಳೆದ ಮೂರ್ನಾಲ್ಕು ತಿಂಗಳಿನಿಂದ ಚಿತ್ರ ಪ್ರಚಾರ ಕಾರ್ಯದಲ್ಲಿ ನಿರತವಾಗಿದ್ದ ಚಿತ್ರತಂಡ, ಅಂತೂ ವರ್ಷಾಂತ್ಯಕ್ಕೆ ತೆರೆಮೇಲೆ “ಅಜ್ಜ’ ನನ್ನು
ಕರೆತರುತ್ತಿದೆ.
ಕನ್ನಡದ ಸದಭಿರುಚಿ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ವೇಮಗಲ್ ಜಗನ್ನಾಥ್ ರಾವ್ “ಅಜ್ಜ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮಾದೇಶ್ವರ್ ಆರ್ಟ್ಸ್ ಬ್ಯಾನರ್ನಲ್ಲಿ ಕೆ.ಪಿ ಚಿದಾನಂದ್ “ಅಜ್ಜ’ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. “ಅಜ್ಜ’ ಚಿತ್ರದ ಶೀರ್ಷಿಕೆಗೆ “ಆನ್ ಟೋಲ್ಡ್ ರಿಯಲ್ ಮಿಸ್ಟರಿ’ ಎಂಬ ಅಡಿಬರಹವಿದ್ದು, ಸಸ್ಪೆನ್ಸ್-ಥ್ರಿಲ್ಲರ್ ಕಥಾನಕ ಚಿತ್ರದಲ್ಲಿದೆ.
ಮಹಾನಗರದಲ್ಲಿ ವೈದ್ಯಕೀಯ ವಿದ್ಯಾಭ್ಯಾಸವನ್ನು ಮುಗಿಸಿದ ನಾಲ್ವರು ವಿದ್ಯಾರ್ಥಿಗಳ ತಂಡ ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ಸೇವೆಯನ್ನು ನೀಡಲು ಗುಡ್ಡಗಾಡು ಪ್ರದೇಶದ ಹಳ್ಳಿಯೊಂದಕ್ಕೆ ಬರುತ್ತದೆ. ಅಲ್ಲಿ ತಮಗೆ ಅರಿವಿಲ್ಲದಂತೆ, ನಿಗೂಢ ಸ್ಥಳವೊಂದರಲ್ಲಿ ಈ ವಿದ್ಯಾರ್ಥಿಗಳು ಸಿಲುಕಿಕೊಳ್ಳುತ್ತಾರೆ. ಅಂತಿಮವಾಗಿ ಆ ಸ್ಥಳದಲ್ಲಿ ಏನೇನು ನಡೆಯುತ್ತದೆ? ಅಲ್ಲಿಂದ ಈ ವಿದ್ಯಾರ್ಥಿಗಳು ಹೊರಬರುತ್ತಾರಾ? ಇಲ್ಲಾವಾ? ಎನ್ನುವುದೇ “ಅಜ್ಜ’ ಚಿತ್ರದ ಕಥಾಹಂದರ.
ಇನ್ನು “ಅಜ್ಜ’ ಚಿತ್ರದಲ್ಲಿ ದತ್ತಣ್ಣ ಅವರ ಜೊತೆ ಬೇಬಿ ಕೃತಿಶ್ರೀ, ದೀಪಕ್ ರಾಜ್, ರಾಜ್ ನವೀನ್, ಮಾಧುರಿ, ಅಶ್ವಿನಿ, ಲತೀಶ್ ಕೂರ್ಗ್ ಹಾಗೂ ಇನ್ನಿತರ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಸಾಯಿಕಿರಣ್ ಈ ಹಾಡುಗಳಿಗೆ ರಾಗ ಸಂಯೋಜನೆ ಮಾಡಿದ್ದಾರೆ. ಚಿತ್ರಕ್ಕೆ ರಾಜು ಶಿರಾಳಕೊಪ್ಪ ಛಾಯಾಗ್ರಹಣ, ಶಿವಯಾದವ್ ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. “ಅಜ್ಜ’ ಚಿತ್ರ ರಾಜ್ಯದಾದ್ಯಂತ ಸುಮಾರು ನಲವತ್ತಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಬಿಡುಗಡೆಯಾಗುತ್ತಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.