![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Feb 6, 2023, 4:07 PM IST
ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್ ಹಾಗೂ ಅದಿತಿ ಪ್ರಭುದೇವ ನಾಯಕ-ನಾಯಕಿಯಾಗಿರುವ “ಖೆಯೊಸ್’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಫೆ.17ರಂದು ತೆರೆ ಕಾಣುತ್ತಿದೆ. ಜಿ.ವಿ.ಪ್ರಸಾದ್ ಈ ಸಿನಿಮಾದ ನಿರ್ದೇಶಕರು.
ಚಿತ್ರದ ಬಗ್ಗೆ ಮಾತನಾಡುವ ಅವರು, “ಖೆಯೊಸ್ ಅಂದರೆ ಮನುಷ್ಯ ಮನಸ್ಸಿನಲ್ಲಾಗುವ ಗೊಂದಲ. ಇದು ವೈದ್ಯಕೀಯ ಕಾಲೇಜೊಂದರಲ್ಲಿ ನಡೆಯುವ ಕಥೆ. ನಾಯಕ ಅನಿರೀಕ್ಷಿತವಾಗಿ ಒಂದು ಸಮಸ್ಯೆಗೆ ಸಿಲುಕಿಕೊಳ್ಳುತ್ತಾನೆ. ಆತ ತನ್ನ ಜಾಣ್ಮೆಯಿಂದ ಹೇಗೆ ಆ ಸಮಸ್ಯೆಯಿಂದ ಪಾರಾಗುತ್ತಾನೆ ಎಂಬುದು ಕಥಾಹಂದರ.
ನಾಯಕನಾಗಿ ಅಕ್ಷಿತ್ ಶಶಿಕುಮಾರ್, ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ. ಪಾರುಲ್ ಅಗರವಾಲ್ ಹಾಗೂ ಹೇಮಚಂದ್ರ ರೆಡ್ಡಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಇದೇ 17ರಂದು ಚಿತ್ರ ಬಿಡುಗಡೆಯಾಗುತ್ತಿದೆ’ ಎಂದರು.
ನಾಯಕ ಅಕ್ಷಿತ್ ಕೂಡಾ ಈ ಸಿನಿಮಾ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. “ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಅವರು ಕಥೆ ಹೇಳುವಾಗ ನಾನು ಗಡ್ಡ ಬಿಟ್ಟಿದೆ. ನಮ್ಮ ಪಾತ್ರಕ್ಕೆ ಈ ರೀತಿಯ ಗೆಟಪ್ ಬೇಕಿತ್ತು ಎಂದರು. ಎಂಬಿಬಿಎಸ್ ಓದುತ್ತಿರುವ ಹುಡುಗನ ಪಾತ್ರ ನನ್ನದು. ಅದಿತಿ ಪ್ರಭುದೇವ ಸೇರಿದಂತೆ ಎಲ್ಲರೂ ಚೆನ್ನಾಗಿ ಅಭಿನಯಿಸಿದ್ದಾರೆ. ನಮ್ಮ ತಂದೆ ಕೂಡ ಇದರಲ್ಲಿ ನಟಿಸಿದ್ದಾರೆ’ ಎನ್ನುವುದು ಅಕ್ಷಿತ್ ಮಾತು.
“ಖೆಯೊಸ್ ಎಂದರೆ ಮನಸ್ಸಿನಲ್ಲಾಗುವ ಅಸ್ತವ್ಯಸ್ತ, ಗೊಂದಲ ಇತ್ಯಾದಿ. ನಾನು ಕೂಡ ವೈದ್ಯಕೀಯ ವಿದ್ಯಾರ್ಥಿಯಾಗಿ ಕಾಣಿಸಿಕೊಂಡಿದ್ದೇನೆ. ಅಕ್ಷಿತ್ ಅವರು ದೊಡ್ಡ ಹೀರೊ ಮಗ ಅಂತ ಏನು ಇಲ್ಲದೆ, ಎಲ್ಲರೊಂದಿಗೆ ಬೆರೆಯುವ ಗುಣ ಇಷ್ಟವಾಯಿತು’ ಎಂದರು ನಾಯಕಿ ಅದಿತಿ ಪ್ರಭುದೇವ.ನಿರ್ಮಾಪಕರಾದ ಪಾರುಲ್ ಅಗರವಾಲ್ ಹಾಗೂ ಡಾ. ಹೇಮಚಂದ್ರ ರೆಡ್ಡಿ ಕೂಡಾ ಸಿನಿಮಾ ಬಗ್ಗೆ ಮಾತನಾಡಿದರು
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.